ಖಾಸಗಿ ಶಾಲೆಗಳು ಶುಲ್ಕ ರಿಯಾಯಿತಿ ನೀಡಿ ಕರೊನಾ ಸಂಕಷ್ಟದಲ್ಲಿ ಸಾಮಾಜಿಕ ಕಳಕಳಿ ತೋರಲಿ: ರಾಜಘಟ್ಟರವಿ

ದೊಡ್ಡಬಳ್ಳಾಪುರ : ತಾಲೂಕಿನ ಖಾಸಗಿ ಶಾಲೆಗಳಲ್ಲಿ ಆರಂಭಿಸಿರುವ ಆನ್‌ಲೈನ್ ಶಿಕ್ಷಣವನ್ನು ಪೂರ್ಣ ರದ್ದು ಮಾಡಬೇಕು. ಶಾಲೆಗಳ ಶುಲ್ಕದಲ್ಲಿ ರಿಯಾಯಿತಿ ನೀಡಬೇಕು ಹಾಗು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿಯೇ ನಡೆಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ವತಿಯಿಂದ ಕ್ಷೇತ್ರ ಶಿಕ್ಷಣಾಕಾರಿಗಳ ಕಚೇರಿ ಮುಂಭಾಗ ಪ್ರತಿಭಟನಾ ಧರಣಿ ನಡೆಸಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ  ಮಾತನಾಡಿದ ಕರವೇ ರಾಜ್ಯ ಕಾರ್‍ಯದರ್ಶಿ ರಾಜಘಟ್ಟ ರವಿ, ಕೊವಿಡ್-19 ಸೋಂಕು ದೇಶದಾದ್ಯಂತ ಹರಡುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ವರ್ಗದ ಜನರೂ ಸಹ ಸಂಕಷ್ಟ ಎದುರಿಸುತ್ತಿದ್ದಾರೆ. ಪೋಷಕರು ತಮ್ಮ ಮಕ್ಕಳಿಗೆ ಶಾಲೆ ಶುಲ್ಕ ಕಟ್ಟಲು ಪರದಾಡುವಂತಾಗಿದೆ. ಈ ಸಮಯದಲ್ಲಿ ಕೆಲವು ಶಾಲೆಗಳು ಆನ್‌ಲೈನ್ ಶಿಕ್ಷಣದ ನೆಪದಲ್ಲಿ ಪೋಷಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಈಗ ಸರ್ಕಾರ 1ರಿಂದ 7ರವರೆಗೆ ಆನ್‌ಲೈನ್ ಶಿಕ್ಷಣ ರದ್ದು ಮಾಡಿರುವುದು ಸ್ವಾಗತಾರ್ಹ ಇದು 10ನೇ ತರಗತಿಯವರೆಗೂ ವಿಸ್ತರಿಸಬೇಕು. ಶಾಲಾ ಶುಲ್ಕದಲ್ಲಿ ಶೆ.25ರಷ್ಟು ಶಾಲಾ ಶುಲ್ಕದಲ್ಲಿ ರಿಯಾಯಿತಿ ನೀಡಬೇಕು, ಪೋಷಕರ ಮೇಲೆ ಯಾವುದೇ ಕಾರಣಕ್ಕೂ ಒತ್ತಡ ಹೇರಬಾರದು. ಈ ನಿಟ್ಟಿನಲ್ಲಿಖಾಸಗಿ ಶಾಲೆಗಳ ಆಡಳಿತ ಮಂಡಲಿ ಸಭೆ ಕರೆಯಬೇಕು ಎಂದರು.

ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್ ಮಾತನಾಡಿ,ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸುವುದು ಈಗ ಅನಿವಾರ್ಯವಾದರೂ ಸಹ, ದೂರದ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹೋಗಿ ಬರೆಯಲು ಕಷ್ಟವಾಗುವುದರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿಯೇ ನಡೆಸುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಮನವಿ ಪತ್ರ ಸ್ವೀಕರಿಸಿ ಪ್ರತಿಕ್ರಿಯಿಸಿದ ಕ್ಷೇತ್ರಶಿಕ್ಷಣಾಕಾರಿ ಬೈಯಪ್ಪರೆಡ್ಡಿ, ತಾಲೂಕಿನಲ್ಲಿ ಶಾಲೆಗಳಲ್ಲಿ ಕೊವಿಡ್-19 ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪೋಷಕರಿಗೆ ಶಾಲೆಯ ಬಗ್ಗೆ ವಿಶ್ವಾಸ ಹೆಚ್ಚಿಸಿ, ಹಂತ ಹಂತವಾಗಿ ಆರಂಭಿಸಲು ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. ಆನ್‌ಲೈನ್ ತರಗತಿ ನಡೆಸದಂತೆ ಇಲಾಖೆಯ ನಿರ್ದೇಶನವಿದ್ದು, ಸದ್ಯಕ್ಕೆ ಯಾವುದೇ ಶಾಲೆಗಳಲ್ಲಿ ಆನ್‌ಲೈನ್ ತರಗತಿ ನಡೆಸುತ್ತಿರುವ ಬಗ್ಗೆ ದೂರುಗಳು ಇಲ್ಲ. ಶುಲ್ಕ ಹೆಚ್ಚಳ ಮಾಡಿ ಪೋಷಕರನ್ನು ಶೋಷಿಸುವ ದೂರುಗಳು ಬಂದರೆ ಹಾಗೂ  ಇಲಾಖೆಯ ನಿಯಮಗಳನ್ನು ಮೀರುವ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು.ಜೂ.25ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲು ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದ್ದು,ಮಾರ್ಗಸೂಚಿಗಳಂತೆ ಕೊವಿಡ್-19 ಹರಡದಂತೆ ಎಚ್ಚರಿಕೆ ವಹಿಸಲಾಗುತ್ತಿದೆ ಎಂದರು.

ಪ್ರತಿಭಟನೆಯಲ್ಲಿ, ಗೌರವ ಅಧ್ಯಕ್ಷ  ಪು.ಮಹೇಶ್,ಕಾನೂನು ಸಲಹೆಗಾರ ಆನಂದ್ ಕುಮಾರ್,ತಾಲೂಕು ಪ್ರಧಾನ ಕಾರ್ಯದರ್ಶಿ ಎಸ್.ಎಲ್.ಎನ್.ವೇಣು,ಕಾರ್ಯದರ್ಶಿ ಜೋಗಿಹಳ್ಳಿಅಮ್ಮು,ನಗರ ಅಧ್ಯಕ್ಷ ಬಷೀರ್,ಕಾರ್ಯದರ್ಶಿ ಸುಬ್ಬಣ್ಣ,ಕಾರ್ಮಿಕ ಘಟಕದ ಅಧ್ಯಕ್ಷ ರಮೇಶ್, ವಿದ್ಯಾರ್ಥಿ ಘಟಕದ ಅಧ್ಯಕ್ಷ  ಹೇಮಂತ್,ಮುಖಂಡರಾದ ಕೆ.ಆರ್.ಮಂಜುನಾಥ್, ರವಿಕುಮಾರ್ ಮತ್ತಿತರರು ಭಾಗವಹಿಸಿದ್ದರು.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!