ಖಾಸಗಿ ಶಾಲೆಗಳು ಶುಲ್ಕ ರಿಯಾಯಿತಿ ನೀಡಿ ಕರೊನಾ ಸಂಕಷ್ಟದಲ್ಲಿ ಸಾಮಾಜಿಕ ಕಳಕಳಿ ತೋರಲಿ: ರಾಜಘಟ್ಟರವಿ

ದೊಡ್ಡಬಳ್ಳಾಪುರ : ತಾಲೂಕಿನ ಖಾಸಗಿ ಶಾಲೆಗಳಲ್ಲಿ ಆರಂಭಿಸಿರುವ ಆನ್‌ಲೈನ್ ಶಿಕ್ಷಣವನ್ನು ಪೂರ್ಣ ರದ್ದು ಮಾಡಬೇಕು. ಶಾಲೆಗಳ ಶುಲ್ಕದಲ್ಲಿ ರಿಯಾಯಿತಿ ನೀಡಬೇಕು ಹಾಗು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿಯೇ ನಡೆಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ವತಿಯಿಂದ ಕ್ಷೇತ್ರ ಶಿಕ್ಷಣಾಕಾರಿಗಳ ಕಚೇರಿ ಮುಂಭಾಗ ಪ್ರತಿಭಟನಾ ಧರಣಿ ನಡೆಸಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ  ಮಾತನಾಡಿದ ಕರವೇ ರಾಜ್ಯ ಕಾರ್‍ಯದರ್ಶಿ ರಾಜಘಟ್ಟ ರವಿ, ಕೊವಿಡ್-19 ಸೋಂಕು ದೇಶದಾದ್ಯಂತ ಹರಡುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ವರ್ಗದ ಜನರೂ ಸಹ ಸಂಕಷ್ಟ ಎದುರಿಸುತ್ತಿದ್ದಾರೆ. ಪೋಷಕರು ತಮ್ಮ ಮಕ್ಕಳಿಗೆ ಶಾಲೆ ಶುಲ್ಕ ಕಟ್ಟಲು ಪರದಾಡುವಂತಾಗಿದೆ. ಈ ಸಮಯದಲ್ಲಿ ಕೆಲವು ಶಾಲೆಗಳು ಆನ್‌ಲೈನ್ ಶಿಕ್ಷಣದ ನೆಪದಲ್ಲಿ ಪೋಷಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಈಗ ಸರ್ಕಾರ 1ರಿಂದ 7ರವರೆಗೆ ಆನ್‌ಲೈನ್ ಶಿಕ್ಷಣ ರದ್ದು ಮಾಡಿರುವುದು ಸ್ವಾಗತಾರ್ಹ ಇದು 10ನೇ ತರಗತಿಯವರೆಗೂ ವಿಸ್ತರಿಸಬೇಕು. ಶಾಲಾ ಶುಲ್ಕದಲ್ಲಿ ಶೆ.25ರಷ್ಟು ಶಾಲಾ ಶುಲ್ಕದಲ್ಲಿ ರಿಯಾಯಿತಿ ನೀಡಬೇಕು, ಪೋಷಕರ ಮೇಲೆ ಯಾವುದೇ ಕಾರಣಕ್ಕೂ ಒತ್ತಡ ಹೇರಬಾರದು. ಈ ನಿಟ್ಟಿನಲ್ಲಿಖಾಸಗಿ ಶಾಲೆಗಳ ಆಡಳಿತ ಮಂಡಲಿ ಸಭೆ ಕರೆಯಬೇಕು ಎಂದರು.

ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್ ಮಾತನಾಡಿ,ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸುವುದು ಈಗ ಅನಿವಾರ್ಯವಾದರೂ ಸಹ, ದೂರದ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹೋಗಿ ಬರೆಯಲು ಕಷ್ಟವಾಗುವುದರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿಯೇ ನಡೆಸುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಮನವಿ ಪತ್ರ ಸ್ವೀಕರಿಸಿ ಪ್ರತಿಕ್ರಿಯಿಸಿದ ಕ್ಷೇತ್ರಶಿಕ್ಷಣಾಕಾರಿ ಬೈಯಪ್ಪರೆಡ್ಡಿ, ತಾಲೂಕಿನಲ್ಲಿ ಶಾಲೆಗಳಲ್ಲಿ ಕೊವಿಡ್-19 ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪೋಷಕರಿಗೆ ಶಾಲೆಯ ಬಗ್ಗೆ ವಿಶ್ವಾಸ ಹೆಚ್ಚಿಸಿ, ಹಂತ ಹಂತವಾಗಿ ಆರಂಭಿಸಲು ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. ಆನ್‌ಲೈನ್ ತರಗತಿ ನಡೆಸದಂತೆ ಇಲಾಖೆಯ ನಿರ್ದೇಶನವಿದ್ದು, ಸದ್ಯಕ್ಕೆ ಯಾವುದೇ ಶಾಲೆಗಳಲ್ಲಿ ಆನ್‌ಲೈನ್ ತರಗತಿ ನಡೆಸುತ್ತಿರುವ ಬಗ್ಗೆ ದೂರುಗಳು ಇಲ್ಲ. ಶುಲ್ಕ ಹೆಚ್ಚಳ ಮಾಡಿ ಪೋಷಕರನ್ನು ಶೋಷಿಸುವ ದೂರುಗಳು ಬಂದರೆ ಹಾಗೂ  ಇಲಾಖೆಯ ನಿಯಮಗಳನ್ನು ಮೀರುವ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು.ಜೂ.25ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಲು ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದ್ದು,ಮಾರ್ಗಸೂಚಿಗಳಂತೆ ಕೊವಿಡ್-19 ಹರಡದಂತೆ ಎಚ್ಚರಿಕೆ ವಹಿಸಲಾಗುತ್ತಿದೆ ಎಂದರು.

ಪ್ರತಿಭಟನೆಯಲ್ಲಿ, ಗೌರವ ಅಧ್ಯಕ್ಷ  ಪು.ಮಹೇಶ್,ಕಾನೂನು ಸಲಹೆಗಾರ ಆನಂದ್ ಕುಮಾರ್,ತಾಲೂಕು ಪ್ರಧಾನ ಕಾರ್ಯದರ್ಶಿ ಎಸ್.ಎಲ್.ಎನ್.ವೇಣು,ಕಾರ್ಯದರ್ಶಿ ಜೋಗಿಹಳ್ಳಿಅಮ್ಮು,ನಗರ ಅಧ್ಯಕ್ಷ ಬಷೀರ್,ಕಾರ್ಯದರ್ಶಿ ಸುಬ್ಬಣ್ಣ,ಕಾರ್ಮಿಕ ಘಟಕದ ಅಧ್ಯಕ್ಷ ರಮೇಶ್, ವಿದ್ಯಾರ್ಥಿ ಘಟಕದ ಅಧ್ಯಕ್ಷ  ಹೇಮಂತ್,ಮುಖಂಡರಾದ ಕೆ.ಆರ್.ಮಂಜುನಾಥ್, ರವಿಕುಮಾರ್ ಮತ್ತಿತರರು ಭಾಗವಹಿಸಿದ್ದರು.

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ;

ಸಿದ್ದರಾಮಯ್ಯ (Siddaramaiah) ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು, ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. D.K.Shivakumar

[ccc_my_favorite_select_button post_id="110764"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!