ಉಳ್ಳವರೇ ಭೂಮಿ ಒಡೆಯ ಕಾನೂನು ತರಲು ಸರ್ಕಾರ ಮುಂದಾಗಿದೆ : ಸಿದ್ದರಾಮಯ್ಯ

ಬೆಂಗಳೂರು : ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಉಳ್ಳವರೇ ಭೂಮಿ ಒಡೆಯರು ಎಂಬ ಕಾನೂನು ಜಾರಿಗೆ ತರಲು ಮುಂದಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರುವ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ  ಕೈಗೊಳ್ಳಲಾಗಿದೆ. ಈ ಬಗ್ಗೆ ಚರ್ಚೆ ನಡೆಸಲು ಸಿದ್ದರಾಮಯ್ಯ ಅವರು ತಮ್ಮ ಕಚೇರಿಯಲ್ಲಿ ಇಂದು ಪಕ್ಷದ ಹಿರಿಯ ನಾಯಕರ ಸಭೆ ಕರೆದಿದ್ದರು. ಸಭೆ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದರು. 

ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ಸರ್ಕಾರ ತಿದ್ದುಪಡಿತ ತರಲು ಮುಂದಾಗಿದೆ. ಕಾಯಿದೆಯಲ್ಲಿನ ಕೆಲ ಅಂಶಗಳನ್ನು ಬದಲಾವಣೆ ಮಾಡುವುದು ಸರ್ಕಾರದ ಉದ್ದೇಶ. 

ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಭೂ ಸುಧಾರಣೆ ಕಾಯಿದೆ ಜಾರಿಗೆ ತಂದ ಬಳಿಕ ಉಳುವವನೇ ಹೊಲದ ಒಡೆಯ ಎಂದಾಯಿತು. ಯಾರ್ಯಾರು ಭೂಮಿ ಒಡೆಯರು ಆಗಬಹುದು ಎಂಬುದನ್ನು ಕಾನೂನಿನಲ್ಲಿ ಸ್ಪಷ್ಟವಾಗಿ ಹೇಳಲಾಗಿತ್ತು.  ಗುತ್ತಿಗೆ ಆಧಾರದ ಮೇಲೆ ಭೂಮಿ ಉಳುಮೆ ಮಾಡುತ್ತಿದ್ದವರಿಗೆ ಇದರಿಂದ ಅನುಕೂಲವಾಗಿತ್ತು. 

ಶ್ರೀಮತಿ ಇಂದಿರಾಗಾಂಧಿ ಮತ್ತು ದೇವರಾಜ ಅರಸು ಅವರ ಸರ್ಕಾರ ಉಳುವವನೇ ಭೂಮಿ ಒಡೆಯ ಎಂದು ಮಾಡಿದರೆ ಈಗಿನ ಬಿಜೆಪಿ ಸರ್ಕಾರ ಉಳ್ಳವರೇ ಭೂಮಿ ಒಡೆಯ ಎಂದು ಮಾಡಲು ಮುಂದಾಗಿದೆ. 

ಭೂ ಸುಧಾರಣೆ ಕಾಯಿದೆಯ 79ಎ.ಬಿ.ಸಿ ಮತ್ತು 80 ಹಾಗೂ ಸೆಕ್ಷನ್ 63 ಮುಖ್ಯ ತಿದ್ದುಪಡಿಗಳನ್ನು ಪೂರ್ವಾನ್ವಯ ಆಗುವಂತೆ ರದ್ದು ಮಾಡುವುದು, ಹಾಗೂ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು  ವಜಾ ಮಾಡುವುದು ಸರ್ಕಾರದ ಉದ್ದೇಶ. ಕಾನೂನಿನಲ್ಲಿ ನ್ಯೂನತೆ ಇದ್ದರೆ ಮಾತ್ರ ಕಾಲ ಕಾಲಕ್ಕೆ ಬದಲಾವಣೆ ಮಾಡಬೇಕು. ಅದು ಬಿಟ್ಟು ನೆಗಡಿ ಬಂದಿದೆ ಎಂಬ ಕಾರಣಕ್ಕೆ ಮೂಗು ಕುಯ್ಯುವುದು, ಗಾಯವಾಗಿದೆ ಎಂದು ಕಾಲು ಕತ್ತರಿಸುವ ಕೆಲಸಕ್ಕೆ ಕೈ ಹಾಕಬಾರದು. 

ಕಾರ್ಪೊರೇಟ್  ಕಂಪನಿಗಳಿಗೆ, ಶ್ರೀಮಂತರಿಗೆ, ಬಂಡವಾಳ ಶಾಹಿಗಳಿಗೆ ಕೃಷಿ ಭೂಮಿ ಧಾರೆ ಎರೆಯಲು ಸರ್ಕಾರ ಮುಂದಾಗಿದೆ. ಉಳುವವರಿಗೆ ಭೂಮಿ ಸಿಗಬೇಕು. ಒಬ್ಬರಿಗೆ ಉದ್ಯೋಗ ದೊರಕಬೇಕು ಎಂಬ ಕಾರಣಕ್ಕೆ ಈ ಹಿಂದೆ ಭೂ ಸುಧಾರಣೆ ಕಾಯಿದೆ ಜಾರಿಗೆ ತರಲಾಗಿತ್ತು. 

ಕಾಯಿದೆ ತಿದ್ದುಪಡಿಯಿಂದ ಭೂ ಮಾಫಿಯಾ ಆರಂಭವಾಗುತ್ತದೆ. ರಿಯಲ್ ಎಸ್ಟೇಟ್ ದಂಧೆಗೆ ಅವಕಾಶವಾಗುತ್ತದೆ. ಶ್ರೀಮಂತರು ಭೂಮಿ ಖರೀದಿ ಮಾಡಿ ಲ್ಯಾಂಡ್ ಬ್ಯಾಂಕ್ ಮಾಡಿಕೊಳ್ಳುತ್ತಾರೆ. ಇದರಿಂದ ಸಣ್ಣ ಹಿಡುವಳಿದಾರರಿಗೆ ತೊಂದರೆಯಾಗಿ  ಭೂಮಿ ಕಳೆದುಕೊಂಡು ಅವರು ಕೃಷಿ ಕೂಲಿ ಕಾರ್ಮಿಕರಾಗುತ್ತಾರೆ. ಹೀಗಾಗಿ  ಸಂಪುಟದ ನಿರ್ಣಯವನ್ನು ತೀವ್ರವಾಗಿ ವಿರೋಧಿಸುತ್ತೇವೆ. 

ಈ ಕುರಿತು ಪಕ್ಷದ ಹಿರಿಯ ನಾಯಕರು, ರೈತರ ಸಂಘಟನೆಗಳ ಮುಖಂಡರ ಜೊತೆ  ಮತ್ತೊಂದು ಸುತ್ತಿನಲ್ಲಿ ಸಮಗ್ರವಾಗಿ ಚರ್ಚೆ ನಡೆಸುತ್ತೇವೆ ಎಂದು ಅವರು ಹೇಳಿದರು. 

ಸಭೆಯಲ್ಲಿ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿ.ಎಂ.ಇಬ್ರಾಹಿಂ, ರಮೇಶ್ ಕುಮಾರ್, ಸಲೀಂ ಅಹಮದ್, ಈಶ್ವರ ಖಂಡ್ರೆ, ದಿನೇಶ್ ಗುಂಡೂರಾವ್, ಡಾ. ಎಚ್.ಸಿ. ಮಹಾದೇವಪ್ಪ, ಟಿ.ಬಿ. ಜಯಚಂದ್ರ, ನಸೀರ್ ಅಹಮದ್, ಜಮೀರ್ ಅಹಮದ್, ವಿ.ಎಸ್. ಉಗ್ರಪ್ಪ, ಪುಷ್ಪ ಅಮರನಾಥ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಶರಣ ಪ್ರಕಾಶ್ ಪಾಟೀಲ್, ಡಾ. ಅಜಯಸಿಂಗ್, ನರೇಂದ್ರ ಸ್ವಾಮಿ, ಐವಾನ್ ಡಿಸೋಜ ಮತ್ತಿರರರು ಭಾಗವಹಿಸಿದ್ದರು.

           *******

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ದೊಡ್ಡಬಳ್ಳಾಪುರ: ಅಪಘಾತ.. ಅಕ್ಕ-ತಮ್ಮನ ಸ್ಥಿತಿ ಚಿಂತಾಜನಕ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ (Accident) ಅಕ್ಕ ಮತ್ತು ತಮ್ಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಎಪಿಎಂಸಿ

[ccc_my_favorite_select_button post_id="115491"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!