ಕರೊನಾ ನಡುವೆ ಎಪಿಎಂಸಿ ಅಧ್ಯಕ್ಷ,ಉಪಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಮುಖ್ಯಾಂಶಗಳು 

* ಜೂ.19ಕ್ಕೆ ಎಪಿಎಂಸಿ ಅಧ್ಯಕ್ಷ,ಉಪಾಧ್ಯಕ್ಷ ಚುನಾವಣೆ 

* ನಾಮಿನಿ ನಿರ್ದೇಶಕರೇ ನಿರ್ಣಾಯಕ

* ಜೆಡಿಎಸ್ – ಕಾಂಗ್ರೆಸ್ ಮೈತ್ರಿ..?

* ಗೋವಿಂದರಾಜ್ – ಲೋಕೇಶ್ ನಡುವೆ ಸ್ಪರ್ದೆ..?

* ಜೆಡಿಎಸ್ ಪಕ್ಷದ ಲೋಕೇಶ್ಗೆ ಅದೃಷ್ಟ..?

ದೊಡ್ಡಬಳ್ಳಾಪುರ: ನಿಯಂತ್ರಣಕ್ಕೆ ಬಾರದ ಕರೊನಾ ಸೋಂಕಿನ ಹಾವಳಿಯ ನಡುವೆಯೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ಆಡಳಿತ ಮಂಡಳಿಯ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಜೂ.19ಕ್ಕೆ ಚುನಾವಣೆ ನಡೆಯಲಿದ್ದು.ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಲ್ಲಿ ಪೈಪೋಟಿ ಆರಂಭವಾಗಿದೆ.

13 ಜನ ನಿರ್ದೇಶಕರ ಸದಸ್ಯತ್ವ ಬಲದ ದೊಡ್ಡಬಳ್ಳಾಪುರ,ನೆಲಮಂಗಲ ಹಾಗೂ ದೇವನಹಳ್ಳಿ ತಾಲ್ಲೂಕನ್ನು ಒಳಗೊಂಡಿರುವ ಎಪಿಎಂಸಿಯಲ್ಲಿ ಕಾಂಗ್ರೆಸ್ 7, ಜೆಡಿಎಸ್ 6 ಸ್ಥಾನಗಳನ್ನು ಹೊಂದಿವೆ.ಸರ್ಕಾರದಿಂದ ನಾಮ ನಿರ್ದೇಶನ ಹೊಂದುವ 3 ಸ್ಥಾನಗಳ ಪೈಕಿ 1 ಸ್ಥಾನಕ್ಕೆ ಕೆಲ  ದಿನಗಳ ಹಿಂದೆಯಷ್ಟೇ ಎಂ.ಸಿದ್ದಲಿಂಗಯ್ಯ ನಾಮ ನಿರ್ದೇಶನಗೊಂಡಿದ್ದಾರೆ. ಉಳಿದ 2 ಸ್ಥಾನಗಳು ಖಾಲಿ ಉಳಿದಿವೆ. ಚುನಾವಣೆ ಒಂದು ದಿನ ಇರುವಂತೆಯು ಸರ್ಕಾರ ನಾಮ ನಿರ್ದೇಶನ ಮಾಡುವ ಸಾಧ್ಯತೆ ಹೆಚ್ಚಾಗಿದೆ.

ದೊಡ್ಡಬಳ್ಳಾಪುರದಿಂದ 5ಜನ, ದೇವನಹಳ್ಳಿ ತಾಲ್ಲೂಕಿನಿಂದ 2 ಜನ ಕಾಂಗ್ರೆಸ್ ಪಕ್ಷದಿಂದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಹಾಗೆಯೇ ಜೆಡಿಎಸ್ ಪಕ್ಷದಿಂದ ದೊಡ್ಡಬಳ್ಳಾಪುರ 2, ನೆಲಮಂಗಲ 3 ಹಾಗೂ ದೇವನಹಳ್ಳಿ ತಾಲ್ಲೂಕಿನಿಂದ ಒಬ್ಬ ನಿರ್ದೇಶಕರು ಆಯ್ಕೆಯಾಗಿದ್ದಾರೆ.

ಹಾಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ದೇವನಹಳ್ಳಿ ತಾಲ್ಲೂಕಿಗೆ ನೀಡಲಾಗಿದೆ.ಹೀಗಾಗಿ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಸ್ಥಾನಗಳನ್ನು ದೊಡ್ಡಬಳ್ಳಾಪುರ ತಾಲ್ಲೂಕಿಗೆ ನೀಡಬೇಕು ಎಂದು ಎರಡೂ ಪಕ್ಷದ ಮುಖಂಡರು ಹೈಕಮಾಂಡ್ ಮೇಲೆ ಒತ್ತಡ ಹೆರುತಿದ್ದಾರೆ.

ಎರಡನೇ ಅವಧಿಯ 20 ತಿಂಗಳ ಆಡಳಿತಕ್ಕಾಗಿ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದಿಂದ ಜಿಂಕೆಬಚ್ಚಹಳ್ಳಿ ಬಿ.ವಿ.ಲೋಕೇಶ್, ಕಾಂಗ್ರೆಸ್ ಪಕ್ಷದಿಂದ ನಾರನಹಳ್ಳಿ ಎಂ.ಗೋವಿಂದರಾಜ್, ಹೊಸಹಳ್ಳಿಯ ವಿಶ್ವನಾಥರೆಡ್ಡಿ ಹಾಗೂ ಹಾಲಿ ಅಧ್ಯಕ್ಷರಾಗಿರುವ ಕುಂದಾಣದ ಕೆ.ವಿ.ಮಂಜುನಾಥ್ ಸಹ ಆಕಾಂಕ್ಷಿಗಳಾಗಿದ್ದಾರೆ.

ನಾಮಿನಿ ನಿರ್ದೇಶಕರೇ ನಿರ್ಣಾಯಕ

ಕಾಂಗ್ರೆಸ್ ಪಕ್ಷಕ್ಕೆ ಒಂದು ಸ್ಥಾನ ಹೆಚ್ಚಾಗಿದ್ದರು ಸಹ ಸರ್ಕಾರದಿಂದ ನಾಮ ನಿರ್ದೇಶನಗೊಳ್ಳುವ ನಿರ್ದೇಶಕರ ಮತಗಳೇ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಯಲ್ಲಿ ನಿರ್ಣಾಯಕವಾಗಲಿವೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇರುವುದರಿಂದ ಸರ್ಕಾರದಿಂದ ನಾಮ ನಿರ್ದೇಶನಗೊಳ್ಳುವವರು ಸಹಜವಾಗಿಯೇ ಬಿಜೆಪಿ ಪಕ್ಷದವರೇ ಆಗಿರುತ್ತಾರೆ. ಈಗ ಒಂದು ಸ್ಥಾನಕ್ಕೆ ನಾಮ ನಿರ್ದೇಶಕರಾಗಿರುವ ಎಂ.ಸಿದ್ದಲಿಂಗಯ್ಯ ಅವರು ಸಹ ಬಿಜೆಪಿ ಅಭ್ಯರ್ಥಿಗಳೇ ಆಗಿದ್ದು,ಉಳಿದಿಬ್ಬರು ಯಾರಾಗಲಿದ್ದಾರೆ ಎಂಬ ಕುತೂಹಲ ಮೂರು ಪಕ್ಷಗಳಲ್ಲಿದೆ.

ಜೆಡಿಎಸ್ – ಕಾಂಗ್ರೆಸ್ ಮೈತ್ರಿ..?

ಮಿತ್ರ ಪಕ್ಷ ರಚಿಸಿಕೊಂಡು ರಾಜ್ಯದಲ್ಲಿ ಸರ್ಕಾರ ನಡೆಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಉಳಿದ ೨೦ ತಿಂಗಳಲ್ಲಿ ತಲಾ ಹತ್ತು ತಿಂಗಳು ಅಧಿಕಾರ ನಡುಸುವ ಸಾಧ್ಯತೆಗಳು ಹೆಚ್ಚಾಗಿದ್ದು,ಎರಡು ಪಕ್ಷಗಳ ಒಲವು ಏನಿರಲಿದೆ ಕಾದು ನೋಡಬೇಕಿದೆ.

ಗೋವಿಂದರಾಜ್ – ಲೋಕೇಶ್ ನಡುವೆ ಸ್ಪರ್ದೆ..?

ಕಾಂಗ್ರೆಸ್ ಪಕ್ಷದಿಂದ ಗೋವಿಂದ ರಾಜ್ ಹಾಗೂ ವಿಶ್ವನಾಥ ರೆಡ್ಡಿ ಆಕಾಂಕ್ಷಿಗಳಾಗಿದ್ದರು.ಪಕ್ಷದ ಹಿರಿಯ ಮುಖಂಡ ಗೋವಿಂದರಾಜ್ ಪರವಾಗಿ ಹೈಕಮಾಂಡ್ ಒಲವನ್ನು ಹೊಂದಿದ್ದು.ಕಾಂಗ್ರೆಸ್ ಪಕ್ಷದ ಮೂಲಗಳು ಗೋವಿಂದರಾಜ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಎನ್ನುತ್ತಿರುವುದರಿಂದ, ಎಂ.ಗೋವಿಂದರಾಜ್ ಹಾಗೂ ಜೆಡಿಎಸ್ ಪಕ್ಷದ ಲೋಕೇಶ್ ನಡುವೆ ಸ್ಪರ್ದೆ ಏರ್ಪಡುವ ಸಾಧ್ಯತೆ ಹೆಚ್ಚಾಗಿದೆ.

ಜೆಡಿಎಸ್ ಪಕ್ಷದ  ಲೋಕೇಶ್ಗೆ ಅದೃಷ್ಟ..?

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇರುವುದರಿಂದ ಸರ್ಕಾರದಿಂದ ನಾಮ ನಿರ್ದೇಶನಗೊಳ್ಳುವವರು ಸಹಜವಾಗಿಯೇ ಬಿಜೆಪಿ ಪಕ್ಷದವರೇ ಆಗಿರುತ್ತಾರೆ. ನಾಮ ನಿರ್ದೇಶನಗೊಳ್ಳುವ ನಿರ್ದೇಶಕರ ಮತಗಳೇ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಯಲ್ಲಿ ನಿರ್ಣಾಯಕವಾಗಲಿದ್ದು.ಜಾತಿ ರಾಜಕೀಯ ನಡೆದಿದ್ದೆ ಆದಲ್ಲಿ ಬಿಜೆಪಿ ಪಕ್ಷವು ಲಿಂಗಾಯಿತರಾದ ಲೋಕೇಶ್ ಆಯ್ಕೆಗೆ ಬೆಂಬಲಿಸಲಿದೆ ಎನ್ನುವ ಮಾತುಗಳು ರಾಜಕೀಯವಲಯದಲ್ಲಿ ಕೇಳಿಬರುತ್ತಿದೆ. 

******** ಹರಿತಲೇಖನಿ ವೆಬ್ ನ್ಯೂಸ್ ದೊಡ್ಡಬಳ್ಳಾಪುರ***********

ರಾಜಕೀಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="118625"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ರೈಲಿಗೆ ಸಿಲುಕಿ ಇಂಡೋಮಿಮ್ (Indomim) ಕಂಪನಿಯ ಉದ್ಯೋಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀರಾಮನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="118633"]
ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಗರದ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

[ccc_my_favorite_select_button post_id="118614"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!