ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕೆಂಪೇಗೌಡ – ರಾಷ್ಟ್ರಕವಿ ಕುವೆಂಪು ಪುತ್ಥಳಿ ನಿರ್ಮಾಣಕ್ಕೆ ವಿರೋಧ

ದೊಡ್ಡಬಳ್ಳಾಪುರ: ನಗರದ ಪ್ರವಾಸಿ ಮಂದಿರದ ಮುಂಭಾಗ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಎಂದು ನಾಮಕರಣವಾಗಿರುವುದರಿಂದ ಇಲ್ಲಿ ನಾಡಪ್ರಭು ಕೆಂಪೇಗೌಡ – ರಾಷ್ಟ್ರಕವಿ ಕುವೆಂಪು ಪುತ್ಥಳಿ ನಿರ್ಮಾಣ ಮಾಡುವುದು ಸಮಂಜಸವಲ್ಲ.ಇದಲ್ಲದೇ ಬೇರೆಡೆ ಸೂಕ್ತ ಸ್ಥಳ ಗುರುತಿಸಿದರೆ ನಮ್ಮ ಸಹಕಾರವಿರುತ್ತದೆ ಎಂದು ವಿವಿಧ ಸಂಘಟನೆಗಳ ಹಾಗೂ ಸಮುದಾಯದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಅಹಿಂದ ಮತ್ತು ಪ್ರಗತಿಪರ ಸಂಘಟನೆಗಳು ಹಾಗು ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನಾ ಹೋರಾಟ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿ ಹಾಗೂ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮಿಪತಿ, ಕಳೆದ 28 ವರ್ಷಗಳ ಹಿಂದೆಯೆ ಇಲ್ಲಿನ ತುಮಕೂರು, ಗೌರಿಬಿದನೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರಕ್ಕೆ ಸೇರುವ ಮುಖ್ಯ ವೃತ್ತಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಅವರ ನಾಮಕರಣ ಮಾಡಿರುತ್ತದೆ. ಆದರೆ 2018ರ ನಗರಸಭೆ ಸರ್ವ ಸದಸ್ಯರ ಸಭೆಯಲ್ಲಿ ಅದೇ ವೃತ್ತಕ್ಕೆ ಹೊಂದಿಕೊಂಡಿರುವ ಪ್ರವಾಸಿ ಮಂದಿರದ ಮುಂಭಾಗದಲ್ಲಿ ನಾಡಪ್ರಭು ಕೆಂಪೇಗೌಡ ಮತ್ತು ರಾಷ್ಟ್ರಕವಿ ಕುವೆಂಪು ಅವರ ಪುತ್ಥಳಿ ನಿರ್ಮಾಣಕ್ಕೆ ಸರ್ವಾನುಮತದ ಅನುಮೋದನೆ ನೀಡಿದ್ದಾರೆ. ಈ ರೀತಿ ಮಾಡುವುದಾದರೆ ಇಲ್ಲಿನ ಅಂಬೇಡ್ಕರ್ ವೃತ್ತದ ಹೆಸರೆ ಮಾಯವಾಗುತ್ತದೆ ಎಂದರು.

ಮಾದರ ಚನ್ನಯ್ಯ ಮಹಾಸಭಾದ ಕೋರ್‌ಕಮಿಟಿ ಅಧ್ಯಕ್ಷ ಮಾ.ಮುನಿರಾಜು ಮಾತನಾಡಿ ಪ್ರತಿಮೆ ವಿಚಾರದಲ್ಲಿ ಶಾಸಕರು ಒಂದು ವರ್ಗದ ಜನರ ಪರವಾಗಿ ನಿಲ್ಲುವುದು ಸಮಂಜಸವಲ್ಲ. ಎಲ್ಲಾ ವರ್ಗದವರನ್ನು ಕರೆದು ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕಿದೆ ಎಂದರು.

ಇಲ್ಲಿ ಯಾವುದು ಒಂದು ಸಮುದಾಯ ಜಾತ್ಯಾತೀತವಾಗಿ ಸಮಾಜಕ್ಕೆ ಬದುಕಿದವರನ್ನು ತಮ್ಮ ಜಾತಿ ಧರ್ಮಗಳ ಆಧಾರದ ಜಾತಿ ಸಾಮರಸ್ಯ ಕದಡುವುದು ಬೇಡ. ಹೀಗಾಗಿ ಈ ಕೂಡಲೆ ಪ್ರವಾಸಿ ಮಂದಿರದ ಮುಂಭಾಗ ಪುತ್ಥಳಿ ನಿರ್ಮಾಣವನ್ನು ಕೈ ಬಿಟ್ಟು ನಗರದಲ್ಲಿ ಬಹುತೇಕ ಸ್ಥಳವಕಾಶ ಇದ್ದು ಅಲ್ಲಿ ಕೆಂಪೇಗೌಡ-ಕುವೆಂಪು ಪುತ್ಥಳಿ ನಿರ್ಮಾಣ ಮಾಡಲಿ ಅದರ ಜೊತೆ ನಾವು ಸಹ ಇರುತ್ತೇವೆ ಎಂದು ಅಹಿಂದ  ಹಾಗೂ ವಿವಿಧ ಸಂಘಟನೆಗಳ ಮುಖಂಡರು ಅಭಿಪ್ರಾಯಪಟ್ಟರು

ಸಭೆಯಲ್ಲಿ ಕನ್ನಡಪಕ್ಷ ತಾಲೂಕು ಅಧ್ಯಕ್ಷ ಸಂಜೀವ ನಾಯಕ, ಕರವೇ(ಪ್ರವೀಣ್‌ಕುಮಾರ್ ಶೆಟ್ಟಿ ಬಣ) ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ ಹಾಗು ಹಿಂದುಳಿದ ವರ್ಗಗಳ,ದಲಿತ ಸಂಘಟನೆಗಳು ಸೇರಿದಂತೆ ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

     *****************

ರಾಜಕೀಯ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು

[ccc_my_favorite_select_button post_id="118671"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಸುಮಾರು 21 ವರ್ಷದ ಯುವಕನೋರ್ವ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ ನಗರದ ಕುಚ್ಚಪ್ಪನ ಪೇಟೆಯಲ್ಲಿ ನಡೆದಿದೆ.

[ccc_my_favorite_select_button post_id="118648"]
ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="118669"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!