ಹರಿಹರದಲ್ಲಿ ಗೃಹ ಮಂಡಳಿಯಿಂದ ಸುಸಜ್ಜಿತ ಬಡಾವಣೆ ನಿರ್ಮಾಣ: ವಿ.ಸೋಮಣ್ಣ

ದಾವಣಗೆರೆ: ಸೋಮವಾರ ಹರಿಹರ ನಗರದ ಶೋರಾಪುರ ಗ್ರಾಮದಲ್ಲಿ ಗೃಹ ಮಂಡಳಿಯ ವಶದಲ್ಲಿರುವ ಜಮೀನು ಸ್ಥಳವನ್ನು ವಸತಿ ಸಚಿವರಾದ ವಿ. ಸೋಮಣ್ಣ ಪರಿವೀಕ್ಷಣೆ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರಿಹರ ಸಮೀಪದ ಶೋರಾಪುರದಲ್ಲಿ ಸುಮಾರು 54 ಎಕರೆ ಜಮೀನಿನಲ್ಲಿ ಒಂದು ಮಾದರಿ ಬಡಾವಣೆಯನ್ನು ಗೃಹ ಮಂಡಳಿಯಿಂದ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಮುಂದಿನ ತಿಂಗಳು 20ರೊಳಗಾಗಿ ಕೆಲಸದ ಪ್ರಕ್ರಿಯೆ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.ಈ ಬಡಾವಣೆ ಮನೆಗಳಿಗಾಗಿ 35 ಸಾವಿರ ಅರ್ಜಿ ಬಂದಿವೆ. ಆದರೆ ಇದರಲ್ಲಿ 800 ರಿಂದ 900 ಸೈಟ್‍ಗಳಾಗುತ್ತವೆ. ಅದೇ ರೀತಿ ಶಾಸಕರು 8 ಎಕರೆ ಜಾಗ ಇದೆ. ಬಡವರಿಗಾಗಿ ಮನೆ ಕಟ್ಟಿಕೊಡಿ ಎಂದು ಮನವಿ ಮಾಡಿದ್ದಾರೆ. ಬಡವರಿಗೆ ಅನುಕೂಲವಾಗುತ್ತದೆ ಎಂದರೆ ನೋಡಣಾ. ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿ ಮಾಡಿ ಬಡವರಿಗೆ ಮನೆ ಕೊಡಲು ಮುಂದಾಗುತ್ತೇವೆ ಎಂದು ಭರವಸೆ ನೀಡಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಸೂರಿಲ್ಲದವರಿಗೆ 2022ರೊಳಗಾಗಿ ಪ್ರತಿಯೊಬ್ಬರಿಗೂ ಒಂದು ಸೂರು ಒದಗಿಸುವ ಚಿಂತನೆಗೆ ಸುಮಾರು 10 ಲಕ್ಷ ಮನೆಗಳನ್ನು ಇನ್ನೂ ಒಂದೂವರೆಯಿಂದ ಎರಡು ವರ್ಷಗಳಲ್ಲಿ ಮುಗಿಸಲು ಕ್ರಿಯಾ ಯೋಜನೆ ಮಾಡಿ ಕೆಲಸ ಕೂಡ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಇದರಲ್ಲಿ ಯಾವುದೇ ರಾಜಕಾರಣ ಇಲ್ಲ. ಪ್ರತಿಯೊಬ್ಬ ಬಡವರಿಗೂ ಮನೆ ಒದಗಿಸಬೇಕು ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದ್ದು, ಪಾರದರ್ಶಕವಾಗಿ ಕೆಲಸ ಮಾಡಿಕೊಂಡು ಬರಲಾಗುತ್ತಿದೆ. ಅದಕ್ಕಾಗಿ ನಾವು 4,535 ಎಕರೆ ಜಾಗವನ್ನು ರಾಜೀವ ಗಾಂಧಿ ವಸತಿ ನಿಗಮಕ್ಕೆ ಹಸ್ತಾಂತರ ಮಾಡಿಕೊಂಡಿದ್ದು,. 1.20 ಲಕ್ಷ ಸೈಟ್‍ಗಳನ್ನು ನಾಲ್ಕೈದು ತಿಂಗಳಲ್ಲಿ ಬೇಕಾದಂದಹ ಮೂಲಭೂತ ಸೌಕರ್ಯ ಒದಗಿಸಿ ಹಂಚುವ ಕೆಲಸ ಮಾಡಲಾಗುವುದು. 30 ವರ್ಷದಲ್ಲಿ ಇಡೀ ರಾಜ್ಯದಲ್ಲಿ 3 ಲಕ್ಷ ಸೈಟ್ ಕೊಡಲಾಗಿದೆ. ಆದರೆ 1.20 ಲಕ್ಷ ಸೈಟ್‍ಗಳನ್ನು ಇನ್ನು ಐದರಿಂದ ಆರು ತಿಂಗಳಲ್ಲಿ ಬಡವರಿಗೆ ನೀಡಲ್ಲಿದ್ದೇವೆ ಎಂದ ಅವರು, ಕೋವಿಡ್-19 ಕಡಿಮೆಯಾದ ಮೇಲೆ ಕೆಲಸ ಪ್ರಾರಂಭ ಮಾಡಲಾಗುತ್ತದೆ ಎಂದು ತಿಳಿಸಿದರು.

ಯುಎಲ್‍ಬಿ ಜಾಗಗಳನ್ನು ಪತ್ತೆ ಹಚ್ಚಲಾಗುತ್ತಿದ್ದು, ಅದರಡಿಯಲ್ಲಿ ಈ ಬಾರಿ ರಾಜೀವ್‍ಗಾಂಧಿ ಯೋಜನೆಯಿಂದ 69 ಸಾವಿರ ಮನೆಗಳನ್ನು ಕಟ್ಟಲು ರಾಜ್ಯದ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಂಗಳೂರು ಹಾಗೂ ಮೈಸೂರು ಹೊರತುಪಡಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಈಗಾಗಲೇ ಸಂಡೂರಿನಲ್ಲಿ 2 ಸಾವಿರ ಮನೆ, ನಿಪ್ಪಾಣಿಯಲ್ಲಿ 1,600 ಮನೆ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ 3 ಸಾವಿರ ಮನೆ ಸೇರಿದಂತೆ ಅನೇಕ ಕಡೆ ಕೆಲಸ ಶುರು ಮಾಡಲಾಗಿದೆ. ಅದರಂತೆ ಇಲ್ಲಿ ಕೂಡ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಈಗಾಗಲೇ ಬಿ ಖಾತೆಯಲ್ಲಿರುವ ಮನೆಗಳನ್ನು ಎ ಖಾತೆ ಮಾಡಿಸಲು ತೀರ್ಮಾನಿಸಲಾಗಿದೆ. ಇದರಿಂದ ನಗರಸಭೆಗೆ ಹಣ ಬರುತ್ತದೆ. ಮಾಡುವುದಕ್ಕೆ ತೊಂದರೆ ಏನು ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದ ಅವರು, ಈ ಬಗ್ಗೆ ಕೂಡಲೇ ಪ್ರಪೋಸಲ್ ಮಾಡಿ ಕಳುಹಿಸಿ ಕೊಡಿ ಎಂದರು.

ಅವಾಸ್ ಯೋಜನೆಯಲ್ಲಿ ಮನೆ ಕಟ್ಟಿದವರಿಗೆ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು. ಈಗ ಸದ್ಯದ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗದಲ್ಲಿ 5,40 ಲಕ್ಷ ಹಾಗೂ ಪಟ್ಟಣ ಪ್ರದೇಶದಲ್ಲಿ 4,60 ಲಕ್ಷ ಮನೆಗಳಿಗೆ ಹೊರತುಪಡಿಸಿ ಬೇರೆ ಮನೆಗಳಿಗೆ ಹಣ ಬಿಡುಗಡೆ ಮಾಡಲಾಗುವುದಿಲ್ಲ. ಇನ್ನುಳಿದಂತೆ ಒಂದೂವರೆ ವರ್ಷದಲ್ಲಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕ ರಾಮಪ್ಪ, ಮಾಜಿ ಶಾಸಕ ಹರೀಶ್, ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.

                    *************

ರಾಜಕೀಯ

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ವಕ್ಫ್ ಮಸೂದೆ ಅಂಗಿಕಾರಕ್ಕೆ ವೆಲ್ಫೇರ್ ಪಾರ್ಟಿ ತೀವ್ರ ವಿರೋಧ.. ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Wakf Bill) ಅಂಗಿಕಾರವಾಗಿದ್ದು ಇದು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ Harithalekhani

[ccc_my_favorite_select_button post_id="105525"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ದೊಡ್ಡಬಳ್ಳಾಪುರ: ಹೊಸಹಳ್ಳಿ ಬ್ಯಾಂಕ್ ಲೂಟಿ ಪ್ರಕರಣ.. ಮತ್ತೆ ನಾಲ್ವರ ಬಂಧನ| KGB

ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿರುವ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕಿನ (KGB) ಕಳವು Harithalekhani

[ccc_my_favorite_select_button post_id="105553"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!