ಹರಿಹರದಲ್ಲಿ ಗೃಹ ಮಂಡಳಿಯಿಂದ ಸುಸಜ್ಜಿತ ಬಡಾವಣೆ ನಿರ್ಮಾಣ: ವಿ.ಸೋಮಣ್ಣ

ದಾವಣಗೆರೆ: ಸೋಮವಾರ ಹರಿಹರ ನಗರದ ಶೋರಾಪುರ ಗ್ರಾಮದಲ್ಲಿ ಗೃಹ ಮಂಡಳಿಯ ವಶದಲ್ಲಿರುವ ಜಮೀನು ಸ್ಥಳವನ್ನು ವಸತಿ ಸಚಿವರಾದ ವಿ. ಸೋಮಣ್ಣ ಪರಿವೀಕ್ಷಣೆ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರಿಹರ ಸಮೀಪದ ಶೋರಾಪುರದಲ್ಲಿ ಸುಮಾರು 54 ಎಕರೆ ಜಮೀನಿನಲ್ಲಿ ಒಂದು ಮಾದರಿ ಬಡಾವಣೆಯನ್ನು ಗೃಹ ಮಂಡಳಿಯಿಂದ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಮುಂದಿನ ತಿಂಗಳು 20ರೊಳಗಾಗಿ ಕೆಲಸದ ಪ್ರಕ್ರಿಯೆ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.ಈ ಬಡಾವಣೆ ಮನೆಗಳಿಗಾಗಿ 35 ಸಾವಿರ ಅರ್ಜಿ ಬಂದಿವೆ. ಆದರೆ ಇದರಲ್ಲಿ 800 ರಿಂದ 900 ಸೈಟ್‍ಗಳಾಗುತ್ತವೆ. ಅದೇ ರೀತಿ ಶಾಸಕರು 8 ಎಕರೆ ಜಾಗ ಇದೆ. ಬಡವರಿಗಾಗಿ ಮನೆ ಕಟ್ಟಿಕೊಡಿ ಎಂದು ಮನವಿ ಮಾಡಿದ್ದಾರೆ. ಬಡವರಿಗೆ ಅನುಕೂಲವಾಗುತ್ತದೆ ಎಂದರೆ ನೋಡಣಾ. ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿ ಮಾಡಿ ಬಡವರಿಗೆ ಮನೆ ಕೊಡಲು ಮುಂದಾಗುತ್ತೇವೆ ಎಂದು ಭರವಸೆ ನೀಡಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಸೂರಿಲ್ಲದವರಿಗೆ 2022ರೊಳಗಾಗಿ ಪ್ರತಿಯೊಬ್ಬರಿಗೂ ಒಂದು ಸೂರು ಒದಗಿಸುವ ಚಿಂತನೆಗೆ ಸುಮಾರು 10 ಲಕ್ಷ ಮನೆಗಳನ್ನು ಇನ್ನೂ ಒಂದೂವರೆಯಿಂದ ಎರಡು ವರ್ಷಗಳಲ್ಲಿ ಮುಗಿಸಲು ಕ್ರಿಯಾ ಯೋಜನೆ ಮಾಡಿ ಕೆಲಸ ಕೂಡ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಇದರಲ್ಲಿ ಯಾವುದೇ ರಾಜಕಾರಣ ಇಲ್ಲ. ಪ್ರತಿಯೊಬ್ಬ ಬಡವರಿಗೂ ಮನೆ ಒದಗಿಸಬೇಕು ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದ್ದು, ಪಾರದರ್ಶಕವಾಗಿ ಕೆಲಸ ಮಾಡಿಕೊಂಡು ಬರಲಾಗುತ್ತಿದೆ. ಅದಕ್ಕಾಗಿ ನಾವು 4,535 ಎಕರೆ ಜಾಗವನ್ನು ರಾಜೀವ ಗಾಂಧಿ ವಸತಿ ನಿಗಮಕ್ಕೆ ಹಸ್ತಾಂತರ ಮಾಡಿಕೊಂಡಿದ್ದು,. 1.20 ಲಕ್ಷ ಸೈಟ್‍ಗಳನ್ನು ನಾಲ್ಕೈದು ತಿಂಗಳಲ್ಲಿ ಬೇಕಾದಂದಹ ಮೂಲಭೂತ ಸೌಕರ್ಯ ಒದಗಿಸಿ ಹಂಚುವ ಕೆಲಸ ಮಾಡಲಾಗುವುದು. 30 ವರ್ಷದಲ್ಲಿ ಇಡೀ ರಾಜ್ಯದಲ್ಲಿ 3 ಲಕ್ಷ ಸೈಟ್ ಕೊಡಲಾಗಿದೆ. ಆದರೆ 1.20 ಲಕ್ಷ ಸೈಟ್‍ಗಳನ್ನು ಇನ್ನು ಐದರಿಂದ ಆರು ತಿಂಗಳಲ್ಲಿ ಬಡವರಿಗೆ ನೀಡಲ್ಲಿದ್ದೇವೆ ಎಂದ ಅವರು, ಕೋವಿಡ್-19 ಕಡಿಮೆಯಾದ ಮೇಲೆ ಕೆಲಸ ಪ್ರಾರಂಭ ಮಾಡಲಾಗುತ್ತದೆ ಎಂದು ತಿಳಿಸಿದರು.

ಯುಎಲ್‍ಬಿ ಜಾಗಗಳನ್ನು ಪತ್ತೆ ಹಚ್ಚಲಾಗುತ್ತಿದ್ದು, ಅದರಡಿಯಲ್ಲಿ ಈ ಬಾರಿ ರಾಜೀವ್‍ಗಾಂಧಿ ಯೋಜನೆಯಿಂದ 69 ಸಾವಿರ ಮನೆಗಳನ್ನು ಕಟ್ಟಲು ರಾಜ್ಯದ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಂಗಳೂರು ಹಾಗೂ ಮೈಸೂರು ಹೊರತುಪಡಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಈಗಾಗಲೇ ಸಂಡೂರಿನಲ್ಲಿ 2 ಸಾವಿರ ಮನೆ, ನಿಪ್ಪಾಣಿಯಲ್ಲಿ 1,600 ಮನೆ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ 3 ಸಾವಿರ ಮನೆ ಸೇರಿದಂತೆ ಅನೇಕ ಕಡೆ ಕೆಲಸ ಶುರು ಮಾಡಲಾಗಿದೆ. ಅದರಂತೆ ಇಲ್ಲಿ ಕೂಡ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಈಗಾಗಲೇ ಬಿ ಖಾತೆಯಲ್ಲಿರುವ ಮನೆಗಳನ್ನು ಎ ಖಾತೆ ಮಾಡಿಸಲು ತೀರ್ಮಾನಿಸಲಾಗಿದೆ. ಇದರಿಂದ ನಗರಸಭೆಗೆ ಹಣ ಬರುತ್ತದೆ. ಮಾಡುವುದಕ್ಕೆ ತೊಂದರೆ ಏನು ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದ ಅವರು, ಈ ಬಗ್ಗೆ ಕೂಡಲೇ ಪ್ರಪೋಸಲ್ ಮಾಡಿ ಕಳುಹಿಸಿ ಕೊಡಿ ಎಂದರು.

ಅವಾಸ್ ಯೋಜನೆಯಲ್ಲಿ ಮನೆ ಕಟ್ಟಿದವರಿಗೆ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು. ಈಗ ಸದ್ಯದ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗದಲ್ಲಿ 5,40 ಲಕ್ಷ ಹಾಗೂ ಪಟ್ಟಣ ಪ್ರದೇಶದಲ್ಲಿ 4,60 ಲಕ್ಷ ಮನೆಗಳಿಗೆ ಹೊರತುಪಡಿಸಿ ಬೇರೆ ಮನೆಗಳಿಗೆ ಹಣ ಬಿಡುಗಡೆ ಮಾಡಲಾಗುವುದಿಲ್ಲ. ಇನ್ನುಳಿದಂತೆ ಒಂದೂವರೆ ವರ್ಷದಲ್ಲಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕ ರಾಮಪ್ಪ, ಮಾಜಿ ಶಾಸಕ ಹರೀಶ್, ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.

                    *************

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ;

ಸಿದ್ದರಾಮಯ್ಯ (Siddaramaiah) ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು, ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. D.K.Shivakumar

[ccc_my_favorite_select_button post_id="110764"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!