ಹರಿಹರದಲ್ಲಿ ಗೃಹ ಮಂಡಳಿಯಿಂದ ಸುಸಜ್ಜಿತ ಬಡಾವಣೆ ನಿರ್ಮಾಣ: ವಿ.ಸೋಮಣ್ಣ

ದಾವಣಗೆರೆ: ಸೋಮವಾರ ಹರಿಹರ ನಗರದ ಶೋರಾಪುರ ಗ್ರಾಮದಲ್ಲಿ ಗೃಹ ಮಂಡಳಿಯ ವಶದಲ್ಲಿರುವ ಜಮೀನು ಸ್ಥಳವನ್ನು ವಸತಿ ಸಚಿವರಾದ ವಿ. ಸೋಮಣ್ಣ ಪರಿವೀಕ್ಷಣೆ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರಿಹರ ಸಮೀಪದ ಶೋರಾಪುರದಲ್ಲಿ ಸುಮಾರು 54 ಎಕರೆ ಜಮೀನಿನಲ್ಲಿ ಒಂದು ಮಾದರಿ ಬಡಾವಣೆಯನ್ನು ಗೃಹ ಮಂಡಳಿಯಿಂದ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. ಮುಂದಿನ ತಿಂಗಳು 20ರೊಳಗಾಗಿ ಕೆಲಸದ ಪ್ರಕ್ರಿಯೆ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.ಈ ಬಡಾವಣೆ ಮನೆಗಳಿಗಾಗಿ 35 ಸಾವಿರ ಅರ್ಜಿ ಬಂದಿವೆ. ಆದರೆ ಇದರಲ್ಲಿ 800 ರಿಂದ 900 ಸೈಟ್‍ಗಳಾಗುತ್ತವೆ. ಅದೇ ರೀತಿ ಶಾಸಕರು 8 ಎಕರೆ ಜಾಗ ಇದೆ. ಬಡವರಿಗಾಗಿ ಮನೆ ಕಟ್ಟಿಕೊಡಿ ಎಂದು ಮನವಿ ಮಾಡಿದ್ದಾರೆ. ಬಡವರಿಗೆ ಅನುಕೂಲವಾಗುತ್ತದೆ ಎಂದರೆ ನೋಡಣಾ. ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿ ಮಾಡಿ ಬಡವರಿಗೆ ಮನೆ ಕೊಡಲು ಮುಂದಾಗುತ್ತೇವೆ ಎಂದು ಭರವಸೆ ನೀಡಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಸೂರಿಲ್ಲದವರಿಗೆ 2022ರೊಳಗಾಗಿ ಪ್ರತಿಯೊಬ್ಬರಿಗೂ ಒಂದು ಸೂರು ಒದಗಿಸುವ ಚಿಂತನೆಗೆ ಸುಮಾರು 10 ಲಕ್ಷ ಮನೆಗಳನ್ನು ಇನ್ನೂ ಒಂದೂವರೆಯಿಂದ ಎರಡು ವರ್ಷಗಳಲ್ಲಿ ಮುಗಿಸಲು ಕ್ರಿಯಾ ಯೋಜನೆ ಮಾಡಿ ಕೆಲಸ ಕೂಡ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಇದರಲ್ಲಿ ಯಾವುದೇ ರಾಜಕಾರಣ ಇಲ್ಲ. ಪ್ರತಿಯೊಬ್ಬ ಬಡವರಿಗೂ ಮನೆ ಒದಗಿಸಬೇಕು ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದ್ದು, ಪಾರದರ್ಶಕವಾಗಿ ಕೆಲಸ ಮಾಡಿಕೊಂಡು ಬರಲಾಗುತ್ತಿದೆ. ಅದಕ್ಕಾಗಿ ನಾವು 4,535 ಎಕರೆ ಜಾಗವನ್ನು ರಾಜೀವ ಗಾಂಧಿ ವಸತಿ ನಿಗಮಕ್ಕೆ ಹಸ್ತಾಂತರ ಮಾಡಿಕೊಂಡಿದ್ದು,. 1.20 ಲಕ್ಷ ಸೈಟ್‍ಗಳನ್ನು ನಾಲ್ಕೈದು ತಿಂಗಳಲ್ಲಿ ಬೇಕಾದಂದಹ ಮೂಲಭೂತ ಸೌಕರ್ಯ ಒದಗಿಸಿ ಹಂಚುವ ಕೆಲಸ ಮಾಡಲಾಗುವುದು. 30 ವರ್ಷದಲ್ಲಿ ಇಡೀ ರಾಜ್ಯದಲ್ಲಿ 3 ಲಕ್ಷ ಸೈಟ್ ಕೊಡಲಾಗಿದೆ. ಆದರೆ 1.20 ಲಕ್ಷ ಸೈಟ್‍ಗಳನ್ನು ಇನ್ನು ಐದರಿಂದ ಆರು ತಿಂಗಳಲ್ಲಿ ಬಡವರಿಗೆ ನೀಡಲ್ಲಿದ್ದೇವೆ ಎಂದ ಅವರು, ಕೋವಿಡ್-19 ಕಡಿಮೆಯಾದ ಮೇಲೆ ಕೆಲಸ ಪ್ರಾರಂಭ ಮಾಡಲಾಗುತ್ತದೆ ಎಂದು ತಿಳಿಸಿದರು.

ಯುಎಲ್‍ಬಿ ಜಾಗಗಳನ್ನು ಪತ್ತೆ ಹಚ್ಚಲಾಗುತ್ತಿದ್ದು, ಅದರಡಿಯಲ್ಲಿ ಈ ಬಾರಿ ರಾಜೀವ್‍ಗಾಂಧಿ ಯೋಜನೆಯಿಂದ 69 ಸಾವಿರ ಮನೆಗಳನ್ನು ಕಟ್ಟಲು ರಾಜ್ಯದ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಂಗಳೂರು ಹಾಗೂ ಮೈಸೂರು ಹೊರತುಪಡಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಈಗಾಗಲೇ ಸಂಡೂರಿನಲ್ಲಿ 2 ಸಾವಿರ ಮನೆ, ನಿಪ್ಪಾಣಿಯಲ್ಲಿ 1,600 ಮನೆ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ 3 ಸಾವಿರ ಮನೆ ಸೇರಿದಂತೆ ಅನೇಕ ಕಡೆ ಕೆಲಸ ಶುರು ಮಾಡಲಾಗಿದೆ. ಅದರಂತೆ ಇಲ್ಲಿ ಕೂಡ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಈಗಾಗಲೇ ಬಿ ಖಾತೆಯಲ್ಲಿರುವ ಮನೆಗಳನ್ನು ಎ ಖಾತೆ ಮಾಡಿಸಲು ತೀರ್ಮಾನಿಸಲಾಗಿದೆ. ಇದರಿಂದ ನಗರಸಭೆಗೆ ಹಣ ಬರುತ್ತದೆ. ಮಾಡುವುದಕ್ಕೆ ತೊಂದರೆ ಏನು ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದ ಅವರು, ಈ ಬಗ್ಗೆ ಕೂಡಲೇ ಪ್ರಪೋಸಲ್ ಮಾಡಿ ಕಳುಹಿಸಿ ಕೊಡಿ ಎಂದರು.

ಅವಾಸ್ ಯೋಜನೆಯಲ್ಲಿ ಮನೆ ಕಟ್ಟಿದವರಿಗೆ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು. ಈಗ ಸದ್ಯದ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗದಲ್ಲಿ 5,40 ಲಕ್ಷ ಹಾಗೂ ಪಟ್ಟಣ ಪ್ರದೇಶದಲ್ಲಿ 4,60 ಲಕ್ಷ ಮನೆಗಳಿಗೆ ಹೊರತುಪಡಿಸಿ ಬೇರೆ ಮನೆಗಳಿಗೆ ಹಣ ಬಿಡುಗಡೆ ಮಾಡಲಾಗುವುದಿಲ್ಲ. ಇನ್ನುಳಿದಂತೆ ಒಂದೂವರೆ ವರ್ಷದಲ್ಲಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕ ರಾಮಪ್ಪ, ಮಾಜಿ ಶಾಸಕ ಹರೀಶ್, ವಿವಿಧ ಇಲಾಖಾ ಅಧಿಕಾರಿಗಳು ಹಾಜರಿದ್ದರು.

                    *************

ರಾಜಕೀಯ

ಭೂ ಸ್ವಾಧೀನಕ್ಕೆ ವಿರೋಧ; ಇಂದು ದೊಡ್ಡಬಳ್ಳಾಪುರ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋ

ಭೂ ಸ್ವಾಧೀನಕ್ಕೆ ವಿರೋಧ; ಇಂದು ದೊಡ್ಡಬಳ್ಳಾಪುರ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋ

ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು (Tractor Chalo) ಹಮ್ಮಿಕೊಳ್ಳಲಾಗಿದೆ.

[ccc_my_favorite_select_button post_id="120593"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]