ನಗದು ವರ್ಗೀಕರಣ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಪಿಐ(ಎಂ) ಪ್ರತಿಭಟನೆ

ದೊಡ್ಡಬಳ್ಳಾಪುರ: ಕೋವಿಡ್-19 ನಿಯಂತ್ರಣ,ಲಾಕ್ಡೌನ್ ಸಂತ್ರಸ್ತರಿಗೆ ಪರಿಹಾರ, ನೇಕಾರರಿಗೆ ವಿಶೇಷ ನೆರವು,ನಗದು ವರ್ಗೀಕರಣ ಹಾಗೂ ಆರ್ಥಿಕ ಪುನಶ್ಚೇತನ ಕ್ರಮಗಳಿಗೆ ಒತ್ತಾಯಿಸಿ,ಸಿಪಿಐ(ಎಂ) ವತಿಯಿಂದ ನಗರದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಉಪ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ ಮಾತನಾಡಿ, ಕೊರೊನಾ ಪರಿಣಾಮದಿಂದಾಗಿ ದೇಶದ ಕಾರ್ಮಿಕರು ಹಾಗೂ ದುಡಿಯುವ ವರ್ಗ ಬೀದಿಪಾಲಾಗಿದ್ದು, ಕೊರೊನಾ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರದ ಮೋದಿ ಸರ್ಕಾರ ವಿಫಲವಾಗಿದೆ. ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಡುತ್ತಿರುವ ಮೋದಿ ಸರ್ಕಾರ ಕಾರ್ಮಿಕರನ್ನು ಬಡ ಜನರನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ಪಿ.ಎ.ವೆಂಕಟೇಶ್ ಮಾತನಾಡಿ,ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು,ದುಡಿಯುವ ವರ್ಗ ಕೆಲಸವಿಲ್ಲದೇ ಬೀದಿ ಪಾಲಾಗುತ್ತಿದ್ದಾರೆ. ಅಂತರಾಜ್ಯ ಕಾರ್ಮಿಕರು ಕೆಲಸವಿಲ್ಲದೇ ನೂರಾರು ಮೈಲಿ ನಡೆದು, ಹಸಿವಿನಿಂದ ಸಾವನ್ನಪ್ಪಿದ್ದಾರೆ, ಆದರೂ ಸಹ ಮಾಧ್ಯಮಗಳಲ್ಲಿ ಮೋದಿ ಅವರ ಸಾಧನೆ ಗುಣದಾನ ಮಾಡಲಾಗುತ್ತಿದೆ. ನಗರದಲ್ಲಿ ನೇಕಾರರು ಮಗ್ಗಗಳನ್ನು ನಡೆಸಲಾಗದೇ ದಿವಾಳಿಯಾಗಿದ್ದಾರೆ. ಈ ದಿಸೆಯಲ್ಲಿ ಕೊರೊನಾ ವೈರಸ್ ಹಾವಳಿಯಿಂದ ಆದ ಲಾಕ್ಡೌನ್ನಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿ ಪರಿಸ್ಥಿತಿ ಸುಧಾರಿಸುವವರೆವಿಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೆರವು ಅವಶ್ಯವಿದ್ದು,ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕಿದೆ ಎಂದು ಒತ್ತಾಯಿಸಿದರು.

ಒತ್ತಾಯಗಳು:ಆದಾಯ ತೆರಿಗೆ ಪಾವತಿಸುವ ಮಿತಿಗಳ ಹೊರಗಿರುವ ಎಲ್ಲಾ ಕುಟುಂಬಗಳಿಗೆ ತಿಂಗಳಿಗೆ ರೂ.7500ಗಳಂತೆ ಆರು ತಿಂಗಳ ವರೆಗೆ ನಗದು ವರ್ಗಾವಣೆ ಮಾಡಬೇಕು. ಪ್ರತಿ ವ್ಯಕ್ತಿಗೆ ತಿಂಗಳಿಗೆ 10 ಕೆ.ಜಿ ಯಂತೆ ಆರು ತಿಂಗಳವರೆಗೆ ಉಚಿತ ಆಹಾರ ದಾನ್ಯಗಳನ್ನು ವಿತರಣೆ ಮಾಡಬೇಕು. ಉದ್ಯೋಗ ಖಾತ್ರಿ ಅಡಿಯಲ್ಲಿ ಹೆಚ್ಚಿಸಿದ ಕೂಲಿಯೊಂದಿಗೆ, ನಗರದ  ಬಡವರಿಗೂ ಉದ್ಯೋಗ ಖಾತ್ರಿ ಯೋಜನೆಯನ್ನು ವಿಸ್ತರಿಸಬೇಕು. ನಿರುದ್ಯೋಗಿಗಳಿಗೆ ತಕ್ಷಣವೇ ಒಂದು ನಿರುದ್ಯೋಗ ಭತ್ಯೆ ನೀಡಬೇಕು. ಖಾಸಗೀಕರಣವನ್ನು ತಡೆಯಬೇಕು. ಕೃಷಿ ಉತ್ಪನ್ನ ಮಾರಾಟ ಹಾಗೂ ವಾಣಿಜ, ಬೆಲೆ ಖಾತರಿ, ಕೃಷಿ ಸೇವೆಗಳ ಕುರಿತ ರೈತರ ಒಪ್ಪಂದ,ಅಗತ್ಯ ಸೇವೆಗಳ ಕಾಯ್ದೆ ತಿದ್ದುಪಡಿ  2020, ಈ ಮೂರು ಸುಗ್ರೀವಾಜ್ಞೆಗಳು ವಾಪಾಸಾಗಬೇಕು. ನೇಕಾರರ ವಿದ್ಯುತ್ ಬಿಲ್ಲ್ಗಳನ್ನು ಮನ್ನಾ ಮಾಡಬೇಕು. ನೇಕಾರರಿಗೆ ಯಾರ್ನ್ ಮತ್ತು ಫ್ಯಾಬ್ರಿಕ್ ಬ್ಯಾಂಕ್ ತೆರೆಯಬೇಕು. ಜಿ.ಎಸ್.ಟಿ.ಯಿಂದ ಮುಕ್ತಿಗೊಳಿಸಬೇಕು. ನೇಯ್ಗೆ ಉದ್ಯಮದಲ್ಲಿರುವವರನ್ನು ಅಸಂಘಟಿತ ಕಾರ್ಮಿಕರನ್ನಾಗಿ ಪರಿಗಣಿಸಬೇಕು. ಜವಳಿ ಇಲಾಖೆಯಿಂದ ಗುರುತಿನ ಚೀಟಿಯನ್ನು ನೀಡಬೇಕು. ಪಕ್ಕದ ರಾಜ್ಯಗಳಲ್ಲಿ ನೀಡುವಂತೆ ತಿಂಗಳಿಗೆ 2 ಸಾವಿರ ನೀಡಬೇಕು. ಕರ್ನಾಟಕದಲ್ಲಿ ಆರೋಗ್ಯ ಪರಿಕರಗಳು, ವೆಂಟಿಲೇಟರ್ಸ್, ಅಗತ್ಯ ಔಷಗಳ ತೀವ್ರ ಕೊರತೆ ಇದ್ದು ಅವುಗಳನ್ನು ಗರಿಷ್ಠಪ್ರಮಾಣದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಪೂರೈಸಬೇಕು. ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕೂಡಲೇ ಇಳಿಸಬೇಕು ಎನ್ನುವ ಒತ್ತಾಯಗಳನ್ನು ಮಂಡಿಸಲಾಯಿತು.

ಪ್ರತಿಭಟನೆಯಲ್ಲಿ ಮುಖಂಡರಾದ ಎಸ್.ರುದ್ರಾರಾಧ್ಯ,ರೇಣುಕಾರಾಧ್ಯ, ಚೌಡಯ್ಯ,ಕೆ.ರಘುಕುಮಾರ್,ಪಿ.ಆದಿನಾರಾಯಣ ರೆಡ್ಡಿ,ಹರೀಂದ್ರ, ಆರ್.ಆರ್.ಮನೋಹರ್,ನರಸಿಂಹ ಮೂರ್ತಿ,ಬಸವರಾಜು,ಹರೀಶ್, ಮತ್ತಿತರರು ಭಾಗವಹಿಸಿದ್ದರು.

ರಾಜಕೀಯ

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

"ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಖ್ಯಮಂತ್ರಿಗಳೂ ಸಹ ಈಗಾಗಲೇ ಈ ವಿಚಾರದ ಬಗ್ಗೆ ಹೇಳಿದ್ದಾರೆ. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ

[ccc_my_favorite_select_button post_id="120925"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]