ಹರಿತಲೇಖನಿಯಲ್ಲಿ ಹವ್ಯಾಸಿ ವ್ಯಂಗ್ಯಚಿತ್ರಕಾರ ಅಶೋಕ್ ಅಣವೇಕರ್ ಕಾರ್ಟೂನ್ ಪಂಚ್

ದೊಡ್ಡಬಳ್ಳಾಪುರ: ರಾಜ್ಯ ಯುವ ವಕೀಲರ ರಾಜ್ಯಾಧ್ಯಕ್ಷರಾಗಿ ಯುವ ವಕೀಲರನ್ನು ಸಂಘಟಿಸುತ್ತಿರುವ ಅಶೋಕ ಅಣವೇಕರ ಹುಬ್ಬಳ್ಳಿ ವಕೀಲರ ಸಂಘದ ಅತ್ಯಂತ ಕ್ರಿಯಾಶೀಲ ನ್ಯಾಯವಾದಿ.

ದೇಶಭಕ್ತಿಯ ಹೋರಾಟದ ಮೂಲಕವೇ ಹುಬ್ಬಳ್ಳಿಯಲ್ಲಿ ಚಿರಪರಿಚಿತವಾಗಿರುವ ಇವರು ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದು ಇವರ ವ್ಯಂಗ್ಯ ಚಿತ್ರಗಳು ಇಂದಿನಿಂದ ಹರಿತಲೇಖನಿಯಲ್ಲಿ.

ಅಶೋಕ್ ಅಣವೇಕರ್ ಪರಿಚಯ

ಹುಬ್ಬಳ್ಳಿ ವಕೀಲರ ಸಂಘಕ್ಕೆ ಎರಡು ಬಾರಿ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಇವರು,ಹುಬ್ಬಳ್ಳಿಯಲ್ಲಿ ನೆಡೆದ  9ನೇ ರಾಜ್ಯ ವಕೀಲರ ಸಮ್ಮೇಳನವನ್ನು,ಸಮ್ಮೇಳನ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ನಡೆಸಿಕೊಟ್ಟಿರುತ್ತಾರೆ.

ವಿಶ್ವ ಹಿಂದೂ ಪರಿಷತ್ತಿನ ಸಹ ಸಂಪರ್ಕ ಪ್ರಮುಖರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.ಮಾತ್ರವಲ್ಲದೇ ರಾಜ್ಯ ಟ್ಯಾಕ್ಸಿ ಚಾಲಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ದೈವಜ್ಞ ಸಮುದಾಯದ ಸಹಕಾರ ಸಂಘದ  ನಿರ್ದೇಶಕರಾಗಿ,ಹುಬ್ಬಳ್ಳಿ ವಕೀಲರ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ನಿರ್ದೇಶಕರಾಗಿ, ವಕೀಲರ ಸಾಹಿತ್ಯ ಮತ್ತು ಕಲಾ ಪರಿಷದ್ ಸಂಸ್ಥಾಪಕ ನಿರ್ದೇಶಕರಾಗಿ, ಹುಬ್ಬಳ್ಳಿ ವಕೀಲರ ಕಲ್ಯಾಣ ನಿಧಿಯ  ಸಂಸ್ಥಾಪಕ ಟ್ರಸ್ಟಿ ಯಾಗಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ!

ಹೀಗೆ ಅನೇಕ ಸಂಘ ಸಂಸ್ಥೆಗಳಲ್ಲಿ ಹಾಗೂ ತಮ್ಮ ಬಹುಮುಖ ವ್ಯಕ್ತಿತ್ವದಿಂದ ಹುಬ್ಬಳ್ಳಿ ವಕೀಲರ ಸಂಘದಲ್ಲಿ ವಿಶಿಷ್ಠವಾಗಿ ಗುರುತಿಸಿಕೊಂಡಿದ್ದಾರೆ!

ರಾಜ್ಯದಲ್ಲಿ ಎಲ್ಲೇ ವಕೀಲರ ಮೇಲೆ ದೌರ್ಜನ್ಯಗಳಾದರೆ ದೌರ್ಜನ್ಯವೆಸಗಿದ ಯಾರೇ ಆಗಿರಲಿ ಅವರ ವಿರುದ್ಧವಾಗಿ ವಕೀಲರ ಪರವಾಗಿ ಬೀದಿಗಿಳಿಯುತ್ತಾರೆ.

ಯುವ ವಕೀಲರಿಗೆ ಸರಕಾರ ನೀಡುವ ಗೌರವಧನವನ್ನು ಗುಳುಂ ಮಾಡಿದ ತಹಶಿಲ್ದಾರರ ವಿರುದ್ಧದ ಇವರ ನೇತೃತ್ವದಲ್ಲಿನ ಹೋರಾಟ ಇನ್ನೂ ಯುವ ವಕೀಲರಲ್ಲಿ ಅಚ್ಚಳಿಯದೇ ಉಳಿದಿದೆ.

ಹುಬ್ಬಳ್ಳಿ ವಕೀಲರ ಸಂಘದಲ್ಲಿ ಅನೇಕ ತಮ್ಮ ಜನಪರ ಯೋಜನೆಗಳು,ಕ್ರಿಯಾಶೀಲ ಚಟುವಟಿಕೆಗಳು ಯುವ ವಕೀಲರಿಗೆ ಸ್ಪೂರ್ತಿಯಾಗಿವೆ.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯ ಹಳೇ ನ್ಯಾಯಾಲಯದ ಆವರಣವು ಇವರ ನೇತೃತ್ವದಲ್ಲಿ ಸ್ವಚ್ಛವಾಯಿತು!

ವಕೀಲರ ಪರವಾಗಿ ಧ್ವನಿಯಾಗಲು ಈ ನ್ಯಾಯವಾದಿ ಎಂಬ ಮಾಸ ಪತ್ರಿಕೆಯನ್ನು ಹೊರತಂದಿದ್ದಾರೆ.ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದಾರೆ.

ಇತ್ತೀಚೆಗೆ ಕಾಶ್ಮೀರಿ ಯುವಕರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಘಟನೆಯಲ್ಲಿ,ದೇಶದ್ರೋಹಿ ಯುವಕರ ಪರ ವಕಾಲತ್ತು ವಹಿಸಲೂ ತೀವ್ರವಾದ ಪ್ರತಿರೋಧ ಒಡ್ಡಿ ದೇಶ ಪ್ರೇಮ ಸಾರಿದ ಕೀರ್ತಿ ಇವರದ್ದು.

ಇಂತಹ ದೇಶಪ್ರೇಮಿಯ ಕಾರ್ಟೂನ್ ಪಂಚ್ ಹರಿತಲೇಖನಿ ಮೂಲಕ ಇಂದಿನಿಂದ ನಿಮಗಾಗಿ.

           *******

ರಾಜಕೀಯ

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

"ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="119290"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!