ಹರಿತಲೇಖನಿಯಲ್ಲಿ ಹವ್ಯಾಸಿ ವ್ಯಂಗ್ಯಚಿತ್ರಕಾರ ಅಶೋಕ್ ಅಣವೇಕರ್ ಕಾರ್ಟೂನ್ ಪಂಚ್

ದೊಡ್ಡಬಳ್ಳಾಪುರ: ರಾಜ್ಯ ಯುವ ವಕೀಲರ ರಾಜ್ಯಾಧ್ಯಕ್ಷರಾಗಿ ಯುವ ವಕೀಲರನ್ನು ಸಂಘಟಿಸುತ್ತಿರುವ ಅಶೋಕ ಅಣವೇಕರ ಹುಬ್ಬಳ್ಳಿ ವಕೀಲರ ಸಂಘದ ಅತ್ಯಂತ ಕ್ರಿಯಾಶೀಲ ನ್ಯಾಯವಾದಿ.

ದೇಶಭಕ್ತಿಯ ಹೋರಾಟದ ಮೂಲಕವೇ ಹುಬ್ಬಳ್ಳಿಯಲ್ಲಿ ಚಿರಪರಿಚಿತವಾಗಿರುವ ಇವರು ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದು ಇವರ ವ್ಯಂಗ್ಯ ಚಿತ್ರಗಳು ಇಂದಿನಿಂದ ಹರಿತಲೇಖನಿಯಲ್ಲಿ.

ಅಶೋಕ್ ಅಣವೇಕರ್ ಪರಿಚಯ

ಹುಬ್ಬಳ್ಳಿ ವಕೀಲರ ಸಂಘಕ್ಕೆ ಎರಡು ಬಾರಿ ಪ್ರದಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದ ಇವರು,ಹುಬ್ಬಳ್ಳಿಯಲ್ಲಿ ನೆಡೆದ  9ನೇ ರಾಜ್ಯ ವಕೀಲರ ಸಮ್ಮೇಳನವನ್ನು,ಸಮ್ಮೇಳನ ಸಮಿತಿಯ ಪ್ರದಾನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ನಡೆಸಿಕೊಟ್ಟಿರುತ್ತಾರೆ.

ವಿಶ್ವ ಹಿಂದೂ ಪರಿಷತ್ತಿನ ಸಹ ಸಂಪರ್ಕ ಪ್ರಮುಖರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.ಮಾತ್ರವಲ್ಲದೇ ರಾಜ್ಯ ಟ್ಯಾಕ್ಸಿ ಚಾಲಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ, ದೈವಜ್ಞ ಸಮುದಾಯದ ಸಹಕಾರ ಸಂಘದ  ನಿರ್ದೇಶಕರಾಗಿ,ಹುಬ್ಬಳ್ಳಿ ವಕೀಲರ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ನಿರ್ದೇಶಕರಾಗಿ, ವಕೀಲರ ಸಾಹಿತ್ಯ ಮತ್ತು ಕಲಾ ಪರಿಷದ್ ಸಂಸ್ಥಾಪಕ ನಿರ್ದೇಶಕರಾಗಿ, ಹುಬ್ಬಳ್ಳಿ ವಕೀಲರ ಕಲ್ಯಾಣ ನಿಧಿಯ  ಸಂಸ್ಥಾಪಕ ಟ್ರಸ್ಟಿ ಯಾಗಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ!

ಹೀಗೆ ಅನೇಕ ಸಂಘ ಸಂಸ್ಥೆಗಳಲ್ಲಿ ಹಾಗೂ ತಮ್ಮ ಬಹುಮುಖ ವ್ಯಕ್ತಿತ್ವದಿಂದ ಹುಬ್ಬಳ್ಳಿ ವಕೀಲರ ಸಂಘದಲ್ಲಿ ವಿಶಿಷ್ಠವಾಗಿ ಗುರುತಿಸಿಕೊಂಡಿದ್ದಾರೆ!

ರಾಜ್ಯದಲ್ಲಿ ಎಲ್ಲೇ ವಕೀಲರ ಮೇಲೆ ದೌರ್ಜನ್ಯಗಳಾದರೆ ದೌರ್ಜನ್ಯವೆಸಗಿದ ಯಾರೇ ಆಗಿರಲಿ ಅವರ ವಿರುದ್ಧವಾಗಿ ವಕೀಲರ ಪರವಾಗಿ ಬೀದಿಗಿಳಿಯುತ್ತಾರೆ.

ಯುವ ವಕೀಲರಿಗೆ ಸರಕಾರ ನೀಡುವ ಗೌರವಧನವನ್ನು ಗುಳುಂ ಮಾಡಿದ ತಹಶಿಲ್ದಾರರ ವಿರುದ್ಧದ ಇವರ ನೇತೃತ್ವದಲ್ಲಿನ ಹೋರಾಟ ಇನ್ನೂ ಯುವ ವಕೀಲರಲ್ಲಿ ಅಚ್ಚಳಿಯದೇ ಉಳಿದಿದೆ.

ಹುಬ್ಬಳ್ಳಿ ವಕೀಲರ ಸಂಘದಲ್ಲಿ ಅನೇಕ ತಮ್ಮ ಜನಪರ ಯೋಜನೆಗಳು,ಕ್ರಿಯಾಶೀಲ ಚಟುವಟಿಕೆಗಳು ಯುವ ವಕೀಲರಿಗೆ ಸ್ಪೂರ್ತಿಯಾಗಿವೆ.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹುಬ್ಬಳ್ಳಿಯ ಹಳೇ ನ್ಯಾಯಾಲಯದ ಆವರಣವು ಇವರ ನೇತೃತ್ವದಲ್ಲಿ ಸ್ವಚ್ಛವಾಯಿತು!

ವಕೀಲರ ಪರವಾಗಿ ಧ್ವನಿಯಾಗಲು ಈ ನ್ಯಾಯವಾದಿ ಎಂಬ ಮಾಸ ಪತ್ರಿಕೆಯನ್ನು ಹೊರತಂದಿದ್ದಾರೆ.ಹವ್ಯಾಸಿ ವ್ಯಂಗ್ಯಚಿತ್ರಕಾರರಾಗಿ ಸಕ್ರಿಯರಾಗಿದ್ದಾರೆ.

ಇತ್ತೀಚೆಗೆ ಕಾಶ್ಮೀರಿ ಯುವಕರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದ ಘಟನೆಯಲ್ಲಿ,ದೇಶದ್ರೋಹಿ ಯುವಕರ ಪರ ವಕಾಲತ್ತು ವಹಿಸಲೂ ತೀವ್ರವಾದ ಪ್ರತಿರೋಧ ಒಡ್ಡಿ ದೇಶ ಪ್ರೇಮ ಸಾರಿದ ಕೀರ್ತಿ ಇವರದ್ದು.

ಇಂತಹ ದೇಶಪ್ರೇಮಿಯ ಕಾರ್ಟೂನ್ ಪಂಚ್ ಹರಿತಲೇಖನಿ ಮೂಲಕ ಇಂದಿನಿಂದ ನಿಮಗಾಗಿ.

           *******

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!