ಘನತ್ಯಾಜ್ಯ ಸಂಸ್ಕರಣೆ, ವಿಲೇವಾರಿ ಘಟಕದ ಸಮರ್ಪಕ ನಿರ್ವಹಣೆಯಾಗದಿದ್ದಲ್ಲಿ ಶಿಸ್ತು ಕ್ರಮ: ಅರಣ್ಯ ಸಚಿವ ಅನಂದ್‌ಸಿಂಗ್

ನೆಲಮಂಗಲ: ಘನತ್ಯಾಜ್ಯ ಸಂಸ್ಕರಣೆ ಹಾಗೂ ವಿಲೇವಾರಿ ಘಟಕದ ನಿರ್ವಹಣೆಯು ಸರ್ಕಾರದ ನಿಯಮಗಳ ಅನ್ವಯ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಅರಣ್ಯ ಹಾಗೂ ಪರಿಸರ ಸಚಿವ ಆನಂದ್‌ಸಿಂಗ್ ಅವರು ಎಚ್ಚರಿಕೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕು, ಸೋಂಪುರ ಹೋಬಳಿಯ ಪೆಮ್ಮನಹಳ್ಳಿ, ತಿಮ್ಮನಾಯ್ಕನಹಳ್ಳಿ ಬಳಿಯ ದಾಬಸ್‌ಪೇಟೆ ಕೈಗಾರಿಕಾ ಪ್ರದೇಶದಲ್ಲಿರುವ ಘನತ್ಯಾಜ್ಯ ಸಂಸ್ಕರಣೆ ಹಾಗೂ ವಿಲೇವಾರಿ ಘಟಕಕ್ಕೆ ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಚಿವರು ಮಾತನಾಡಿದರು.

ಎ ಡಿವಿಜನ್ ಆಫ್ ರಾಮ್ಕಿ ಎನ್ವಿರೋ ಇಂಜಿನಿಯರ್ಸ್ ಲಿಮಿಟೆಡ್‌ ವತಿಯಿಂದ ಕರ್ನಾಟಕ ವೇಸ್ಟ್ ಮ್ಯಾನೇಜ್‌ಮೆಂಟ್ ಪ್ರಾಜೆಕ್ಟ್‌ನಡಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಕರಣಾ ಘಟಕದಲ್ಲಿ ತ್ಯಾಜ್ಯ ವಿಲೇವಾರಿ ಹಾಗೂ ತ್ಯಾಜ್ಯ ಸಂಸ್ಕರಣೆ ನಿರ್ವಹಣೆ ಸಮರ್ಪಕವಾಗಿಲ್ಲ ಎಂಬ ದೂರಿನ ಹಿನ್ನೆಲೆ ಖುದ್ದು ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದರು. 

ಸ್ಥಳೀಯರ ಸಹಕಾರದೊಂದಿಗೆ ಸರ್ಕಾರ ನಿಯಮಗಳನ್ನು ಪಾಲಿಸಬೇಕು. ಮತ್ತೊಮ್ಮೆ ಇಲ್ಲಿಗೆ ಭೇಟಿ ನೀಡಿದಾಗ ಇಂಥದ್ದೆ ಪರಿಸ್ಥಿತಿ ಕಂಡುಬಂದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಇಂತಹ ದೂರುಗಳು ಬಾರದಂತೆ ಜಾಗ್ರತೆ ವಹಿಸಬೇಕು ಎಂದರು. 

ಘಟಕದಲ್ಲಿ ನಿರಂತರ ತ್ಯಾಜ್ಯ ಸಂಸ್ಕರಣೆ ನಡೆಯುತ್ತಿದೆ. ಇದರಿಂದ ಹರಡುವ ವಾಸನೆ ಪ್ರಮಾಣವೂ ಹೆಚ್ಚಾಗಿದೆ. ಇದನ್ನು ತಡೆಯಲು ಈ ಪ್ರದೇಶದಲ್ಲಿ 200 ಮೀಟರ್ ಬಫರ್ ಜೋನ್ ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.

ಈ ಕಾರ್ಖಾನೆ ಸುತ್ತಮುತ್ತ ಸಾಕಷ್ಟು ಗ್ರಾಮಗಳಿವೆ ಹಾಗೂ ದಾಬಸ್‌ಪೇಟೆ ಪಟ್ಟಣವು ತುಂಬಾ ಹತ್ತಿರದಲ್ಲಿದೆ. ಈ ಘಟಕದಿಂದ ದುರ್ವಾಸನೆ ಬಾರದಂತೆ ಕ್ರಮ ವಹಿಸಬೇಕೆಂದು ಸೂಚನೆ ನೀಡಲಾಗಿದೆ ಎಂದು ಸಚಿವರು ಭರವಸೆ ನೀಡಿದರು.

ಕರೊನಾ ಮಹಾಮಾರಿ ವಿಶ್ವವನ್ನೇ ತಲ್ಲಣಗೊಳಿಸಿದೆ. ರಾಜ್ಯದಲ್ಲಿ ಕೊರೋನಾ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಫಲವಾಗಿದೆ. ಕೇಂದ್ರ ಸರ್ಕಾರದ ಪೂರಕ ನೆರವಿನೊಂದಿಗೆ ರಾಜ್ಯ ಸರ್ಕಾರವು ಕೊರೋನಾ ನಿಯಂತ್ರಣಕ್ಕೆ ಸಾಕಷ್ಟು ಶ್ರಮಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಘಟಕ ಆರಂಭದಿಂದಲೂ ಸಾಕಷ್ಟು ಸಮಸ್ಯೆ ಎದುರಾಗಿದೆ. ಸಂಜೆ ವೇಳೆ ಸಾರ್ವಜನಿಕರ ಓಡಾಟಕ್ಕೂ ತೊಂದರೆಯಾಗಿದೆ. ತ್ಯಾಜ್ಯ ಘಟಕದ ವಿಷಕಾರಿ ವಸ್ತುಗಳು ಅಂತರ್ಜಲ ಸೇರಿ ಕೊಳವೆಬಾವಿಗಳಲ್ಲಿ ನೀರು ಕಲುಷಿತಗೊಂಡಿವೆ. ಘಟಕದಿಂದ ಬರುವ ನೀರನ್ನು ಕುಡಿದು ಜಾನುವಾರುಗಳು ಮೃತಪಟ್ಟಿವೆ. ಸುತ್ತಮತ್ತಲ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ದುರ್ವಾಸನೆಗೆ ಸಾರ್ವಜನಿಕರು ಮೂಗುಮುಚ್ಚಿಕೊಂಡೇ ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು  ಸ್ಥಳೀಯ ಜನಪ್ರತಿನಿಧಿಗಳು ಸಮಸ್ಯೆ ತೋಡಿಕೊಂಡರು. 

ರಾಮ್ಕಿ ಕಂಪನಿ ವ್ಯವಸ್ಥಾಪಕ ಅಮಿತ್ ಚೌಧರಿ ಘಟಕದ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!