ನೇಕಾರ ಕೂಲಿ ಕಾರ್ಮಿಕರು ಪರಿಹಾರ ಧನ ಪಡೆಯಲು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು

ದೊಡ್ಡಬಳ್ಳಾಪುರ: ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೇಕಾರ ಕೂಲಿ ಕಾರ್ಮಿಕರಿಗೆ ನೀಡಲಾಗುವ ಪರಿಹಾರ ಧನ ಪಡೆಯಲು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಿದೆ. ತಾಲೂಕಿನಲ್ಲಿ 25 ಕ್ಕೂ ಹೆಚ್ಚು ಸೈಬರ್ ಕೇಂದ್ರಗಳಲ್ಲಿ ದತ್ತಾಂಶ ನಮೂದು ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ. ಇದರೊಂದಿಗೆ ಅಕೃತ ದಾಖಲೆಗಳಿರುವ ಸಂಘಟನೆಗಳು ಅರ್ಜಿ ಸಲ್ಲಿಸಿದರೆ, ಇಲಾಖೆಯಿಂದ ಅನುಮತಿ  ನೀಡಲಾಗುವುದು ಎಂದು ಜಿ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ಗಂಗಯ್ಯ ತಿಳಿಸಿದ್ದಾರೆ. 

ನಗರದ ಅಪೆರಲ್ ಪಾರ್ಕ್‌ನ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ನಡೆದ ನೇಕಾರರ ಸಭೆಯಲ್ಲಿ ಅವರು ಮಾತನಾಡಿದರು. 

ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಕೂಲಿ ಕಾರ್ಮಿಕರಿಗೆ ನೇರವಾಗಿ ಆಧಾರ್ ಲಿಂಕ್ ಹೊಂದಿರುವ ಬ್ಯಾಂಕ್ ಖಾತೆಗೆ ತಲಾ 2ಸಾವಿರ ರೂರಂತೆ ಪಾವತಿಸಲು ಸರ್ಕಾರದ ಆದೇಶವಾಗಿದೆ.ಅರ್ಹ ನೇಕಾರರು  ಸೇವಾಸಿಂಧುವಿನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. 

ಘಟಕದ ಮಾಲೀಕರಿಂದ ನಿಗದಿಪಡಿಸಿದ ನಮೂನೆಯಲ್ಲಿ ಮುಚ್ಚಳಿಕೆ ಪತ್ರದೊಂದಿಗೆ ಆಧಾರ್ ಕಾರ್ಡ್,ಡಿ.ಬಿ.ಟಿ ಗೆ ಬಳಕೆ ಮಾಡಲು ಕಾರ್ಮಿಕರ ಒಪ್ಪಿಗೆ ಪತ್ರ, ವಿದ್ಯುತ್ ಮಗ್ಗ ಘಟಕದ ಮುಂದೆ ಕಾರ್‍ಯನಿರ್ವಹಿಸುತ್ತಿರುವ ಫಲಾನುಭವಿಗಳ ಫೋಟೋ, ಘಟಕದ ವಿದ್ಯುತ್ ಸಂಪರ್ಕ ಹೊಂದಿರುವ ಆರ್.ಆರ್.ಸಂಖ್ಯೆಯ ವಿದ್ಯುತ್ ಬಿಲ್, ಬಾಡಿಗೆ ಅಥವಾ ಲೀಸ್ ದಾಖಲಾತಿ,ಘಟಕದ ಉದ್ಯೋಗ್ ಆಧಾರ್ ಅಥವಾ ಪರವಾನಗಿ ಪತ್ರ,  ಲಭ್ಯವಿದ್ದಲ್ಲಿ ನೇಕಾರರ ವಿವರಗಳನ್ನೊಳಗೊಂಡ ಮಜೂರಿ ಪಾವತಿಯ ಪ್ರತಿಗಳನ್ನು ಅರ್ಜಿಯೊಂದಿಗೆ ಜೂನ್ 30ರೊಳಗೆ ಸಲ್ಲಿಸಬೇಕು ಎಂದರು.

 ಸಭೆಯಲ್ಲಿ ಹಾಜರಿದ್ದ ನೇಕಾರರ ಮುಖಂಡರು ಮಾತನಾಡಿ, ಸರ್ಕಾರ ನೀಡುವ 2 ಸಾವಿರ ಯಾವುದಕ್ಕೂ ಸಾಲದು. ಸರ್ಕಾರ ಅರ್ಜಿ ಸಲ್ಲಿಕೆ ನಿಯಮಗಳನ್ನು ಸಡಿಲಗೊಳಿಸಬೇಕು. ಆರ್.ಆರ್.ಸಂಖ್ಯೆಯ ವಿದ್ಯುತ್ ಬಿಲ್ ಒಬ್ಬರ ಹೆಸರಿನಲ್ಲಿದ್ದು, ಮಗ್ಗಗಳು ಇನ್ನೊಬ್ಬರ ಹೆಸರಿನಲ್ಲಿದ್ದರೆ ಅರ್ಜಿ ಸಲ್ಲಿಸಲು ಗೊಂದಲವಾಗುತ್ತದೆ. ಅರ್ಜಿ ಸಲ್ಲಿಸಲು ಸೈಬರ್ ಕೇಂದ್ರಗಳಲ್ಲಿ ಹೆಚ್ಚಿನ ಹಣ ಪಡೆಯುತ್ತಾರೆ, ಆದ್ದರಿಂದ ಇಲಾಖೆಯ ವತಿಯಿಂದಲೇ ವ್ಯವಸ್ಥೆ ಮಾಡಿ  ಸರ್ಕಾರದ ನೆರವು ಎಲ್ಲಾ ನೇಕಾರರಿಗೂ ತಲುಪಬೇಕಿದೆ ಎಂದರು.

ಇದಕ್ಕೆ ಉತ್ತರಿಸಿದ ಉಪ ನಿರ್ದೇಶಕರು, ಸೈಬರ್ ಕೇಂದ್ರಗಳಲ್ಲಿ ಹಣ ಪಡೆಯದಂತೆ ಸೂಚಿಸಲಾಗುತ್ತಿದ್ದು, ಹೆಚ್ಚಿನ ಹಣಕ್ಕೆ ಒತ್ತಾಯ ಮಾಡಿದರೆ ಇಲಾಖೆಯ ಗಮನಕ್ಕೆ ತನ್ನಿ. ಈಗಾಗಲೇ ಸೇವಾಸಿಂಧುವಿನಲ್ಲಿ  ತಂತ್ರಾಂಶಗಳು ಅಳವಡಿಸಿರುವುದರಿಂದ ಬದಲಾವಣೆ ಮಾಡಲಾಗದು. ನೇಕಾರರ ಸಮಸ್ಯೆಗಳನ್ನು ಜವಳಿ ಆಯುಕ್ತರು ಹಾಗೂ ಸಚಿವರ ಗಮನಕ್ಕೆ ತರಲಾಗುವುದು.ನೇಕಾರರು ಮಧ್ಯವರ್ತಿಗಳನ್ನು ನಂಬದೆ ನೇರವಾಗಿ ಜವಳಿ ಇಲಾಖೆ ಅಕಾರಿಗಳನ್ನು ಸಂಪರ್ಕ  ಮಾಡಿ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ನೇಕಾರರ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಜಿ.ಹೇಮಂತರಾಜು, ನೇಕಾರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಪಿ.ಎ.ವೆಂಕಟೇಶ್, ಟಿಎಂಸಿ ಬ್ಯಾಂಕ್ ಟಿಎಂಸಿ ಬ್ಯಾಂಕ್ ಅಧ್ಯಕ್ಷ ಕೆ.ಪಿ.ವಾಸುದೇವ್,ಕನ್ನಡ ಪಕ್ಷದ ಅಧ್ಯಕ್ಷ ಎಂ.ಸಂಜೀವ್ ನಾಯಕ್ ಸೇರಿದಂತೆ ವಿವಿಧ ನೇಕಾರರ ಸಂಘದ ಸದಸ್ಯರು ಹಾಗೂ ನೇಕಾರರು ಹಾಜರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ ಶೋಭಾಯಾತ್ರೆ ಮುಂದೂಡಿಕೆ..!; ನ್ಯಾಯಾಲಯದ ಮೊರೆ ಹೋಗಲು ಹಿಂದೂಪರ ಸಂಘಟನೆಗಳ ತೀರ್ಮಾನ

ದೊಡ್ಡಬಳ್ಳಾಪುರ ಶೋಭಾಯಾತ್ರೆ ಮುಂದೂಡಿಕೆ..!; ನ್ಯಾಯಾಲಯದ ಮೊರೆ ಹೋಗಲು ಹಿಂದೂಪರ ಸಂಘಟನೆಗಳ ತೀರ್ಮಾನ

ಶೋಭಾಯಾತ್ರೆಯಲ್ಲಿ (ShobhaYatre) ಡಿಜೆ (DJ) ಬಳಸಲು ಅನುಮತಿ ‌ನೀಡುವಂತೆ ವಿಶ್ವ ಹಿಂದೂ ಪರಿಷತ್ತು ಬಜರಂಗದಳದ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯನ್ನು ಕೈಬಿಡಲಾಗಿದ್ದು, ನ್ಯಾಯಾಲಯದಿಂದ ಆದೇಶದ ಬಳಿಕ ಶೋಭಾಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ.

[ccc_my_favorite_select_button post_id="120539"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!