ನೇಕಾರ ಕೂಲಿ ಕಾರ್ಮಿಕರು ಪರಿಹಾರ ಧನ ಪಡೆಯಲು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು

ದೊಡ್ಡಬಳ್ಳಾಪುರ: ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೇಕಾರ ಕೂಲಿ ಕಾರ್ಮಿಕರಿಗೆ ನೀಡಲಾಗುವ ಪರಿಹಾರ ಧನ ಪಡೆಯಲು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಿದೆ. ತಾಲೂಕಿನಲ್ಲಿ 25 ಕ್ಕೂ ಹೆಚ್ಚು ಸೈಬರ್ ಕೇಂದ್ರಗಳಲ್ಲಿ ದತ್ತಾಂಶ ನಮೂದು ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ. ಇದರೊಂದಿಗೆ ಅಕೃತ ದಾಖಲೆಗಳಿರುವ ಸಂಘಟನೆಗಳು ಅರ್ಜಿ ಸಲ್ಲಿಸಿದರೆ, ಇಲಾಖೆಯಿಂದ ಅನುಮತಿ  ನೀಡಲಾಗುವುದು ಎಂದು ಜಿ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ಗಂಗಯ್ಯ ತಿಳಿಸಿದ್ದಾರೆ. 

ನಗರದ ಅಪೆರಲ್ ಪಾರ್ಕ್‌ನ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ನಡೆದ ನೇಕಾರರ ಸಭೆಯಲ್ಲಿ ಅವರು ಮಾತನಾಡಿದರು. 

ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಕೂಲಿ ಕಾರ್ಮಿಕರಿಗೆ ನೇರವಾಗಿ ಆಧಾರ್ ಲಿಂಕ್ ಹೊಂದಿರುವ ಬ್ಯಾಂಕ್ ಖಾತೆಗೆ ತಲಾ 2ಸಾವಿರ ರೂರಂತೆ ಪಾವತಿಸಲು ಸರ್ಕಾರದ ಆದೇಶವಾಗಿದೆ.ಅರ್ಹ ನೇಕಾರರು  ಸೇವಾಸಿಂಧುವಿನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. 

ಘಟಕದ ಮಾಲೀಕರಿಂದ ನಿಗದಿಪಡಿಸಿದ ನಮೂನೆಯಲ್ಲಿ ಮುಚ್ಚಳಿಕೆ ಪತ್ರದೊಂದಿಗೆ ಆಧಾರ್ ಕಾರ್ಡ್,ಡಿ.ಬಿ.ಟಿ ಗೆ ಬಳಕೆ ಮಾಡಲು ಕಾರ್ಮಿಕರ ಒಪ್ಪಿಗೆ ಪತ್ರ, ವಿದ್ಯುತ್ ಮಗ್ಗ ಘಟಕದ ಮುಂದೆ ಕಾರ್‍ಯನಿರ್ವಹಿಸುತ್ತಿರುವ ಫಲಾನುಭವಿಗಳ ಫೋಟೋ, ಘಟಕದ ವಿದ್ಯುತ್ ಸಂಪರ್ಕ ಹೊಂದಿರುವ ಆರ್.ಆರ್.ಸಂಖ್ಯೆಯ ವಿದ್ಯುತ್ ಬಿಲ್, ಬಾಡಿಗೆ ಅಥವಾ ಲೀಸ್ ದಾಖಲಾತಿ,ಘಟಕದ ಉದ್ಯೋಗ್ ಆಧಾರ್ ಅಥವಾ ಪರವಾನಗಿ ಪತ್ರ,  ಲಭ್ಯವಿದ್ದಲ್ಲಿ ನೇಕಾರರ ವಿವರಗಳನ್ನೊಳಗೊಂಡ ಮಜೂರಿ ಪಾವತಿಯ ಪ್ರತಿಗಳನ್ನು ಅರ್ಜಿಯೊಂದಿಗೆ ಜೂನ್ 30ರೊಳಗೆ ಸಲ್ಲಿಸಬೇಕು ಎಂದರು.

 ಸಭೆಯಲ್ಲಿ ಹಾಜರಿದ್ದ ನೇಕಾರರ ಮುಖಂಡರು ಮಾತನಾಡಿ, ಸರ್ಕಾರ ನೀಡುವ 2 ಸಾವಿರ ಯಾವುದಕ್ಕೂ ಸಾಲದು. ಸರ್ಕಾರ ಅರ್ಜಿ ಸಲ್ಲಿಕೆ ನಿಯಮಗಳನ್ನು ಸಡಿಲಗೊಳಿಸಬೇಕು. ಆರ್.ಆರ್.ಸಂಖ್ಯೆಯ ವಿದ್ಯುತ್ ಬಿಲ್ ಒಬ್ಬರ ಹೆಸರಿನಲ್ಲಿದ್ದು, ಮಗ್ಗಗಳು ಇನ್ನೊಬ್ಬರ ಹೆಸರಿನಲ್ಲಿದ್ದರೆ ಅರ್ಜಿ ಸಲ್ಲಿಸಲು ಗೊಂದಲವಾಗುತ್ತದೆ. ಅರ್ಜಿ ಸಲ್ಲಿಸಲು ಸೈಬರ್ ಕೇಂದ್ರಗಳಲ್ಲಿ ಹೆಚ್ಚಿನ ಹಣ ಪಡೆಯುತ್ತಾರೆ, ಆದ್ದರಿಂದ ಇಲಾಖೆಯ ವತಿಯಿಂದಲೇ ವ್ಯವಸ್ಥೆ ಮಾಡಿ  ಸರ್ಕಾರದ ನೆರವು ಎಲ್ಲಾ ನೇಕಾರರಿಗೂ ತಲುಪಬೇಕಿದೆ ಎಂದರು.

ಇದಕ್ಕೆ ಉತ್ತರಿಸಿದ ಉಪ ನಿರ್ದೇಶಕರು, ಸೈಬರ್ ಕೇಂದ್ರಗಳಲ್ಲಿ ಹಣ ಪಡೆಯದಂತೆ ಸೂಚಿಸಲಾಗುತ್ತಿದ್ದು, ಹೆಚ್ಚಿನ ಹಣಕ್ಕೆ ಒತ್ತಾಯ ಮಾಡಿದರೆ ಇಲಾಖೆಯ ಗಮನಕ್ಕೆ ತನ್ನಿ. ಈಗಾಗಲೇ ಸೇವಾಸಿಂಧುವಿನಲ್ಲಿ  ತಂತ್ರಾಂಶಗಳು ಅಳವಡಿಸಿರುವುದರಿಂದ ಬದಲಾವಣೆ ಮಾಡಲಾಗದು. ನೇಕಾರರ ಸಮಸ್ಯೆಗಳನ್ನು ಜವಳಿ ಆಯುಕ್ತರು ಹಾಗೂ ಸಚಿವರ ಗಮನಕ್ಕೆ ತರಲಾಗುವುದು.ನೇಕಾರರು ಮಧ್ಯವರ್ತಿಗಳನ್ನು ನಂಬದೆ ನೇರವಾಗಿ ಜವಳಿ ಇಲಾಖೆ ಅಕಾರಿಗಳನ್ನು ಸಂಪರ್ಕ  ಮಾಡಿ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ನೇಕಾರರ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಜಿ.ಹೇಮಂತರಾಜು, ನೇಕಾರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಪಿ.ಎ.ವೆಂಕಟೇಶ್, ಟಿಎಂಸಿ ಬ್ಯಾಂಕ್ ಟಿಎಂಸಿ ಬ್ಯಾಂಕ್ ಅಧ್ಯಕ್ಷ ಕೆ.ಪಿ.ವಾಸುದೇವ್,ಕನ್ನಡ ಪಕ್ಷದ ಅಧ್ಯಕ್ಷ ಎಂ.ಸಂಜೀವ್ ನಾಯಕ್ ಸೇರಿದಂತೆ ವಿವಿಧ ನೇಕಾರರ ಸಂಘದ ಸದಸ್ಯರು ಹಾಗೂ ನೇಕಾರರು ಹಾಜರಿದ್ದರು.

ರಾಜಕೀಯ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

[ccc_my_favorite_select_button post_id="119574"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!