ನೇಕಾರ ಕೂಲಿ ಕಾರ್ಮಿಕರು ಪರಿಹಾರ ಧನ ಪಡೆಯಲು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು

ದೊಡ್ಡಬಳ್ಳಾಪುರ: ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೇಕಾರ ಕೂಲಿ ಕಾರ್ಮಿಕರಿಗೆ ನೀಡಲಾಗುವ ಪರಿಹಾರ ಧನ ಪಡೆಯಲು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಿದೆ. ತಾಲೂಕಿನಲ್ಲಿ 25 ಕ್ಕೂ ಹೆಚ್ಚು ಸೈಬರ್ ಕೇಂದ್ರಗಳಲ್ಲಿ ದತ್ತಾಂಶ ನಮೂದು ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ. ಇದರೊಂದಿಗೆ ಅಕೃತ ದಾಖಲೆಗಳಿರುವ ಸಂಘಟನೆಗಳು ಅರ್ಜಿ ಸಲ್ಲಿಸಿದರೆ, ಇಲಾಖೆಯಿಂದ ಅನುಮತಿ  ನೀಡಲಾಗುವುದು ಎಂದು ಜಿ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ಗಂಗಯ್ಯ ತಿಳಿಸಿದ್ದಾರೆ. 

ನಗರದ ಅಪೆರಲ್ ಪಾರ್ಕ್‌ನ ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ನಡೆದ ನೇಕಾರರ ಸಭೆಯಲ್ಲಿ ಅವರು ಮಾತನಾಡಿದರು. 

ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಕೂಲಿ ಕಾರ್ಮಿಕರಿಗೆ ನೇರವಾಗಿ ಆಧಾರ್ ಲಿಂಕ್ ಹೊಂದಿರುವ ಬ್ಯಾಂಕ್ ಖಾತೆಗೆ ತಲಾ 2ಸಾವಿರ ರೂರಂತೆ ಪಾವತಿಸಲು ಸರ್ಕಾರದ ಆದೇಶವಾಗಿದೆ.ಅರ್ಹ ನೇಕಾರರು  ಸೇವಾಸಿಂಧುವಿನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. 

ಘಟಕದ ಮಾಲೀಕರಿಂದ ನಿಗದಿಪಡಿಸಿದ ನಮೂನೆಯಲ್ಲಿ ಮುಚ್ಚಳಿಕೆ ಪತ್ರದೊಂದಿಗೆ ಆಧಾರ್ ಕಾರ್ಡ್,ಡಿ.ಬಿ.ಟಿ ಗೆ ಬಳಕೆ ಮಾಡಲು ಕಾರ್ಮಿಕರ ಒಪ್ಪಿಗೆ ಪತ್ರ, ವಿದ್ಯುತ್ ಮಗ್ಗ ಘಟಕದ ಮುಂದೆ ಕಾರ್‍ಯನಿರ್ವಹಿಸುತ್ತಿರುವ ಫಲಾನುಭವಿಗಳ ಫೋಟೋ, ಘಟಕದ ವಿದ್ಯುತ್ ಸಂಪರ್ಕ ಹೊಂದಿರುವ ಆರ್.ಆರ್.ಸಂಖ್ಯೆಯ ವಿದ್ಯುತ್ ಬಿಲ್, ಬಾಡಿಗೆ ಅಥವಾ ಲೀಸ್ ದಾಖಲಾತಿ,ಘಟಕದ ಉದ್ಯೋಗ್ ಆಧಾರ್ ಅಥವಾ ಪರವಾನಗಿ ಪತ್ರ,  ಲಭ್ಯವಿದ್ದಲ್ಲಿ ನೇಕಾರರ ವಿವರಗಳನ್ನೊಳಗೊಂಡ ಮಜೂರಿ ಪಾವತಿಯ ಪ್ರತಿಗಳನ್ನು ಅರ್ಜಿಯೊಂದಿಗೆ ಜೂನ್ 30ರೊಳಗೆ ಸಲ್ಲಿಸಬೇಕು ಎಂದರು.

 ಸಭೆಯಲ್ಲಿ ಹಾಜರಿದ್ದ ನೇಕಾರರ ಮುಖಂಡರು ಮಾತನಾಡಿ, ಸರ್ಕಾರ ನೀಡುವ 2 ಸಾವಿರ ಯಾವುದಕ್ಕೂ ಸಾಲದು. ಸರ್ಕಾರ ಅರ್ಜಿ ಸಲ್ಲಿಕೆ ನಿಯಮಗಳನ್ನು ಸಡಿಲಗೊಳಿಸಬೇಕು. ಆರ್.ಆರ್.ಸಂಖ್ಯೆಯ ವಿದ್ಯುತ್ ಬಿಲ್ ಒಬ್ಬರ ಹೆಸರಿನಲ್ಲಿದ್ದು, ಮಗ್ಗಗಳು ಇನ್ನೊಬ್ಬರ ಹೆಸರಿನಲ್ಲಿದ್ದರೆ ಅರ್ಜಿ ಸಲ್ಲಿಸಲು ಗೊಂದಲವಾಗುತ್ತದೆ. ಅರ್ಜಿ ಸಲ್ಲಿಸಲು ಸೈಬರ್ ಕೇಂದ್ರಗಳಲ್ಲಿ ಹೆಚ್ಚಿನ ಹಣ ಪಡೆಯುತ್ತಾರೆ, ಆದ್ದರಿಂದ ಇಲಾಖೆಯ ವತಿಯಿಂದಲೇ ವ್ಯವಸ್ಥೆ ಮಾಡಿ  ಸರ್ಕಾರದ ನೆರವು ಎಲ್ಲಾ ನೇಕಾರರಿಗೂ ತಲುಪಬೇಕಿದೆ ಎಂದರು.

ಇದಕ್ಕೆ ಉತ್ತರಿಸಿದ ಉಪ ನಿರ್ದೇಶಕರು, ಸೈಬರ್ ಕೇಂದ್ರಗಳಲ್ಲಿ ಹಣ ಪಡೆಯದಂತೆ ಸೂಚಿಸಲಾಗುತ್ತಿದ್ದು, ಹೆಚ್ಚಿನ ಹಣಕ್ಕೆ ಒತ್ತಾಯ ಮಾಡಿದರೆ ಇಲಾಖೆಯ ಗಮನಕ್ಕೆ ತನ್ನಿ. ಈಗಾಗಲೇ ಸೇವಾಸಿಂಧುವಿನಲ್ಲಿ  ತಂತ್ರಾಂಶಗಳು ಅಳವಡಿಸಿರುವುದರಿಂದ ಬದಲಾವಣೆ ಮಾಡಲಾಗದು. ನೇಕಾರರ ಸಮಸ್ಯೆಗಳನ್ನು ಜವಳಿ ಆಯುಕ್ತರು ಹಾಗೂ ಸಚಿವರ ಗಮನಕ್ಕೆ ತರಲಾಗುವುದು.ನೇಕಾರರು ಮಧ್ಯವರ್ತಿಗಳನ್ನು ನಂಬದೆ ನೇರವಾಗಿ ಜವಳಿ ಇಲಾಖೆ ಅಕಾರಿಗಳನ್ನು ಸಂಪರ್ಕ  ಮಾಡಿ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ನೇಕಾರರ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಜಿ.ಹೇಮಂತರಾಜು, ನೇಕಾರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಪಿ.ಎ.ವೆಂಕಟೇಶ್, ಟಿಎಂಸಿ ಬ್ಯಾಂಕ್ ಟಿಎಂಸಿ ಬ್ಯಾಂಕ್ ಅಧ್ಯಕ್ಷ ಕೆ.ಪಿ.ವಾಸುದೇವ್,ಕನ್ನಡ ಪಕ್ಷದ ಅಧ್ಯಕ್ಷ ಎಂ.ಸಂಜೀವ್ ನಾಯಕ್ ಸೇರಿದಂತೆ ವಿವಿಧ ನೇಕಾರರ ಸಂಘದ ಸದಸ್ಯರು ಹಾಗೂ ನೇಕಾರರು ಹಾಜರಿದ್ದರು.

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!