ಬೆಳೆ ಸಮೀಕ್ಷೆಯಲ್ಲಿನ ಲೋಪ ಸರಿಪಡಿಸುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ತೋಟಗಾರಿಕೆ ಇಲಾಖೆ ಕಚೇರಿ ಮುಂದೆ ಧರಣಿ

ದೊಡ್ಡಬಳ್ಳಾಪುರ: ಸರ್ಕಾರ ನಡೆಸಿರುವ ಬೆಳೆ ಸಮೀಕ್ಷೆಯಲ್ಲಿನ ತಪ್ಪಿನಿಂದಾಗಿ ರೈತರಿಗೆ ಸರ್ಕಾರದ ಯಾವುದೇ ಪರಿಹಾರ ಹಾಗೂ ಸೌಲಭ್ಯಗಳು ದೊರೆಯದಂತಾಗಿದೆ. ಇದನ್ನು ಸರಿಪಡಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ತೋಟಗಾರಿಕೆ ಇಲಾಖೆ ಕಚೇರಿ ಮುಂದೆ ಧರಣಿ ನಡೆಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸತೀಶ್, ಹಸಿರು ಮನೆ ಹೂವು ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಡಿ.ಶ್ಯಾಮಸುಂದರ್, ಪ್ರತಿಯೊಬ್ಬ ರೈತರ ಜಮೀನಿಗೆ ಭೇಟಿ ನೀಡಿ ಜಿಪಿಆರ್ಎಸ್ ಮೂಲಕ ಜಮೀನಿನಲ್ಲಿ ಇರುವ ಬೆಳೆಯ ಪೋಟೋ ಸಮೇತ ಪಹಣಿಯಲ್ಲಿ ಬೆಳೆ ದಾಖಲಿಸಬೇಕು. ಆದರೆ ಕಂದಾಯ ಇಲಾಕೆ ಅಧಿಕಾರಿಗಳು ಬೆಳೆ ಸಮೀಪಕ್ಷೆಯ ದಾಖಲಾತಿಯನ್ನು ಕಚೇರಿಯಲ್ಲೇ ಕುಳಿತು ಯಾವುದೇ ಪೋಟೋಗಳನ್ನು ಹಾಕುವ ಮೂಲಕ ಪಹಣಿಯಲ್ಲಿ ಬೆಳೆ ದಾಖಲು ಮಾಡಲಾಗಿದೆ. ಹತ್ತು ವರ್ಷಗಳಿಂದ ಹಸಿರು ಮನೆ ನಿರ್ಮಾಣ ಮಾಡಿಕೊಂಡು 8 ಎಕರೆ ಪ್ರದೇಶದಲ್ಲಿ ಹೂವು ಬೆಳೆಯಲಾಗುತ್ತಿದೆ. ಆದರೆ 2019-2020ನೇ ಸಾಲಿನ ಪಹಣಿಯಲ್ಲಿ ಕೃಷಿ ಏತರ ಬೆಳೆ ಎಂದು ನಮೋದಿಸಲಾಗಿದೆ. ಲಾಕ್ಡೌನ್ ಜಾರಿಯಿಂದಾಗಿ ಹೂವು ಬೆಳೆಗಾರರಿಗೆ ಆಗಿರುವ ನಷ್ಟವನ್ನು ತುಂಬಿಕೊಡುವ ಸಲುವಾಗಿ ಹೆಕ್ಟೇರ್ಗೆ 25 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ. ಈ ಪರಿಹಾರದ ಮೊತ್ತವನ್ನು ಪಡೆಯಲು ಪಹಣಿಯಲ್ಲಿ ಹೂವು ಬೆಳೆ ಸೇರಿದಂತೆ ಇತರೆ ಯಾವ ಬೆಳೆ ಇದೆ ಎನ್ನುವುದು ಇರಲೇಬೇಕು. ಇದು ಯಾರೋ ಒಬ್ಬ ರೈತರ ಸಮಸ್ಯೆ ಮಾತ್ರ ಆಗಿಲ್ಲ. ಈ ಹಿಂದೆ ಕೇಂದ್ರ ಸರ್ಕಾರ ಬೆಂಬಲ ಬೆಳೆ ಯೋಜನೆಯಲ್ಲಿ ರಾಗಿ ಖರೀದಿಗು ಸಹ ಇದೇ ನಿಯಮ ಮಾಡಿದ್ದರಿಂದ ಬಹುತೇಕ ರೈತರ ರಾಗಿ ಮಾರಾಟ ಮಾಡಲು ತೊಂದರೆ ಅನುಭವಿಸುವಂತಾಗಿದೆ. ಈಗ ಹೂವು ಹಾಗೂ ಮುಸುಕಿನಜೋಳದ ಬೆಳೆ ಪರಿಹಾರ ಪಡೆಯಲು ಸಹ ಅಡ್ಡಿಯಾಗಿದೆ ಎಂದರು.

ಧರಣಿ ನಿರತ ರೈತರನ್ನು ಭೇಟಿ ಮಾಡಿದ್ದ ತಹಶೀಲ್ದಾರ್ ಟಿ.ಎಸ್.ಶಿವರಾಜ್, ಪಹಣಿಯಲ್ಲಿ ಬೆಳೆ ಸಮೀಕ್ಷೆ ವರದಿ ದಾಖಲಾಗಿರುವ ಧೋಷವನ್ನು ಸರಿಪಡಿಸುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಒಂದೆರಡು ದಿನಗಳಲ್ಲಿ ನಿರ್ಧಾರಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಧರಣಿಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಪ್ರಸನ್ನ,ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಶಾಶ್ವತ ನೀರಾವರಿ ಹೋರಾಟ ಸಮಿತಿ ದೊಡ್ಡಬೆಳವಂಗಲ ಹೋಬಳಿ ಅಧ್ಯಕ್ಷ ಹನುಮಂತರಾಯಪ್ಪ, ಹೂವು ಬೆಳೆಗಾರರ ಸಂಘದ ಮುಖಂಡ ಮಲ್ಲೇಶ್ ಇದ್ದರು.

ರಾಜಕೀಯ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರದ ಪ್ರತಿಷ್ಠಿತ ಬೃಹತ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಪುಣೆ, ನಾಗಪೂರ ಸೇರಿದಂತೆ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಬಿಜೆಪಿ (BJP) ಮತ್ತು ಶಿವಸೇನೆ (ಏಕನಾಥ ಸಿಂಧೆ ಬಣ) ದೊಡ್ಡ ಪ್ರಮಾಣದಲ್ಲಿ ಜಯಗಳಿಸಿದ್ದಾರೆ.

[ccc_my_favorite_select_button post_id="118518"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!