ಬೆಳೆ ಸಮೀಕ್ಷೆಯಲ್ಲಿನ ಲೋಪ ಸರಿಪಡಿಸುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ತೋಟಗಾರಿಕೆ ಇಲಾಖೆ ಕಚೇರಿ ಮುಂದೆ ಧರಣಿ

ದೊಡ್ಡಬಳ್ಳಾಪುರ: ಸರ್ಕಾರ ನಡೆಸಿರುವ ಬೆಳೆ ಸಮೀಕ್ಷೆಯಲ್ಲಿನ ತಪ್ಪಿನಿಂದಾಗಿ ರೈತರಿಗೆ ಸರ್ಕಾರದ ಯಾವುದೇ ಪರಿಹಾರ ಹಾಗೂ ಸೌಲಭ್ಯಗಳು ದೊರೆಯದಂತಾಗಿದೆ. ಇದನ್ನು ಸರಿಪಡಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಮನೆ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ತೋಟಗಾರಿಕೆ ಇಲಾಖೆ ಕಚೇರಿ ಮುಂದೆ ಧರಣಿ ನಡೆಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸತೀಶ್, ಹಸಿರು ಮನೆ ಹೂವು ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಡಿ.ಶ್ಯಾಮಸುಂದರ್, ಪ್ರತಿಯೊಬ್ಬ ರೈತರ ಜಮೀನಿಗೆ ಭೇಟಿ ನೀಡಿ ಜಿಪಿಆರ್ಎಸ್ ಮೂಲಕ ಜಮೀನಿನಲ್ಲಿ ಇರುವ ಬೆಳೆಯ ಪೋಟೋ ಸಮೇತ ಪಹಣಿಯಲ್ಲಿ ಬೆಳೆ ದಾಖಲಿಸಬೇಕು. ಆದರೆ ಕಂದಾಯ ಇಲಾಕೆ ಅಧಿಕಾರಿಗಳು ಬೆಳೆ ಸಮೀಪಕ್ಷೆಯ ದಾಖಲಾತಿಯನ್ನು ಕಚೇರಿಯಲ್ಲೇ ಕುಳಿತು ಯಾವುದೇ ಪೋಟೋಗಳನ್ನು ಹಾಕುವ ಮೂಲಕ ಪಹಣಿಯಲ್ಲಿ ಬೆಳೆ ದಾಖಲು ಮಾಡಲಾಗಿದೆ. ಹತ್ತು ವರ್ಷಗಳಿಂದ ಹಸಿರು ಮನೆ ನಿರ್ಮಾಣ ಮಾಡಿಕೊಂಡು 8 ಎಕರೆ ಪ್ರದೇಶದಲ್ಲಿ ಹೂವು ಬೆಳೆಯಲಾಗುತ್ತಿದೆ. ಆದರೆ 2019-2020ನೇ ಸಾಲಿನ ಪಹಣಿಯಲ್ಲಿ ಕೃಷಿ ಏತರ ಬೆಳೆ ಎಂದು ನಮೋದಿಸಲಾಗಿದೆ. ಲಾಕ್ಡೌನ್ ಜಾರಿಯಿಂದಾಗಿ ಹೂವು ಬೆಳೆಗಾರರಿಗೆ ಆಗಿರುವ ನಷ್ಟವನ್ನು ತುಂಬಿಕೊಡುವ ಸಲುವಾಗಿ ಹೆಕ್ಟೇರ್ಗೆ 25 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ. ಈ ಪರಿಹಾರದ ಮೊತ್ತವನ್ನು ಪಡೆಯಲು ಪಹಣಿಯಲ್ಲಿ ಹೂವು ಬೆಳೆ ಸೇರಿದಂತೆ ಇತರೆ ಯಾವ ಬೆಳೆ ಇದೆ ಎನ್ನುವುದು ಇರಲೇಬೇಕು. ಇದು ಯಾರೋ ಒಬ್ಬ ರೈತರ ಸಮಸ್ಯೆ ಮಾತ್ರ ಆಗಿಲ್ಲ. ಈ ಹಿಂದೆ ಕೇಂದ್ರ ಸರ್ಕಾರ ಬೆಂಬಲ ಬೆಳೆ ಯೋಜನೆಯಲ್ಲಿ ರಾಗಿ ಖರೀದಿಗು ಸಹ ಇದೇ ನಿಯಮ ಮಾಡಿದ್ದರಿಂದ ಬಹುತೇಕ ರೈತರ ರಾಗಿ ಮಾರಾಟ ಮಾಡಲು ತೊಂದರೆ ಅನುಭವಿಸುವಂತಾಗಿದೆ. ಈಗ ಹೂವು ಹಾಗೂ ಮುಸುಕಿನಜೋಳದ ಬೆಳೆ ಪರಿಹಾರ ಪಡೆಯಲು ಸಹ ಅಡ್ಡಿಯಾಗಿದೆ ಎಂದರು.

ಧರಣಿ ನಿರತ ರೈತರನ್ನು ಭೇಟಿ ಮಾಡಿದ್ದ ತಹಶೀಲ್ದಾರ್ ಟಿ.ಎಸ್.ಶಿವರಾಜ್, ಪಹಣಿಯಲ್ಲಿ ಬೆಳೆ ಸಮೀಕ್ಷೆ ವರದಿ ದಾಖಲಾಗಿರುವ ಧೋಷವನ್ನು ಸರಿಪಡಿಸುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಒಂದೆರಡು ದಿನಗಳಲ್ಲಿ ನಿರ್ಧಾರಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಧರಣಿಯಲ್ಲಿ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ಪ್ರಸನ್ನ,ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಶಾಶ್ವತ ನೀರಾವರಿ ಹೋರಾಟ ಸಮಿತಿ ದೊಡ್ಡಬೆಳವಂಗಲ ಹೋಬಳಿ ಅಧ್ಯಕ್ಷ ಹನುಮಂತರಾಯಪ್ಪ, ಹೂವು ಬೆಳೆಗಾರರ ಸಂಘದ ಮುಖಂಡ ಮಲ್ಲೇಶ್ ಇದ್ದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!