ಭಾನುವಾರ ಸೂರ್ಯಗ್ರಹಣ ಹಿನ್ನೆಲೆ: ಭೂಮಿಯಲ್ಲಿ ವಿಕಲಚೇತನ ಮಕ್ಕಳನ್ನು ಹೂಳಿದರೆ ಕಠಿಣ ಕ್ರಮ – ಶರತ್ ಬಿ

ಕಲಬುರಗಿ: ಭಾನುವಾರ ಸಂಭವಿಸುವ ಸೂರ್ಯಗ್ರಹಣ ಸಮಯದಲ್ಲಿ ಮೂಢನಂಬಿಕೆಯಿಂದ ವಿಕಲಚೇತನ ಮಕ್ಕಳನ್ನು ಜಿಲ್ಲೆಯಾದ್ಯಂತ ಭೂಮಿಯಲ್ಲಿ ಹೂಳದಂತೆ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿ ಸಾರ್ವಜನಿಕರು ಯಾರಾದರು ವಿಕಲಚೇತನ ಮಕ್ಕಳನ್ನು ಭೂಮಿಯಲ್ಲಿ ಹೂಳಿದಲ್ಲಿ ಅಂತವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಶನಿವಾರ ಈ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಈ ಸಂಬಂಧ ಸಾರ್ವಜನಿಕರು ಅವೈಜ್ಞಾನಿಕವಾದ ಹೂಳುವ ರೂಢಿಯನ್ನು ಕೈಬಿಡಬೇಕು. ಕಳೆದ ವರ್ಷದ ಕಲಬುರಗಿ ನಗರದ ತಾಜ ಸುಲ್ತಾನಪೂರದಲ್ಲಿ ಇದೇ ರೀತಿಯ ಪ್ರಕರಣ ವರದಿಯಾಗಿದ್ದು, ಜಿಲ್ಲಾಡಳಿತದ ಗಮನಕ್ಕಿದೆ. ಭಾನುವಾರ ನಡೆಯುವ ಸೂರ್ಯಗ್ರಹಣ ದಿನದಂದು ಯಾವುದೇ ಕಾರಣಕ್ಕೂ ಇದು ಮರುಕಳಿಸಬಾರದೆಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಈ ಸಂಬಂಧ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ತಹಶೀಲ್ದಾರರಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಇದೆಲ್ಲದರ ನಡುವೆ ಶನಿವಾರ ಜಿಲ್ಲೆಯಾದ್ಯಂತ ತಾಲೂಕಾ ಪ್ರದೇಶ, ಪಟ್ಟಣ, ಗ್ರಾಮಗಳಲ್ಲಿ ಮೂಢನಂಬಿಕೆಯ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಮಕ್ಕಳಿಗೆ ಪ್ರತ್ಯೇಕ ಕೋಣೆ:

ಇದೇ ಜೂನ್ 25 ರಿಂದ ಜುಲೈ 4ರ ವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕಂಟೇನ್‌ಮೆಂಟ್ ಝೋನ್ ಮತ್ತು ಮಹಾರಾಷ್ಟç ಪ್ರವಾಸ ಹಿನ್ನೆಲೆಯ ವಿದ್ಯಾರ್ಥಿಗಳು ಹಾಜರಾದಲ್ಲಿ, ಅವರಿಗೆ ಪ್ರತ್ಯೇಕವಾದ ಕೋಣೆಯಲ್ಲಿ ಕೂರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತದೆ. ಇದಕ್ಕಾಗಿ ಪ್ರತಿ ಪರೀಕ್ಷಾ ಕೇಂದ್ರದಲ್ಲಿ 2 ಕೋಣೆ ಕಾಯ್ದಿರಿಸಲಾಗಿದೆ ಎಂದು ಶರತ್ ಬಿ. ತಿಳಿಸಿದರು.

ಪರೀಕ್ಷೆಗೆ ಬರುವ ಎಲ್ಲಾ ಮಕ್ಕಳಿಗೆ ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ ಧರಿಸುವಿಕೆ, ಥರ್ಮಲ್ ಸ್ಕ್ರಿನ್ ಸ್ಕ್ಯಾನಿಂಗ್ ಸೇರದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇದಕ್ಕಾಗಿ ಪರೀಕ್ಷಾ ಕ್ಳೆಂದ್ರದಲ್ಲಿ ಆರೋಗ್ಯ ತಂಡ ನಿಯೋಜಿಸಲಾಗುತ್ತದೆ. ಮುಂಜಾಗ್ರತವಾಗಿ ಎಲ್ಲಾ ಸಾರಿಗೆ ಬಸ್‌ಗಳನ್ನು ಸಹ ಸ್ಯಾನಿಟೈಸ್ ಮಾಡಲು ಸಾರಿಗೆ ಸಂಸ್ಥೆಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ 2446 ಜನ: ಕೊರೋನಾ ಹಿನ್ನೆಲೆಯಲ್ಲಿ ವಿವಿಧ ರಾಜ್ಯದಿಂದ ಜಿಲ್ಲೆಗೆ ಇದೂವರೆಗೆ ಆಗಮಿಸಿದ 43127 ಪೈಕಿ 40680 ಜನರನ್ನು ಬಿಡುಗಡೆ ಮಾಡಲಾಗಿದ್ದು, ಪ್ರಸ್ತುತ 2446 ಜನರು ಮಾತ್ರ ಸರ್ಕಾರಿ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಮಾಹಿತಿ ನೀಡಿದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]