ಎಸ್ಎಸ್ಎಲ್ಸಿ ಪರೀಕ್ಷಾರ್ಥಿಗಳ ನೆರವಿಗೆ ಸಹಾಯವಾಣಿ : ದೊಡ್ಡಬಳ್ಳಾಪುರ ಬಿಇಒ ಬೈಯಪ್ಪರೆಡ್ಡಿ

ದೊಡ್ಡಬಳ್ಳಾಪುರ: ಜೂನ್ 25ರಿಂದ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಯ ಬಗ್ಗೆ ಸಂದೇಹ ನಿವಾರಣೆ/ವಿಚಾರಣೆಗಾಗಿ ಸಹಾಯವಾಣಿ ತೆರೆಯಲಾಗಿದೆ ಎಂದು ದೊಡ್ಡಬಳ್ಳಾಪುರ ಕ್ಷೇತ್ರಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ ಹರಿತಲೇಖನಿಗೆ ತಿಳಿಸಿದ್ದಾರೆ.

ಪರೀಕ್ಷೆ ನಡೆಯಲಿರುವ ಪರೀಕ್ಷಾ ಕೇಂದ್ರಗಳಿಗೆ ನೋಡಲ್ ಅಧಿಕಾರಿ ಮಾರುತಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ‌‌ ನಡೆಸಿ ಮಾತನಾಡಿದ ಅವರು,ಕರೊನಾ ಸೋಂಕಿನ ಕಾರಣ ಮುಂದೂಡಲಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ಜೂನ್ 25ರಿಂದ ಜುಲೈ 3ರವರೆಗೆ ನಡೆಯಲಿದ್ದು ತಾಲೂಕು ಶಿಕ್ಷಣ ಇಲಾಖೆ ಸರ್ಕಾರ ನೀಡಿರುವ ಆದೇಶದ ಅನ್ವಯ ಸಿದ್ದತೆ ಕೈಗೊಳ್ಳಲಾಗುತ್ತಿದೆ ಎಂದರು.

ಈ ನಿಟ್ಟಿನಲ್ಲಿ ತಾಲೂಕಿನ ವಿದ್ಯಾರ್ಥಿಗಳಿಗೆ ಗೊಂದಲ / ಸಂದೇಹ ನಿವಾರಣೆಗೆ ಸಹಾಯವಾಣಿ ರಚಿಸಲಾಗಿದ್ದು,ಮುನೇಗೌಡ – 9845386488, ರಮೇಶ್- 9481806074,ಸತೀಶ್ – 9845697523, ಕಚೇರಿ ಸಂಖ್ಯೆ 08027622208.ಇವರುಗಳಿಗೆ ಕರೆ ಮಾಡಿ ವಿಚಾರಣೆ ನಡೆಸಬಹುದಾಗಿದೆ.

ತಾಲೂಕಿನಲ್ಲಿ 3355 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಲಾಕ್ ಡೌನ್ ಕಾರಣ ಇತರೆ ಜಿಲ್ಲೆಗಳಿಗೆ 30ವಿದ್ಯಾರ್ಥಿಗಳು ವಲಸೆ ಹೋಗಿದ್ದು,ಅಲ್ಲಿಯೇ ಪರೀಕ್ಷೆ ಬರೆಯುತ್ತಿದ್ದಾರೆ.ಇದೇ ರೀತಿ ಇತರೆ ಜಿಲ್ಲೆ,ತಾಲೂಕಿನಿಧ 11ಮಂದಿ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರ ತಾಲ್ಲೂಕಿನ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ.

 14 ಪರೀಕ್ಷಾ ಕೇಂದ್ರಗಳು

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ.ಕರೊನಾ ವೈರಾಣು ಕಾರಣ ಪರೀಕ್ಷಾ ಕೇಂದ್ರವಿರುವ ಸ್ಥಳವನ್ನು ಕಂಟೋನ್ಮೆಂಟ್ ಜೋನ್ ಎಂದು ಘೋಷಣೆಯಾದಲ್ಲಿ ಮುಂಜಾಗ್ರತೆಯ ಕ್ರಮವಾಗಿ ಅರಳುಮಲ್ಲಿಗೆಯ ನಳಂದ ಪ್ರೌಢಶಾಲೆ ಹಾಗೂ ಸಂಜಯನಗರದ ಶ್ರೀ ಅರವಿಂದ ಅನುದಾನಿತ ಪ್ರೌಢಶಾಲೆಯನ್ನು ಹೆಚ್ಚುವರಿಯಾಗಿ ಗುರುತಿಸಲಾಗಿದೆ.

ಪರೀಕ್ಷಾ ಸಿಬ್ಬಂದಿಗಳ ನೇಮಕ

ಸುಗಮ ಪರೀಕ್ಷೆ ನಡೆಸಲು 14  ಮುಖ್ಯ ಅಧೀಕ್ಷಕರು,3ಉಪಮುಖ್ಯ ಅಧೀಕ್ಷಕರು,14 ಪ್ರಶ್ನೆ ಪತ್ರಿಕೆ ಅಭಿರಕ್ಷಕರು,196 ಕೊಠಡಿ ಮೇಲ್ವಿಚಾರಕರು,70 ಮೀಸಲು ಕೊಠಡಿ ಮೇಲ್ವಿಚಾರಕರು,ಕರೊನಾ ಸೋಂಕು ಹರಡುವಿಕೆ ಹಿನ್ನೆಲೆ ಸಾಮಾಜಿಕ ಅಂತರ ಕಾಪಾಡಲು ಮತ್ತು ಸ್ಯಾನಿಟೈಸೇಷನ್ ಪ್ರಕ್ರಿಯೆಗಾಗಿ ಪ್ರತಿ ಕೇಂದ್ರಕ್ಕೆ 2 ದೈಹಿಕ ಶಿಕ್ಷಕರು,ಮತ್ತು ಸ್ಕೌಟ್ ಮತ್ತು ಗೈಡ್ಸ್ ಶಿಕ್ಷಕರು,ಆಶಾ ಕಾರ್ಯಕರ್ತೆಯರು,4 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಮುಂಜಾಗ್ರತಾ ಕ್ರಮಗಳು

ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆ ಆರಂಭಕ್ಕು ಎರಡು ದಿನ ಮುಂಚಿತವಾಗಿ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು,ಪ್ರತಿ ವಿದ್ಯಾರ್ಥಿಗೆ ಎರಡು ಜೊತೆ ಮಾಸ್ಕ್ ವಿತರಿಸಲಾಗುತ್ತಿದೆ,ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಸ್ಯಾನಿಟೈಸರ್ ಪೂರೈಕೆ,ಪರೀಕ್ಷಾ ಕೇಂದ್ರದ ಬಾಗಿಲಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆಗೆ ಒಳಪಡಿಸಲು ಹೆಲ್ತ್ ಡೆಸ್ಕ್ ರಚನೆ,ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಲಾ ಮೂರು ಅಡಿಯಷ್ಟು ಚೌಕಗಳ ರಚನೆ,ಡೆಸ್ಕ್ಗೆ ಇಬ್ಬರು ವಿದ್ಯಾರ್ಥಿಗಳಂತೆ ಪ್ರತಿ ಡೆಸ್ಕ್ ಗೆ 3ಅಡಿ ಅಂತರ,ಒಂದು ಕೊಟ್ಟಡಿಯಲ್ಲಿ 18ರಿಂ20 ಮಂದಿ ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ, ರೋಗದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಮೀಸಲು ಹಾಗೂ N95ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆ

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳನ್ನು ‌ಕರೆತರಲು ಕೆಸ್ಎಸ್ಆರ್ಟಿಸಿ ಇಲಖೆಯ ಸಹಕಾರದೊಂದಿಗೆ 15 ಮಾರ್ಗಗಳನ್ನು ರಚಿಸಿ,17ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ,ಈ ಮಾರ್ಗ ಗಳಿಂದ ಒಟ್ಟು 410 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಲುಪಲಿದ್ದಾರೆ.

ಸಿಸಿಟಿವಿ ಕ್ಯಾಮೆರಾ ಕಣ್ಗಾವಲು

ಕರೊನಾ ಸೋಂಕು ಹರಡುವಿಕೆ  ಹಿನ್ನೆಲೆ ಪರೀಕ್ಷೆ ನಡೆಸುವುದು ಸವಾಲಿನ ವಿಷಯವಾಗಿದ್ದರು ಪರೀಕ್ಷೆ ಪಾವಿತ್ರ್ಯತೆ ಕಾಪಾಡಲು ಕ್ರಮಕೈಗೊಳ್ಳಾಲಾಗುತ್ತಿದೆ.ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು,ಗ್ರೂಪ್ ಎ ಮತ್ತು ಬಿ ವೃಂದದ ಅಧಿಕಾರಿಗಳನ್ನೊಳಗೊಂಡ ವಿಚಕ್ಷಣಾ ದಳವನ್ನು ರಚಿಲಾಗಿದೆ.ಅಲ್ಲದೆ ಮೊಬೈಲ್ ಗಳನ್ನು ಪರೀಕ್ಷಾ ಕೇಂದ್ರಗಳಿಗೆ ತೆಗೆದುಕೊಂಡು ಹೋಗುವುದ ತಪ್ಪಿಸಲು ಮೋಬೈಲ್ ಸ್ವಾಧೀನ ಅಧಿಕಾರಿ ನೇಮಕ ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷ ಬೇಸಿಕ್ ಮೊಬೈಲ್ ಬಳಕೆ ಅನುಮತಿ ಹೊರತು ಪಡಿಸಿ ಯಾವ ಅಧಿಕಾರಿ,ಸಿಬ್ಬಂದಿ ಮೊಬೈಲ್ ಬಳಕೆ ಮಾಡದಂತೆ ನಿಷೇಧ ಹೇರಲಾಗಿದೆ.

ಇದೆಲ್ಲದರ ನಡುವೆ ಹೊರ ರಾಜ್ಯದಲ್ಲಿ  ನೆಲೆಸಿರುವ/ ಕಂಟೋನ್ಮೆಂಟ್ ಜೋನ್ ನಲ್ಲಿರುವ/ ಕೋವಿಡ್ 19ಪಾಸಿಟೀವ್ ಇರುವ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದಲ್ಲಿ,ಮುಂದಿನ ತಿಂಗಳು ನಡೆಸುವ ಪೂರಕ ಪರೀಕ್ಷೆಯಲ್ಲಿ ಅವಕಾಶ ಕಲ್ಪಿಸಿ ಆ ಪ್ರಯತ್ನವನ್ನು ಪ್ರಥಮ ಪ್ರಯತ್ನೆವೆಂದೇ ಪರಿಗಣಿಸಲಾಗುವುದೆಂದು ತಿಳಿಸಿದ್ದಾರೆ.

ಹರಿತಲೇಖನಿ ನ್ಯೂಸ್ ದೊಡ್ಡಬಳ್ಳಾಪುರ

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!