ಎಸ್ಎಸ್ಎಲ್ಸಿ ಪರೀಕ್ಷಾರ್ಥಿಗಳ ನೆರವಿಗೆ ಸಹಾಯವಾಣಿ : ದೊಡ್ಡಬಳ್ಳಾಪುರ ಬಿಇಒ ಬೈಯಪ್ಪರೆಡ್ಡಿ

ದೊಡ್ಡಬಳ್ಳಾಪುರ: ಜೂನ್ 25ರಿಂದ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಯ ಬಗ್ಗೆ ಸಂದೇಹ ನಿವಾರಣೆ/ವಿಚಾರಣೆಗಾಗಿ ಸಹಾಯವಾಣಿ ತೆರೆಯಲಾಗಿದೆ ಎಂದು ದೊಡ್ಡಬಳ್ಳಾಪುರ ಕ್ಷೇತ್ರಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ ಹರಿತಲೇಖನಿಗೆ ತಿಳಿಸಿದ್ದಾರೆ.

ಪರೀಕ್ಷೆ ನಡೆಯಲಿರುವ ಪರೀಕ್ಷಾ ಕೇಂದ್ರಗಳಿಗೆ ನೋಡಲ್ ಅಧಿಕಾರಿ ಮಾರುತಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ‌‌ ನಡೆಸಿ ಮಾತನಾಡಿದ ಅವರು,ಕರೊನಾ ಸೋಂಕಿನ ಕಾರಣ ಮುಂದೂಡಲಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆ ಜೂನ್ 25ರಿಂದ ಜುಲೈ 3ರವರೆಗೆ ನಡೆಯಲಿದ್ದು ತಾಲೂಕು ಶಿಕ್ಷಣ ಇಲಾಖೆ ಸರ್ಕಾರ ನೀಡಿರುವ ಆದೇಶದ ಅನ್ವಯ ಸಿದ್ದತೆ ಕೈಗೊಳ್ಳಲಾಗುತ್ತಿದೆ ಎಂದರು.

ಈ ನಿಟ್ಟಿನಲ್ಲಿ ತಾಲೂಕಿನ ವಿದ್ಯಾರ್ಥಿಗಳಿಗೆ ಗೊಂದಲ / ಸಂದೇಹ ನಿವಾರಣೆಗೆ ಸಹಾಯವಾಣಿ ರಚಿಸಲಾಗಿದ್ದು,ಮುನೇಗೌಡ – 9845386488, ರಮೇಶ್- 9481806074,ಸತೀಶ್ – 9845697523, ಕಚೇರಿ ಸಂಖ್ಯೆ 08027622208.ಇವರುಗಳಿಗೆ ಕರೆ ಮಾಡಿ ವಿಚಾರಣೆ ನಡೆಸಬಹುದಾಗಿದೆ.

ತಾಲೂಕಿನಲ್ಲಿ 3355 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಲಾಕ್ ಡೌನ್ ಕಾರಣ ಇತರೆ ಜಿಲ್ಲೆಗಳಿಗೆ 30ವಿದ್ಯಾರ್ಥಿಗಳು ವಲಸೆ ಹೋಗಿದ್ದು,ಅಲ್ಲಿಯೇ ಪರೀಕ್ಷೆ ಬರೆಯುತ್ತಿದ್ದಾರೆ.ಇದೇ ರೀತಿ ಇತರೆ ಜಿಲ್ಲೆ,ತಾಲೂಕಿನಿಧ 11ಮಂದಿ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರ ತಾಲ್ಲೂಕಿನ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ.

 14 ಪರೀಕ್ಷಾ ಕೇಂದ್ರಗಳು

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದೆ.ಕರೊನಾ ವೈರಾಣು ಕಾರಣ ಪರೀಕ್ಷಾ ಕೇಂದ್ರವಿರುವ ಸ್ಥಳವನ್ನು ಕಂಟೋನ್ಮೆಂಟ್ ಜೋನ್ ಎಂದು ಘೋಷಣೆಯಾದಲ್ಲಿ ಮುಂಜಾಗ್ರತೆಯ ಕ್ರಮವಾಗಿ ಅರಳುಮಲ್ಲಿಗೆಯ ನಳಂದ ಪ್ರೌಢಶಾಲೆ ಹಾಗೂ ಸಂಜಯನಗರದ ಶ್ರೀ ಅರವಿಂದ ಅನುದಾನಿತ ಪ್ರೌಢಶಾಲೆಯನ್ನು ಹೆಚ್ಚುವರಿಯಾಗಿ ಗುರುತಿಸಲಾಗಿದೆ.

ಪರೀಕ್ಷಾ ಸಿಬ್ಬಂದಿಗಳ ನೇಮಕ

ಸುಗಮ ಪರೀಕ್ಷೆ ನಡೆಸಲು 14  ಮುಖ್ಯ ಅಧೀಕ್ಷಕರು,3ಉಪಮುಖ್ಯ ಅಧೀಕ್ಷಕರು,14 ಪ್ರಶ್ನೆ ಪತ್ರಿಕೆ ಅಭಿರಕ್ಷಕರು,196 ಕೊಠಡಿ ಮೇಲ್ವಿಚಾರಕರು,70 ಮೀಸಲು ಕೊಠಡಿ ಮೇಲ್ವಿಚಾರಕರು,ಕರೊನಾ ಸೋಂಕು ಹರಡುವಿಕೆ ಹಿನ್ನೆಲೆ ಸಾಮಾಜಿಕ ಅಂತರ ಕಾಪಾಡಲು ಮತ್ತು ಸ್ಯಾನಿಟೈಸೇಷನ್ ಪ್ರಕ್ರಿಯೆಗಾಗಿ ಪ್ರತಿ ಕೇಂದ್ರಕ್ಕೆ 2 ದೈಹಿಕ ಶಿಕ್ಷಕರು,ಮತ್ತು ಸ್ಕೌಟ್ ಮತ್ತು ಗೈಡ್ಸ್ ಶಿಕ್ಷಕರು,ಆಶಾ ಕಾರ್ಯಕರ್ತೆಯರು,4 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಮುಂಜಾಗ್ರತಾ ಕ್ರಮಗಳು

ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆ ಆರಂಭಕ್ಕು ಎರಡು ದಿನ ಮುಂಚಿತವಾಗಿ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು,ಪ್ರತಿ ವಿದ್ಯಾರ್ಥಿಗೆ ಎರಡು ಜೊತೆ ಮಾಸ್ಕ್ ವಿತರಿಸಲಾಗುತ್ತಿದೆ,ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಸ್ಯಾನಿಟೈಸರ್ ಪೂರೈಕೆ,ಪರೀಕ್ಷಾ ಕೇಂದ್ರದ ಬಾಗಿಲಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆಗೆ ಒಳಪಡಿಸಲು ಹೆಲ್ತ್ ಡೆಸ್ಕ್ ರಚನೆ,ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಲಾ ಮೂರು ಅಡಿಯಷ್ಟು ಚೌಕಗಳ ರಚನೆ,ಡೆಸ್ಕ್ಗೆ ಇಬ್ಬರು ವಿದ್ಯಾರ್ಥಿಗಳಂತೆ ಪ್ರತಿ ಡೆಸ್ಕ್ ಗೆ 3ಅಡಿ ಅಂತರ,ಒಂದು ಕೊಟ್ಟಡಿಯಲ್ಲಿ 18ರಿಂ20 ಮಂದಿ ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ, ರೋಗದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಮೀಸಲು ಹಾಗೂ N95ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆ

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳನ್ನು ‌ಕರೆತರಲು ಕೆಸ್ಎಸ್ಆರ್ಟಿಸಿ ಇಲಖೆಯ ಸಹಕಾರದೊಂದಿಗೆ 15 ಮಾರ್ಗಗಳನ್ನು ರಚಿಸಿ,17ಬಸ್ಗಳನ್ನು ವ್ಯವಸ್ಥೆ ಮಾಡಲಾಗಿದೆ,ಈ ಮಾರ್ಗ ಗಳಿಂದ ಒಟ್ಟು 410 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಲುಪಲಿದ್ದಾರೆ.

ಸಿಸಿಟಿವಿ ಕ್ಯಾಮೆರಾ ಕಣ್ಗಾವಲು

ಕರೊನಾ ಸೋಂಕು ಹರಡುವಿಕೆ  ಹಿನ್ನೆಲೆ ಪರೀಕ್ಷೆ ನಡೆಸುವುದು ಸವಾಲಿನ ವಿಷಯವಾಗಿದ್ದರು ಪರೀಕ್ಷೆ ಪಾವಿತ್ರ್ಯತೆ ಕಾಪಾಡಲು ಕ್ರಮಕೈಗೊಳ್ಳಾಲಾಗುತ್ತಿದೆ.ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು,ಗ್ರೂಪ್ ಎ ಮತ್ತು ಬಿ ವೃಂದದ ಅಧಿಕಾರಿಗಳನ್ನೊಳಗೊಂಡ ವಿಚಕ್ಷಣಾ ದಳವನ್ನು ರಚಿಲಾಗಿದೆ.ಅಲ್ಲದೆ ಮೊಬೈಲ್ ಗಳನ್ನು ಪರೀಕ್ಷಾ ಕೇಂದ್ರಗಳಿಗೆ ತೆಗೆದುಕೊಂಡು ಹೋಗುವುದ ತಪ್ಪಿಸಲು ಮೋಬೈಲ್ ಸ್ವಾಧೀನ ಅಧಿಕಾರಿ ನೇಮಕ ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷ ಬೇಸಿಕ್ ಮೊಬೈಲ್ ಬಳಕೆ ಅನುಮತಿ ಹೊರತು ಪಡಿಸಿ ಯಾವ ಅಧಿಕಾರಿ,ಸಿಬ್ಬಂದಿ ಮೊಬೈಲ್ ಬಳಕೆ ಮಾಡದಂತೆ ನಿಷೇಧ ಹೇರಲಾಗಿದೆ.

ಇದೆಲ್ಲದರ ನಡುವೆ ಹೊರ ರಾಜ್ಯದಲ್ಲಿ  ನೆಲೆಸಿರುವ/ ಕಂಟೋನ್ಮೆಂಟ್ ಜೋನ್ ನಲ್ಲಿರುವ/ ಕೋವಿಡ್ 19ಪಾಸಿಟೀವ್ ಇರುವ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದಲ್ಲಿ,ಮುಂದಿನ ತಿಂಗಳು ನಡೆಸುವ ಪೂರಕ ಪರೀಕ್ಷೆಯಲ್ಲಿ ಅವಕಾಶ ಕಲ್ಪಿಸಿ ಆ ಪ್ರಯತ್ನವನ್ನು ಪ್ರಥಮ ಪ್ರಯತ್ನೆವೆಂದೇ ಪರಿಗಣಿಸಲಾಗುವುದೆಂದು ತಿಳಿಸಿದ್ದಾರೆ.

ಹರಿತಲೇಖನಿ ನ್ಯೂಸ್ ದೊಡ್ಡಬಳ್ಳಾಪುರ

ರಾಜಕೀಯ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು

[ccc_my_favorite_select_button post_id="118671"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಸುಮಾರು 21 ವರ್ಷದ ಯುವಕನೋರ್ವ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ ನಗರದ ಕುಚ್ಚಪ್ಪನ ಪೇಟೆಯಲ್ಲಿ ನಡೆದಿದೆ.

[ccc_my_favorite_select_button post_id="118648"]
ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="118669"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!