ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ರಾಜ್ಯ ಸರ್ಕಾರ ನಿಗದಿಪಡಿಸಿರುವ ವೆಚ್ಚದ ವಿವರ ನೋಡಿದರೆ ಸೋಂಕಿತರಿಗೆ ಹೃದಯಾಘಾತವಾಗುತ್ತೆ: ಸಿದ್ದರಾಮಯ್ಯ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಕರೊನಾ ಚಿಕಿತ್ಸೆಗಾಗಿ ರಾಜ್ಯ ಸರ್ಕಾರ ನಿಗದಿಪಡಿಸಿರುವ ವೆಚ್ಚದ ವಿವರ ಸೋಂಕಿತರಿಗೆ ಹೃದಯಾಘಾತವಾಗುವಂತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಕರೊನಾ ಚಿಕಿತ್ಸೆಗಾಗಿ ರಾಜ್ಯ ಸರ್ಕಾರ ನಿಗದಿಪಡಿಸಿರುವ ವೆಚ್ಚದ ಕುರಿತು ಸರ್ಕಾರವನ್ನು ಹರಿಹಾಯ್ದಿರುವ ಅವರು.ಒಂದು ಜವಾಬ್ದಾರಿಯುತ ಸರ್ಕಾರ ತನ್ನೆಲ್ಲ ಸೂಕ್ಷ್ಮತೆಯನ್ನು ಕಳೆದುಕೊಂಡು ಇಷ್ಟೊಂದು ಅಮಾನವೀಯ,ಇಷ್ಟೊಂದು ಜನವಿರೋಧಿಯಾಗಲು ಹೇಗೆ ಸಾಧ್ಯ? 

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗಾಗಿ ದಿನವೊಂದಕ್ಕೆ ಜನರಲ್ ವಾರ್ಡ್‌ನಲ್ಲಿ ರೂ,10,000, ಐಸೋಲೇಷನ್ ವಾರ್ಡ್ ನಲ್ಲಿ ರೂ.15,000 ಮತ್ತು ವೆಂಟಿಲೇಟರ್ ಸಹಿತ ಐಸಿಯುನಲ್ಲಿ ರೂ.25,000 ಶುಲ್ಕ ನಿಗದಿಪಡಿಸಿರುವ ಮುಖ್ಯಮಂತ್ರಿಗಳ ಉದ್ದೇಶ ಜನರ ಜೀವ ಉಳಿಸುವುದೋ? ಜೀವ ತೆಗೆಯುವುದೋ? ಕರೊನಾ ಸೋಂಕನ್ನು ನಿಯಂತ್ರಿಸಲು ಸಂಪೂರ್ಣ ವಿಫಲವಾಗಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ತಾವು ನಿರ್ವಹಿಸಬೇಕಾಗಿರುವ ಜವಾಬ್ದಾರಿಯನ್ನು ಖಾಸಗಿಯವರ ಹೆಗಲಿಗೆ ವರ್ಗಾಯಿಸಲು ಹೊರಟಿವೆ. ಈ ಮೂಲಕ ಬಡ-ಅಸಹಾಯಕ ಜನರನ್ನು ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬಲಿಪಶುಮಾಡಲು ನಿರ್ಧರಿಸಿದೆ. 

ಕರೊನಾ ಸೋಂಕಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ನಿಗದಿಪಡಿಸಿರುವ ಚಿಕಿತ್ಸಾ ಶುಲ್ಕವನ್ನು ಕಣ್ಣುಮುಚ್ಚಿ ಅನುಮೋದಿಸಿ ಜಾರಿಗೆ ತರಲು ಹೊರಟಿರುವ ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳ ಲಾಬಿಗೆ ಮಣಿದಂತಿದೆ. ಮುಖ್ಯಮಂತ್ರಿಗಳು ನೆರವಾಗಲು ಹೊರಟಿರುವುದು ಸೋಂಕಿತರಿಗೋ? ಖಾಸಗಿ ಆಸ್ಪತ್ರೆಗಳಿಗೋ? ಕರೊನಾ ರೋಗಿಗಳಿಗೆ ಎಲ್ಲ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಬೇಕು. ಸರ್ಕಾರ ಈ ಕೂಡಲೇ ಸ್ಟಾಂಡರ್ಡ್ ಟ್ರೀಟ್ಮೆಂಟ್ ಪ್ರೊಟೊಕಾಲ್ ಜಾರಿಗೆ ತರುವ ಜೊತೆಗೆ ಅದರ ಜಾರಿ ಬಗ್ಗೆ ನಿಗಾ ವಹಿಸಲು ಸಮಿತಿಯೊಂದನ್ನು ರಚನೆ ಮಾಡಬೇಕು. 

ಲಾಕ್‌ಡೌನ್‌ನಿಂದಾಗಿ ಜನರ ದುಡಿಮೆಯ ಅವಕಾಶಗಳೆಲ್ಲ ಮುಚ್ಚಿ ಹೋಗಿವೆ. ಅಸಂಖ್ಯಾತ ನೌಕರರನ್ನು ಕಾರ್ಖಾನೆ ಮತ್ತು ಕಂಪೆನಿಗಳು ಕೆಲಸದಿಂದ ತೆಗೆದು ಹಾಕಿವೆ. ಇದರಿಂದಾಗಿ ಜನರ ಬಳಿ ಹಣವಿಲ್ಲ. ಇಂತಹ ಪರಿಸ್ಥಿತಿಯಲ್ಲೂ ರಾಜ್ಯ ಸರ್ಕಾರ ಕರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿರುವುದು ಅಮಾನವೀಯ. ಬಡ ಅಥವಾ ಮಧ್ಯಮ ವರ್ಗದ ಒಂದೇ ಕುಟುಂಬದ ನಾಲ್ಕೈದು ಜನ ಸದಸ್ಯರು ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ಪಡೆಯುವ ಅನಿವಾರ್ಯತೆ ಉಂಟಾದರೆ 10-12 ಲಕ್ಷಕ್ಕೂ ಅಧಿಕ ಮೊತ್ತದ ಹಣ ಕಟ್ಟಬೇಕು, ಇಷ್ಟು ದೊಡ್ಡ ಮೊತ್ತದ ಹಣ ಅವರಿಂದ ತುಂಬಲು ಸಾಧ್ಯವೇ? 

ಸರ್ಕಾರದ ಅಧಿಸೂಚನೆ ಪ್ರಕಾರ 2-3 ಜನ ವಾರ್ಡ್‌ಗಳನ್ನು ಹಂಚಿಕೊಂಡು ಚಿಕಿತ್ಸೆ ಪಡೆದರೆ ಅವರಿಗೆ ಸಾಮಾನ್ಯ ದರದ ಜೊತೆಗೆ ಶೇ.25 ರವರೆಗೆ ಹೆಚ್ಚಿನ ದರಗಳನ್ನು ನಿಗದಿಪಡಿಸಬಹುದು. ಅದರ ಜೊತೆಗೆ ಸರ್ಕಾರ ನಿಗದಿಪಡಿಸಿರುವ ದರಗಳು ವಿಮಾ ಪ್ಯಾಕೇಜುಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಜಾಗವೇ ಇಲ್ಲದಂತಾ ಪರಿಸ್ಥಿತಿಯಿದೆ. ಸುಮಾರು 35,000 ವೆಂಟಿಲೇಟರ್ಗಳ ಸರಬರಾಜಿಗೆ ರಾಜ್ಯ ಕೇಂದ್ರಕ್ಕೆ ಮನವಿ ಮಾಡಿದರೆ, ಕೇವಲ 90 ವೆಂಟಿಲೇಟರ್ಗಳನ್ನು ಮಾತ್ರ ನೀಡಿದೆಯೆಂಬ ಮಾಹಿತಿ ಇದೆ. ಕರೊನಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿರುವುದಕ್ಕೆ ಬೇರೆ ಸಾಕ್ಷಿ ಬೇಕೇ? ಎಂದು ಪ್ರಶ್ನಿಸಿದ್ದಾರೆ.

ರಾಜಕೀಯ

ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು: ಆರ್.ಅಶೋಕ

ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು: ಆರ್.ಅಶೋಕ

ಬೆಂಗಳೂರನ್ನು ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು ಮಾಡಿದ್ದಾರೆ. ನಾಡಪ್ರಭು ಕೆಂಪೇಗೌಡರು ಒಂದು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು R Ashoka

[ccc_my_favorite_select_button post_id="107127"]
ಡಿಕೆ ಶಿವಕುಮಾರ್ ಜನ್ಮದಿನ; ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್

ಡಿಕೆ ಶಿವಕುಮಾರ್ ಜನ್ಮದಿನ; ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್

ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ಜನ್ಮದಿನದ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ಮೈಸೂರು ಮೃಗಲಯದಲ್ಲಿ

[ccc_my_favorite_select_button post_id="107130"]
ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಅಣ್ಣ ಬಂದಾ ಅಣ್ಣ ಬಂದಾ..: ಈ ಸರಿ ಟ್ರಂಪ್ ಹೇಳಿದ್ದೇನು ನೋಡಿ

ಇತ್ತೀಚೆಗೆ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಏನ್ ಏನೋ ಮಾತಾಡುತ್ತಿದ್ದು, ಪ್ರತಿ ಭಾಷಣ ಸುದ್ದಿಗೋಷ್ಠಿಗಳಲ್ಲಿ ಭಾರತದ ಹೆಸರು ತರುತ್ತಿದ್ದಾರೆ

[ccc_my_favorite_select_button post_id="107123"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಮೇ 17ರಿಂದ IPL ಮತ್ತೆ ಆರಂಭ.. ವೇಳಾಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಯನ್ನು ಮೇ 17ರಿಂದ ಮುಂದುವರಿಸಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೋಮವಾರ ನಿರ್ಧರಿಸಿದೆ.

[ccc_my_favorite_select_button post_id="106911"]
ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಕಳ್ಳತನ ಪ್ರಕರಣ: ಚಿಕ್ಕಬಳ್ಳಾಪುರ ಪೊಲೀಸರಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಕ್ತಿಯ ಬಂಧನ

ಅಂಗಡಿಯ ಶೆಟರ್‌ ಮುರಿದು ನಗದು ಕದ್ದು ಪರಾರಿಯಾಗಿದ್ದ ಆರೋಪದ ಅಡಿಯಲ್ಲಿ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ವ್ಯಕ್ತಿಯೋರ್ವನನ್ನು ಚಿಕ್ಕಬಳ್ಳಾಪುರ

[ccc_my_favorite_select_button post_id="107085"]
Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

Accident: ಕೂಲ್ ಡ್ರಿಂಕ್ ವ್ಯಾನ್ ಪಲ್ಟಿ..!| Video

ಚಾಲಕನ ನಿಯಂತ್ರಣ ತಪ್ಪಿದ ಕೂಲ್ ಡ್ರಿಂಕ್ ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿರುವ ಘಟನೆ (Accident) ಹೆದ್ದಾರಿಯಲ್ಲಿ ನಡೆದಿದೆ.

[ccc_my_favorite_select_button post_id="107015"]

ಆರೋಗ್ಯ

ಸಿನಿಮಾ

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್..!| Video

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ (Vishal) ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="106825"]
error: Content is protected !!