ನೇಕಾರರ ಬದುಕು ಸಂಕಷ್ಟದಲ್ಲಿದೆ,ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಬೇಕು: ಸಿದ್ದರಾಮಯ್ಯ

ಬೆಂಗಳೂರು: ನೇಕಾರರ ಬದುಕು ಸಂಕಷ್ಟದಲ್ಲಿದೆ. ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರದ ಪ್ಯಾಕೇಜ್ ಇನ್ನೂ ಬಿಡುಗಡೆಯಾಗಿಲ್ಲ. ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ‌.

ಲಾಕ್ ಡೌನ್ ಪರಿಹಾರ ವಿಳಂಭವೆಂದು ಸರ್ಕಾರ ವಿರುದ್ದ ಹರಿಹಾಯ್ದಿರುವ ಅವರು,ಸರ್ಕಾರದ ಅಂಕಿ-ಅಂಶಗಳ ಪ್ರಕಾರ ಸುಮಾರು 2 ಲಕ್ಷ  ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳಿವೆ. ವಾಸ್ತವದಲ್ಲಿ ಸುಮಾರು 7-8 ಲಕ್ಷ ಕುಟುಂಬಗಳು ಈ ವೃತ್ತಿಯನ್ನು ಅವಲಂಬಿಸಿವೆ. ರಾಜ್ಯ ಸರ್ಕಾರ 20 ಎಚ್.ಪಿ ಗಿಂತ ಕಡಿಮೆ ವಿದ್ಯುತ್ ಬಳಸುವ ಮಗ್ಗಗಳನ್ನು ಮಾತ್ರ ಲೆಕ್ಕ ಹಾಕಿ ಕಡಿಮೆ ಸಂಖ್ಯೆಯನ್ನು ತೋರಿಸುತ್ತಿರುವುದು ಸರಿ ಅಲ್ಲ. ಕಳೆದ 7-8 ತಿಂಗಳುಗಳಿಂದ ತಯಾರಿಸಿದ ಸೀರೆ, ಬಟ್ಟೆ ಮತ್ತಿತರ ಉತ್ಪನ್ನಗಳು ಮಾರಾಟವಾಗದೆ ಉಳಿದಿವೆ. ಇದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬೆಳಗಾವಿ, ದೊಡ್ಡಬಳ್ಳಾಪುರ, ಧಾರವಾಡ ಮೊದಲಾದ ಜಿಲ್ಲೆಗಳ 6 ಜನ ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಅವರೇ ಹೊಣೆ. 

ಕಳೆದ ಐದಾರು ತಿಂಗಳುಗಳಿಂದ ನೇಕಾರರು ಸುಮಾರು ರೂ.1000 ಕೋಟಿ ಮೊತ್ತದ ಉತ್ಪನ್ನವನ್ನು ಸಿದ್ಧಪಡಿಸಿದ್ದಾರೆ. ಇದರಲ್ಲಿ ಕೈ ಮಗ್ಗದಲ್ಲಿ ಉತ್ಪಾದಿಸಿದ ಬಟ್ಟೆಗಳ ಮೌಲ್ಯ ಸುಮಾರು ರೂ.15 ಕೋಟಿಯಾದರೆ ಉಳಿದದ್ದು ವಿದ್ಯುತ್ ಮಗ್ಗಗಳಲ್ಲಿ ತಯಾರಿಸಿದ್ದು. ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರಿ ನೌಕರರು, ಆಶಾ ಕಾರ್ಯಕರ್ತೆಯರು ಮತ್ತು ಪಡಿತರ ವಿತರಣೆ ವ್ಯವಸ್ಥೆಗಳ ಮೂಲಕ ಬಟ್ಟೆಗಳನ್ನು ವಿತರಿಸಿ ನೇಕಾರರ ಸಮಸ್ಯೆಯನ್ನು ಬಗೆಹರಿಸಬಹುದು. ಈ ಇಚ್ಛಾಶಕ್ತಿ ಸರ್ಕಾರಕ್ಕೆ ಇದೆಯೇ? 

ಕೃಷಿ ಕ್ಷೇತ್ರದಲ್ಲಿ ಅನುಸರಿಸಲಾಗುತ್ತಿರುವ ಆವರ್ತ ನಿಧಿ ಪದ್ಧತಿಯನ್ನು ನೇಕಾರಿಕೆಗೂ ಅಳವಡಿಸಿದರೆ ಅವರ ಕಷ್ಟಕಾಲದಲ್ಲಿ ನೆರವಾಗುತ್ತದೆ. ಹಾಗಾಗಿ ಸರ್ಕಾರ ತಕ್ಷಣ ಆವರ್ತ ನಿಧಿಯನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸುತ್ತೇನೆ. ನೇಕಾರರ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿಗಳು  ಘೋಷಿಸಿದ್ದರು. ಆದರೆ ಆಗಸ್ಟ್-2019 ರಿಂದ ಮಾರ್ಚ್-2020 ರವರೆಗೆ 4,500 ಜನರ  ರೂ.18.05 ಕೋಟಿ  ಮತ್ತು ಏಪ್ರಿಲ್ 01 ರಿಂದ ಈವರೆಗೆ ಕೇವಲ 6,000 ಜನರ ರೂ.26 ಕೋಟಿಗಳನ್ನು ಮಾತ್ರ ಮನ್ನಾ ಮಾಡಲಾಗಿದೆ. ಉಳಿದ ಸಾಲ ಮನ್ನಾ ಯಾವಾಗ? ಎಂದು ಪ್ರಶ್ನಿಸಿದ್ದಾರೆ

ನೇಕಾರರ ಬಾಕಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಸಂಕಷ್ಟದಲ್ಲಿರುವ ನೇಕಾರರು ಸೇರಿದಂತೆ ಪ್ರತಿ ಕುಟುಂಬಕ್ಕೆ ಕನಿಷ್ಠ ರೂ.10,000 ತುರ್ತಾಗಿ ನೀಡಬೇಕು ಮತ್ತು ಕೊರೊನಾ ಬಿಕ್ಕಟ್ಟು ಬಗೆಹರಿಯುವವರೆಗೆ ಉಚಿತವಾಗಿ ಆಹಾರ ಧಾನ್ಯಗಳ ಕಿಟ್‍ಗಳನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ‌.

ರಾಜಕೀಯ

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಅಚ್ಚರಿಯ ಬೆಳವಣಿಗೆ: ನಾಳೆಯೇ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ..!

ಕೆಲವೇ‌ ನಿಮಿಷಗಳ ಹಿಂದಷ್ಟೇ ಮುಂದೂಡಲಾಗಿದ್ದ ಶೋಭಾಯಾತ್ರೆಯನ್ನು (Sobhayatre) ಅಚ್ಚರಿಯ ಬೆಳವಣಿಗೆಯಲ್ಲಿ ನಾಳೆಯೇ ನಡೆಸಲು ತೀರ್ಮಾನಿಸಲಾಗಿದೆ.

[ccc_my_favorite_select_button post_id="120543"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!