ಪ್ರತಿಮೆ ನಿರ್ಮಾಣದ ಮೂಲಕ ಬೆಂಗಳೂರು ನಿರ್ಮಾತೃ ಕೆಂಪೇಗೌಡರಿಗೆ ಸರ್ಕಾರದಿಂದ ಗೌರವ ಸಮರ್ಪಣೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ದೊಡ್ಡಬಳ್ಳಾಪುರ: ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡುವ ಮೂಲಕ ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರಿಗೆ ಸರ್ಕಾರ ಗೌರವ ಸಲ್ಲಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 23 ಎಕರೆ ಪ್ರದೇಶದಲ್ಲಿ ರೂ.78 ಕೋಟಿ ವೆಚ್ಚದ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ‌ ಪ್ರತಿಮೆ ನಿರ್ಮಾಣಕ್ಕೆ ಶಿಲಾನ್ಯಾಸ ಹಾಗೂ ಸೆಂಟ್ರಲ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸಿ ಮತ್ತು ಕೆಂಪೇಗೌಡರ ಕಂಚಿನ ಪ್ರತಿಮೆ ಮಾದರಿ ಅನಾವರಣಗೊಳಿಸಿ ಅವರು ಮಾತನಾಡಿದರು.

ಚತುರ ಆಡಳಿತಗಾರರಾಗಿದ್ದ ಕೆಂಪೇಗೌಡರಿಗೆ ಬೆಂಗಳೂರನ್ನು ಯೋಜನಾ ಬದ್ಧವಾಗಿ ನಿರ್ಮಿಸಿದ ಕೀರ್ತಿ ಸಲ್ಲುತ್ತದೆ. ಶಾಶ್ವತ ನದಿ ಮೂಲಗಳಿಲ್ಲದ ನಗರದಲ್ಲಿ ನೀರಿನ ಸೆಲೆ ಹೆಚ್ಚಿಸಲು ಹಲವು ಕೆರೆಗಳನ್ನು ನಿರ್ಮಿಸಿದ ಖ್ಯಾತಿಯೂ ಅವರಿಗಿದೆ. ಕೆಂಪೇಗೌಡರ ಕೊಡುಗೆ ಸ್ಮರಿಸುತ್ತಲೇ ಬೆಂಗಳೂರು ಮಹಾನಗರದಲ್ಲಿ ಮೂಲಸೌಕರ್ಯವನ್ನು ಬಲಪಡಿಸುವುದರೊಂದಿಗೆ ಆರೋಗ್ಯ, ಘನತ್ಯಾಜ್ಯ ವಿಲೇವಾರಿ, ಇನ್ನಿತರ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದರು. ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಶ್ರಮಿಸಿದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.

ಶ್ರೀ ಅದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ‌ ಮಹಾಸ್ವಾಮಿ, ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿ, ಶ್ರೀ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಶ್ರೀ ಗುರುಗುಂಡ ಬ್ರಹ್ಮೇಶ್ವರ ಮಠದ ಶ್ರೀ ನಂಜಾವದೂತ ಮಹಾಸ್ವಾಮಿ ಹಾಗೂ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಘನ ಉಪಸ್ಥಿತಿಯಲ್ಲಿ, ಉಪ ಮುಖ್ಯಮಂತ್ರಿ ಹಾಗೂ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ. ಸಿ.ಎನ್.ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿಗಳಾದ ಗೋವಿಂದ.ಎಂ.ಕಾರಜೋಳ, ಲಕ್ಷ್ಮಣ್ ಸಂಗಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್, ಸಚಿವರುಗಳಾದ ಕೆ.ಗೋಪಾಲಯ್ಯ, ಬಿ.ಎ ಬಸವರಾಜು(ಬೈರತಿ), ಕೆ.ಸಿ.ನಾರಾಯಣಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್, ಬಿಬಿಎಂಪಿ ಮಹಾಪೌರ ಎಂ.ಗೌತಮ್ ಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜಯಮ್ಮ, ಸಂಸದರುಗಳಾದ ಬಿ.ಎನ್.ಬಚ್ಚೇಗೌಡ, ಡಿ.ಕೆ.ಸುರೇಶ್, ತೇಜಸ್ವಿ ಸೂರ್ಯ, ಶಾಸಕರುಗಳಾದ  ಡಿ.ಕೆ.ಶಿವಕುಮಾರ್, ಎಲ್.ಎನ್.ನಿಸರ್ಗ ನಾರಾಯಣಸ್ವಾಮಿ, ಟಿ.ವೆಂಕಟರಮಣಯ್ಯ, ಶರತ್‌ ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರಾದ ಹೆಚ್.ಎಂ.ರೇವಣ್ಣ, ಎಸ್.ರವಿ, ಪುಟ್ಟಣ್ಣ, ಅ.ದೇವೇಗೌಡ, ಸಿನೆಮಾ ನಟರಾದ ಪುನೀತ್‌ ರಾಜ್‌ಕುಮಾರ್, ಜಗ್ಗೇಶ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ..ಎನ್.ರವೀಂದ್ರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ ಮತ್ತಿತ್ತರರು ಉಪಸ್ಥಿತರಿದ್ದರು.

ರಾಜಕೀಯ

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್ ಸಿಗ್ನಲ್

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್

ಅಮೆರಿಕದ ಬಾಸ್ಟನ್ ನಗರದಲ್ಲಿ ನಡೆಯುತ್ತಿರುವ 'ಬಯೋ-2025' ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)

[ccc_my_favorite_select_button post_id="109689"]
ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: “ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯಲು 14 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇತರ ತಾಲೂಕಿಗೆ ನೀಡಬೇಕು. ಇದಾದ ನಂತರ ನಾವು ಕೆರೆ ತುಂಬಿಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="109700"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]