ರಾಜ್ಯಗಳ ಸಂವಿಧಾನ ಬದ್ದ ಅಧಿಕಾರವನ್ನು ಕೇಂದ್ರ ಸರ್ಕಾರ ಕಸಿದುಕೊಳ್ಳುತ್ತಿದೆ

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಎಲ್ಲಾ ಶಾಸನಗಳನ್ನು ಸಹ ಸುಗ್ರೀವಾಜ್ಞೆ ಮೂಲಕ ತರಲು ಮುಂದಾಗಿದೆ. ಅಲ್ಲದೆ ರಾಜ್ಯಗಳಿಗೆ ಸಂವಿಧಾನ ಬದ್ದವಾಗಿ ಇರುವ ಅಧಿಕಾರವನ್ನು ಕಸಿದುಕೊಳ್ಳುವ ಕೆಲಸವನ್ನು ಮಾಡುತ್ತಿದೆ. ಭೂ ಸೂಧಾರಣ ಮಸೂದೆ ತಿದ್ದುಪಡಿ, ಎಪಿಎಂಸಿ ಕಾಯ್ದೆಯನ್ನು ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ಮೂಲಕ ಜಾರಿಗೊಳಿಸಲಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಮಂಜುನಾಥ ಎಂ.ಅದ್ದೆ  ದೂರಿದರು. 

ಜು.2 ರಂದು ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮ ಸಿದ್ದೆಗಳ ಅಂಗವಾಗಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಶಾಸನ ಸಭೆಯನ್ನೇ ಮೂಲೆಗುಂಪು ಮಾಡಲು ಹೊರಟಿದೆ. ಸಧನದಲ್ಲಿ ಚರ್ಚಿಸಿ ಜಾರಿಗೆ ತರಬೇಕಾದಂತಹ ಕಾಯ್ದೆಗಳನ್ನು ಸಹ  ಇಂದು ಸುಗ್ರೀವಾಜ್ಞೆಯ ಮೂಲಕ ಜಾರಿಮಾಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ ಎಂದರು.   

ಕೆಪಿಸಿಸಿ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಸೇರಿದಂತೆ ಎಲ್ಲಾ ಪಧಾದಿಕಾರಿಗಳು ಸಹ ಸಂವಿಧಾನ ಪೀಠಿಕೆಯನ್ನು ಓದಿದ ನಂತರ ಪದಗ್ರಹಣ ವಚನ ಸ್ವೀಕರಿಸಲಿದ್ದಾರೆ. ಇದಲ್ಲದೆ ಕಾರ್ಯಕರ್ತರು ಸಹ ಪದಗ್ರಹಣ ವಚನ ಸ್ವೀಕರಿಸಲಿದ್ದಾರೆ ಎಂದರು. 

ಡಿ.ಕೆ.ಶಿವಕುಮಾರ್ ಅವರು ಡೈನಮಿಕ್ ನಾಯಕ ಎಂದು ಹೆಸರಿಗಷ್ಟೇ ಕರೆಸಿಕೊಳ್ಳದೆ ತಮ್ಮ ಕೆಲಸದಲ್ಲೂ ಮಾಡಿ ತೋರಿಸುವಂತಹವರು. ಹೀಗಾಗಿಯೇ ಇಡೀ ದೇಶದಲ್ಲಿ ಇದೇ ಪ್ರಥಮ ಬಾರಿಗೆ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣವನ್ನು ಡಿಜಿಟಲ್ ತಂತ್ರಜ್ಞಾನ ಮೂಲಕ ಕಾರ್ಯಕರ್ತರು ಇರುವಲ್ಲಿಯೇ ಕುಳಿತು ವೀಕ್ಷಣೆ ಮಾಡುವ ಹಾಗೂ ಅಧ್ಯಕ್ಷರೊಂದಿಗೆ ನೇರವಾಗಿ ಮಾತನಾಡುವ ಸವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅಧಿಕಾರ ವಿಕೇಂದ್ರಿಕರಣ ಪರಿಕಲ್ಪನೆ ಮೂಲಕ ಪ್ರಜಾಪ್ರಭುತ್ವದಲ್ಲಿ ಅಧಿಕಾರ ಅಂತಿಮವಾಗಿ ಪ್ರತಿಯೊಬ್ಬರಿಗು ದೊರೆಯುವಂತೆ ಆಗಬೇಕಿದೆ. ಈ ಪರಿಕಲ್ಪನೆ ಆಧಾರದ ಮೇಲೆಯೇ ಎಲ್ಲರನ್ನು ಒಂದೆಡೆ ಸೇರಿಸಿ ಪದಗ್ರಹಣ ಸಮಾರಂಭ ನಡೆಸದೆ ರಾಜ್ಯದ 7,800 ಸ್ಥಳಗಳಲ್ಲಿ ನೇರಪ್ರಸಾರ ನಡೆಯಲಿದೆ. ಪದಗ್ರಹಣ ಸಮಾರಂಭದ ಪೂರ್ವ ಸಿದ್ದತೆಯ ಕೆಲಸಗಳು ಅಂತಿಮಗೊಂಡಿವೆ ಎಂದರು. 

ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಮಾತನಾಡಿ, ಜು.2 ರಂದು ನಡೆಯಲಿರುವ ಪದಗ್ರಹಣ ಸಮಾರಂಭವನ್ನು ತಾಲ್ಲೂಕಿನ 24 ಗ್ರಾಮ ಪಂಚಾಯಿತಿ ಕೇಂದ್ರಗಳು ಹಾಗೂ ನಗರಸಭೆ ವ್ಯಾಪ್ತಿಯ 6 ಸ್ಥಳಗಳಲ್ಲಿ ಎಲ್ಇಡಿ ಪರದೆಗಳ ಮೂಲಕ ನೇರ ಪ್ರಸಾರವಾಗಲಿದೆ. ಕೊರೊನಾ ವೈರಸ್ ಸೋಂಕು ರಹಡುವುದನ್ನು ತಪ್ಪಿಸುವ ಸಲುವಾಗಿ ಅಂತರ ಕಾಪಾಡುವುದು ಸೇರಿದಂತೆ ಕಾರ್ಯಕ್ರಮದಲ್ಲಿ ಅಗತ್ಯ ಇರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಗೋವಿಂದಪ್ಪ,ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್,ಕಾಂಗ್ರೆಸ್ ಗ್ರಾಮಾಂತರ ಬ್ಲಾಕ್ ಸಮಿತಿ ಅಧ್ಯಕ್ಷ ಎಂ.ಬೈರೇಗೌಡ, ಕಸಬಾ ಬ್ಲಾಕ್ ಅಧ್ಯಕ್ಷ ವೆಂಕಟೇಶ್,ನಗರ ಪ್ರಭಾರ ಅಧ್ಯಕ್ಷ ಅಂಜನಮೂರ್ತಿ,ಎಸ್ಸಿ ಘಟಕದ ಅಧ್ಯಕ್ಷ ಬಿ.ಮುನಿರಾಜು,ಎಸ್.ಟಿ ಘಟಕದ ಅಧ್ಯಕ್ಷ ಭೀಮಣ್ಣ ಇದ್ದರು.

ರಾಜಕೀಯ

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ಬೆಳಗಾವಿ: ಬಿಬಿಎಂಪಿ (BBMP) ತ್ಯಾಜವಿಲೇವಾರಿ ಘಟಕದಿಂದ ದೊಡ್ಡಬಳ್ಳಾಪುರ ತಾಲೂಕಿನ ಜನತೆ ನೆಮ್ಮದಿ ಕಳೆದುಕೊಂಡಿರುವ ಬೆನ್ನಲ್ಲೇ, ಗುಂಡ್ಲಹಳ್ಳಿ ಸಮೀಪ 134.10 ಎಕರೆ ಜಮೀನಿನಲ್ಲಿ ಮತ್ತೆ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ (Terraforma Waste Disposal Unit)

[ccc_my_favorite_select_button post_id="117199"]
23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ (H.K. Patil) ಹೇಳಿದರು.

[ccc_my_favorite_select_button post_id="117203"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

"ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="117115"]
ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿ 3 ಕಡೆ ಮಾಂಗಲ್ಯ ಸರ ಕಳವು

ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು

ಕೆಲ ದಿನಗಳಿಂದ ಸದ್ದಡಗಿದ್ದ ಸರ ಕಳ್ಳರ ಹಾವಳಿ ತಾಲೂಕಿನಲ್ಲಿನ ಮತ್ತೆ ಕೇಳಿ ಬಂದಿದ್ದು, 24 ಗಂಟೆ ಅವಧಿಯಲ್ಲಿ ದೊಡ್ಡಬಳ್ಳಾಪುರದ ಎರಡು ಕಡೆ ಮಾಂಗಲ್ಯ ಸರ (Mangalya chain) ಕಳ್ಳತನ (Theft) ನಡೆದಿರುವುದು ವರದಿಯಾಗಿದೆ.

[ccc_my_favorite_select_button post_id="117099"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ನಾಳೆ ‘ದಿ ಡೆವಿಲ್’ ಸಿನಿಮಾ ಬಿಡುಗಡೆ; ಅಭಿಮಾನಿಗಳಿಗೆ ದರ್ಶನ್ ಭಾವನಾತ್ಮಕ ಸಂದೇಶ

ನಾಳೆ ‘ದಿ ಡೆವಿಲ್’ ಸಿನಿಮಾ ಬಿಡುಗಡೆ; ಅಭಿಮಾನಿಗಳಿಗೆ ದರ್ಶನ್ ಭಾವನಾತ್ಮಕ ಸಂದೇಶ

ಅಭಿಮಾನಿಗಳ ದಾಸ, ಚಾಲೆಂಜಿಗ್ ಸ್ಟಾರ್ ದರ್ಶನ್ (Darshan) ಅಭಿನಯದ, ಪ್ರಕಾಶ್ ವೀರ್ ನಿರ್ದೇಶನದ ''ದಿ ಡೆವಿಲ್' (The Devil) ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ.

[ccc_my_favorite_select_button post_id="117206"]
error: Content is protected !!