ದೊಡ್ಡಬಳ್ಳಾಪುರದಲ್ಲಿ ಕರೊನಾ ವೈರಸ್‌ ಸೋಂಕು ತಡೆಗೆ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯ ಚೈತನ್ಯನಗರದಲ್ಲಿ ಇಬ್ಬರು ವ್ಯಕ್ತಿಗಳಿಗೆ ಕೋವಿಡ್‌-19 ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಟಿ.ವೆಂಕಟರಮಣಯ್ಯ ಪ್ರವಾಸಿ ಮಂದಿರಲ್ಲಿ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.

ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಮಾತನಾಡಿ, ಜೂ.29 ರಂದು ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ಸಂಘ ಸಂಸ್ಥೆ ಹಾಗೂ ವರ್ತಕರ ಸಭೆ ನಡೆಸಿ ಕರೊನಾ ವೈರಸ್‌ ಸೋಂಕು ಹರಡದಂತೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಅಭಿಪ್ರಾಯ ಪಡೆಯಲಾಗುವುದು. ಎಲ್ಲರ ಸಲಹೆಗಳಂತೆ ನಗರದಲ್ಲಿ ಸೋಂಕು ಹರಡದಂತೆ ಕೈಗೊಳ್ಳಬೆಕಿರುವ ಕಟ್ಟುನಿಟ್ಟಿನ ನಿಯಮಗಳ ಬಗ್ಗೆ ನಿರ್ಧರಿಸಲಾಗುವುದು.ಈಗಾಗಲೇ ನೆರೆಯ ತಾಲ್ಲೂಕುಗಳಾದ ನೆಲಮಂಗಲ, ದೇವನಹಳ್ಳಿ ಹಾಗೂ ವಿಜಯಪುರದಲ್ಲಿ ಸೋಂಕು ಹರಡುವುದನ್ನು ತಡೆಯಲು ಅಲ್ಲಿನ ವರ್ತಕರು, ಸಾರ್ವಜನಿಕರು ಅನುಸರಿಸುತ್ತಿರುವ ಕ್ರಮಗಳನ್ನು ಇಲ್ಲಿಯು ಜಾರಿಗೆ ತರುವ ಕುರಿತಂತೆ ಸಭೆಯಲ್ಲಿಯೇ ನಿರ್ಧರಿಸಲಾಗುವುದು ಎಂದರು.

ಕರೊನಾ ವೈರಸ್‌ ಸೋಂಕು ನಗರದ ಇತರೆ ಪ್ರದೇಶಗಳಿಗೂ ಹರಡದಂತೆ ಔಷಧಿ ಸಿಂಪರಣೆ, ಮಾಸ್ಕ್‌ ಧರಿಸದೇ ಇರುವವರಿಗೆ ದಂಡ ವಿಧಿಸುವುದು, ಹೋಟೆಲ್‌, ಮಾರುಕಟ್ಟೆ ಮತ್ತಿತರೆ ಕಡೆಗಳಲ್ಲಿ ಹೆಚ್ಚು ಜನಸಂದಣಿ ಸೇರಿದಂತೆ ನಗರಸಭೆ ವತಿಯಿಂದ ಹಾಗೂ ತಾಲ್ಲೂಕು ಆಡಳಿತದಿಂದ ಆಟೋದಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಿದರು.

ಸಭೆಯಲ್ಲಿ ಹಾಜರಿದ್ದ ಡಿವೈಎಸ್‌ಪಿ ಟಿ.ರಂಗಪ್ಪ ಮಾಹಿತಿ ನೀಡಿ, ವಿಜಯಪುರದಲ್ಲಿ ಐದು ಜನರಿಗೆ ಕೋವಿಡ್‌-19 ಸೋಂಕು ಧೃಡಪಟ್ಟಿದೆ. ಅಲ್ಲಿನ ಜನ ಹಾಗೂ ವ್ಯಾಪಾರಿಗಳೆ ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ತೆರೆಯುವ ಸಮಯವನ್ನು ನಿಗದಿಪಡಿಸಿಕೊಂಡಿದ್ದಾರೆ. ಇದರಿಂದ ಇಡೀ ದಿನ ಜನರು ನಗರ ಪ್ರದೇಶದಲ್ಲಿ ಅನಾವಶ್ಯಕವಾಗಿ ತಿರುಗಾಡುವುದು ತಪ್ಪಲಿದೆ. ಸಂತೆ, ಉತ್ಸವ ಸೇರಿದಂತೆ ಎಲ್ಲವನ್ನು ರದ್ದುಪಡಿಸಿದ್ದಾರೆ. ಇದೇ ಮಾದರಿಯನ್ನು ಇಲ್ಲಿಯು ಜನರೇ ನಿರ್ಧರಿಸಿಕೊಂಡರೆ ಸೋಂಕು ಹರಡುವುದನ್ನು ತಡೆಯುವುದು ಸುಲಭವಾಗಲಿದೆ ಎಂದು ಸಲಹೆ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್‌, ನಗರಸಭೆ ಪೌರಾಯುಕ್ತ ರಮೇಶ್‌ ಎಸ್‌.ಸುಣಗಾರ್‌, ನಗರಸಭೆ ಕಾರ್ಯನಿರ್ವಾಹಕ ಎಂಜಿನಿಯರ್‌ ಶೇಕ್‌ಫೀರೋಜ್‌, ಎಂಜಿನಿಯರ್‌ಗಳಾದ ರಾಮೇಗೌಡ, ಚಂದ್ರಶೇಖರ್‌, ಈರಣ್ಣ, ನಗರ ಪೊಲೀಸ್‌ ಠಾಣೆ ಸಬ್‌ಇನ್‌ಸ್ಪೆಕ್ಟರ್‌ ಸೋಮಶೇಖರ್‌ ಇದ್ದರು.     

ರಾಜಕೀಯ

ಸರ್ಕಾರಕ್ಕೆ ಸಾವಿರ ದಿನಗಳ ಹಿನ್ನೆಲೆಯಲ್ಲಿ ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ: ಡಿ.ಕೆ. ಶಿವಕುಮಾರ್

ಸರ್ಕಾರಕ್ಕೆ ಸಾವಿರ ದಿನಗಳ ಹಿನ್ನೆಲೆಯಲ್ಲಿ ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ: ಡಿ.ಕೆ. ಶಿವಕುಮಾರ್

“ನಾವು ರಾಜಕಾರಣದಲ್ಲಿದ್ದೇವೆ, ರಾಜಕಾರಣ ಮಾಡಲೇಬೇಕು. ನನಗೆ ಸದಾ ಯಶಸ್ಸು ಸಿಗುತ್ತದೆ. ಸ್ವಲ್ಪ ಶ್ರಮ ಬೇಕಾಗುತ್ತದೆ ಅಷ್ಟೇ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119357"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!