ದೊಡ್ಡಬಳ್ಳಾಪುರದಲ್ಲಿ ಕರೊನಾ ವೈರಸ್‌ ಸೋಂಕು ತಡೆಗೆ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯ ಚೈತನ್ಯನಗರದಲ್ಲಿ ಇಬ್ಬರು ವ್ಯಕ್ತಿಗಳಿಗೆ ಕೋವಿಡ್‌-19 ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಟಿ.ವೆಂಕಟರಮಣಯ್ಯ ಪ್ರವಾಸಿ ಮಂದಿರಲ್ಲಿ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.

ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಮಾತನಾಡಿ, ಜೂ.29 ರಂದು ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ಸಂಘ ಸಂಸ್ಥೆ ಹಾಗೂ ವರ್ತಕರ ಸಭೆ ನಡೆಸಿ ಕರೊನಾ ವೈರಸ್‌ ಸೋಂಕು ಹರಡದಂತೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಅಭಿಪ್ರಾಯ ಪಡೆಯಲಾಗುವುದು. ಎಲ್ಲರ ಸಲಹೆಗಳಂತೆ ನಗರದಲ್ಲಿ ಸೋಂಕು ಹರಡದಂತೆ ಕೈಗೊಳ್ಳಬೆಕಿರುವ ಕಟ್ಟುನಿಟ್ಟಿನ ನಿಯಮಗಳ ಬಗ್ಗೆ ನಿರ್ಧರಿಸಲಾಗುವುದು.ಈಗಾಗಲೇ ನೆರೆಯ ತಾಲ್ಲೂಕುಗಳಾದ ನೆಲಮಂಗಲ, ದೇವನಹಳ್ಳಿ ಹಾಗೂ ವಿಜಯಪುರದಲ್ಲಿ ಸೋಂಕು ಹರಡುವುದನ್ನು ತಡೆಯಲು ಅಲ್ಲಿನ ವರ್ತಕರು, ಸಾರ್ವಜನಿಕರು ಅನುಸರಿಸುತ್ತಿರುವ ಕ್ರಮಗಳನ್ನು ಇಲ್ಲಿಯು ಜಾರಿಗೆ ತರುವ ಕುರಿತಂತೆ ಸಭೆಯಲ್ಲಿಯೇ ನಿರ್ಧರಿಸಲಾಗುವುದು ಎಂದರು.

ಕರೊನಾ ವೈರಸ್‌ ಸೋಂಕು ನಗರದ ಇತರೆ ಪ್ರದೇಶಗಳಿಗೂ ಹರಡದಂತೆ ಔಷಧಿ ಸಿಂಪರಣೆ, ಮಾಸ್ಕ್‌ ಧರಿಸದೇ ಇರುವವರಿಗೆ ದಂಡ ವಿಧಿಸುವುದು, ಹೋಟೆಲ್‌, ಮಾರುಕಟ್ಟೆ ಮತ್ತಿತರೆ ಕಡೆಗಳಲ್ಲಿ ಹೆಚ್ಚು ಜನಸಂದಣಿ ಸೇರಿದಂತೆ ನಗರಸಭೆ ವತಿಯಿಂದ ಹಾಗೂ ತಾಲ್ಲೂಕು ಆಡಳಿತದಿಂದ ಆಟೋದಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಿದರು.

ಸಭೆಯಲ್ಲಿ ಹಾಜರಿದ್ದ ಡಿವೈಎಸ್‌ಪಿ ಟಿ.ರಂಗಪ್ಪ ಮಾಹಿತಿ ನೀಡಿ, ವಿಜಯಪುರದಲ್ಲಿ ಐದು ಜನರಿಗೆ ಕೋವಿಡ್‌-19 ಸೋಂಕು ಧೃಡಪಟ್ಟಿದೆ. ಅಲ್ಲಿನ ಜನ ಹಾಗೂ ವ್ಯಾಪಾರಿಗಳೆ ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ತೆರೆಯುವ ಸಮಯವನ್ನು ನಿಗದಿಪಡಿಸಿಕೊಂಡಿದ್ದಾರೆ. ಇದರಿಂದ ಇಡೀ ದಿನ ಜನರು ನಗರ ಪ್ರದೇಶದಲ್ಲಿ ಅನಾವಶ್ಯಕವಾಗಿ ತಿರುಗಾಡುವುದು ತಪ್ಪಲಿದೆ. ಸಂತೆ, ಉತ್ಸವ ಸೇರಿದಂತೆ ಎಲ್ಲವನ್ನು ರದ್ದುಪಡಿಸಿದ್ದಾರೆ. ಇದೇ ಮಾದರಿಯನ್ನು ಇಲ್ಲಿಯು ಜನರೇ ನಿರ್ಧರಿಸಿಕೊಂಡರೆ ಸೋಂಕು ಹರಡುವುದನ್ನು ತಡೆಯುವುದು ಸುಲಭವಾಗಲಿದೆ ಎಂದು ಸಲಹೆ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್‌, ನಗರಸಭೆ ಪೌರಾಯುಕ್ತ ರಮೇಶ್‌ ಎಸ್‌.ಸುಣಗಾರ್‌, ನಗರಸಭೆ ಕಾರ್ಯನಿರ್ವಾಹಕ ಎಂಜಿನಿಯರ್‌ ಶೇಕ್‌ಫೀರೋಜ್‌, ಎಂಜಿನಿಯರ್‌ಗಳಾದ ರಾಮೇಗೌಡ, ಚಂದ್ರಶೇಖರ್‌, ಈರಣ್ಣ, ನಗರ ಪೊಲೀಸ್‌ ಠಾಣೆ ಸಬ್‌ಇನ್‌ಸ್ಪೆಕ್ಟರ್‌ ಸೋಮಶೇಖರ್‌ ಇದ್ದರು.     

ರಾಜಕೀಯ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ಕ್ಷೇತ್ರ ಮರುವಿಂಗಡಣೆ ಸಾಮಾನ್ಯ ಪ್ರಕ್ರಿಯೆ: ಆರ್‌.ಅಶೋಕ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಟ್ಟು 129 ಸಂಸತ್‌ ಸ್ಥಾನಗಳಿದ್ದು, ಅದನ್ನು 195 ಕ್ಕೆ ಏರಿಸುವ ಅವಕಾಶವಿತ್ತು. ಕ್ಷೇತ್ರ ಮರುವಿಂಗಡಣೆ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಅದನ್ನು ಚರ್ಚೆ ಮಾಡಬಹುದಿತ್ತು. ಈ ಹಿಂದೆಯೂ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಆಗ

[ccc_my_favorite_select_button post_id="121098"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!