ದೊಡ್ಡಬಳ್ಳಾಪುರದಲ್ಲಿ ಕರೊನಾ ವೈರಸ್‌ ಸೋಂಕು ತಡೆಗೆ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯ ಚೈತನ್ಯನಗರದಲ್ಲಿ ಇಬ್ಬರು ವ್ಯಕ್ತಿಗಳಿಗೆ ಕೋವಿಡ್‌-19 ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಟಿ.ವೆಂಕಟರಮಣಯ್ಯ ಪ್ರವಾಸಿ ಮಂದಿರಲ್ಲಿ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.

ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಮಾತನಾಡಿ, ಜೂ.29 ರಂದು ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ಸಂಘ ಸಂಸ್ಥೆ ಹಾಗೂ ವರ್ತಕರ ಸಭೆ ನಡೆಸಿ ಕರೊನಾ ವೈರಸ್‌ ಸೋಂಕು ಹರಡದಂತೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಅಭಿಪ್ರಾಯ ಪಡೆಯಲಾಗುವುದು. ಎಲ್ಲರ ಸಲಹೆಗಳಂತೆ ನಗರದಲ್ಲಿ ಸೋಂಕು ಹರಡದಂತೆ ಕೈಗೊಳ್ಳಬೆಕಿರುವ ಕಟ್ಟುನಿಟ್ಟಿನ ನಿಯಮಗಳ ಬಗ್ಗೆ ನಿರ್ಧರಿಸಲಾಗುವುದು.ಈಗಾಗಲೇ ನೆರೆಯ ತಾಲ್ಲೂಕುಗಳಾದ ನೆಲಮಂಗಲ, ದೇವನಹಳ್ಳಿ ಹಾಗೂ ವಿಜಯಪುರದಲ್ಲಿ ಸೋಂಕು ಹರಡುವುದನ್ನು ತಡೆಯಲು ಅಲ್ಲಿನ ವರ್ತಕರು, ಸಾರ್ವಜನಿಕರು ಅನುಸರಿಸುತ್ತಿರುವ ಕ್ರಮಗಳನ್ನು ಇಲ್ಲಿಯು ಜಾರಿಗೆ ತರುವ ಕುರಿತಂತೆ ಸಭೆಯಲ್ಲಿಯೇ ನಿರ್ಧರಿಸಲಾಗುವುದು ಎಂದರು.

ಕರೊನಾ ವೈರಸ್‌ ಸೋಂಕು ನಗರದ ಇತರೆ ಪ್ರದೇಶಗಳಿಗೂ ಹರಡದಂತೆ ಔಷಧಿ ಸಿಂಪರಣೆ, ಮಾಸ್ಕ್‌ ಧರಿಸದೇ ಇರುವವರಿಗೆ ದಂಡ ವಿಧಿಸುವುದು, ಹೋಟೆಲ್‌, ಮಾರುಕಟ್ಟೆ ಮತ್ತಿತರೆ ಕಡೆಗಳಲ್ಲಿ ಹೆಚ್ಚು ಜನಸಂದಣಿ ಸೇರಿದಂತೆ ನಗರಸಭೆ ವತಿಯಿಂದ ಹಾಗೂ ತಾಲ್ಲೂಕು ಆಡಳಿತದಿಂದ ಆಟೋದಲ್ಲಿ ಜಾಗೃತಿ ಮೂಡಿಸುವಂತೆ ಸೂಚಿಸಿದರು.

ಸಭೆಯಲ್ಲಿ ಹಾಜರಿದ್ದ ಡಿವೈಎಸ್‌ಪಿ ಟಿ.ರಂಗಪ್ಪ ಮಾಹಿತಿ ನೀಡಿ, ವಿಜಯಪುರದಲ್ಲಿ ಐದು ಜನರಿಗೆ ಕೋವಿಡ್‌-19 ಸೋಂಕು ಧೃಡಪಟ್ಟಿದೆ. ಅಲ್ಲಿನ ಜನ ಹಾಗೂ ವ್ಯಾಪಾರಿಗಳೆ ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ತೆರೆಯುವ ಸಮಯವನ್ನು ನಿಗದಿಪಡಿಸಿಕೊಂಡಿದ್ದಾರೆ. ಇದರಿಂದ ಇಡೀ ದಿನ ಜನರು ನಗರ ಪ್ರದೇಶದಲ್ಲಿ ಅನಾವಶ್ಯಕವಾಗಿ ತಿರುಗಾಡುವುದು ತಪ್ಪಲಿದೆ. ಸಂತೆ, ಉತ್ಸವ ಸೇರಿದಂತೆ ಎಲ್ಲವನ್ನು ರದ್ದುಪಡಿಸಿದ್ದಾರೆ. ಇದೇ ಮಾದರಿಯನ್ನು ಇಲ್ಲಿಯು ಜನರೇ ನಿರ್ಧರಿಸಿಕೊಂಡರೆ ಸೋಂಕು ಹರಡುವುದನ್ನು ತಡೆಯುವುದು ಸುಲಭವಾಗಲಿದೆ ಎಂದು ಸಲಹೆ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಸಿ.ಶಶಿಧರ್‌, ನಗರಸಭೆ ಪೌರಾಯುಕ್ತ ರಮೇಶ್‌ ಎಸ್‌.ಸುಣಗಾರ್‌, ನಗರಸಭೆ ಕಾರ್ಯನಿರ್ವಾಹಕ ಎಂಜಿನಿಯರ್‌ ಶೇಕ್‌ಫೀರೋಜ್‌, ಎಂಜಿನಿಯರ್‌ಗಳಾದ ರಾಮೇಗೌಡ, ಚಂದ್ರಶೇಖರ್‌, ಈರಣ್ಣ, ನಗರ ಪೊಲೀಸ್‌ ಠಾಣೆ ಸಬ್‌ಇನ್‌ಸ್ಪೆಕ್ಟರ್‌ ಸೋಮಶೇಖರ್‌ ಇದ್ದರು.     

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!