ದೊಡ್ಡಬಳ್ಳಾಪುರದ ವ್ಯಕ್ತಿಯ ಅಂತ್ಯ ಸಂಸ್ಕಾರದ ನಂತರ ಕರೊನಾ ಪಾಸಿಟಿವ್,ಅಂತ್ಯ ಸಂಸ್ಕಾರಕ್ಕೆ ತೆರಳಿದವರಿಗೆ ಢವ ಢವ

ದೊಡ್ಡಬಳ್ಳಾಪುರ: ನಗರದಲ್ಲಿ ಕರೊನಾ ಸೋಂಕಿನ ಹರಡುವಿಕೆ ಮುಂದುವರೆದಿದ್ದು,ನಗರಸಭೆ ವ್ಯಾಪ್ತಿಯ ಚಿಕ್ಕಪೇಟೆ (ಶೆಟ್ಟರ ಬೀದಿ)ಯಲ್ಲಿ ನೇಕಾರಿಕೆ  ಉದ್ಯಮಿಯೊಬ್ಬರಿಗೆ ಭಾನುವಾರ ಕೋವಿಡ್-19 ದೃಢಪಟ್ಟಿದ್ದು ಇಡೀ ಪ್ರದೇಶವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ.ಹಾಗೆಯೇ ರಾಜೀವ್ ಧಿ ಬಡವಾಣೆಯಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು ಇವರಿಗು ಸಹ ಕೋವಿಡ್-19 ದೃಢಪಟ್ಟಿದೆ. ಹೀಗಾಗಿ ಈ ಪ್ರದೇಶವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ.

ಕೋವಿಡ್-19 ದೃಢಪಟ್ಟಿರುವ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರ ದ್ರವವನ್ನು ಪರೀಕ್ಷೆಗೆ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಪರಮೇಶ್ವರ ತಿಳಿಸಿದ್ದಾರೆ.

ಅಂತ್ಯ ಸಂಸ್ಕಾರಕ್ಕೆ ತೆರಳಿದವರಿಗೆ ಢವ ಢವ

ನಗರದ

ಹೊರವಲಯದ ರಾಜೀವ್ ಗಾಂಧಿ ಬಡಾವಣೆಯ ನಿವಾಸಿಯೊಬ್ಬರು ಹೃದಯದ ಸಮಸ್ಯೆ ನಿಮಿತ್ತ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ದಾಖಲಾಗಿದ್ದು,ಚಿಕಿತ್ಸೆ ನಂತರ ಮನೆಗೆ ಬಂದಿದ್ದಾರೆ,ಕೆಲ ದಿನಗಳಲ್ಲಿಯೇ ತೀವ್ರ ಅನಾರೋಗ್ಯಕ್ಕೀಡಾಗಿ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು,ಈ ವೇಳೆ ಈತನ ಗಂಟಲು ದ್ರವವನ್ನು ಕರೊನಾ ಪರೀಕ್ಷೆಗೆ ಕಳಿಸಲಾಗಿತ್ತು,ಚಿಕಿತ್ಸೆಗೆ ದಾಖಲಾಗಿದ್ದ ವ್ಯಕ್ತಿ  ಶನಿವಾರ ಮೃತಪಟ್ಟಿದ್ದರು.ಭಾನುವಾರ ಬೆಳಿಗ್ಗೆ ಮೃತ ವ್ಯಕ್ತಿಯ ಗಂಟಲ ದ್ರವದ ಪರೀಕ್ಷಾ ವರದಿ ಬಂದಿದ್ದು ಕೋವಿಡ್-19 ಇದ್ದದ್ದು ದೃಢಪಟ್ಟಿದೆ.ವಿಪರ್ಯಾಸವೆಂದರೆ ಶವವನ್ನು ಸಂಬಂಧಿಕರು ಸಂಸ್ಕಾರ ನಡೆಸಿದ್ದಾರೆ.ಆದರೆ ಶವಸಂಸ್ಕಾರದ ನಂತರ ಬಂದ ವರದಿಯಲ್ಲಿ ಆತನಿಗೆ ಕರೊನಾ ಇರುವುದು ದೃಢಪಟ್ಟಿರುವುದು,ಶವಸಂಸ್ಕಾರಕ್ಕೆ ತೆರಳಿದವರಿಗೆ ಆತಂಕ ಶುರುವಾಗಿದ್ದರೆ,ಶವ ಸಂಸ್ಕಾರಕ್ಕೆ ತೆರಳಿದವರನ್ನು ಹುಡುಕುವುದು ತಾಲೂಕು ಆಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.ಪ್ರಸ್ತುತ ಮೃತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪಕರ್ದಲ್ಲಿದ್ದ ಎಲ್ಲರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. 

ದೊಡ್ಡಬಳ್ಳಾಪುರದ ಚಿಕ್ಕಪೇಟೆ ಉದ್ಯಮಿಗೆ ಕರೊನಾ.

ಚಿಕ್ಕಪೇಟೆಯಲ್ಲಿ ಭಾನುವಾರ ಕೋವಿಡ್-19 ದೃಢಪಟ್ಟಿರುವ ವ್ಯಕ್ತಿ ರೇಷ್ಮೆ ಬಟ್ಟೆ ವ್ಯಾಪಾರಕ್ಕಾಗಿ ಪ್ರತಿ ನಿತ್ಯ ಬೆಂಗಳೂರಿಗೆ ಹೋಗಿ ಬರುತ್ತಿದ್ದರು. ಮೂರು ದಿನಗಳ ಹಿಂದೆಯಷ್ಟೆ ಜ್ವರ ಬಂದ ಹಿನ್ನೆಲೆಯಲ್ಲಿ ಯಲಹಂಕದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.ಅಲ್ಲಿ ಪರೀಕ್ಷೆ ನಡೆಸಿದಾಗ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದ್ದು ಅಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗಿದೆ.ವ್ಯಕ್ತಿಯೊಬ್ಬರು ಮೃತಪಟ್ಟ ಪ್ರದೇಶದಲ್ಲಿ ಕರೊನಾ ವೈರಸ್ ಸೋಂಕು ಹರಡದಂತೆ ಅಗತ್ಯ ಇರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಟೋದಲ್ಲಿ ಪ್ರಚಾರ ನಡೆಸುವ ಮೂಲಕವು ಜನರಿಗೆ ತಿಳುವಳಿಕೆ ನೀಡಲಾಗುತ್ತಿದೆ ಎಂದು ನಗರಸಭೆ ಪೌರಾಯುಕ್ತ ರಮೇಶ್ ಎಸ್. ಸುಣಗಾರ್ ತಿಳಿಸಿದ್ದಾರೆ.

ಮೂರು ಕಂಟೈನ್ಮೆಂಟ್ ಪ್ರದೇಶ: ಶುಕ್ರವಾರದಿಂದ ನಗರದಲ್ಲಿ ಮೂರು ಕೋವಿಡ್-19 ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ ಚೈತನ್ಯನಗರ, ಚಿಕ್ಕಪೇಟೆ, ರಾಜೀವ್ಗಾಂದಿ ಬಡಾವಣೆಯ ಪ್ರದೇಶಗಳನ್ನು ಕಂಟೈನ್ಮೆಂಟ್ ಪ್ರದೇಶಗಳನ್ನಾಗಿ ಮಾಡಲಾಗಿದೆ. ಈ ಪ್ರದೇಶ ಹೊರಗಿನವರ ಪ್ರವೇಶವನ್ನು ನಿಷೇಧಿಸಲಾಗಿದೆ. ಅಲ್ಲದೆ ಈ ಪ್ರದೇಶಗಳಿಂದಲು ಸಹ ಯಾರು ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಕಂಟೈನ್ಮೆಂಟ್ ಪ್ರದೇಶದಲ್ಲಿ ಇರುವ ಆರು ಜನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ.

ಪರೀಕ್ಷಾ ಕೇಂದ್ರ ಬದಲಾವಣೆ:ಚಿಕ್ಕಪೇಟೆಯಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್-19 ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜೂ.29 ರಂದು ನಗರದ ಎಂಎಬಿಎಲ್ ಪ್ರೌಢ ಶಾಲೆಯಲ್ಲಿ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು  ರೋಜಿಪುರದ ಕಾರ್ಮಲ್ ಜ್ಯೋತಿ ಪ್ರೌಢಶಾಲೆಗೆ ವರ್ಗಾಯಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೈಯ್ಯಪ್ಪರೆಡ್ಡಿ ತಿಳಿಸಿದ್ದಾರೆ.

ಆಟೋ ಪ್ರಚಾರ ಬಿರಿಸು:ಎರಡೇ ದಿನಗಳಲ್ಲಿ ಕೋವಿಡ್-19 ಮೂರು ಜನರಲ್ಲಿ ದೃಢಪಟ್ಟಿರುವುದರಿಂದ ನಗರಸಭೆ ವತಿಯಿಂದ ಸಾರ್ವಜನಿಕರಲ್ಲಿ ಕರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಅನುಸರಿಸಬೇಕಿರುವ ಮುಂಜಾಗೃತ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಆಟೋ ಪ್ರಚಾರವನ್ನು ಬಿರುಸುಗೊಳಿಸಲಾಗಿದೆ.

ಯಾವ ರಸ್ತೆ ಬಂದ್: ಚಿಕ್ಕಪೇಟೆ(ಶೆಟ್ಟರಬೀದಿ) ನಗರದ ಹೃದಯಭಾಗದಲ್ಲಿದೆ. ಹೀಗಾಗಿ ಈ ಪ್ರದೇಶದಲ್ಲಿನ ರಸ್ತೆಗಳಲ್ಲಿ ಬಸ್ ನಿಲ್ದಾಣ, ತಾಲ್ಲೂಕು ಕಚೇರಿ ಸೇರಿದಂತೆ ನಗರದಲ್ಲಿನ ವಾಣಿಜ್ಯ ಪ್ರದೇಶಗಳಿಗೆ ಹೋಗುವ ಜನರು ಹೆಚ್ಚಾಗಿ ಓಡಾಡುತ್ತಾರೆ. ಹೀಗಾಗಿ ಈ ಭಾಗದ ಚೌಕ ವೃತ್ತದಿಂದ ರುಮಾಲೆ ಛತ್ರದ ವೃತ್ತದ ಕಡೆಗೆ ಹೋಗುವ ರಸ್ತೆ, ಬೆಸ್ತರಪೇಟೆ ಕಡೆಯಿಂದ ರುಮಾಲೆ ಛತ್ರದ ಕಡೆಗೆ ಹೋಗುವ ರಸ್ತೆಗಳಿಗೆ ಬ್ಯಾರಿಕೇಡ್ ಹಾಗೂ ಮರದ ಕಡ್ಡಿಗಳನ್ನು ಕಟ್ಟುವ ಮೂಲಕ ಆಟೋ, ಬೈಕ್ ಸೇರಿದಂತೆ ಎಲ್ಲಾ ರೀತಿಯ ಸಂಚಾರವನ್ನು ಬಂದ್ ಮಾಡಲಾಗಿದೆ. ನಗರಸಭೆ ವತಿಯಿಂದ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ.

ಒಂದು ಸಾವು, 26 ಜನರಲ್ಲಿ ಕೋವಿಡ್-19 ಸೋಂಕು….

ರಾಜಕೀಯ

ಸರ್ ಯತ್ನಾಳ್ ಎಂದಿದಕ್ಕೆ ವಿಜಯೇಂದ್ರ ರಿಯಾಕ್ಷನ್ ಏನ್ ಗೊತ್ತಾ..?

ಸರ್ ಯತ್ನಾಳ್ ಎಂದಿದಕ್ಕೆ ವಿಜಯೇಂದ್ರ ರಿಯಾಕ್ಷನ್ ಏನ್ ಗೊತ್ತಾ..?

ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ನಿಮಿತ್ತ ದೇಶಾದ್ಯಂತ ಬಿಜೆಪಿ ವತಿಯಿಂದ ವಾಜಪೇಯಿ ಅವರ ಜೊತೆ ನಿಕಟ ಸಂಪರ್ಕವನ್ನು ಇಟ್ಟುಕೊಂಡು, ಅವರ ಜೊತೆ ಒಡನಾಟ, ನಮ್ಮ

[ccc_my_favorite_select_button post_id="102947"]
ರಾಷ್ಟ್ರ ಮಟ್ಟದ ಕ್ರಿಕೆಟ್ ತಂಡಕ್ಕೆ ದೊಡ್ಡಬಳ್ಳಾಪುರ ಅಬಕಾರಿ ಇನ್ಸ್ಪೆಕ್ಟರ್ ಬಿ.ವಿ.ರಾಘವೇಂದ್ರ

ರಾಷ್ಟ್ರ ಮಟ್ಟದ ಕ್ರಿಕೆಟ್ ತಂಡಕ್ಕೆ ದೊಡ್ಡಬಳ್ಳಾಪುರ ಅಬಕಾರಿ ಇನ್ಸ್ಪೆಕ್ಟರ್ ಬಿ.ವಿ.ರಾಘವೇಂದ್ರ

ದೊಡ್ಡಬಳ್ಳಾಪುರ (Doddaballapura): ಅಖಿಲ ಭಾರತ ನಾಗರಿಕ ಸೇವಾ ಕ್ರಿಕೆಟ್ ತಂಡಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ದೊಡ್ಡಬಳ್ಳಾಪುರದ ಅಬಕಾರಿ ಇನ್ಸ್ಪೆಕ್ಟರ್ ಬಿ.ವಿ.ರಾಘವೇಂದ್ರ ಆಯ್ಕೆಯಾಗಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ

[ccc_my_favorite_select_button post_id="102961"]
Delhi earthquake: ಬೆಳ್ಳಂಬೆಳಗ್ಗೆ ಸಂಭವಿಸಿದ ಭೂಕಂಪ.. ದೆಹಲಿ ಜನತೆ ಶಾಕ್.. video ನೋಡಿ

Delhi earthquake: ಬೆಳ್ಳಂಬೆಳಗ್ಗೆ ಸಂಭವಿಸಿದ ಭೂಕಂಪ.. ದೆಹಲಿ ಜನತೆ ಶಾಕ್.. video ನೋಡಿ

ನವದೆಹಲಿ: ಶನಿವಾರವಷ್ಟೇ ರೈಲ್ವೇ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬೆನ್ನಲ್ಲೇ ಇಂದು (ಸೋಮವಾರ) ಬೆಳ್ಳಂಬೆಳಗ್ಗೆ ಸಂಭವಿಸಿದ ಭೂಕಂಪ (delhi earthquake) ಜನರು ಆತಂಕಕ್ಕೀಡು ಮಾಡಿದೆ. ಸೋಮವಾರ ಬೆಳಗ್ಗೆ ದಿಲ್ಲಿ, ನೋಯ್ಯಾ ಗುರುಗ್ರಾಮದಲ್ಲಿ ಬೆಳಗ್ಗೆ 5:30ಕ್ಕೆ

[ccc_my_favorite_select_button post_id="102890"]

Aero India 2025: ಏರ್‌ಶೋಗೆ ಇಂದು ಚಾಲನೆ..

[ccc_my_favorite_select_button post_id="102489"]

ಹರ ಹರ ಮಹಾದೇವ!: ಕುಂಭಮೇಳದಲ್ಲಿ ಡಿಸಿಎಂ‌ ಡಿಕೆ

[ccc_my_favorite_select_button post_id="102476"]

ಗುಂಡಿನ ಚಕಮಕಿ: 31 ಮಂದಿ ನಕ್ಸಲರ ಹತ್ಯೆ..

[ccc_my_favorite_select_button post_id="102472"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Doddaballapura: ಬೆಡ್‌ಶೀಟ್‌ ಅಂಗಡಿಗಳಿಗೆ ಬೆಂಕಿ.. ಅಪಾರ ನಷ್ಟ| Video ನೋಡಿ

Doddaballapura: ಬೆಡ್‌ಶೀಟ್‌ ಅಂಗಡಿಗಳಿಗೆ ಬೆಂಕಿ.. ಅಪಾರ ನಷ್ಟ| Video ನೋಡಿ

ದೊಡ್ಡಬಳ್ಳಾಪುರ, (Doddaballapura): ನಗರದ ಹೊರವಲಯದ ದೇವನಹಳ್ಳಿ ರಸ್ತೆಯ ಹುತಾತ್ಮ ಪಿಎಸ್ಐ ಜಗದೀಶ್ ವೃತ್ತದ ಬಳಿ ಅಗ್ನಿ ಅವಘಡದಿಂದಾಗಿ ಹಾಸಿಗೆ, ಬೆಡ್‌ಶೀಟ್‌ಗಳನ್ನು ಮಾರುವ ಎರಡು ಅಂಗಡಿಗಳಲ್ಲಿದ್ದ ಹಾಸಿಗೆ ಬೆಡ್‌ಶೀಟ್ ಬಟ್ಟೆಗಳು ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ

[ccc_my_favorite_select_button post_id="102923"]
Doddaballapura ಭೀಕರ ಅಪಘಾತ News Update: ಜೊತೆಯಲ್ಲಿದ್ದವರು ಸೇಫ್

Doddaballapura ಭೀಕರ ಅಪಘಾತ News Update: ಜೊತೆಯಲ್ಲಿದ್ದವರು ಸೇಫ್

ದೊಡ್ಡಬಳ್ಳಾಪುರ, (Doddaballapura): ವಾಹನವೊಂದನ್ನು ಓವರ್ ಟೇಕ್ ಮಾಡಲು ಮುಂದಾದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ ಮಾಕಳಿ ದುರ್ಗ ಬಳಿ ಸೋಮವಾರ ಸಂಜೆ ಸಂಭವಿಸಿದೆ. ಮೃತ ದುರ್ದೈವಿಗಳನ್ನು ಬೆಂಗಳೂರಿನ‌

[ccc_my_favorite_select_button post_id="102935"]

ಆರೋಗ್ಯ

ಸಿನಿಮಾ

ಸೆಲೆಬ್ರಿಟಿಸ್‌ಗಳೇ ನಿಮ್ಮನ್ನು ಪಡೆದಿರುವ ನಾನೇ ಧನ್ಯ: ಫ್ಯಾನ್ಸ್‌ಗೆ ದರ್ಶನ್ ಬಹಿರಂಗ ಪತ್ರ

ಸೆಲೆಬ್ರಿಟಿಸ್‌ಗಳೇ ನಿಮ್ಮನ್ನು ಪಡೆದಿರುವ ನಾನೇ ಧನ್ಯ: ಫ್ಯಾನ್ಸ್‌ಗೆ ದರ್ಶನ್ ಬಹಿರಂಗ ಪತ್ರ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಇತ್ತೀಚೆಗಷ್ಟೇ ತಮ್ಮ ಜನ್ಮ ದಿನವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ. ಪ್ರತಿ ವರ್ಷ ಅಭಿಮಾನಿಗಳೊಂದಿಗೆ ಜನ್ಮದಿನದ ಸಂಭ್ರಮ ಆಚರಿಸುತ್ತಿದ್ದ ಅವರು, ಅನಾರೋಗ್ಯದ ಕಾರಣ ಈ ವರ್ಷ ಅಭಿಮಾನಿಗಳನ್ನು

[ccc_my_favorite_select_button post_id="102944"]
error: Content is protected !!