ಕರೊನಾ ನಿಯಂತ್ರಣಕ್ಕಾದ ಖರ್ಚೆಷ್ಟು..? ಶ್ವೇತಪತ್ರ ಹೊರಡಿಸುವಂತೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಕರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ರಾಜ್ಯ ಸರ್ಕಾರವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಪಾರದರ್ಶಕ ರೀತಿಯಲ್ಲಿ ಕ್ರಮಕೈಗೊಳ್ಳದೆ ಇರುವ ಕಾರಣಕ್ಕೆ ಜನರಲ್ಲಿ ಅನುಮಾನ, ಅಸುರಕ್ಷತೆ, ಅಭದ್ರತೆ ಹುಟ್ಟಿಕೊಂಡಿವೆ. ರಾಜ್ಯ ಸರ್ಕಾರ ತಕ್ಷಣ ತಾನು ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು-ವೆಚ್ಚಗಳ ಬಗ್ಗೆ ಶ್ವೇತಪತ್ರವನ್ನು ಹೊರಡಿಸಿ ಸಂಪೂರ್ಣ ವಿವರವನ್ನು ಜನತೆಯ ಮುಂದಿಟ್ಟು ಅವರಲ್ಲಿ ವಿಶ್ವಾಸವನ್ನು ತುಂಬುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಆಗ್ರಹಿಸುತ್ತಿದ್ದೇನೆ.

ಕರೊನಾ ನಿಯಂತ್ರಣಕ್ಕೆ ರಾಜ್ಯದ ಖಜಾನೆಯಿಂದ ಎಷ್ಟು ಖರ್ಚಾಗಿದೆ? ಅದು ಯಾವ ಉದ್ದೇಶಗಳಿಗೆ ಖರ್ಚಾಗಿದೆ? ಇದರಲ್ಲಿ ಕ್ವಾರಂಟೈನ್, ಚಿಕಿತ್ಸೆ, ಪಿಪಿಇ, ವೆಂಟಿಲೇಟರ್ ಆಮ್ಲಜನಕ ಸಿಲಿಂಡರ್, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಮತ್ತಿತರ ವೈದ್ಯಕೀಯ ಸಲಕರಣೆ ಮತ್ತು ಚಿಕಿತ್ಸೆಗೆ ಖರ್ಚಾದ ಹಣ ಎಷ್ಟು?  ಕೇಂದ್ರ ಸರ್ಕಾರದಿಂದ ಈ ವರೆಗೆ ಬಂದಿರುವ ದುಡ್ಡು ಮತ್ತು ವೈದ್ಯಕೀಯ ಸಲಕರಣೆಗಳೆಷ್ಟು? ಖಾಸಗಿ ಆಸ್ಪತ್ರೆಗಳಲ್ಲಿ ಕರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಹಾಸಿಗೆಗಳೆಷ್ಟು? ಯಾವ ಮಾನದಂಡದ ಆಧಾರದಲ್ಲಿ  ಖಾಸಗಿ ಆಸ್ಪತ್ರೆಗಳ ಶುಲ್ಕ ನಿಗದಿಪಡಿಸಿದೆ? – ಈ ಎಲ್ಲ ವಿವರಗಳನ್ನು ರಾಜ್ಯ ಸರ್ಕಾರ ಜನತೆಯ ಮುಂದಿಡಬೇಕಾಗಿದೆ.

ನಾನು ಹಲವಾರು ಪತ್ರಗಳನ್ನು ಬರೆದು ವಿವರವನ್ನು ಕೇಳಿದರೂ ಇಲಾಖೆಗಳು ಸರಿಯಾದ ಮಾಹಿತಿ ಕೊಡುತ್ತಿಲ್ಲ. ಈ ರೀತಿ ಮಾಹಿತಿಯನ್ನು ನಿರಾಕರಿಸುವುದು ನನ್ನ ಹಕ್ಕುಚ್ಯುತಿಯಾಗುತ್ತದೆ. ಇಷ್ಟು ಮಾತ್ರವಲ್ಲ ಸರ್ಕಾರದ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡಿಸುತ್ತದೆ. ಈ ಬಗ್ಗೆ ಸಂಪೂರ್ಣ ವಿವರವನ್ನು ಶ್ವೇತಪತ್ರದ ಮೂಲಕ ಜನರ ಮುಂದಿಡಬೇಕು .

ರಾಜ್ಯದ 9 ಜಿಲ್ಲೆಗಳಲ್ಲಿ ದೇಶಕ್ಕೆ ಒಂದು ದಿನ ಮೊದಲು ಮಾರ್ಚ್ 23ರಂದು ಲಾಕ್ ಡೌನ್ ಘೋಷಿಸಲಾಯಿತು. ಆಗ ರಾಜ್ಯದಲ್ಲಿ ಒಂದೇ ಒಂದು ಸಾವು ಸಂಭವಿಸಿರಲಿಲ್ಲ, 26 ಮಂದಿ ಸೋಂಕಿತರು ಮಾತ್ರ ಇದ್ದರು. ಇಂದಿನ ವರದಿಯ ಪ್ರಕಾರ ರಾಜ್ಯದ ಸೋಂಕಿತರ ಸಂಖ್ಯೆ 11,923, ಸಾವಿಗೀಡಾದವರ ಸಂಖ್ಯೆ 191 ದಾಟಿದೆ. ಆಗ ಬೆಂಗಳೂರು ಮತ್ತು  ಕೆಲವು ಜಿಲ್ಲಾ ಕೇಂದ್ರಗಳಿಗೆ ಸೀಮಿತವಾಗಿದ್ದ ಕರೊನಾ ಸೋಂಕು ಈಗ ಹಳ್ಳಿ-ಊರುಗಳೆನ್ನದೆ ವ್ಯಾಪಕವಾಗಿ ಹರಡಿದೆ.

ಕರೊನಾ ದಿಡೀರನೇ ಬಂದೆರಗಿಲ್ಲ, ಹಂತಹಂತವಾಗಿ ಕಾಣಿಸಿಕೊಂಡಿದೆ. ಕಳೆದ ಮೂರು ತಿಂಗಳ ಅವಧಿಯನ್ನು ಕೇವಲ ಲಾಕ್ ಡೌನ್ ಹೇರಿಕೆ ಮತ್ತು ಹಿಂತೆಗೆತದಲ್ಲಿ ವ್ಯರ್ಥವಾಗಿ ಕಳೆದ ರಾಜ್ಯ ಸರ್ಕಾರ ಅದನ್ನು ಎದುರಿಸಲು ಯಾವ ತಯಾರಿಯನ್ನೂ ನಡೆಸಿಲ್ಲ. ಮೂರು ತಿಂಗಳ ಅಮೂಲ್ಯ ಸಮಯವನ್ನು ರಾಜ್ಯ ಸರ್ಕಾರ ತನ್ನ ಬೇಜವಾಬ್ದಾರಿತನದಿಂದ ವ್ಯರ್ಥಮಾಡಿದೆ. ಈ ನಿಷ್ಕ್ರೀಯತೆಯ ಫಲವನ್ನು ರಾಜ್ಯದ ಜನತೆ ಅನುಭವಿಸಿದಂತಾಗಿದೆ.

ರಾಜ್ಯದಲ್ಲಿ ಕರೊನಾ ಸೋಂಕು ಯಾವ ನಿಯಂತ್ರಣವೂ ಇಲ್ಲದೆ ತೀವ್ರಗತಿಯಲ್ಲಿ ಹರಡುತ್ತಿದ್ದು, ಲಾಕ್ ಡೌನ್ ನಲ್ಲಿ ಸುರಕ್ಷಿತವಾಗಿದ್ದ ಹಳ್ಳಿಗಳಲ್ಲೂ ಈಗ ದಿನದಿಂದ ದಿನಕ್ಕೆ ಸೋಂಕು ವ್ಯಾಪಕವಾಗುತ್ತಿದೆ.

ರಾಜ್ಯ ಸರ್ಕಾರದ ಮೇಲಿನ ನಂಬಿಕೆ ಕಳೆದುಕೊಂಡಿರುವ ರಾಜ್ಯದ ಜನತೆ ಕರೊನಾ ಭೀತಿಯಿಂದ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ತಮ್ಮನ್ನು ಕರೊನಾ ಮಾರಿಯಿಂದ ರಕ್ಷಿಸಬಹುದೆಂಬ ವಿಶ್ವಾಸ ಅವರಿಗಿಲ್ಲದಂತಾಗಿದೆ. ಈಗಾಗಲೇ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ತುಂಬಿ ಹೋಗಿವೆ. ಖಾಸಗಿ ಆಸ್ಪತ್ರೆಗಳು ಸರ್ಕಾರ ಒಪ್ಪಿಕೊಂಡಿರುವ  ಚಿಕಿತ್ಸಾ ಶುಲ್ಕಕ್ಕೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿವೆ. ಸರ್ಕಾರ ಅವರನ್ನು ಒಪ್ಪಿಸಬೇಕು, ಇಲ್ಲವೇ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಎರಡನ್ನೂ ಮಾಡದೆ ಕೈಕಟ್ಟಿ ಕುಳಿತರೆ ಜನರೇನು ಮಾಡಬೇಕು? ಕಳೆದ 15 ದಿನಗಳಿಂದ ಪರೀಕ್ಷೆ  ಮಾಡುವ ಪ್ರಮಾಣ 16 ಸಾವಿರದಿಂದ ಸರಾಸರಿ 11000 ಗಳಿಗೆ ಇಳಿದಿದೆ. ಸೋಂಕು ಸಮುದಾಯಕ್ಕೆ ವ್ಯಾಪಿಸಿಕೊಂಡಿರುವ ಭೀತಿ ಇದೆ. 

ರಾಜ್ಯದಲ್ಲಿ  9200 ವೆಂಟಿಲೇಟರ್‍ ತುರ್ತಾಗಿ ಅಗತ್ಯವಿದ್ದರೆ ಈಗ ಲಭ್ಯಇರುವುದು ಕೇವಲ 1500 ಮಾತ್ರ. ಕೇಂದ್ರವನ್ನು 33000 ವೆಂಟಿಲೇಟರ್ ಕಳಿಸಿ ಎಂದು ಕೇಳಿಕೊಂಡರೆ ಅವರು ಇಲ್ಲಿಯ ವರೆಗೆ ಕಳಿಸಿರುವುದು ಕೇವಲ 90 ಮಾತ್ರ. ಆಕ್ಸಿಜನೇಟೆಡ್ ವೆಂಟಿಲೇಟರ್ ಕೇವಲ 7000 ಮಾತ್ರ ಇವೆ.  ಅಗತ್ಯ ಇರುವುದು 20000 ವೆಂಟಿಲೇಟರ್ ಎಂದು ಹೇಳಲಾಗಿದೆ. 

ಮೆಡಿಕಲ್ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ, ಮಾರುಕಟ್ಟೆ ದರಗಳಿಗಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ. ಇದಕ್ಕೆ ಸಮರ್ಥನೆಗಳಿಲ್ಲ ಎಂದು ಆರ್ಥಿಕ ಇಲಾಖೆ ಟಿಪ್ಪಣಿ ಇದೆ. ಈ ರೀತಿಯ ಹಣದ ಮೊತ್ತ ಸುಮಾರು 3300 ಕೋಟಿಗಳೆಂಬ ಆರೋಪ ಕೇಳಿಬರುತ್ತಿದೆ.

ರಾಜ್ಯ ಸರ್ಕಾರ ತಕ್ಷಣ ಕರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ವಿವರವಾದ ಶ್ವೇತಪತ್ರವನ್ನು ಹೊರಡಿಸಿ ನಿಜ ಪರಿಸ್ಥಿತಿಯನ್ನು ಜನರ ಮುಂದಿಟ್ಟು ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೋಂಕು ನಿಯಂತ್ರಣದಲ್ಲಿ ತೊಡಗಿಸಿಕೊಳ್ಳಬೇಕು. ಸರ್ಕಾರ ಇದೇ ರೀತಿಯ ಉದಾಸೀನ-ಉಡಾಫೆತನವನ್ನು ಮುಂದುವರಿಸಿದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಬಹುದು ಎಂದಿದ್ದಾರೆ.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!