ಕರೊನಾ ನಿಯಂತ್ರಣಕ್ಕಾದ ಖರ್ಚೆಷ್ಟು..? ಶ್ವೇತಪತ್ರ ಹೊರಡಿಸುವಂತೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಕರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ರಾಜ್ಯ ಸರ್ಕಾರವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಪಾರದರ್ಶಕ ರೀತಿಯಲ್ಲಿ ಕ್ರಮಕೈಗೊಳ್ಳದೆ ಇರುವ ಕಾರಣಕ್ಕೆ ಜನರಲ್ಲಿ ಅನುಮಾನ, ಅಸುರಕ್ಷತೆ, ಅಭದ್ರತೆ ಹುಟ್ಟಿಕೊಂಡಿವೆ. ರಾಜ್ಯ ಸರ್ಕಾರ ತಕ್ಷಣ ತಾನು ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು-ವೆಚ್ಚಗಳ ಬಗ್ಗೆ ಶ್ವೇತಪತ್ರವನ್ನು ಹೊರಡಿಸಿ ಸಂಪೂರ್ಣ ವಿವರವನ್ನು ಜನತೆಯ ಮುಂದಿಟ್ಟು ಅವರಲ್ಲಿ ವಿಶ್ವಾಸವನ್ನು ತುಂಬುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಆಗ್ರಹಿಸುತ್ತಿದ್ದೇನೆ.

ಕರೊನಾ ನಿಯಂತ್ರಣಕ್ಕೆ ರಾಜ್ಯದ ಖಜಾನೆಯಿಂದ ಎಷ್ಟು ಖರ್ಚಾಗಿದೆ? ಅದು ಯಾವ ಉದ್ದೇಶಗಳಿಗೆ ಖರ್ಚಾಗಿದೆ? ಇದರಲ್ಲಿ ಕ್ವಾರಂಟೈನ್, ಚಿಕಿತ್ಸೆ, ಪಿಪಿಇ, ವೆಂಟಿಲೇಟರ್ ಆಮ್ಲಜನಕ ಸಿಲಿಂಡರ್, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಮತ್ತಿತರ ವೈದ್ಯಕೀಯ ಸಲಕರಣೆ ಮತ್ತು ಚಿಕಿತ್ಸೆಗೆ ಖರ್ಚಾದ ಹಣ ಎಷ್ಟು?  ಕೇಂದ್ರ ಸರ್ಕಾರದಿಂದ ಈ ವರೆಗೆ ಬಂದಿರುವ ದುಡ್ಡು ಮತ್ತು ವೈದ್ಯಕೀಯ ಸಲಕರಣೆಗಳೆಷ್ಟು? ಖಾಸಗಿ ಆಸ್ಪತ್ರೆಗಳಲ್ಲಿ ಕರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಹಾಸಿಗೆಗಳೆಷ್ಟು? ಯಾವ ಮಾನದಂಡದ ಆಧಾರದಲ್ಲಿ  ಖಾಸಗಿ ಆಸ್ಪತ್ರೆಗಳ ಶುಲ್ಕ ನಿಗದಿಪಡಿಸಿದೆ? – ಈ ಎಲ್ಲ ವಿವರಗಳನ್ನು ರಾಜ್ಯ ಸರ್ಕಾರ ಜನತೆಯ ಮುಂದಿಡಬೇಕಾಗಿದೆ.

ನಾನು ಹಲವಾರು ಪತ್ರಗಳನ್ನು ಬರೆದು ವಿವರವನ್ನು ಕೇಳಿದರೂ ಇಲಾಖೆಗಳು ಸರಿಯಾದ ಮಾಹಿತಿ ಕೊಡುತ್ತಿಲ್ಲ. ಈ ರೀತಿ ಮಾಹಿತಿಯನ್ನು ನಿರಾಕರಿಸುವುದು ನನ್ನ ಹಕ್ಕುಚ್ಯುತಿಯಾಗುತ್ತದೆ. ಇಷ್ಟು ಮಾತ್ರವಲ್ಲ ಸರ್ಕಾರದ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡಿಸುತ್ತದೆ. ಈ ಬಗ್ಗೆ ಸಂಪೂರ್ಣ ವಿವರವನ್ನು ಶ್ವೇತಪತ್ರದ ಮೂಲಕ ಜನರ ಮುಂದಿಡಬೇಕು .

ರಾಜ್ಯದ 9 ಜಿಲ್ಲೆಗಳಲ್ಲಿ ದೇಶಕ್ಕೆ ಒಂದು ದಿನ ಮೊದಲು ಮಾರ್ಚ್ 23ರಂದು ಲಾಕ್ ಡೌನ್ ಘೋಷಿಸಲಾಯಿತು. ಆಗ ರಾಜ್ಯದಲ್ಲಿ ಒಂದೇ ಒಂದು ಸಾವು ಸಂಭವಿಸಿರಲಿಲ್ಲ, 26 ಮಂದಿ ಸೋಂಕಿತರು ಮಾತ್ರ ಇದ್ದರು. ಇಂದಿನ ವರದಿಯ ಪ್ರಕಾರ ರಾಜ್ಯದ ಸೋಂಕಿತರ ಸಂಖ್ಯೆ 11,923, ಸಾವಿಗೀಡಾದವರ ಸಂಖ್ಯೆ 191 ದಾಟಿದೆ. ಆಗ ಬೆಂಗಳೂರು ಮತ್ತು  ಕೆಲವು ಜಿಲ್ಲಾ ಕೇಂದ್ರಗಳಿಗೆ ಸೀಮಿತವಾಗಿದ್ದ ಕರೊನಾ ಸೋಂಕು ಈಗ ಹಳ್ಳಿ-ಊರುಗಳೆನ್ನದೆ ವ್ಯಾಪಕವಾಗಿ ಹರಡಿದೆ.

ಕರೊನಾ ದಿಡೀರನೇ ಬಂದೆರಗಿಲ್ಲ, ಹಂತಹಂತವಾಗಿ ಕಾಣಿಸಿಕೊಂಡಿದೆ. ಕಳೆದ ಮೂರು ತಿಂಗಳ ಅವಧಿಯನ್ನು ಕೇವಲ ಲಾಕ್ ಡೌನ್ ಹೇರಿಕೆ ಮತ್ತು ಹಿಂತೆಗೆತದಲ್ಲಿ ವ್ಯರ್ಥವಾಗಿ ಕಳೆದ ರಾಜ್ಯ ಸರ್ಕಾರ ಅದನ್ನು ಎದುರಿಸಲು ಯಾವ ತಯಾರಿಯನ್ನೂ ನಡೆಸಿಲ್ಲ. ಮೂರು ತಿಂಗಳ ಅಮೂಲ್ಯ ಸಮಯವನ್ನು ರಾಜ್ಯ ಸರ್ಕಾರ ತನ್ನ ಬೇಜವಾಬ್ದಾರಿತನದಿಂದ ವ್ಯರ್ಥಮಾಡಿದೆ. ಈ ನಿಷ್ಕ್ರೀಯತೆಯ ಫಲವನ್ನು ರಾಜ್ಯದ ಜನತೆ ಅನುಭವಿಸಿದಂತಾಗಿದೆ.

ರಾಜ್ಯದಲ್ಲಿ ಕರೊನಾ ಸೋಂಕು ಯಾವ ನಿಯಂತ್ರಣವೂ ಇಲ್ಲದೆ ತೀವ್ರಗತಿಯಲ್ಲಿ ಹರಡುತ್ತಿದ್ದು, ಲಾಕ್ ಡೌನ್ ನಲ್ಲಿ ಸುರಕ್ಷಿತವಾಗಿದ್ದ ಹಳ್ಳಿಗಳಲ್ಲೂ ಈಗ ದಿನದಿಂದ ದಿನಕ್ಕೆ ಸೋಂಕು ವ್ಯಾಪಕವಾಗುತ್ತಿದೆ.

ರಾಜ್ಯ ಸರ್ಕಾರದ ಮೇಲಿನ ನಂಬಿಕೆ ಕಳೆದುಕೊಂಡಿರುವ ರಾಜ್ಯದ ಜನತೆ ಕರೊನಾ ಭೀತಿಯಿಂದ ಕಂಗಾಲಾಗಿದ್ದಾರೆ. ರಾಜ್ಯ ಸರ್ಕಾರ ತಮ್ಮನ್ನು ಕರೊನಾ ಮಾರಿಯಿಂದ ರಕ್ಷಿಸಬಹುದೆಂಬ ವಿಶ್ವಾಸ ಅವರಿಗಿಲ್ಲದಂತಾಗಿದೆ. ಈಗಾಗಲೇ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳು ತುಂಬಿ ಹೋಗಿವೆ. ಖಾಸಗಿ ಆಸ್ಪತ್ರೆಗಳು ಸರ್ಕಾರ ಒಪ್ಪಿಕೊಂಡಿರುವ  ಚಿಕಿತ್ಸಾ ಶುಲ್ಕಕ್ಕೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿವೆ. ಸರ್ಕಾರ ಅವರನ್ನು ಒಪ್ಪಿಸಬೇಕು, ಇಲ್ಲವೇ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಎರಡನ್ನೂ ಮಾಡದೆ ಕೈಕಟ್ಟಿ ಕುಳಿತರೆ ಜನರೇನು ಮಾಡಬೇಕು? ಕಳೆದ 15 ದಿನಗಳಿಂದ ಪರೀಕ್ಷೆ  ಮಾಡುವ ಪ್ರಮಾಣ 16 ಸಾವಿರದಿಂದ ಸರಾಸರಿ 11000 ಗಳಿಗೆ ಇಳಿದಿದೆ. ಸೋಂಕು ಸಮುದಾಯಕ್ಕೆ ವ್ಯಾಪಿಸಿಕೊಂಡಿರುವ ಭೀತಿ ಇದೆ. 

ರಾಜ್ಯದಲ್ಲಿ  9200 ವೆಂಟಿಲೇಟರ್‍ ತುರ್ತಾಗಿ ಅಗತ್ಯವಿದ್ದರೆ ಈಗ ಲಭ್ಯಇರುವುದು ಕೇವಲ 1500 ಮಾತ್ರ. ಕೇಂದ್ರವನ್ನು 33000 ವೆಂಟಿಲೇಟರ್ ಕಳಿಸಿ ಎಂದು ಕೇಳಿಕೊಂಡರೆ ಅವರು ಇಲ್ಲಿಯ ವರೆಗೆ ಕಳಿಸಿರುವುದು ಕೇವಲ 90 ಮಾತ್ರ. ಆಕ್ಸಿಜನೇಟೆಡ್ ವೆಂಟಿಲೇಟರ್ ಕೇವಲ 7000 ಮಾತ್ರ ಇವೆ.  ಅಗತ್ಯ ಇರುವುದು 20000 ವೆಂಟಿಲೇಟರ್ ಎಂದು ಹೇಳಲಾಗಿದೆ. 

ಮೆಡಿಕಲ್ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ, ಮಾರುಕಟ್ಟೆ ದರಗಳಿಗಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ. ಇದಕ್ಕೆ ಸಮರ್ಥನೆಗಳಿಲ್ಲ ಎಂದು ಆರ್ಥಿಕ ಇಲಾಖೆ ಟಿಪ್ಪಣಿ ಇದೆ. ಈ ರೀತಿಯ ಹಣದ ಮೊತ್ತ ಸುಮಾರು 3300 ಕೋಟಿಗಳೆಂಬ ಆರೋಪ ಕೇಳಿಬರುತ್ತಿದೆ.

ರಾಜ್ಯ ಸರ್ಕಾರ ತಕ್ಷಣ ಕರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ವಿವರವಾದ ಶ್ವೇತಪತ್ರವನ್ನು ಹೊರಡಿಸಿ ನಿಜ ಪರಿಸ್ಥಿತಿಯನ್ನು ಜನರ ಮುಂದಿಟ್ಟು ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೋಂಕು ನಿಯಂತ್ರಣದಲ್ಲಿ ತೊಡಗಿಸಿಕೊಳ್ಳಬೇಕು. ಸರ್ಕಾರ ಇದೇ ರೀತಿಯ ಉದಾಸೀನ-ಉಡಾಫೆತನವನ್ನು ಮುಂದುವರಿಸಿದರೆ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಬಹುದು ಎಂದಿದ್ದಾರೆ.

ರಾಜಕೀಯ

ಹಾವು ಬಿಡ್ತೀನಿ ಅಂತೇಳಿ ಹಾವ್ರಾಣಿ ಬಿಟ್ಟ ರಾಜಣ್ಣ..!

ಹಾವು ಬಿಡ್ತೀನಿ ಅಂತೇಳಿ ಹಾವ್ರಾಣಿ ಬಿಟ್ಟ ರಾಜಣ್ಣ..!

ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ದಾಖಲೆಗಳಿಲ್ಲ. ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಸಿಸಿ ಕ್ಯಾಮರಾ ಇಲ್ಲ. Rajanna

[ccc_my_favorite_select_button post_id="104571"]
ಕರ್ನಾಟಕದ ರಫ್ತು: 100 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ಬಗ್ಗೆ ಚರ್ಚೆ; ಎಂಬಿ ಪಾಟೀಲ

ಕರ್ನಾಟಕದ ರಫ್ತು: 100 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ಬಗ್ಗೆ ಚರ್ಚೆ; ಎಂಬಿ

`ರಾಜ್ಯದ ಕೈಗಾರಿಕಾ ವಲಯವು ಸದ್ಯಕ್ಕೆ ವಾರ್ಷಿಕವಾಗಿ 27 ಬಿಲಿಯನ್ ಡಾಲರ್ ಮೌಲ್ಯದ ರಫ್ತು ವಹಿವಾಟನ್ನು ಮಾತ್ರ ನಡೆಸುತ್ತಿದೆ. ಇದನ್ನು 100 ಬಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯಬೇಕು ಎನ್ನುವುದು ನಮ್ಮ ಗುರಿಯಾಗಿದೆ. MB Patila

[ccc_my_favorite_select_button post_id="104564"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
ಮಾತೃ ನಿಂದನೆ ಮಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಹೇಳಿದ್ದು ಭಾರತ್ ಮಾತಾ ಕಿ ಜೈ..!| Video

ಮಾತೃ ನಿಂದನೆ ಮಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಹೇಳಿದ್ದು ಭಾರತ್ ಮಾತಾ ಕಿ ಜೈ..!|

ಹಾವೇರಿ: ದೇಶ, ಧರ್ಮ, ಗೋಮಾತೆ, ಮಾತೆಯರ ಕುರಿತು ಗೌರವಯುತ ಸಿದ್ದಾಂತ ಹೊಂದಿರುವ ಬಿಜೆಪಿ (BJP)ಯ ಜಿಲ್ಲಾ ಅಧ್ಯಕ್ಷನೋರ್ವ ಮಾತೃ ನಿಂದನೆ ಮಾಡಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುರಿತು ಪ್ರತಿಭಟನೆ ವೇಳೆ ಅಸಭ್ಯ ಪದ ಬಳಸಿದ್ದು ಸಾರ್ವಜನಿಕ ವಲಯದಲ್ಲಿ

[ccc_my_favorite_select_button post_id="104539"]
ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗೌರಿಬಿದನೂರು: ಶಾಲಾ ವಾಹನ ಮತ್ತು ದ್ವಿಚಕ್ರ, ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ (Accident) ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹಿಂದೂಪುರ ಬೈಪಾಸ್ ರಸ್ತೆಯ ನರಿಂಗ್ ಕಾಲೇಜು ಮುಂಭಾಗದಲ್ಲಿ

[ccc_my_favorite_select_button post_id="104484"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!