ದೊಡ್ಡಬಳ್ಳಾಪುರದಲ್ಲಿ ಸೋಂಕಿತನ ಸಂಖ್ಯೆ ಒಂದು / 6 ಕಡೆ ಸೀಲ್ಡೌನ್..!

ದೊಡ್ಡಬಳ್ಳಾಪುರ: ಕರೊನಾ ಸೋಂಕಿನ ಪ್ರಕರಣದ ಮುಂಜಾಗ್ರತಾ ಕ್ರಮವಾಗಿ ನಗರಸಭೆ ವ್ಯಾಪ್ತಿಯ ವಿನಾಯಕನಗರ,ಚಿಕ್ಕಪೇಟೆ,ಸ್ನೇಹಲೋಕ ಎಲೆಕ್ಟ್ರಾನಿಕ್ ಹಿಂಬಾಗದ ವಸತಿ ಪ್ರದೇಶ,ಕಲ್ಲುಪೇಟೆ,ದೇಶದ ಪೇಟೆ ರಾಜೀವ್ ಗಾಂಧಿ ಕಾಲೋನಿಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ಹರಿತಲೇಖನಿಗೆ ತಿಳಿಸಿದ್ದಾರೆ.

ನಗರದ ಹಲವೆಡೆ ಸೀಲ್ ಡೌನ್ ಹಾಗೂ ವೈದ್ಯಕೀಯ ಸಿಬ್ಬಂದಿಗಳ ಚಟುವಟಿಕೆ ಹಿನ್ನೆಲೆ, ಸಾಮಾಜಿಕ ಜಾಲತಾಣದಲ್ಲಿ ಕರೊನಾ ಕುರಿತು ಅಂಕಿ ಸಂಖ್ಯೆಗಳ ಕಾರುಬಾರು ಜೋರಾಗಿದ್ದು,ಜಿಲ್ಲಾಧಿಕಾರಿ ಅಥವಾ ಜಿಲ್ಲಾ ಆರೋಗ್ಯಾಧಿಕಾರಿಗಳ ಅಧಿಕೃತ ಮಾಹಿತಿ ಇಲ್ಲದೆ ಸಾರ್ವಜನಿಕರನ್ನು ಆತಂಕಕ್ಕೆ ತಳ್ಳುತ್ತಿದ್ದಾರೆಂದು ತಾಲೂಕಿನ ಹಿರಿಯ ಆಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ಇಂದು 21 ಜನರಲ್ಲಿ ಕೋವಿಡ್-19 ಸೋಂಕು ದೃಡ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೊಸಕೋಟೆ ಪಟ್ಟಣದ ಕುಂಬರಪೇಟೆಯ 16  ಜನ ದೊಡ್ಡಬಳ್ಳಾಪುರದಲ್ಲಿ ಒಬ್ಬರು, ನೆಲಮಂಗಲದಲ್ಲಿ ಮೂವರು ಹಾಗೂ ಕೇರಳದಿಂದ ಬಂದಿದ್ದ ಒಬ್ಬರಿಗ ಸೇರಿದಂತೆ ಒಟ್ಟು ಇಪ್ಪತ್ತೊಂದು ಜನರಲ್ಲಿ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ-ಪಿ-14452 ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ಕೋವಿಡ್ ತಪಾಸಣೆ ವೇಳೆ ಸೊಂಕು ಕಂಡು ಬಂದಿದೆ.ಇನ್ನೂ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದ ಪಿ-14453 ತೀವ್ರ ಉಸಿರಾಟದ ತೊಂದರೆಯಿಂದ ನಿಗದಿತ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದಾಗ ಸೊಂಕು ದೃಡಪಟ್ಟಿದ್ದು ಪಿ-14454 ಹಾಗೂ ಪಿ-14455 ಐಎಲ್ಐ ಕೇಸ್ ಗಳಾಗಿದ್ದು ನೆಲಮಂಗಲ್ಲಿ ಒಟ್ಟು ಮೂವರಿಗೆ ಸೊಂಕು ತಗುಲಿದೆ.

ಹೊಸಕೋಟೆ ನಗರ ಕುಂಬರಪೇಟೆ ನಿವಾಸಿಗಳಾದ ಪಿ-14435, ಪಿ-14436, ಪಿ-14437, ಪಿ-14438, ಪಿ-14439, , ಪಿ-14441, ಪಿ-14442, ಪಿ-14443, ಪಿ-14444, ಪಿ-114445, ಪಿ-14446, ಪಿ-14447, ಪಿ-14448, ಪಿ-14449  ಸೇರಿದಂತೆ ಒಟ್ಟು 16 ಜನರು ಕೊರೋನಾ ವೈರಾಣು ದೃಡಪಟ್ಟಿದ್ದು ಸೋಂಕಿತ ವ್ಯಕ್ತಿಯ (ಪಿ-10399)  ದ್ವಿತೀಯ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ ಕೋವಿಡ್-19 ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ. ಆದ್ರೆ ಹೊಸಕೋಟೆಯ ಪಿ-14440 ಸೊಂಕೀತ ವ್ಯಕ್ತಿ (ಪಿ -8545) ದ್ವೀತಿಯ ಸಂಪರ್ಕ ಹಿನ್ನಲೆ ಕೋವಿಡ್-19 ಆರೋಗ್ಯ ತಪಾಸಣೆಗೆ ಒಳ ಪಡಿಸಿದಾಗ ಸೊಂಕು ದೃಡಪಟ್ಟಿದೆ.

ಅಲ್ಲದೆ ಪಿ-1445 ಕೇರಳದಿಂದ ಗಮಿಸಿದ ಹಿನ್ನಲೆ ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು ಈ ವೇಳೆ ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಸೊಂಕು ದೃಡಪಟ್ಟಿದೆ.

ಸೋಂಕಿತ ವ್ಯಕ್ತಿಗಳು ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ನಾಳೆಯಿಂದ ಜಂಟಿ ಅಧಿವೇಶನ; ನರೇಗಾ (MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ

ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು

[ccc_my_favorite_select_button post_id="118671"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸೀರೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ..!

ಸುಮಾರು 21 ವರ್ಷದ ಯುವಕನೋರ್ವ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ ನಗರದ ಕುಚ್ಚಪ್ಪನ ಪೇಟೆಯಲ್ಲಿ ನಡೆದಿದೆ.

[ccc_my_favorite_select_button post_id="118648"]
ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆ: ಕಾರು ಹರಿದು ನಿದ್ರೆಯಲ್ಲಿದ್ದ ಭಕ್ತ ಸಾವು

ಸುತ್ತೂರು ಜಾತ್ರೆಗೆ ಬಂದು ನಾಟಕ ವೀಕ್ಷಿಸಿ ಗದ್ದುಗೆ ಬಳಿ ಮಲಗಿದ್ದ ಭಕ್ತರ ಮೇಲೆ ಕಾರು ಹರಿದು ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯ ಗೊಂಡಿರುವ ಘಟನೆ (Accident) ಬಿಳಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="118669"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!