ದೊಡ್ಡಬಳ್ಳಾಪುರದ 13 ಜನರಲ್ಲಿ ಕರೊನಾ ಸೋಂಕು: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪು ತಾಲ್ಲೂಕಿನ 13 ಜನರಲ್ಲಿ, ಹೊಸಕೋಟೆ ತಾಲ್ಲೂಕಿನ 09 ಜನರಲ್ಲಿ ಹಾಗೂ ದೇವನಹಳ್ಳಿ ತಾಲ್ಲೂಕಿನ 07 ಜನರಲ್ಲಿ ಸೇರಿದಂತೆ ಒಟ್ಟು 29 ಜನರಲ್ಲಿ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಪಿ-15433, ಪಿ-15434, ಪಿ-15435, ಪಿ-15437, ಪಿ-15438, ಪಿ-15439, ಪಿ-15440, ಏಳು ವ್ಯಕ್ತಿಗಳು ಇನ್‌ಫ್ಲೂಯೆನ್ಜಾ ಲೈಕ್‌ ಇಲ್ನೆಸ್‌(ಐಎಲ್‌ಐ) ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ, ಪಿ-15436 ಓರ್ವ ವ್ಯಕ್ತಿಯು ತೀವ್ರ ಉಸಿರಾಟದ ತೊಂದರೆಯಿಂದ ‌ಬಳಲುತ್ತಿದ್ದ ಹಿನ್ನೆಲೆ, ಪಿ-15442, ಪಿ-15443, ಪಿ-15444, ಮೂರು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11165) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ ಹಾಗೂ ಪಿ-15452 ಓರ್ವ ವ್ಯಕ್ತಿಯು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11992) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ, ಕೋವಿಡ್-19 ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಪಿ-15441 ಓರ್ವ ವ್ಯಕ್ತಿಯ ಕರೊನಾ ಸೋಂಕಿನ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದಿದ್ದಾರೆ.

ಆರೋಗ್ಯ ಇಲಾಖೆ ಸೋಂಕಿನ ಕುರಿತಾದ ವರದಿ ಬರುವ ಮುನ್ನವೇ,ತೀವ್ರ ನಿಗಾವಹಿಸಲಾಗಿದ್ದ ಕರೊನಾ ಲಕ್ಷಣಗಳು ಕಂಡುಬಂದವರನ್ನು ಮಂಗಳವಾರವೇ ಚಿಕಿತ್ಸೆಗೆ ಕರೆದೊಯ್ದ ಕಾರಣ ನಗರದ ವಿನಾಯಕನಗರ,ಚಿಕ್ಕಪೇಟೆ,ಸ್ನೇಹಲೋಕ ಎಲೆಕ್ಟ್ರಾನಿಕ್ ಹಿಂಬಾಗದ ವಸತಿ ಪ್ರದೇಶ ರಸ್ತೆ,ಕಲ್ಲುಪೇಟೆ,ದೇಶದ ಪೇಟೆ ರಾಜೀವ್ ಗಾಂಧಿ ಕಾಲೋನಿಯನ್ನು ನಗರಸಭೆವತಿಯಿಂದ ಸೀಲ್ ಡೌನ್ ಮಾಡಲಾಗಿದೆ.

ದೊಡ್ಡಬಳ್ಳಾಪುರಕ್ಕೆ ಬಂತೆ ಬೆಂಗಳೂರಿನ ಕರೊನ..?

ಕರೊನಾ ವಾರಿಯರ್ಸ್ ನೀಡಿರುವ ಮಾಹಿತಿಗಳ ಪ್ರಕಾರ ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್-19 ದೃಢಪಟ್ಟಿರುವ ಎಲ್ಲರು ಸಹ ನೇಕಾರಿಕೆ ಉದ್ಯಮದ ವಿವಿಧ ರೀತಿಯ ಕೆಲಸಗಳಲ್ಲಿ ತೊಡಗಿರುವವರೇ ಹೆಚ್ಚಾಗಿ. ಸೀರೆ ಮಾರಾಟಕ್ಕೆ ರೇಷ್ಮೆ ನೂಲು ತರುವ ಸಲುವಾಗಿ ಬೆಂಗಳೂರು ಹೋಗಿ ಬಂದಿರುವವರೇ ಆಗಿರುವುದರಿಂದ ಬೆಂಗಳೂರಿನ ಕರೊನಾ ದೊಡ್ಡಬಳ್ಳಾಪುರಕ್ಕೆ ಒಕ್ಕರಿಸಿದೆ ಎಂದು ಅಂದಾಜಿಸಲಾಗಿದೆ.

ಕರೊನಾ ನಿಯಂತ್ರಣಕ್ಕೆ ಶಾಸಕ ಟಿ.ವೆಂಕಟರಮಣಯ್ಯ ‌ನೇತೃತ್ವದಲ್ಲಿ ಸಭೆ ಜುಲೈ 3ಕ್ಕೆ.

ನಗರ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲಿ ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತೆಯಾಗಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಲು ಜುಲೈ 3 ರಂದು ಬೆಳಿಗ್ಗೆ 10 ಗಂಟೆಗೆ ಶಾಸಕ ಟಿ.ವೆಂಕಟರಮಣಯ್ಯ ಅವರ ಅಧ್ಯಕ್ಷತೆಯಲ್ಲಿ ನಗರದ ಬಸವ ಭವನದಲ್ಲಿ ಸಭೆ ನಡೆಯಲಿದೆ.

ಉಳಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇತರ ತಾಲೂಕುಗಳಾದ ಹೊಸಕೋಟೆ ತಾಲ್ಲೂಕಿನ  ಪಿ-15424, ಪಿ-15425, ಇಬ್ಬರು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11973) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ, ಪಿ-15426, ಪಿ-15427, ಪಿ-15428, ಮೂರು ವ್ಯಕ್ತಿಗಳು ಇನ್‌ಫ್ಲೂಯೆನ್ಜಾ ಲೈಕ್‌ ಇಲ್ನೆಸ್‌(ಐಎಲ್‌ಐ) ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆ ಹಾಗೂ ಪಿ-15429, ಪಿ-15430, ಪಿ-15431, ಪಿ-15432, ನಾಲ್ಕು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-11167) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ, ಕೋವಿಡ್-19 ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

ದೇವನಹಳ್ಳಿ ತಾಲ್ಲೂಕಿನ ಪಿ-15445, ಪಿ-15446, ಪಿ-15447, ಪಿ-15448, ನಾಲ್ಕು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-9907) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ ಹಾಗೂ ವಿಜಯಪುರದ ಪಿ-15449, ಪಿ-15450, ಪಿ-15451, ಮೂರು ವ್ಯಕ್ತಿಗಳು ಕೊರೋನಾ ವೈರಾಣು ಸೋಂಕಿತ ವ್ಯಕ್ತಿಯ(ಪಿ-10824) ಪ್ರಾಥಮಿಕ‌ ಸಂಪರ್ಕ ಹೊಂದಿದವರಾಗಿದ್ದ ಹಿನ್ನೆಲೆ, ಕೋವಿಡ್-19 ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ.

ಸೋಂಕಿತ ವ್ಯಕ್ತಿಗಳು ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ

[ccc_my_favorite_select_button post_id="118326"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!