ದೊಡ್ಡಬಳ್ಳಾಪುರದಲ್ಲಿ ಕರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿಲ್ಲ: ಸಂಘಟನೆಗಳ ಮುಖಂಡರ ಆರೋಪ

ದೊಡ್ಡಬಳ್ಳಾಪುರ:
ನಗರಸಭೆ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ
ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ
ಹಿನ್ನಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಸಾರ್ವಜನಿಕ
ಹಾಗೂ ಸರ್ಕಾರಿ ಕಚೇರಿಗಳಲ್ಲಿ ಜನಸಂದಣಿಯನ್ನು
ತಡೆಗಟ್ಟುವ ನಿಟ್ಟಿನಲ್ಲಿ ಮುಂದೆ ಅನುಸರಿಸಬೇಕಾದ ಕ್ರಮಗಳು
ಕುರಿತು ನಗರದ ಬಸವ ಭವನದಲ್ಲಿ
ಶಾಸಕ ಟಿ.ವೆಂಕಟರಮಣಯ್ಯ ಅಧ್ಯಕ್ಷತೆಯಲ್ಲಿ
ವಿವಿಧ ಸಂಘ ಸಂಸ್ಥೆಗಳ ಹಾಗೂ
ರಾಜಕೀಯ ಮುಖಂಡರೊಡನೆ ಸಭೆ ನಡೆಯಿತು.

ಸಭೆಗೆ ಮಾಹಿತಿನೀಡಿದ ತಾಲೂಕು
ಆರೋಗ್ಯಾಧಿಕಾರಿ ಡಾ.ಪರಮೇಶ್ವರ ತಾಲೂಕಿನಲ್ಲಿ
ಈವರೆಗೆ 20 ಪ್ರಕರಣಗಳಾಗಿದ್ದು, ಇಬ್ಬರ ಸಾವಾಗಿವೆ. 18 ಮಂದಿ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ತಾಲೂಕು ಆಸ್ಪತ್ರೆಯಲ್ಲಿ 20 ಮಂದಿಗೆ
ಮಾತ್ರ ಅವಕಾಶವಿದೆ. ಕೊವಡ್-19 ಇನ್ನೂ ಸಮುದಾಯಕ್ಕೆ ಹರಡುವ
ಹಂತ ತಲುಪಿಲ್ಲ. ತಾಲೂಕಿನ ಜನಸಂಖ್ಯೆಗೆ ಪೂರಕವಾಗಿ
ವೈದ್ಯಕೀಯ ವ್ಯವಸ್ಥೆ ಹಾಗೂ ಸಿಬ್ಬಂದಿ ಕೊರತೆ
ಇದ್ದು, ಸ್ವಯಂ ಸೇವಕರ ಅವಶ್ಯಕತೆ
ಹಾಗೂ ಕೊವಿಡ್ ಬಗ್ಗೆ ಆತ್ಮ
ಸ್ಥೈರ್ಯ ತುಂಬುವವರ ಅವಶ್ಯಕತೆ ಇದೆ ಎಂದರು.

ಸಭೆಯಲ್ಲಿ
ಭಾಗವಹಿಸಿದ್ದ ವಿವಿಧ ಸಂಘಟನೆಗಳ ಮುಖಂಡರು
ಮಾತನಾಡಿ, ತಾಲೂಕಿನಲ್ಲಿ ಮುಂಚೆ ಪ್ರಕರಣಗಳು
ಇಲ್ಲದಿದ್ದ ಸಂದರ್ಭದಲ್ಲಿ ಮಾಸ್ಕ್ ಇಲ್ಲದವರಿಗೆ ದಂಡ,
ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಎಚ್ಚರ
ಮೊದಲಾಗಿ ಕೊವಿಡ್ ತಡೆಗೆ ಕಟ್ಟುನಿಟ್ಟಾಗಿ
ನಿಯಮಗಳನ್ನು ಪಾಲಿಸಲಾಗುತ್ತಿತ್ತು. ಆದರೆ ಈಗ ಪ್ರಕರಣಗಳು
ಹೆಚ್ಚಾಗುತ್ತಿರುವಾಗ ಸ್ಥಳೀಯ ಆಡಳಿತ ಹಾಗೂ
ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ
ಕ್ರಮ ಕೈಗೊಳ್ಳುತ್ತಿಲ್ಲ. ಲಾಖ್ಡೌನ್ ಜಾರಿ,
ರಸ್ತೆ ಬಂದ್ ಮಾಡುವುದು ಮೊದಲಾದ
ಕ್ರಮಗಳಿಂದ ಕೊರೊನಾ ಕಡಿಮೆಯಾಗುವುದಿಲ್ಲ. ಸ್ಥಳೀಯ
ಆಡಳಿತ ನಿಯಮ ಉಲ್ಲಂಘಿಸುವವರ ಮೇಲೆ
ಕ್ರಮ ಕೈಗೊಳ್ಳಬೇಕು. ಇನ್ನು ಹೆಚ್ಚಾಗುತ್ತಿರುವ ಪ್ರಕರಣಗಳಿಗೆ
ಪೂರಕವಾಗಿ, ಖಾಸಗಿ ಆಸ್ಪತ್ರೆಗಳನ್ನು ಬಳಸಿಕೊಳ್ಳುವುದು,
ಸರ್ಕಾರಿ ಆಸ್ಪತ್ರೆಯಿಂದ ಕೊವಿಡ್ ವಾರ್ಡ್ ಸ್ಥಳಾಂತರಿಸುವುದು,
ಎನ್ಸಿಸಿ, ಸ್ಕೌಟ್ಸ್ ಮೊದಲಾದ
ಸಂಘಟನೆಗಳನ್ನು ಸ್ವಯಂ ಸೇವಕರನ್ನಾಗಿ ಬಳಸಿಕೊಳ್ಳಬಹುದು.
ನಗರ ಹಾಗೂ ಗ್ರಾಮಾಂತರ ಪ್ರತ್ಯೇಕ
ಮಾಡಿ ಅನವಶ್ಯಕ ಓಡಾಟಗಳಿಗೆ ಕಡಿವಾಣ
ಹಾಕಬೇಕು ಎನ್ನುವ ಸಲಹೆಗಳನ್ನು ನೀಡಿದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ,
ಲಾಖ್ಡೌನ್ ಮಾಡುವ ಕುರಿತು
ಸರ್ಕಾರದಿಂದ ಇನ್ನೂ ಯಾವುದೇ ನಿರ್ಧಾರ
ಕೈಗೊಂಡಿಲ್ಲ. ಸ್ಥಳೀಯವಾಗಿ ಕೊವಿಡ್ ಸೋಂಕು ಹರಡದಂತೆ
ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸಜ್ಜಾಗಬೇಕಿದೆ.
ದಿಸೆಯಲ್ಲಿ ನಗರದ
ಹೊರವಲಯದ ಬೆಸೆಂಟ್ ಪಾರ್ಕ್ನಲ್ಲಿ
150 ಹಾಸಿಗೆಗಳ ವ್ಯವಸ್ಥೆಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಿಗೆ
ಚಿಕಿತ್ಸೆ ನೀಡಲು ಮನವಿ ಮಾಡಲಾಗುವುದು.
ಹಿಂದೆ ಗ್ರಾಮಾಂತರ
ಪ್ರದೇಶದಲ್ಲಿ ಕಾರ್ಯಪಡೆ ಸಮಿತಿಗಳನ್ನು ರಚಿಸಲಾಗಿ, ಆಶಾ ಕಾರ್ಯಕರ್ತೆಯರು,
ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ ನಿರ್ವಹಿಸುತ್ತಿದ್ದಾರೆ. ಅಂತೆಯೇ ನಗರದಲ್ಲಿ
2 ವಾರ್ಡ್ ಒಂದಕ್ಕೆ ಕಾರ್ಯಪಡೆ
ರಚಿಸಲಾಗುವುದು. ಸ್ವಯಂ ಸೇವಕರನ್ನು ಬಳಸಿಕೊಳ್ಳಲಾಗುವುದು.
ನಗರಸಭೆ ವ್ಯಾಪ್ತಿಯಲ್ಲಿ ಅಗ್ನಿ ಶಾಮಕ ದಳದ
ಸಹಕಾರದೊಂದಿಗೆ ರಾಸಾಯನಿಕ ಸಿಂಪಡಿಸುವುದು, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸದೇ ನಿಯಮ
ಉಲ್ಲಂಘಿಸಿದವರ ಮೇಲೆ ದಂಡ ವಿಸುವಂತೆ
ಸಂಬಂಧಪಟ್ಟವರು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹೋಟೆಲ್ಗಳಲ್ಲಿ ಸಾಮಾಜಿಕ ಅಂತರ
ಮರೆಯಾಗುತ್ತಿರುವ ದೂರುಗಳ ಹಿನ್ನಲೆಯಲ್ಲಿ ಹೋಟೆಲ್ಗಳ ಮಾಲೀಕರ ಸಭೆಯನ್ನು
ಕರೆದು ಸೂಚನೆ ನೀಡಲಾಗುವುದು ಎಂದರು.

ಸಭೆಯಲ್ಲಿ
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ತಾಲೂಕು ಪಂಚಾಯಿತಿ
ಅಧ್ಯಕ್ಷ ಡಿ.ಸಿ.ಶಶಿಧರ್,
ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ತಹಸೀಲ್ದಾರ್
ಟಿ.ಎಸ್.ಶಿವರಾಜ್, ನಗರಸಭೆ
ಪೌರಾಯುಕ್ತ ರಮೇಶ್ ಎಸ್.ಸುಣಗಾರ್,
ಡಿವೈಎಸ್ಪಿ ಟಿ.ರಂಗಪ್ಪ,
ಎಪಿಎಂಸಿ ಅಧ್ಯಕ್ಷ ವಿಶ್ವನಾಥ ರೆಡ್ಡಿ,
ತಾಲೂಕು ಪಂಚಾಯಿತಿ . ಮುರುಡಯ್ಯ,
ಸೇರಿದಂತೆ ವಿವಿಧ ಇಲಾಖೆಯ ಅಕಾರಿಗಳು,
ಸಂಘ ಸಂಸ್ಥೆಗಳ ಮುಖಂಡರು

ರಾಜಕೀಯ

ನೇಕಾರರ ಭವನ ಶಂಕುಸ್ಥಾಪನೆ.. ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಯ ಬಿಸಿ.. ಸಂಪೂರ್ಣ ವರದಿ ಇಲ್ಲಿದೆ.

ನೇಕಾರರ ಭವನ ಶಂಕುಸ್ಥಾಪನೆ.. ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆಯ ಬಿಸಿ.. ಸಂಪೂರ್ಣ ವರದಿ ಇಲ್ಲಿದೆ.

ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿಕೊಂಡು ದೊಡ್ಡಬಳ್ಳಾಪುರ (Doddaballapura) ನಗರದ ಪ್ರವಾಸಿ ಮಂದಿರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

[ccc_my_favorite_select_button post_id="118224"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಹತ್ಯೆ ಶಂಕೆ (Murder (Suspected) ವ್ಯಕ್ತವಾಗಿದೆ.

[ccc_my_favorite_select_button post_id="118057"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!