ದೊಡ್ಡಬಳ್ಳಾಪುರದಲ್ಲಿ ಕರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿಲ್ಲ: ಸಂಘಟನೆಗಳ ಮುಖಂಡರ ಆರೋಪ

ದೊಡ್ಡಬಳ್ಳಾಪುರ:
ನಗರಸಭೆ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ
ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ
ಹಿನ್ನಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಸಾರ್ವಜನಿಕ
ಹಾಗೂ ಸರ್ಕಾರಿ ಕಚೇರಿಗಳಲ್ಲಿ ಜನಸಂದಣಿಯನ್ನು
ತಡೆಗಟ್ಟುವ ನಿಟ್ಟಿನಲ್ಲಿ ಮುಂದೆ ಅನುಸರಿಸಬೇಕಾದ ಕ್ರಮಗಳು
ಕುರಿತು ನಗರದ ಬಸವ ಭವನದಲ್ಲಿ
ಶಾಸಕ ಟಿ.ವೆಂಕಟರಮಣಯ್ಯ ಅಧ್ಯಕ್ಷತೆಯಲ್ಲಿ
ವಿವಿಧ ಸಂಘ ಸಂಸ್ಥೆಗಳ ಹಾಗೂ
ರಾಜಕೀಯ ಮುಖಂಡರೊಡನೆ ಸಭೆ ನಡೆಯಿತು.

ಸಭೆಗೆ ಮಾಹಿತಿನೀಡಿದ ತಾಲೂಕು
ಆರೋಗ್ಯಾಧಿಕಾರಿ ಡಾ.ಪರಮೇಶ್ವರ ತಾಲೂಕಿನಲ್ಲಿ
ಈವರೆಗೆ 20 ಪ್ರಕರಣಗಳಾಗಿದ್ದು, ಇಬ್ಬರ ಸಾವಾಗಿವೆ. 18 ಮಂದಿ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ತಾಲೂಕು ಆಸ್ಪತ್ರೆಯಲ್ಲಿ 20 ಮಂದಿಗೆ
ಮಾತ್ರ ಅವಕಾಶವಿದೆ. ಕೊವಡ್-19 ಇನ್ನೂ ಸಮುದಾಯಕ್ಕೆ ಹರಡುವ
ಹಂತ ತಲುಪಿಲ್ಲ. ತಾಲೂಕಿನ ಜನಸಂಖ್ಯೆಗೆ ಪೂರಕವಾಗಿ
ವೈದ್ಯಕೀಯ ವ್ಯವಸ್ಥೆ ಹಾಗೂ ಸಿಬ್ಬಂದಿ ಕೊರತೆ
ಇದ್ದು, ಸ್ವಯಂ ಸೇವಕರ ಅವಶ್ಯಕತೆ
ಹಾಗೂ ಕೊವಿಡ್ ಬಗ್ಗೆ ಆತ್ಮ
ಸ್ಥೈರ್ಯ ತುಂಬುವವರ ಅವಶ್ಯಕತೆ ಇದೆ ಎಂದರು.

ಸಭೆಯಲ್ಲಿ
ಭಾಗವಹಿಸಿದ್ದ ವಿವಿಧ ಸಂಘಟನೆಗಳ ಮುಖಂಡರು
ಮಾತನಾಡಿ, ತಾಲೂಕಿನಲ್ಲಿ ಮುಂಚೆ ಪ್ರಕರಣಗಳು
ಇಲ್ಲದಿದ್ದ ಸಂದರ್ಭದಲ್ಲಿ ಮಾಸ್ಕ್ ಇಲ್ಲದವರಿಗೆ ದಂಡ,
ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಎಚ್ಚರ
ಮೊದಲಾಗಿ ಕೊವಿಡ್ ತಡೆಗೆ ಕಟ್ಟುನಿಟ್ಟಾಗಿ
ನಿಯಮಗಳನ್ನು ಪಾಲಿಸಲಾಗುತ್ತಿತ್ತು. ಆದರೆ ಈಗ ಪ್ರಕರಣಗಳು
ಹೆಚ್ಚಾಗುತ್ತಿರುವಾಗ ಸ್ಥಳೀಯ ಆಡಳಿತ ಹಾಗೂ
ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ
ಕ್ರಮ ಕೈಗೊಳ್ಳುತ್ತಿಲ್ಲ. ಲಾಖ್ಡೌನ್ ಜಾರಿ,
ರಸ್ತೆ ಬಂದ್ ಮಾಡುವುದು ಮೊದಲಾದ
ಕ್ರಮಗಳಿಂದ ಕೊರೊನಾ ಕಡಿಮೆಯಾಗುವುದಿಲ್ಲ. ಸ್ಥಳೀಯ
ಆಡಳಿತ ನಿಯಮ ಉಲ್ಲಂಘಿಸುವವರ ಮೇಲೆ
ಕ್ರಮ ಕೈಗೊಳ್ಳಬೇಕು. ಇನ್ನು ಹೆಚ್ಚಾಗುತ್ತಿರುವ ಪ್ರಕರಣಗಳಿಗೆ
ಪೂರಕವಾಗಿ, ಖಾಸಗಿ ಆಸ್ಪತ್ರೆಗಳನ್ನು ಬಳಸಿಕೊಳ್ಳುವುದು,
ಸರ್ಕಾರಿ ಆಸ್ಪತ್ರೆಯಿಂದ ಕೊವಿಡ್ ವಾರ್ಡ್ ಸ್ಥಳಾಂತರಿಸುವುದು,
ಎನ್ಸಿಸಿ, ಸ್ಕೌಟ್ಸ್ ಮೊದಲಾದ
ಸಂಘಟನೆಗಳನ್ನು ಸ್ವಯಂ ಸೇವಕರನ್ನಾಗಿ ಬಳಸಿಕೊಳ್ಳಬಹುದು.
ನಗರ ಹಾಗೂ ಗ್ರಾಮಾಂತರ ಪ್ರತ್ಯೇಕ
ಮಾಡಿ ಅನವಶ್ಯಕ ಓಡಾಟಗಳಿಗೆ ಕಡಿವಾಣ
ಹಾಕಬೇಕು ಎನ್ನುವ ಸಲಹೆಗಳನ್ನು ನೀಡಿದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ,
ಲಾಖ್ಡೌನ್ ಮಾಡುವ ಕುರಿತು
ಸರ್ಕಾರದಿಂದ ಇನ್ನೂ ಯಾವುದೇ ನಿರ್ಧಾರ
ಕೈಗೊಂಡಿಲ್ಲ. ಸ್ಥಳೀಯವಾಗಿ ಕೊವಿಡ್ ಸೋಂಕು ಹರಡದಂತೆ
ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸಜ್ಜಾಗಬೇಕಿದೆ.
ದಿಸೆಯಲ್ಲಿ ನಗರದ
ಹೊರವಲಯದ ಬೆಸೆಂಟ್ ಪಾರ್ಕ್ನಲ್ಲಿ
150 ಹಾಸಿಗೆಗಳ ವ್ಯವಸ್ಥೆಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಿಗೆ
ಚಿಕಿತ್ಸೆ ನೀಡಲು ಮನವಿ ಮಾಡಲಾಗುವುದು.
ಹಿಂದೆ ಗ್ರಾಮಾಂತರ
ಪ್ರದೇಶದಲ್ಲಿ ಕಾರ್ಯಪಡೆ ಸಮಿತಿಗಳನ್ನು ರಚಿಸಲಾಗಿ, ಆಶಾ ಕಾರ್ಯಕರ್ತೆಯರು,
ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ ನಿರ್ವಹಿಸುತ್ತಿದ್ದಾರೆ. ಅಂತೆಯೇ ನಗರದಲ್ಲಿ
2 ವಾರ್ಡ್ ಒಂದಕ್ಕೆ ಕಾರ್ಯಪಡೆ
ರಚಿಸಲಾಗುವುದು. ಸ್ವಯಂ ಸೇವಕರನ್ನು ಬಳಸಿಕೊಳ್ಳಲಾಗುವುದು.
ನಗರಸಭೆ ವ್ಯಾಪ್ತಿಯಲ್ಲಿ ಅಗ್ನಿ ಶಾಮಕ ದಳದ
ಸಹಕಾರದೊಂದಿಗೆ ರಾಸಾಯನಿಕ ಸಿಂಪಡಿಸುವುದು, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸದೇ ನಿಯಮ
ಉಲ್ಲಂಘಿಸಿದವರ ಮೇಲೆ ದಂಡ ವಿಸುವಂತೆ
ಸಂಬಂಧಪಟ್ಟವರು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹೋಟೆಲ್ಗಳಲ್ಲಿ ಸಾಮಾಜಿಕ ಅಂತರ
ಮರೆಯಾಗುತ್ತಿರುವ ದೂರುಗಳ ಹಿನ್ನಲೆಯಲ್ಲಿ ಹೋಟೆಲ್ಗಳ ಮಾಲೀಕರ ಸಭೆಯನ್ನು
ಕರೆದು ಸೂಚನೆ ನೀಡಲಾಗುವುದು ಎಂದರು.

ಸಭೆಯಲ್ಲಿ
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ತಾಲೂಕು ಪಂಚಾಯಿತಿ
ಅಧ್ಯಕ್ಷ ಡಿ.ಸಿ.ಶಶಿಧರ್,
ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ತಹಸೀಲ್ದಾರ್
ಟಿ.ಎಸ್.ಶಿವರಾಜ್, ನಗರಸಭೆ
ಪೌರಾಯುಕ್ತ ರಮೇಶ್ ಎಸ್.ಸುಣಗಾರ್,
ಡಿವೈಎಸ್ಪಿ ಟಿ.ರಂಗಪ್ಪ,
ಎಪಿಎಂಸಿ ಅಧ್ಯಕ್ಷ ವಿಶ್ವನಾಥ ರೆಡ್ಡಿ,
ತಾಲೂಕು ಪಂಚಾಯಿತಿ . ಮುರುಡಯ್ಯ,
ಸೇರಿದಂತೆ ವಿವಿಧ ಇಲಾಖೆಯ ಅಕಾರಿಗಳು,
ಸಂಘ ಸಂಸ್ಥೆಗಳ ಮುಖಂಡರು

ರಾಜಕೀಯ

HDK ಕರೆಗೆ ತಿರುಗೇಟು; ವಿದ್ಯಾವಂತರು ‘ಎ ಖಾತಾ ಪರಿವರ್ತನೆ’ ಒಪ್ಪುತ್ತಿರುವುದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಧನ್ಯವಾದ| Video

HDK ಕರೆಗೆ ತಿರುಗೇಟು; ವಿದ್ಯಾವಂತರು ‘ಎ ಖಾತಾ ಪರಿವರ್ತನೆ’ ಒಪ್ಪುತ್ತಿರುವುದಕ್ಕೆ ಡಿಸಿಎಂ ಡಿ.ಕೆ.

"ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ (Kumaraswamy) ಖಾಲಿ ಟ್ರಂಕ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ವಾಗ್ದಾಳಿ ನಡೆಸಿದರು.

[ccc_my_favorite_select_button post_id="115343"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!