ದೊಡ್ಡಬಳ್ಳಾಪುರದಲ್ಲಿ ಕರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತಿಲ್ಲ: ಸಂಘಟನೆಗಳ ಮುಖಂಡರ ಆರೋಪ

ದೊಡ್ಡಬಳ್ಳಾಪುರ:
ನಗರಸಭೆ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ
ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ
ಹಿನ್ನಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಸಾರ್ವಜನಿಕ
ಹಾಗೂ ಸರ್ಕಾರಿ ಕಚೇರಿಗಳಲ್ಲಿ ಜನಸಂದಣಿಯನ್ನು
ತಡೆಗಟ್ಟುವ ನಿಟ್ಟಿನಲ್ಲಿ ಮುಂದೆ ಅನುಸರಿಸಬೇಕಾದ ಕ್ರಮಗಳು
ಕುರಿತು ನಗರದ ಬಸವ ಭವನದಲ್ಲಿ
ಶಾಸಕ ಟಿ.ವೆಂಕಟರಮಣಯ್ಯ ಅಧ್ಯಕ್ಷತೆಯಲ್ಲಿ
ವಿವಿಧ ಸಂಘ ಸಂಸ್ಥೆಗಳ ಹಾಗೂ
ರಾಜಕೀಯ ಮುಖಂಡರೊಡನೆ ಸಭೆ ನಡೆಯಿತು.

ಸಭೆಗೆ ಮಾಹಿತಿನೀಡಿದ ತಾಲೂಕು
ಆರೋಗ್ಯಾಧಿಕಾರಿ ಡಾ.ಪರಮೇಶ್ವರ ತಾಲೂಕಿನಲ್ಲಿ
ಈವರೆಗೆ 20 ಪ್ರಕರಣಗಳಾಗಿದ್ದು, ಇಬ್ಬರ ಸಾವಾಗಿವೆ. 18 ಮಂದಿ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ತಾಲೂಕು ಆಸ್ಪತ್ರೆಯಲ್ಲಿ 20 ಮಂದಿಗೆ
ಮಾತ್ರ ಅವಕಾಶವಿದೆ. ಕೊವಡ್-19 ಇನ್ನೂ ಸಮುದಾಯಕ್ಕೆ ಹರಡುವ
ಹಂತ ತಲುಪಿಲ್ಲ. ತಾಲೂಕಿನ ಜನಸಂಖ್ಯೆಗೆ ಪೂರಕವಾಗಿ
ವೈದ್ಯಕೀಯ ವ್ಯವಸ್ಥೆ ಹಾಗೂ ಸಿಬ್ಬಂದಿ ಕೊರತೆ
ಇದ್ದು, ಸ್ವಯಂ ಸೇವಕರ ಅವಶ್ಯಕತೆ
ಹಾಗೂ ಕೊವಿಡ್ ಬಗ್ಗೆ ಆತ್ಮ
ಸ್ಥೈರ್ಯ ತುಂಬುವವರ ಅವಶ್ಯಕತೆ ಇದೆ ಎಂದರು.

ಸಭೆಯಲ್ಲಿ
ಭಾಗವಹಿಸಿದ್ದ ವಿವಿಧ ಸಂಘಟನೆಗಳ ಮುಖಂಡರು
ಮಾತನಾಡಿ, ತಾಲೂಕಿನಲ್ಲಿ ಮುಂಚೆ ಪ್ರಕರಣಗಳು
ಇಲ್ಲದಿದ್ದ ಸಂದರ್ಭದಲ್ಲಿ ಮಾಸ್ಕ್ ಇಲ್ಲದವರಿಗೆ ದಂಡ,
ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಎಚ್ಚರ
ಮೊದಲಾಗಿ ಕೊವಿಡ್ ತಡೆಗೆ ಕಟ್ಟುನಿಟ್ಟಾಗಿ
ನಿಯಮಗಳನ್ನು ಪಾಲಿಸಲಾಗುತ್ತಿತ್ತು. ಆದರೆ ಈಗ ಪ್ರಕರಣಗಳು
ಹೆಚ್ಚಾಗುತ್ತಿರುವಾಗ ಸ್ಥಳೀಯ ಆಡಳಿತ ಹಾಗೂ
ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ
ಕ್ರಮ ಕೈಗೊಳ್ಳುತ್ತಿಲ್ಲ. ಲಾಖ್ಡೌನ್ ಜಾರಿ,
ರಸ್ತೆ ಬಂದ್ ಮಾಡುವುದು ಮೊದಲಾದ
ಕ್ರಮಗಳಿಂದ ಕೊರೊನಾ ಕಡಿಮೆಯಾಗುವುದಿಲ್ಲ. ಸ್ಥಳೀಯ
ಆಡಳಿತ ನಿಯಮ ಉಲ್ಲಂಘಿಸುವವರ ಮೇಲೆ
ಕ್ರಮ ಕೈಗೊಳ್ಳಬೇಕು. ಇನ್ನು ಹೆಚ್ಚಾಗುತ್ತಿರುವ ಪ್ರಕರಣಗಳಿಗೆ
ಪೂರಕವಾಗಿ, ಖಾಸಗಿ ಆಸ್ಪತ್ರೆಗಳನ್ನು ಬಳಸಿಕೊಳ್ಳುವುದು,
ಸರ್ಕಾರಿ ಆಸ್ಪತ್ರೆಯಿಂದ ಕೊವಿಡ್ ವಾರ್ಡ್ ಸ್ಥಳಾಂತರಿಸುವುದು,
ಎನ್ಸಿಸಿ, ಸ್ಕೌಟ್ಸ್ ಮೊದಲಾದ
ಸಂಘಟನೆಗಳನ್ನು ಸ್ವಯಂ ಸೇವಕರನ್ನಾಗಿ ಬಳಸಿಕೊಳ್ಳಬಹುದು.
ನಗರ ಹಾಗೂ ಗ್ರಾಮಾಂತರ ಪ್ರತ್ಯೇಕ
ಮಾಡಿ ಅನವಶ್ಯಕ ಓಡಾಟಗಳಿಗೆ ಕಡಿವಾಣ
ಹಾಕಬೇಕು ಎನ್ನುವ ಸಲಹೆಗಳನ್ನು ನೀಡಿದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ,
ಲಾಖ್ಡೌನ್ ಮಾಡುವ ಕುರಿತು
ಸರ್ಕಾರದಿಂದ ಇನ್ನೂ ಯಾವುದೇ ನಿರ್ಧಾರ
ಕೈಗೊಂಡಿಲ್ಲ. ಸ್ಥಳೀಯವಾಗಿ ಕೊವಿಡ್ ಸೋಂಕು ಹರಡದಂತೆ
ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸಜ್ಜಾಗಬೇಕಿದೆ.
ದಿಸೆಯಲ್ಲಿ ನಗರದ
ಹೊರವಲಯದ ಬೆಸೆಂಟ್ ಪಾರ್ಕ್ನಲ್ಲಿ
150 ಹಾಸಿಗೆಗಳ ವ್ಯವಸ್ಥೆಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಿಗೆ
ಚಿಕಿತ್ಸೆ ನೀಡಲು ಮನವಿ ಮಾಡಲಾಗುವುದು.
ಹಿಂದೆ ಗ್ರಾಮಾಂತರ
ಪ್ರದೇಶದಲ್ಲಿ ಕಾರ್ಯಪಡೆ ಸಮಿತಿಗಳನ್ನು ರಚಿಸಲಾಗಿ, ಆಶಾ ಕಾರ್ಯಕರ್ತೆಯರು,
ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ ನಿರ್ವಹಿಸುತ್ತಿದ್ದಾರೆ. ಅಂತೆಯೇ ನಗರದಲ್ಲಿ
2 ವಾರ್ಡ್ ಒಂದಕ್ಕೆ ಕಾರ್ಯಪಡೆ
ರಚಿಸಲಾಗುವುದು. ಸ್ವಯಂ ಸೇವಕರನ್ನು ಬಳಸಿಕೊಳ್ಳಲಾಗುವುದು.
ನಗರಸಭೆ ವ್ಯಾಪ್ತಿಯಲ್ಲಿ ಅಗ್ನಿ ಶಾಮಕ ದಳದ
ಸಹಕಾರದೊಂದಿಗೆ ರಾಸಾಯನಿಕ ಸಿಂಪಡಿಸುವುದು, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸದೇ ನಿಯಮ
ಉಲ್ಲಂಘಿಸಿದವರ ಮೇಲೆ ದಂಡ ವಿಸುವಂತೆ
ಸಂಬಂಧಪಟ್ಟವರು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹೋಟೆಲ್ಗಳಲ್ಲಿ ಸಾಮಾಜಿಕ ಅಂತರ
ಮರೆಯಾಗುತ್ತಿರುವ ದೂರುಗಳ ಹಿನ್ನಲೆಯಲ್ಲಿ ಹೋಟೆಲ್ಗಳ ಮಾಲೀಕರ ಸಭೆಯನ್ನು
ಕರೆದು ಸೂಚನೆ ನೀಡಲಾಗುವುದು ಎಂದರು.

ಸಭೆಯಲ್ಲಿ
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ತಾಲೂಕು ಪಂಚಾಯಿತಿ
ಅಧ್ಯಕ್ಷ ಡಿ.ಸಿ.ಶಶಿಧರ್,
ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ತಹಸೀಲ್ದಾರ್
ಟಿ.ಎಸ್.ಶಿವರಾಜ್, ನಗರಸಭೆ
ಪೌರಾಯುಕ್ತ ರಮೇಶ್ ಎಸ್.ಸುಣಗಾರ್,
ಡಿವೈಎಸ್ಪಿ ಟಿ.ರಂಗಪ್ಪ,
ಎಪಿಎಂಸಿ ಅಧ್ಯಕ್ಷ ವಿಶ್ವನಾಥ ರೆಡ್ಡಿ,
ತಾಲೂಕು ಪಂಚಾಯಿತಿ . ಮುರುಡಯ್ಯ,
ಸೇರಿದಂತೆ ವಿವಿಧ ಇಲಾಖೆಯ ಅಕಾರಿಗಳು,
ಸಂಘ ಸಂಸ್ಥೆಗಳ ಮುಖಂಡರು

ರಾಜಕೀಯ

ಹರ್ದೀಪ್ ಪುರಿಯನ್ನು ತಕ್ಷಣವೇ ವಜಾಗೊಳಿಸಿ, ಕ್ರಿಮಿನಲ್ ಮೊಕದ್ದಮೆ ಹೂಡಿ; ಪ್ರಧಾನಿ ಮೋದಿಗೆ ಸುಬ್ರಮಣಿಯನ್ ಸ್ವಾಮಿ ಆಗ್ರಹ

ಹರ್ದೀಪ್ ಪುರಿಯನ್ನು ತಕ್ಷಣವೇ ವಜಾಗೊಳಿಸಿ, ಕ್ರಿಮಿನಲ್ ಮೊಕದ್ದಮೆ ಹೂಡಿ; ಪ್ರಧಾನಿ ಮೋದಿಗೆ ಸುಬ್ರಮಣಿಯನ್

ಪ್ರಧಾನಿ ನರೇಂದ್ರ ಮೋದಿ (Modi) ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಪುರಿ (Hardeep Puri) ಅವರನ್ನು ತಕ್ಷಣವೇ ವಜಾಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ಬಿಜೆಪಿಯ ಹಿರಿಯ

[ccc_my_favorite_select_button post_id="120230"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!