ದೊಡ್ಡಬಳ್ಳಾಪುರ: ಚಿಕಿತ್ಸೆಗೆ ದಾಖಲಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ,ಜಿಲ್ಲೆಯಲ್ಲಿ ನಡೆದ ಎಸ್ಎಸ್ಎಲ್ಸಿ ಯಶಸ್ವಿ ಪರೀಕ್ಷೆಗೆ ಆಸ್ಪತ್ರೆಯಿಂದಲೇ ಶುಭಾಶಯಕೋರುವ ಮೂಲಕ ಅನಾರೋಗ್ಯದ ನಡುವೆಯೂ ತಮ್ಮ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷಾ ಶುಕ್ರವಾರ ಅಂತ್ಯಗೊಂಡ ಹಿನ್ನೆಲೆ.ಈ ಕುರಿತು ಸಂದೇಶ ಕಳಿಸಿರುವ ಅವರು.ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗೆ, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ, ಅಪರ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ಡಿಡಿಪಿಐ, ತಹಶೀಲ್ದಾರ್ಗಳಿಗೆ, ಬಿಇಓಗಳಿಗೆ, ಶಿಕ್ಷಕ ವರ್ಗದವರಿಗೆ, ಸ್ವಯಂ ಸೇವಾ ಸಂಸ್ಥೆಗಳು,ವಿವಿಧ ಸಂಘಟನೆಗಳು, ಸ್ವಯಂ ಸೇವಕರಿಗೆ, ಪೋಷಕರಿಗೆ ಮತ್ತು ವಿದ್ಯಾರ್ಥಿಗಳೆಲ್ಲರಿಗೂ ಅಭಿನಂದನೆಗಳು ಹಾಗೂ ಧನ್ಯವಾದಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.