ದೊಡ್ಡಬಳ್ಳಾಪುರದ ಅರಣ್ಯಾಧಾರಿತ ಕೃಷಿ ಪದ್ದತಿ ಕುರಿತು ಮಾಹಿತಿ ಪಡೆದ ಪ್ರಸಿದ್ಧ ನಟ,ನಿರ್ದೇಶಕ ಶಿವಮಣಿ..!

ದೊಡ್ಡಬಳ್ಳಾಪುರ: ಕನ್ನಡ ಚಲನಚಿತ್ರರಂಗದ ಪ್ರಸಿದ್ಧ ನಟ,ನಿರ್ದೇಶಕ ಶಿವಮಣಿ ಬುಧವಾರ ಸಾವಯವ ಕೃಷಿ ತಜ್ಞ ಶಿವನಾಪುರ ರಮೇಶ್ ಅವರನ್ನು ಭೇಟಿ ಮಾಡಿ ಅರ ಅರಣ್ಯ ಆದಾರಿತ ಕೃಷಿ,ತೋಟಗಾರಿಕೆ ಕುರಿತು ಮಾಹಿತಿ ಪಡೆದರು. 

ಚಿತ್ರ ನಿರ್ದೇಶನದ ಬಿಡುವಿನ ವೇಳೆಯಲ್ಲಿ ಸುಸ್ಥಿರ ಕೃಷಿಯಲ್ಲಿ ತೊಡಗಿಸಿಕೊಂಡು ಪರಿಸರ, ಪ್ರಾಣಿ, ಪಕ್ಷಿಗಳೊಂದಿಗೆ ಬದುಕಬೇಕು ಎನ್ನುವ ಉದ್ದೇಶದೊಂದಿಗೆ ಮಾಗಡಿ ಸಮಿಪ ತೋಟ ಮಾಡಲು ಹೊರಟಿರುವುದಾಗಿ ತಿಳಿಸಿದ ಶಿವಮಣಿ ಅವರು, ನಮ್ಮ ತಂದೆ ಕೇರಳದಲ್ಲಿ ಗೋಡಂಬಿ ಕೃಷಿಕರಾಗಿದ್ದರು. ಆದರೆ ಬೆಂಗಳೂರಿಗೆ ಬಂದ ನಂತರ ಕೃಷಿಯಿಂದ ತುಂಬಾ ದೂರ ಬಂದಿದ್ದೆವು. ಈಗ ಮತ್ತೆ ಮಣ್ಣಿನೊಂದಿಗೆ ನಿಕಟ ಸಂಪರ್ಕದಲ್ಲಿ ಇರಬೇಕು ಎನ್ನುವ ಆಸೆ ಚಿಗುರಿದೆ. ಕರೊನಾ ಲಾಕ್ಡೌನ್ ನಂತರ ನಗರದಲ್ಲಿ ಬಹುತೇಕ ಜನ ಕೃಷಿಯತ್ತ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಆದರೆ ನಾನು ಒಂದು ವರ್ಷದಿಂದಲು ಕೃಷಿ ಕೆಲಸ ಆರಂಭಿಸಿ ತೆಂಗು, ಅಡಿಕೆ ಹಾಗೂ ಹೈನುಗಾರಿಕೆ ಆರಂಭಿಸುವ ಸಿದ್ದತೆಯಲ್ಲಿ ಇದ್ದೆ. ಶಿವನಾಪುರ ರಮೇಶ್ ಆವರ ಮಾರ್ಗದರ್ಶನದ ನಂತರ ಯಾವುದೇ ಗಿಡ ನೆಡುವುದು ಅಂದರೆ ಅದಕ್ಕೆ ಭೂಮಿಯ ಸಿದ್ದತೆ ಎಷ್ಟು ಮುಖ್ಯ ಎನ್ನುವುದು ಅರಿವಿಗೆ ಬಂದಿದೆ. ನಾವು  ಒಂದು ಸಿನಿಮಾ ಸಿದ್ದತೆಗೆ ವರ್ಷಗಟ್ಟಲೆ ಪೂರ್ವ ಸಿದ್ದತೆ ಮಾಡಿಕೊಳ್ಳುತ್ತೇವೆ. ಆದರೆ ಸಸಿ ನೆಡುವುದೆಂದರೆ ಒಂದೇ ದಿನದಲ್ಲಿ ಗುಂಡಿ ತೋಡಿ ಗೊಬ್ಬರ ಹಾಕಿ ನೀರು ಕೊಟ್ಟರೆ  ಸಸಿ ಬೆಳೆಯುತ್ತದೆ ಎನ್ನುವ ತಿಳುವಳಿಕೆಯೇ ತಪ್ಪು ಎನ್ನುವುದು ರಮೇಶ್ ಅವರ ನರ್ಸರಿಗೆ ಭೇಟಿ ನೀಡಿ ಮಾಹಿತಿ ಪಡೆದ ನಂತರ ಅರ್ಥವಾಗಿದೆ ಎಂದರು. 

ಕರೊನಾ ಕಾರಣದಿಂದಾಗಿ ಲಾಕ್‌ಡೌನ್‌ ಜಾರಿಗೆ ಬಂದ ಮೇಲೆ ನಾವು ಪ್ರಕೃತಿಯೊಂದಿಗೆ ಎಷ್ಟೊಂದು ಎಚ್ಚರದಿಂದ ಬದುಕಬೇಕು ಎನ್ನುವುದು ಸಾಮಾನ್ಯ ಜನರಿಗೂ ಅರ್ಥವಾಗಿದೆ. ಇದನ್ನು ಮರೆತರೆ ಮುಂದಿನ ದಿನಗಳಲ್ಲಿ ಕೊರೊನಾ ವೈರಸ್ಗಿಂತಲು ಭೀಕರವಾದ ವೈರಸ್ಗಳು ಹುಟ್ಟಿಕೊಂಡು ಮನುಕುಲವನ್ನೇ ನಾಶ ಮಾಡಲಿವೆ.ಲಾಕ್ಡೌನ್ ಕೃಷಿ ಹಾಗೂ ಕೃಷಿಕರಿಗೆ ಗೌರವ ತಂದುಕೊಟ್ಟಿದೆ ಎಂದು ಹೇಳಿದರು.

ಶಿವಮಣಿ ಅವರು ನಾಗಸಂದ್ರ ಗ್ರಾಮದ ಕೃಷಿಕ  ಮುದ್ದಪ್ಪ ಅವರ ತೋಟಕ್ಕೆ ಭೇಟಿ ನೀಡಿ ವಿವಿಧ ಸಸಿಗಳ ಬೆಳವಣಿಗೆ ಕುರಿತು ಮಾಹಿತಿ ಪಡೆದರು.

ರಾಜಕೀಯ

ದೊಡ್ಡಬಳ್ಳಾಪುರಕ್ಕೆ ಹೆಚ್ಚಾದ GBA ತ್ಯಾಜ್ಯದ ಆತಂಕ..!: ಕಸ ತಂದ ಲಾರಿಗಳ ಪರಿಶೀಲನೆ

ದೊಡ್ಡಬಳ್ಳಾಪುರಕ್ಕೆ ಹೆಚ್ಚಾದ GBA ತ್ಯಾಜ್ಯದ ಆತಂಕ..!: ಕಸ ತಂದ ಲಾರಿಗಳ ಪರಿಶೀಲನೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಗರೇನಹಳ್ಳಿಯಲ್ಲಿನ ಎಂ.ಎಸ್.ಜಿ.ಪಿ‌ (MSGP) ಕಸ ವಿಲೇವಾರಿ ಘಟಕಕ್ಕೆ ಬೃಹತ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಿಂದ ಕಸ ತುಂಬಿಕೊಂಡು‌ ಹೆಚ್ಚುವರಿ ಲಾರಿಗಳು ಬರುತ್ತವೆ ಎಂಬ ಆತಂಕದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ತಾಲೂಕಿನ ದೊಡ್ಡಮಂಕಲಾಳ

[ccc_my_favorite_select_button post_id="119498"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!