ದೊಡ್ಡಬಳ್ಳಾಪುರದ ಅರಣ್ಯಾಧಾರಿತ ಕೃಷಿ ಪದ್ದತಿ ಕುರಿತು ಮಾಹಿತಿ ಪಡೆದ ಪ್ರಸಿದ್ಧ ನಟ,ನಿರ್ದೇಶಕ ಶಿವಮಣಿ..!

ದೊಡ್ಡಬಳ್ಳಾಪುರ: ಕನ್ನಡ ಚಲನಚಿತ್ರರಂಗದ ಪ್ರಸಿದ್ಧ ನಟ,ನಿರ್ದೇಶಕ ಶಿವಮಣಿ ಬುಧವಾರ ಸಾವಯವ ಕೃಷಿ ತಜ್ಞ ಶಿವನಾಪುರ ರಮೇಶ್ ಅವರನ್ನು ಭೇಟಿ ಮಾಡಿ ಅರ ಅರಣ್ಯ ಆದಾರಿತ ಕೃಷಿ,ತೋಟಗಾರಿಕೆ ಕುರಿತು ಮಾಹಿತಿ ಪಡೆದರು. 

ಚಿತ್ರ ನಿರ್ದೇಶನದ ಬಿಡುವಿನ ವೇಳೆಯಲ್ಲಿ ಸುಸ್ಥಿರ ಕೃಷಿಯಲ್ಲಿ ತೊಡಗಿಸಿಕೊಂಡು ಪರಿಸರ, ಪ್ರಾಣಿ, ಪಕ್ಷಿಗಳೊಂದಿಗೆ ಬದುಕಬೇಕು ಎನ್ನುವ ಉದ್ದೇಶದೊಂದಿಗೆ ಮಾಗಡಿ ಸಮಿಪ ತೋಟ ಮಾಡಲು ಹೊರಟಿರುವುದಾಗಿ ತಿಳಿಸಿದ ಶಿವಮಣಿ ಅವರು, ನಮ್ಮ ತಂದೆ ಕೇರಳದಲ್ಲಿ ಗೋಡಂಬಿ ಕೃಷಿಕರಾಗಿದ್ದರು. ಆದರೆ ಬೆಂಗಳೂರಿಗೆ ಬಂದ ನಂತರ ಕೃಷಿಯಿಂದ ತುಂಬಾ ದೂರ ಬಂದಿದ್ದೆವು. ಈಗ ಮತ್ತೆ ಮಣ್ಣಿನೊಂದಿಗೆ ನಿಕಟ ಸಂಪರ್ಕದಲ್ಲಿ ಇರಬೇಕು ಎನ್ನುವ ಆಸೆ ಚಿಗುರಿದೆ. ಕರೊನಾ ಲಾಕ್ಡೌನ್ ನಂತರ ನಗರದಲ್ಲಿ ಬಹುತೇಕ ಜನ ಕೃಷಿಯತ್ತ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಆದರೆ ನಾನು ಒಂದು ವರ್ಷದಿಂದಲು ಕೃಷಿ ಕೆಲಸ ಆರಂಭಿಸಿ ತೆಂಗು, ಅಡಿಕೆ ಹಾಗೂ ಹೈನುಗಾರಿಕೆ ಆರಂಭಿಸುವ ಸಿದ್ದತೆಯಲ್ಲಿ ಇದ್ದೆ. ಶಿವನಾಪುರ ರಮೇಶ್ ಆವರ ಮಾರ್ಗದರ್ಶನದ ನಂತರ ಯಾವುದೇ ಗಿಡ ನೆಡುವುದು ಅಂದರೆ ಅದಕ್ಕೆ ಭೂಮಿಯ ಸಿದ್ದತೆ ಎಷ್ಟು ಮುಖ್ಯ ಎನ್ನುವುದು ಅರಿವಿಗೆ ಬಂದಿದೆ. ನಾವು  ಒಂದು ಸಿನಿಮಾ ಸಿದ್ದತೆಗೆ ವರ್ಷಗಟ್ಟಲೆ ಪೂರ್ವ ಸಿದ್ದತೆ ಮಾಡಿಕೊಳ್ಳುತ್ತೇವೆ. ಆದರೆ ಸಸಿ ನೆಡುವುದೆಂದರೆ ಒಂದೇ ದಿನದಲ್ಲಿ ಗುಂಡಿ ತೋಡಿ ಗೊಬ್ಬರ ಹಾಕಿ ನೀರು ಕೊಟ್ಟರೆ  ಸಸಿ ಬೆಳೆಯುತ್ತದೆ ಎನ್ನುವ ತಿಳುವಳಿಕೆಯೇ ತಪ್ಪು ಎನ್ನುವುದು ರಮೇಶ್ ಅವರ ನರ್ಸರಿಗೆ ಭೇಟಿ ನೀಡಿ ಮಾಹಿತಿ ಪಡೆದ ನಂತರ ಅರ್ಥವಾಗಿದೆ ಎಂದರು. 

ಕರೊನಾ ಕಾರಣದಿಂದಾಗಿ ಲಾಕ್‌ಡೌನ್‌ ಜಾರಿಗೆ ಬಂದ ಮೇಲೆ ನಾವು ಪ್ರಕೃತಿಯೊಂದಿಗೆ ಎಷ್ಟೊಂದು ಎಚ್ಚರದಿಂದ ಬದುಕಬೇಕು ಎನ್ನುವುದು ಸಾಮಾನ್ಯ ಜನರಿಗೂ ಅರ್ಥವಾಗಿದೆ. ಇದನ್ನು ಮರೆತರೆ ಮುಂದಿನ ದಿನಗಳಲ್ಲಿ ಕೊರೊನಾ ವೈರಸ್ಗಿಂತಲು ಭೀಕರವಾದ ವೈರಸ್ಗಳು ಹುಟ್ಟಿಕೊಂಡು ಮನುಕುಲವನ್ನೇ ನಾಶ ಮಾಡಲಿವೆ.ಲಾಕ್ಡೌನ್ ಕೃಷಿ ಹಾಗೂ ಕೃಷಿಕರಿಗೆ ಗೌರವ ತಂದುಕೊಟ್ಟಿದೆ ಎಂದು ಹೇಳಿದರು.

ಶಿವಮಣಿ ಅವರು ನಾಗಸಂದ್ರ ಗ್ರಾಮದ ಕೃಷಿಕ  ಮುದ್ದಪ್ಪ ಅವರ ತೋಟಕ್ಕೆ ಭೇಟಿ ನೀಡಿ ವಿವಿಧ ಸಸಿಗಳ ಬೆಳವಣಿಗೆ ಕುರಿತು ಮಾಹಿತಿ ಪಡೆದರು.

ರಾಜಕೀಯ

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಜೆಡಿಎಸ್ (JDS) ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ (ಜೂನ್‌ 16) ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ಆರಂಭ..

[ccc_my_favorite_select_button post_id="109279"]
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ ಪತ್ರ

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಆರ್ ಅಶೋಕ

IPL ಕಪ್ ಗೆದ್ದ RCB ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಅನಾಹುತ ತಡೆಯಬಹುದಾದ ದುರಂತವಾಗಿತ್ತು ತುರ್ತು ಮಧ್ಯಸ್ಥಿಕೆ

[ccc_my_favorite_select_button post_id="109057"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆಸ್ತಿಗಾಗಿ ಜೀವಂತ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಪುತ್ರನ ಬಂಧನ!

ಆಸ್ತಿಗಾಗಿ ಜೀವಂತ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಪುತ್ರನ ಬಂಧನ!

ಹೆತ್ತ ತಾಯಿ ಬದುಕಿರುವಾಗಲೇ ಸುಳ್ಳು ಅರ್ಜಿ ನೀಡಿ ಮರಣ ಪ್ರಮಾಣಪತ್ರ (Death certificate) ಪಡೆದು ಆಸ್ತಿ ಕಬಳಿಸಲು ಪ್ರಯತ್ನಿಸಿದ ಪುತ್ರನ ಪೊಲೀಸರು ಬಂಧಿಸಿರುವ ಘಟನೆ

[ccc_my_favorite_select_button post_id="109202"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ರಸ್ತೆ ಬದಿ ಸಾಗುತ್ತಿದ್ದವರಿಗೆ ಡಿಕ್ಕಿ ಹೊಡೆದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಟ್ರಂಚ್‌ಗೆ ಡಿಕ್ಕಿ ಹೊಡೆದ ಅಪಘಾತದಲ್ಲಿ (Accident)

[ccc_my_favorite_select_button post_id="109282"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]