ದೊಡ್ಡಬಳ್ಳಾಪುರದ ಅರಣ್ಯಾಧಾರಿತ ಕೃಷಿ ಪದ್ದತಿ ಕುರಿತು ಮಾಹಿತಿ ಪಡೆದ ಪ್ರಸಿದ್ಧ ನಟ,ನಿರ್ದೇಶಕ ಶಿವಮಣಿ..!

ದೊಡ್ಡಬಳ್ಳಾಪುರ: ಕನ್ನಡ ಚಲನಚಿತ್ರರಂಗದ ಪ್ರಸಿದ್ಧ ನಟ,ನಿರ್ದೇಶಕ ಶಿವಮಣಿ ಬುಧವಾರ ಸಾವಯವ ಕೃಷಿ ತಜ್ಞ ಶಿವನಾಪುರ ರಮೇಶ್ ಅವರನ್ನು ಭೇಟಿ ಮಾಡಿ ಅರ ಅರಣ್ಯ ಆದಾರಿತ ಕೃಷಿ,ತೋಟಗಾರಿಕೆ ಕುರಿತು ಮಾಹಿತಿ ಪಡೆದರು. 

ಚಿತ್ರ ನಿರ್ದೇಶನದ ಬಿಡುವಿನ ವೇಳೆಯಲ್ಲಿ ಸುಸ್ಥಿರ ಕೃಷಿಯಲ್ಲಿ ತೊಡಗಿಸಿಕೊಂಡು ಪರಿಸರ, ಪ್ರಾಣಿ, ಪಕ್ಷಿಗಳೊಂದಿಗೆ ಬದುಕಬೇಕು ಎನ್ನುವ ಉದ್ದೇಶದೊಂದಿಗೆ ಮಾಗಡಿ ಸಮಿಪ ತೋಟ ಮಾಡಲು ಹೊರಟಿರುವುದಾಗಿ ತಿಳಿಸಿದ ಶಿವಮಣಿ ಅವರು, ನಮ್ಮ ತಂದೆ ಕೇರಳದಲ್ಲಿ ಗೋಡಂಬಿ ಕೃಷಿಕರಾಗಿದ್ದರು. ಆದರೆ ಬೆಂಗಳೂರಿಗೆ ಬಂದ ನಂತರ ಕೃಷಿಯಿಂದ ತುಂಬಾ ದೂರ ಬಂದಿದ್ದೆವು. ಈಗ ಮತ್ತೆ ಮಣ್ಣಿನೊಂದಿಗೆ ನಿಕಟ ಸಂಪರ್ಕದಲ್ಲಿ ಇರಬೇಕು ಎನ್ನುವ ಆಸೆ ಚಿಗುರಿದೆ. ಕರೊನಾ ಲಾಕ್ಡೌನ್ ನಂತರ ನಗರದಲ್ಲಿ ಬಹುತೇಕ ಜನ ಕೃಷಿಯತ್ತ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಆದರೆ ನಾನು ಒಂದು ವರ್ಷದಿಂದಲು ಕೃಷಿ ಕೆಲಸ ಆರಂಭಿಸಿ ತೆಂಗು, ಅಡಿಕೆ ಹಾಗೂ ಹೈನುಗಾರಿಕೆ ಆರಂಭಿಸುವ ಸಿದ್ದತೆಯಲ್ಲಿ ಇದ್ದೆ. ಶಿವನಾಪುರ ರಮೇಶ್ ಆವರ ಮಾರ್ಗದರ್ಶನದ ನಂತರ ಯಾವುದೇ ಗಿಡ ನೆಡುವುದು ಅಂದರೆ ಅದಕ್ಕೆ ಭೂಮಿಯ ಸಿದ್ದತೆ ಎಷ್ಟು ಮುಖ್ಯ ಎನ್ನುವುದು ಅರಿವಿಗೆ ಬಂದಿದೆ. ನಾವು  ಒಂದು ಸಿನಿಮಾ ಸಿದ್ದತೆಗೆ ವರ್ಷಗಟ್ಟಲೆ ಪೂರ್ವ ಸಿದ್ದತೆ ಮಾಡಿಕೊಳ್ಳುತ್ತೇವೆ. ಆದರೆ ಸಸಿ ನೆಡುವುದೆಂದರೆ ಒಂದೇ ದಿನದಲ್ಲಿ ಗುಂಡಿ ತೋಡಿ ಗೊಬ್ಬರ ಹಾಕಿ ನೀರು ಕೊಟ್ಟರೆ  ಸಸಿ ಬೆಳೆಯುತ್ತದೆ ಎನ್ನುವ ತಿಳುವಳಿಕೆಯೇ ತಪ್ಪು ಎನ್ನುವುದು ರಮೇಶ್ ಅವರ ನರ್ಸರಿಗೆ ಭೇಟಿ ನೀಡಿ ಮಾಹಿತಿ ಪಡೆದ ನಂತರ ಅರ್ಥವಾಗಿದೆ ಎಂದರು. 

ಕರೊನಾ ಕಾರಣದಿಂದಾಗಿ ಲಾಕ್‌ಡೌನ್‌ ಜಾರಿಗೆ ಬಂದ ಮೇಲೆ ನಾವು ಪ್ರಕೃತಿಯೊಂದಿಗೆ ಎಷ್ಟೊಂದು ಎಚ್ಚರದಿಂದ ಬದುಕಬೇಕು ಎನ್ನುವುದು ಸಾಮಾನ್ಯ ಜನರಿಗೂ ಅರ್ಥವಾಗಿದೆ. ಇದನ್ನು ಮರೆತರೆ ಮುಂದಿನ ದಿನಗಳಲ್ಲಿ ಕೊರೊನಾ ವೈರಸ್ಗಿಂತಲು ಭೀಕರವಾದ ವೈರಸ್ಗಳು ಹುಟ್ಟಿಕೊಂಡು ಮನುಕುಲವನ್ನೇ ನಾಶ ಮಾಡಲಿವೆ.ಲಾಕ್ಡೌನ್ ಕೃಷಿ ಹಾಗೂ ಕೃಷಿಕರಿಗೆ ಗೌರವ ತಂದುಕೊಟ್ಟಿದೆ ಎಂದು ಹೇಳಿದರು.

ಶಿವಮಣಿ ಅವರು ನಾಗಸಂದ್ರ ಗ್ರಾಮದ ಕೃಷಿಕ  ಮುದ್ದಪ್ಪ ಅವರ ತೋಟಕ್ಕೆ ಭೇಟಿ ನೀಡಿ ವಿವಿಧ ಸಸಿಗಳ ಬೆಳವಣಿಗೆ ಕುರಿತು ಮಾಹಿತಿ ಪಡೆದರು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!