ಶಿಕ್ಷಕರ ನೆರವಿಗೆ ಬಾರದೇ ಮೌಲ್ಯಮಾಪನ ನಡೆಸುವ ನೈತಿಕತೆ ಶಿಕ್ಷಣ ಸಚಿವರಿಗೆ ಇಲ್ಲ – ಎ.ಪಿ.ರಂಗನಾಥ್

ದೊಡ್ಡಬಳ್ಳಾಪುರ: ಕೊವಿಡ್-19 ಕಾರಣದಿಂದಾಗಿ ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಕರು ಸಂಕಷ್ಟದಲ್ಲಿರುವಾಗ,ಶಿಕ್ಷಕರ ನೆರವಿಗೆ ಬಾರದೇ ಎಸ್ಎಸ್ಎಲ್ಸಿ ಪರೀಕ್ಷೆಯ ಮೌಲ್ಯಮಾಪನ ಆರಂಭಿಸಲು ಹೊರಟಿರುವ ಶಿಕ್ಷಣ ಸಚಿವರಿಗೆ ಯಾವುದೇ ನೈತಿಕತೆ ಇಲ್ಲ.ಸರ್ಕಾರ ಶಿಕ್ಷಕರಿಗೆ ಆರ್ಥಿಕ ನೆರವು ಹಾಗೂ  ವೈದ್ಯಕೀಯ ಪ್ಯಾಕೇಜ್ ನೀಡದಿದ್ದರೆ ಶಿಕ್ಷಕರು ಮೌಲ್ಯ ಮಾಪನ ಬಹಿಷ್ಕಾರದ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಶಿಕ್ಷಕರ ಮತ್ತು ಆಡಳಿತ ಮಂಡಲಿ ಫೋರಂ, ಕರ್ನಾಟಕ ಸಂಸ್ಥೆಯ ಅಧ್ಯಕ್ಷ ಎ.ಪಿ.ರಂಗನಾಥ್ ಹೇಳಿದ್ದಾರೆ.

ನಗರದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊವಿಡ್-19 ಲಾಕ್ಡೌನ್ ಕಾರಣದಿಂದಾಗಿ ಬಹಳಷ್ಟು ಖಾಸಗಿ ಶಾಲೆಗಳಲ್ಲಿ ಶಿಕ್ಷಕರಿಗೆ 3 ತಿಂಗಳಿನಿಂದ ಸಂಬಳ ನೀಡದೇ ಇರುವುದರಿಂದ ಶಿಕ್ಷಕರು ತೀವ್ರ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಹಠಕ್ಕೆ ಬಿದ್ದು ನಡೆಸಿದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಯದ ವಾತಾವರಣದಲ್ಲಿಯೇ ಪರೀಕ್ಷೆ ಎದುರಿಸಿದ್ದಾರೆ. ಶಿಕ್ಷಕರ ನೆರವಿಗೆ ಬಾರದ ಸರ್ಕಾರ ಎಸ್ಎಸ್ಎಲ್ಸಿ ಮೌಲ್ಯ ಮಾಪನ ಮಾಡುವಂತೆ ಆದೇಶಿಸಿರುವುದು ಎಷ್ಟು ಸರಿ. ಇತ್ತೀಚೆಗೆ ನಡೆದ ಪಿಯುಸಿ ಮೌಲ್ಯಮಾಪನದ ವೇಳೆ ನೂರಾರು ಕಿ.ಮೀ ದೂರದಿಂದ ಬೆಂಗಳೂರಿಗೆ ಉಪನ್ಯಾಸಕರು ಆಗಮಿಸಿದ್ದರು. ಈಗ ಎಸ್ಎಸ್ಎಲ್ಸಿ ಮೌಲ್ಯಮಾಪನ ಮಾಡಲು ನೂರಾರು ಶಿಕ್ಷಕರು ಸೇರುತ್ತಾರೆ. ಆದರೆ ಶಿಕ್ಷಕರಿಗೆ ಯಾವುದೇ ವೈದ್ಯಕೀಯ ಭದ್ರತೆ ಇಲ್ಲ. ಶಾಲಾ ಶಿಕ್ಷಕರಿಗೆ ಈ ವೇಳೆ ಕೊವಿಡ್-19 ಸೋಂಕು ತಗುಲಿದರೆ ಯಾರು ಹೊಣೆ ? ಎಂದರು.

ಖಾಸಗಿ ಶಾಲೆಗಳಿಗೆ ಸರ್ಕಾರ ಬಾಕಿ ಇರಿಸಿಕೊಂಡಿರುವ ಸುಮಾರು 1025 ಕೋಟಿ ಆರ್.ಟಿ.ಇ ಹಣವನ್ನು ಕೂಡಲೇ ಬಿಡುಗಡೆ ಮಾಡಿದರೆ ಶಾಲೆಗಳಿಗೆ ಸಹಕಾರಿಯಾಗುತ್ತದೆ. ಶಿಕ್ಷಕರಿಗೆ ಈ ಸಂದರ್ಭದಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಶಿಕ್ಷಕರಿಗೆ ವೈದ್ಯಕೀಯ ವಿಮೆ ಒದಗಿಸಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಮೌಲ್ಯಮಾಪನ ಬಹಿಷ್ಕಾರ..?

ತಾಲೂಕು ಅನುದಾನ ರಹಿತ ಖಾಸಗಿ ಶಾಲೆಗಳ  ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಎಷ್ಟೋ ಶಾಲೆಗಳಲ್ಲಿ ಶಿಕ್ಷಕರು ಬರೀ 4.5 ಸಾವಿರ ರೂಗಳ ಸಂಬಳಕ್ಕೆ ದುಡಿಯುತ್ತಿದ್ದಾರೆ. ಖಾಸಗಿ ಆಡಳಿತ ಮಂಡಲಿಗಳು ಶಿಕ್ಷಕರಿಗೆ ಸಂಬಳ ನೀಡದೇ ಶಿಕ್ಷಕರು ಅನ್ಯ ಉದ್ಯೋಗಗಳತ್ತ ತೆರಳಬೇಕಿದೆ. ಆದರೆ ಸರ್ಕಾರಿ ಶಾಲೆಯ ಶಿಕ್ಷಕರ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಬೇಕು.

ಸರ್ಕಾರ ಖಾಸಗಿ ಶಾಲೆಗಳ  ಶಿಕ್ಷಕರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಈ ದಿಸೆಯಲ್ಲಿ ಶಿಕ್ಷಕರಿಗೆ ಆರ್ಥಿಕ ಪ್ಯಾಕೇಜ್ ಹಾಗೂ ವೈದ್ಯಕೀಯ ವಿಮೆಯ ಬೇಡಿಕೆಗಳು ಈಡೇರದಿದ್ದರೆ ಜುಲೈ 13ರಂದು ನಡೆಯಲಿರುವ ಎಸ್ಎಸ್ಎಲ್ಸಿ ಮೌಲ್ಯ ಮಾಪನ ಕಾರ್ಯವನ್ನು ಬಹಿಷ್ಕರಿಸುವ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ರಾಜ್ಯದಲ್ಲಿ ಸುಮಾರು 2.5 ಲಕ್ಷ ಶಿಕ್ಷಕರಿದ್ದು, ಒತ್ತಡಕ್ಕೆ ಮಣಿದ ಕೆಲವಷ್ಟು ಶಿಕ್ಷಕರನ್ನು ಹೊರತುಪಡಿಸಿ ಬಹಳಷ್ಟು ಶಿಕ್ಷಕರು ಮೌಲ್ಯಮಾಪನ ಬಹಿಷ್ಕಾರಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಶಿಕ್ಷಕರ ಮತ್ತು ಆಡಳಿತ ಮಂಡಲಿ ಫೋರಂ ಕಾರ್ಯದರ್ಶಿ ಸೂಡಿ ಸುರೇಶ್, ಜಂಟಿ ಕಾರ್ಯದರ್ಶಿ ಟಿ.ಕೆ.ನರಸೇಗೌಡ, ತಾಲೂಕು ಅನುದಾನ ರಹಿತ ಖಾಸಗಿ ಶಾಲೆಗಳ  ಶಿಕ್ಷಕರ ಸಂಘದ ಗೌರವ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಮೋಹನ್ ನಾಯಕ್, ಪ್ರಧಾನ ಸಂಚಾಲಕ ದಾದಾಪೀರ್ ಭಾಗವಹಿಸಿದ್ದರು.

ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2025-26ನೇ ಸಾಲಿನ ಬಜೆಟ್‌ನಲ್ಲಿ ಯಾರನ್ನೂ ಓಲೈಕೆ ಮಾಡದೇ ಎಲ್ಲಾ ವರ್ಗದವರ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಲಾಗಿದೆ. ಕಾಂಗ್ರೆಸ್ ಬಜೆಟ್ ಮಾಡಿದ್ದರೆ ತಾರತಮ್ಯ ಹಾಗೂ

[ccc_my_favorite_select_button post_id="119201"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!