ಶಿಕ್ಷಕರ ನೆರವಿಗೆ ಬಾರದೇ ಮೌಲ್ಯಮಾಪನ ನಡೆಸುವ ನೈತಿಕತೆ ಶಿಕ್ಷಣ ಸಚಿವರಿಗೆ ಇಲ್ಲ – ಎ.ಪಿ.ರಂಗನಾಥ್

ದೊಡ್ಡಬಳ್ಳಾಪುರ: ಕೊವಿಡ್-19 ಕಾರಣದಿಂದಾಗಿ ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಕರು ಸಂಕಷ್ಟದಲ್ಲಿರುವಾಗ,ಶಿಕ್ಷಕರ ನೆರವಿಗೆ ಬಾರದೇ ಎಸ್ಎಸ್ಎಲ್ಸಿ ಪರೀಕ್ಷೆಯ ಮೌಲ್ಯಮಾಪನ ಆರಂಭಿಸಲು ಹೊರಟಿರುವ ಶಿಕ್ಷಣ ಸಚಿವರಿಗೆ ಯಾವುದೇ ನೈತಿಕತೆ ಇಲ್ಲ.ಸರ್ಕಾರ ಶಿಕ್ಷಕರಿಗೆ ಆರ್ಥಿಕ ನೆರವು ಹಾಗೂ  ವೈದ್ಯಕೀಯ ಪ್ಯಾಕೇಜ್ ನೀಡದಿದ್ದರೆ ಶಿಕ್ಷಕರು ಮೌಲ್ಯ ಮಾಪನ ಬಹಿಷ್ಕಾರದ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಶಿಕ್ಷಕರ ಮತ್ತು ಆಡಳಿತ ಮಂಡಲಿ ಫೋರಂ, ಕರ್ನಾಟಕ ಸಂಸ್ಥೆಯ ಅಧ್ಯಕ್ಷ ಎ.ಪಿ.ರಂಗನಾಥ್ ಹೇಳಿದ್ದಾರೆ.

ನಗರದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊವಿಡ್-19 ಲಾಕ್ಡೌನ್ ಕಾರಣದಿಂದಾಗಿ ಬಹಳಷ್ಟು ಖಾಸಗಿ ಶಾಲೆಗಳಲ್ಲಿ ಶಿಕ್ಷಕರಿಗೆ 3 ತಿಂಗಳಿನಿಂದ ಸಂಬಳ ನೀಡದೇ ಇರುವುದರಿಂದ ಶಿಕ್ಷಕರು ತೀವ್ರ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಹಠಕ್ಕೆ ಬಿದ್ದು ನಡೆಸಿದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಯದ ವಾತಾವರಣದಲ್ಲಿಯೇ ಪರೀಕ್ಷೆ ಎದುರಿಸಿದ್ದಾರೆ. ಶಿಕ್ಷಕರ ನೆರವಿಗೆ ಬಾರದ ಸರ್ಕಾರ ಎಸ್ಎಸ್ಎಲ್ಸಿ ಮೌಲ್ಯ ಮಾಪನ ಮಾಡುವಂತೆ ಆದೇಶಿಸಿರುವುದು ಎಷ್ಟು ಸರಿ. ಇತ್ತೀಚೆಗೆ ನಡೆದ ಪಿಯುಸಿ ಮೌಲ್ಯಮಾಪನದ ವೇಳೆ ನೂರಾರು ಕಿ.ಮೀ ದೂರದಿಂದ ಬೆಂಗಳೂರಿಗೆ ಉಪನ್ಯಾಸಕರು ಆಗಮಿಸಿದ್ದರು. ಈಗ ಎಸ್ಎಸ್ಎಲ್ಸಿ ಮೌಲ್ಯಮಾಪನ ಮಾಡಲು ನೂರಾರು ಶಿಕ್ಷಕರು ಸೇರುತ್ತಾರೆ. ಆದರೆ ಶಿಕ್ಷಕರಿಗೆ ಯಾವುದೇ ವೈದ್ಯಕೀಯ ಭದ್ರತೆ ಇಲ್ಲ. ಶಾಲಾ ಶಿಕ್ಷಕರಿಗೆ ಈ ವೇಳೆ ಕೊವಿಡ್-19 ಸೋಂಕು ತಗುಲಿದರೆ ಯಾರು ಹೊಣೆ ? ಎಂದರು.

ಖಾಸಗಿ ಶಾಲೆಗಳಿಗೆ ಸರ್ಕಾರ ಬಾಕಿ ಇರಿಸಿಕೊಂಡಿರುವ ಸುಮಾರು 1025 ಕೋಟಿ ಆರ್.ಟಿ.ಇ ಹಣವನ್ನು ಕೂಡಲೇ ಬಿಡುಗಡೆ ಮಾಡಿದರೆ ಶಾಲೆಗಳಿಗೆ ಸಹಕಾರಿಯಾಗುತ್ತದೆ. ಶಿಕ್ಷಕರಿಗೆ ಈ ಸಂದರ್ಭದಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಶಿಕ್ಷಕರಿಗೆ ವೈದ್ಯಕೀಯ ವಿಮೆ ಒದಗಿಸಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಮೌಲ್ಯಮಾಪನ ಬಹಿಷ್ಕಾರ..?

ತಾಲೂಕು ಅನುದಾನ ರಹಿತ ಖಾಸಗಿ ಶಾಲೆಗಳ  ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಎಷ್ಟೋ ಶಾಲೆಗಳಲ್ಲಿ ಶಿಕ್ಷಕರು ಬರೀ 4.5 ಸಾವಿರ ರೂಗಳ ಸಂಬಳಕ್ಕೆ ದುಡಿಯುತ್ತಿದ್ದಾರೆ. ಖಾಸಗಿ ಆಡಳಿತ ಮಂಡಲಿಗಳು ಶಿಕ್ಷಕರಿಗೆ ಸಂಬಳ ನೀಡದೇ ಶಿಕ್ಷಕರು ಅನ್ಯ ಉದ್ಯೋಗಗಳತ್ತ ತೆರಳಬೇಕಿದೆ. ಆದರೆ ಸರ್ಕಾರಿ ಶಾಲೆಯ ಶಿಕ್ಷಕರ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಬೇಕು.

ಸರ್ಕಾರ ಖಾಸಗಿ ಶಾಲೆಗಳ  ಶಿಕ್ಷಕರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಈ ದಿಸೆಯಲ್ಲಿ ಶಿಕ್ಷಕರಿಗೆ ಆರ್ಥಿಕ ಪ್ಯಾಕೇಜ್ ಹಾಗೂ ವೈದ್ಯಕೀಯ ವಿಮೆಯ ಬೇಡಿಕೆಗಳು ಈಡೇರದಿದ್ದರೆ ಜುಲೈ 13ರಂದು ನಡೆಯಲಿರುವ ಎಸ್ಎಸ್ಎಲ್ಸಿ ಮೌಲ್ಯ ಮಾಪನ ಕಾರ್ಯವನ್ನು ಬಹಿಷ್ಕರಿಸುವ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ರಾಜ್ಯದಲ್ಲಿ ಸುಮಾರು 2.5 ಲಕ್ಷ ಶಿಕ್ಷಕರಿದ್ದು, ಒತ್ತಡಕ್ಕೆ ಮಣಿದ ಕೆಲವಷ್ಟು ಶಿಕ್ಷಕರನ್ನು ಹೊರತುಪಡಿಸಿ ಬಹಳಷ್ಟು ಶಿಕ್ಷಕರು ಮೌಲ್ಯಮಾಪನ ಬಹಿಷ್ಕಾರಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಶಿಕ್ಷಕರ ಮತ್ತು ಆಡಳಿತ ಮಂಡಲಿ ಫೋರಂ ಕಾರ್ಯದರ್ಶಿ ಸೂಡಿ ಸುರೇಶ್, ಜಂಟಿ ಕಾರ್ಯದರ್ಶಿ ಟಿ.ಕೆ.ನರಸೇಗೌಡ, ತಾಲೂಕು ಅನುದಾನ ರಹಿತ ಖಾಸಗಿ ಶಾಲೆಗಳ  ಶಿಕ್ಷಕರ ಸಂಘದ ಗೌರವ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಮೋಹನ್ ನಾಯಕ್, ಪ್ರಧಾನ ಸಂಚಾಲಕ ದಾದಾಪೀರ್ ಭಾಗವಹಿಸಿದ್ದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!