ಶಿಕ್ಷಕರ ನೆರವಿಗೆ ಬಾರದೇ ಮೌಲ್ಯಮಾಪನ ನಡೆಸುವ ನೈತಿಕತೆ ಶಿಕ್ಷಣ ಸಚಿವರಿಗೆ ಇಲ್ಲ – ಎ.ಪಿ.ರಂಗನಾಥ್

ದೊಡ್ಡಬಳ್ಳಾಪುರ: ಕೊವಿಡ್-19 ಕಾರಣದಿಂದಾಗಿ ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಕರು ಸಂಕಷ್ಟದಲ್ಲಿರುವಾಗ,ಶಿಕ್ಷಕರ ನೆರವಿಗೆ ಬಾರದೇ ಎಸ್ಎಸ್ಎಲ್ಸಿ ಪರೀಕ್ಷೆಯ ಮೌಲ್ಯಮಾಪನ ಆರಂಭಿಸಲು ಹೊರಟಿರುವ ಶಿಕ್ಷಣ ಸಚಿವರಿಗೆ ಯಾವುದೇ ನೈತಿಕತೆ ಇಲ್ಲ.ಸರ್ಕಾರ ಶಿಕ್ಷಕರಿಗೆ ಆರ್ಥಿಕ ನೆರವು ಹಾಗೂ  ವೈದ್ಯಕೀಯ ಪ್ಯಾಕೇಜ್ ನೀಡದಿದ್ದರೆ ಶಿಕ್ಷಕರು ಮೌಲ್ಯ ಮಾಪನ ಬಹಿಷ್ಕಾರದ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಶಿಕ್ಷಕರ ಮತ್ತು ಆಡಳಿತ ಮಂಡಲಿ ಫೋರಂ, ಕರ್ನಾಟಕ ಸಂಸ್ಥೆಯ ಅಧ್ಯಕ್ಷ ಎ.ಪಿ.ರಂಗನಾಥ್ ಹೇಳಿದ್ದಾರೆ.

ನಗರದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊವಿಡ್-19 ಲಾಕ್ಡೌನ್ ಕಾರಣದಿಂದಾಗಿ ಬಹಳಷ್ಟು ಖಾಸಗಿ ಶಾಲೆಗಳಲ್ಲಿ ಶಿಕ್ಷಕರಿಗೆ 3 ತಿಂಗಳಿನಿಂದ ಸಂಬಳ ನೀಡದೇ ಇರುವುದರಿಂದ ಶಿಕ್ಷಕರು ತೀವ್ರ ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಹಠಕ್ಕೆ ಬಿದ್ದು ನಡೆಸಿದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಯದ ವಾತಾವರಣದಲ್ಲಿಯೇ ಪರೀಕ್ಷೆ ಎದುರಿಸಿದ್ದಾರೆ. ಶಿಕ್ಷಕರ ನೆರವಿಗೆ ಬಾರದ ಸರ್ಕಾರ ಎಸ್ಎಸ್ಎಲ್ಸಿ ಮೌಲ್ಯ ಮಾಪನ ಮಾಡುವಂತೆ ಆದೇಶಿಸಿರುವುದು ಎಷ್ಟು ಸರಿ. ಇತ್ತೀಚೆಗೆ ನಡೆದ ಪಿಯುಸಿ ಮೌಲ್ಯಮಾಪನದ ವೇಳೆ ನೂರಾರು ಕಿ.ಮೀ ದೂರದಿಂದ ಬೆಂಗಳೂರಿಗೆ ಉಪನ್ಯಾಸಕರು ಆಗಮಿಸಿದ್ದರು. ಈಗ ಎಸ್ಎಸ್ಎಲ್ಸಿ ಮೌಲ್ಯಮಾಪನ ಮಾಡಲು ನೂರಾರು ಶಿಕ್ಷಕರು ಸೇರುತ್ತಾರೆ. ಆದರೆ ಶಿಕ್ಷಕರಿಗೆ ಯಾವುದೇ ವೈದ್ಯಕೀಯ ಭದ್ರತೆ ಇಲ್ಲ. ಶಾಲಾ ಶಿಕ್ಷಕರಿಗೆ ಈ ವೇಳೆ ಕೊವಿಡ್-19 ಸೋಂಕು ತಗುಲಿದರೆ ಯಾರು ಹೊಣೆ ? ಎಂದರು.

ಖಾಸಗಿ ಶಾಲೆಗಳಿಗೆ ಸರ್ಕಾರ ಬಾಕಿ ಇರಿಸಿಕೊಂಡಿರುವ ಸುಮಾರು 1025 ಕೋಟಿ ಆರ್.ಟಿ.ಇ ಹಣವನ್ನು ಕೂಡಲೇ ಬಿಡುಗಡೆ ಮಾಡಿದರೆ ಶಾಲೆಗಳಿಗೆ ಸಹಕಾರಿಯಾಗುತ್ತದೆ. ಶಿಕ್ಷಕರಿಗೆ ಈ ಸಂದರ್ಭದಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಶಿಕ್ಷಕರಿಗೆ ವೈದ್ಯಕೀಯ ವಿಮೆ ಒದಗಿಸಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಮೌಲ್ಯಮಾಪನ ಬಹಿಷ್ಕಾರ..?

ತಾಲೂಕು ಅನುದಾನ ರಹಿತ ಖಾಸಗಿ ಶಾಲೆಗಳ  ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಎಷ್ಟೋ ಶಾಲೆಗಳಲ್ಲಿ ಶಿಕ್ಷಕರು ಬರೀ 4.5 ಸಾವಿರ ರೂಗಳ ಸಂಬಳಕ್ಕೆ ದುಡಿಯುತ್ತಿದ್ದಾರೆ. ಖಾಸಗಿ ಆಡಳಿತ ಮಂಡಲಿಗಳು ಶಿಕ್ಷಕರಿಗೆ ಸಂಬಳ ನೀಡದೇ ಶಿಕ್ಷಕರು ಅನ್ಯ ಉದ್ಯೋಗಗಳತ್ತ ತೆರಳಬೇಕಿದೆ. ಆದರೆ ಸರ್ಕಾರಿ ಶಾಲೆಯ ಶಿಕ್ಷಕರ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಬೇಕು.

ಸರ್ಕಾರ ಖಾಸಗಿ ಶಾಲೆಗಳ  ಶಿಕ್ಷಕರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಈ ದಿಸೆಯಲ್ಲಿ ಶಿಕ್ಷಕರಿಗೆ ಆರ್ಥಿಕ ಪ್ಯಾಕೇಜ್ ಹಾಗೂ ವೈದ್ಯಕೀಯ ವಿಮೆಯ ಬೇಡಿಕೆಗಳು ಈಡೇರದಿದ್ದರೆ ಜುಲೈ 13ರಂದು ನಡೆಯಲಿರುವ ಎಸ್ಎಸ್ಎಲ್ಸಿ ಮೌಲ್ಯ ಮಾಪನ ಕಾರ್ಯವನ್ನು ಬಹಿಷ್ಕರಿಸುವ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ರಾಜ್ಯದಲ್ಲಿ ಸುಮಾರು 2.5 ಲಕ್ಷ ಶಿಕ್ಷಕರಿದ್ದು, ಒತ್ತಡಕ್ಕೆ ಮಣಿದ ಕೆಲವಷ್ಟು ಶಿಕ್ಷಕರನ್ನು ಹೊರತುಪಡಿಸಿ ಬಹಳಷ್ಟು ಶಿಕ್ಷಕರು ಮೌಲ್ಯಮಾಪನ ಬಹಿಷ್ಕಾರಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಶಿಕ್ಷಕರ ಮತ್ತು ಆಡಳಿತ ಮಂಡಲಿ ಫೋರಂ ಕಾರ್ಯದರ್ಶಿ ಸೂಡಿ ಸುರೇಶ್, ಜಂಟಿ ಕಾರ್ಯದರ್ಶಿ ಟಿ.ಕೆ.ನರಸೇಗೌಡ, ತಾಲೂಕು ಅನುದಾನ ರಹಿತ ಖಾಸಗಿ ಶಾಲೆಗಳ  ಶಿಕ್ಷಕರ ಸಂಘದ ಗೌರವ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಮೋಹನ್ ನಾಯಕ್, ಪ್ರಧಾನ ಸಂಚಾಲಕ ದಾದಾಪೀರ್ ಭಾಗವಹಿಸಿದ್ದರು.

ರಾಜಕೀಯ

HDK ಕರೆಗೆ ತಿರುಗೇಟು; ವಿದ್ಯಾವಂತರು ‘ಎ ಖಾತಾ ಪರಿವರ್ತನೆ’ ಒಪ್ಪುತ್ತಿರುವುದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಧನ್ಯವಾದ| Video

HDK ಕರೆಗೆ ತಿರುಗೇಟು; ವಿದ್ಯಾವಂತರು ‘ಎ ಖಾತಾ ಪರಿವರ್ತನೆ’ ಒಪ್ಪುತ್ತಿರುವುದಕ್ಕೆ ಡಿಸಿಎಂ ಡಿ.ಕೆ.

"ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ (Kumaraswamy) ಖಾಲಿ ಟ್ರಂಕ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ವಾಗ್ದಾಳಿ ನಡೆಸಿದರು.

[ccc_my_favorite_select_button post_id="115343"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!