ಫಸಲ್ ವಿಮಾ ಯೋಜನೆಯ ಪ್ರಚಾರಕ್ಕೆ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್ ಸೂಚನೆ

ದೊಡ್ಡಬಳ್ಳಾಪುರ: ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಡೆಯುವ ನಿಟ್ಟಿನಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್ ಕೆ.ನಾಯಕ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 202021ನೇ ಸಾಲಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಬಜಾಜ್ ಅಲಾಯನ್ಸ್ ಕಂಪೆನಿ, ಇವರ ಸಹಯೋಗದೊಂದಿಗೆ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ಪ್ರಸ್ತುತ ಸಾಲು ಹಾಗೂ ಹಂಗಾಮಿನಲ್ಲಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಮುಂಗಾರು ಹಂಗಾಮಿನಲ್ಲಿ ಎಲ್ಲಾ ರೈತರು ಸೇರಿದಂತೆ ಬೆಳೆ ಸಾಲ ಪಡೆಯದ ರೈತರು ಯೋಜನೆಯ ಸೌಲಭ್ಯ ಪಡೆಯಬಹುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ ಪುಸ್ತಕ, ಪಾಸ್ ಪುಸ್ತಕ, ಕಂದಾಯ ರಶೀದಿಯನ್ನು ನೀಡುವುದು. ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಯೋಜನೆಯಡಿ ಒಳಪಡಿಸಲಾಗುವುದು ಎಂದರಲ್ಲದೆ ಬೆಳೆ ಸಾಲ ಪಡೆದ ರೈತರು ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸದೇ ಇದ್ದಲ್ಲಿ, ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ ಏಳು ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಗೆ ಪತ್ರವನ್ನು ನೀಡಿದಲ್ಲಿ ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು ಎಂದು ತಿಳಿಸಿದರು.

ಪ್ರಸಕ್ತ ಸಾಲು ಮತ್ತು ಹಂಗಾಮಿನಲ್ಲಿ ಅಧಿಸೂಚಿತ ವಿಮಾ ಘಟಕದಲ್ಲಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಟ ಶೇ.25 ರಷ್ಟು ಪರಿಹಾರವನ್ನು ವಿಮಾ ಸಂಸ್ಥೆಯು ವಿಮೆ ಮಾಡಿಸಿದ ಎಲ್ಲಾ ರೈತರಿಗೆ ಇತ್ಯರ್ಥಪಡಿಸಿ ಮುಂದಿನ ಅವಧಿಗೆ ಅವರುಗಳ ಬೆಳೆ ವಿಮೆಯನ್ನು ರದ್ದುಪಡಿಸಲಾಗುವುದು. ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೇ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರಗಳೊಳಗೆ ಚಂಡಮಾರುತ, ಚಂಡಮಾರುತ ಸಹಿತ ಮಳೆ, ಅಕಾಲಿಕ ಮಳೆಯಿಂದ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು. ಏಕದಳ/ದ್ವಿದಳ ಧಾನ್ಯಗಳಿಗೆ ವಿಮಾ ಮೊತ್ತದ ಶೇ.2. ರಷ್ಟು ಹಾಗೂ ವಾಣಿಜ್ಯ ಬೆಳೆಗಳಿಗೆ ಶೇ.5 ರಷ್ಟು ವಿಮಾ ಕಂತನ್ನು ರೈತರು ಪಾವತಿಸಬೇಕಾಗಿರುತ್ತದೆ. ರೈತರು ಬೆಳೆ ವಿಮೆ ನೊಂದಾಯಿಸಲು 2020 ನೇ ಸಾಲಿನಲ್ಲಿ ತೊಗರಿ (ಮಳೆಆಶ್ರಿತ) ಜುಲೈ15, ತೊಗರಿ (ನೀರಾವರಿ) ಜುಲೈ15, ಮತ್ತು ಟೊಮೊಟೊ ಜುಲೈ15, ನೆಲಗಡಲೆ (ಮಳೆ ಆಶ್ರಿತ) ಜುಲೈ31ರಾಗಿ (ಮಳೆ ಆಶ್ರಿತ) ಆಗಸ್ಟ್14, ರಾಗಿ (ನೀರಾವರಿ) ಆಗಸ್ಟ್14, ಭತ್ತ (ನೀರಾವರಿ) ಆಗಸ್ಟ್14, ಮುಸುಕಿನ ಜೋಳ (ನೀರಾವರಿ) ಆಗಸ್ಟ್14, ಮುಸುಕಿನ ಜೋಳ (ಮಳೆ ಆಶ್ರಿತ) ಆಗಸ್ಟ್14, ಹುರುಳಿ (ಮಳೆ ಆಶ್ರಿತ) ಆಗಸ್ಟ್14, 2020, ರಂದು ಕೊನೆಯ ದಿನಾಂಕವಾಗಿರುತ್ತದೆ. ಹೆಚಿನ ಮಾಹಿತಿಗೆ ರೈತರು ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ ಅಧಿಕಾರಿಗಳನ್ನು ಅಥವಾ ಆಯಾ ತಾಲ್ಲೂಕಿನಲ್ಲಿರುವ ವಿಮಾ ಅಧಿಕಾರಿಗಳನ್ನು ಅಥವಾ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ ಅವರು ಸಭೆಯಲ್ಲಿ ತಿಳಿಸಿದರು.

ಕೃಷಿ ಇಲಾಖೆ ಉಪ ನಿರ್ದೇಶಕಿ ವಿನುತಾ ಸೇರಿದಂತೆ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು ಉಪಸ್ಥಿತರಿದ್ದರು. ಸಭೆಯ ನಂತರ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಮಾಹಿತಿ ಕುರಿತ ಕರಪತ್ರವನ್ನು ಅಪರ ಜಿಲ್ಲಾಧಿಕಾರಿ ಬಿಡುಗಡೆ ಮಾಡಿದರು.

ದೇವನಹಳ್ಳಿ ಎಡಿಎ ರೇವಣ್ಣಪ್ಪ,ತಾಂತ್ರಿಕ ಅಧಿಕಾರಿಗಳಾದ ರೂಪ,ರೇಣುಕಾಪ್ರಸನ್ನ,ವೆಂಕಟೇಶ್ ಮತ್ತಿತರಿದ್ದರು.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!