ಫಸಲ್ ವಿಮಾ ಯೋಜನೆಯ ಪ್ರಚಾರಕ್ಕೆ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್ ಸೂಚನೆ

ದೊಡ್ಡಬಳ್ಳಾಪುರ: ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಡೆಯುವ ನಿಟ್ಟಿನಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್ ಕೆ.ನಾಯಕ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 202021ನೇ ಸಾಲಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಬಜಾಜ್ ಅಲಾಯನ್ಸ್ ಕಂಪೆನಿ, ಇವರ ಸಹಯೋಗದೊಂದಿಗೆ ಮುಂಗಾರು ಹಂಗಾಮಿನಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ಪ್ರಸ್ತುತ ಸಾಲು ಹಾಗೂ ಹಂಗಾಮಿನಲ್ಲಿ ವಿವಿಧ ವಿಮಾ ಘಟಕಗಳಲ್ಲಿ ಅಧಿಸೂಚಿಸಲಾದ ಬೆಳೆಗಳಿಗೆ ಮುಂಗಾರು ಹಂಗಾಮಿನಲ್ಲಿ ಎಲ್ಲಾ ರೈತರು ಸೇರಿದಂತೆ ಬೆಳೆ ಸಾಲ ಪಡೆಯದ ರೈತರು ಯೋಜನೆಯ ಸೌಲಭ್ಯ ಪಡೆಯಬಹುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಖಾತೆ ಪುಸ್ತಕ, ಪಾಸ್ ಪುಸ್ತಕ, ಕಂದಾಯ ರಶೀದಿಯನ್ನು ನೀಡುವುದು. ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಯೋಜನೆಯಡಿ ಒಳಪಡಿಸಲಾಗುವುದು ಎಂದರಲ್ಲದೆ ಬೆಳೆ ಸಾಲ ಪಡೆದ ರೈತರು ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸದೇ ಇದ್ದಲ್ಲಿ, ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ ಏಳು ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಗೆ ಪತ್ರವನ್ನು ನೀಡಿದಲ್ಲಿ ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು ಎಂದು ತಿಳಿಸಿದರು.

ಪ್ರಸಕ್ತ ಸಾಲು ಮತ್ತು ಹಂಗಾಮಿನಲ್ಲಿ ಅಧಿಸೂಚಿತ ವಿಮಾ ಘಟಕದಲ್ಲಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಟ ಶೇ.25 ರಷ್ಟು ಪರಿಹಾರವನ್ನು ವಿಮಾ ಸಂಸ್ಥೆಯು ವಿಮೆ ಮಾಡಿಸಿದ ಎಲ್ಲಾ ರೈತರಿಗೆ ಇತ್ಯರ್ಥಪಡಿಸಿ ಮುಂದಿನ ಅವಧಿಗೆ ಅವರುಗಳ ಬೆಳೆ ವಿಮೆಯನ್ನು ರದ್ದುಪಡಿಸಲಾಗುವುದು. ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೇ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರಗಳೊಳಗೆ ಚಂಡಮಾರುತ, ಚಂಡಮಾರುತ ಸಹಿತ ಮಳೆ, ಅಕಾಲಿಕ ಮಳೆಯಿಂದ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು. ಏಕದಳ/ದ್ವಿದಳ ಧಾನ್ಯಗಳಿಗೆ ವಿಮಾ ಮೊತ್ತದ ಶೇ.2. ರಷ್ಟು ಹಾಗೂ ವಾಣಿಜ್ಯ ಬೆಳೆಗಳಿಗೆ ಶೇ.5 ರಷ್ಟು ವಿಮಾ ಕಂತನ್ನು ರೈತರು ಪಾವತಿಸಬೇಕಾಗಿರುತ್ತದೆ. ರೈತರು ಬೆಳೆ ವಿಮೆ ನೊಂದಾಯಿಸಲು 2020 ನೇ ಸಾಲಿನಲ್ಲಿ ತೊಗರಿ (ಮಳೆಆಶ್ರಿತ) ಜುಲೈ15, ತೊಗರಿ (ನೀರಾವರಿ) ಜುಲೈ15, ಮತ್ತು ಟೊಮೊಟೊ ಜುಲೈ15, ನೆಲಗಡಲೆ (ಮಳೆ ಆಶ್ರಿತ) ಜುಲೈ31ರಾಗಿ (ಮಳೆ ಆಶ್ರಿತ) ಆಗಸ್ಟ್14, ರಾಗಿ (ನೀರಾವರಿ) ಆಗಸ್ಟ್14, ಭತ್ತ (ನೀರಾವರಿ) ಆಗಸ್ಟ್14, ಮುಸುಕಿನ ಜೋಳ (ನೀರಾವರಿ) ಆಗಸ್ಟ್14, ಮುಸುಕಿನ ಜೋಳ (ಮಳೆ ಆಶ್ರಿತ) ಆಗಸ್ಟ್14, ಹುರುಳಿ (ಮಳೆ ಆಶ್ರಿತ) ಆಗಸ್ಟ್14, 2020, ರಂದು ಕೊನೆಯ ದಿನಾಂಕವಾಗಿರುತ್ತದೆ. ಹೆಚಿನ ಮಾಹಿತಿಗೆ ರೈತರು ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ ಅಧಿಕಾರಿಗಳನ್ನು ಅಥವಾ ಆಯಾ ತಾಲ್ಲೂಕಿನಲ್ಲಿರುವ ವಿಮಾ ಅಧಿಕಾರಿಗಳನ್ನು ಅಥವಾ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ ಅವರು ಸಭೆಯಲ್ಲಿ ತಿಳಿಸಿದರು.

ಕೃಷಿ ಇಲಾಖೆ ಉಪ ನಿರ್ದೇಶಕಿ ವಿನುತಾ ಸೇರಿದಂತೆ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು ಉಪಸ್ಥಿತರಿದ್ದರು. ಸಭೆಯ ನಂತರ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಮಾಹಿತಿ ಕುರಿತ ಕರಪತ್ರವನ್ನು ಅಪರ ಜಿಲ್ಲಾಧಿಕಾರಿ ಬಿಡುಗಡೆ ಮಾಡಿದರು.

ದೇವನಹಳ್ಳಿ ಎಡಿಎ ರೇವಣ್ಣಪ್ಪ,ತಾಂತ್ರಿಕ ಅಧಿಕಾರಿಗಳಾದ ರೂಪ,ರೇಣುಕಾಪ್ರಸನ್ನ,ವೆಂಕಟೇಶ್ ಮತ್ತಿತರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ರೈತರ ಪ್ರತಿಭಟನೆ ತೀವ್ರ.. ಸ್ಥಳಕ್ಕೆ ಅಧಿಕಾರಿಗಳು ದೌಡು

ದೊಡ್ಡಬಳ್ಳಾಪುರ: ರೈತರ ಪ್ರತಿಭಟನೆ ತೀವ್ರ.. ಸ್ಥಳಕ್ಕೆ ಅಧಿಕಾರಿಗಳು ದೌಡು

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಲಿ (KIADB) ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯಲ್ಲಿ ಉದ್ದೇಶಿಸಿರುವ 2100 ಎಕರೆ ಭೂ ಸ್ವಾಧೀನದ ವಿರುದ್ಧ ರೈತರು ಕೆರಳಿದ್ದು, ಬಿರು ಬಿಸಿಲಿನಲ್ಲಿಯೂ ಪ್ರತಿಭಟನೆ ನಡೆಸಿದರು.

[ccc_my_favorite_select_button post_id="120437"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCBಗೆ ಕೆಎಂಎಫ್ ಪ್ರಾಯೋಜಕತ್ವ..!

RCBಗೆ ಕೆಎಂಎಫ್ ಪ್ರಾಯೋಜಕತ್ವ..!

ಐಪಿಎಲ್ (IPL) ಹಬ್ಬಕ್ಕೆ ದಿನಗಣನೆ ಆರಂಭವಾಗಿದ್ದು, ಈ ಬಾರಿಯ ಐಪಿಎಲ್‌ನಲ್ಲಿ ಕೆಎಂಎಫ್ (KMF) ಆರ್‌ಸಿಬಿಗೆ (RCB) ಸಾಥ್ ನೀಡಿದೆ2026ರ ಆವೃತ್ತಿಯಲ್ಲಿ ಆರ್‌ಸಿಬಿಗೆ ಕೆಎಂಎಫ್ ಪ್ರಾಯೋಜಕತ್ವ ನೀಡಿದ್ದು, ಒಟ್ಟು 4 ಕೋಟಿ ರು. ವೆಚ್ಚದಲ್ಲಿ ಒಂದು

[ccc_my_favorite_select_button post_id="120424"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!