ಮನೆಗೊಂದು ನುಗ್ಗೆ ಮರ ಇದ್ದರೆ ಇಡೀ ಕುಟುಂಬದ ಆರೋಗ್ಯಕ್ಕೆ ಸಹಕಾರಿ – ಸಿ.ಎಸ್.ಕರೀಗೌಡ

ದೊಡ್ಡಬಳ್ಳಾಪುರ: ಇಲ್ಲಿನ ಕೈಗಾರಿಕಾ ಪ್ರದೇಶದ ಗಾರ್ಮೆಂಟ್ಸ್ಗಳಲ್ಲಿ ಕೆಲಸ ಮಾಡುವ ಮಹಿಳೆಯರ ಆರೋಗ್ಯ ತಪಾಸಣೆ ನಡೆಸಿದಾಗ ಶೇ25ರಷ್ಟು ಮಹಿಳೆಯರಲ್ಲಿ ರಕ್ತ ಹೀನತೆ, ಕಬ್ಬಣದ ಅಂಶದ ಕೊರತೆ, ಸಕ್ಕರೆ ಕಾಯಿಲೆ  ಇರುವುದು ಕಂಡು ಬಂದಿದೆ. ಈ ಎಲ್ಲಾ ಕೊರತೆಗಳನ್ನು ಹೊಗಲಾಡಿಸುವ ಶಕ್ತಿ ನುಗ್ಗೆ ಸೊಪ್ಪು, ಕಾಯಿಗಳಿಗೆ ಇದೆ ಎಂದು ಕೃಷಿ ಮಾರುಕಟ್ಟೆ ನಿರ್ದೇಶಕ ಸಿ.ಎಸ್.ಕರೀಗೌಡ ಹೇಳಿದರು. 

ಅವರು, ನಗರದ ಬೆಸೆಂಟ್ ಪಾರ್ಕ್ ರಸ್ತೆಯ ಎಂ.ಎ.ಪ್ರಕಾಶ್ ಬಡಾವಣೆಯಲ್ಲಿ ಪರಿಸರ ಸಿರಿ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಮನೆಗೊಂದು ನುಗ್ಗೆ ಮನೆತುಂಬಾ ಆರೋಗ್ಯ ಕಾರ್ಯಕ್ರಮದಡಿ ಬಡಾವಣೆಯ ಮನೆಗಳ ಮುಂದೆ ನುಗ್ಗೆ ಸಸಿಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ನುಗ್ಗೆ ಕಾಯಿ ಹಾಗೂ ಸೊಪ್ಪಿನಲ್ಲಿ ಕಬ್ಬಣದ ಅಂಶ  ಹೇರಳವಾಗಿದೆ. ಉತ್ತಮ ಪೋಷಕಾಂಶ ನೀಡುತ್ತದೆ. ಆದರೆ ಮನೆಗಳ ಮುಂದೆ ನುಗ್ಗೆ ಮರ ಹಾಕುವುದು ತಪ್ಪು ಎನ್ನುವ ಮೂಢನಂಬಿಕೆಯಿಂದ ಹೊರಬರಬೇಕಿದೆ. ಪೌಷ್ಟಿಕಾಂಶ ಆಹಾರ ಎಲ್ಲರಿಗೂ ಬೇಕಾಗಿದ್ದು, ಅದರಲ್ಲೂ ಮಹಿಳೆಯರಿಗೆ ಹೆಚ್ಚಿನ ಅಗತ್ಯವಿದೆ. ನುಗ್ಗೆ ಸೊಪ್ಪಿಂದ ಮಹಿಳೆಯರಿಗೆ ಬರುವ  ಕಾಯಿಲೆಗಳಿಗೆ ರಾಮಬಾಣ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಮನೆಗೊಂದು ನುಗ್ಗೆ ಮರ ಮನೆ ತುಂಬಾ ಆರೋಗ್ಯ ಜನಾಂದೋಲನವಾಗಿ ರೂಪುಗೊಳ್ಳಬೇಕು ಎಂದರು. 

ಮನೆಯಲ್ಲಿ ಮಹಿಳೆಯರು ಆರೋಗ್ಯವಾಗಿದ್ದರೆ ಮಾತ್ರ ಇಡೀ ಕುಟುಂಬ ಆರೋಗ್ಯವಾಗಿರಲು ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ. ಆರೋಗ್ಯವಂತ ಪ್ರಜೆಗಳೆ ದೇಶದ ನಿಜವಾದ ಸಂಪತ್ತು ಎನ್ನುವುದು ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಎಲ್ಲರಿಗೂ ಅರಿವಾಗಿದೆ. ಇತರೆ ಜ್ವರಗಳ ವೈರಸ್ ನಂತೆಯೇ ಕೊರೊನಾ ವೈರಸ್ ಸಹ. ಅನಾವಶ್ಯಕ ಭಯಕ್ಕೆ ಒಳಗಾಗಬಾರದು. ಯಾವುದೇ ವೈರಸ್ ಸೋಂಕಿಗೆ ಒಳಗಾಗದೇ ಇರಲು ಪೋಷಕಾಂಶ ಯುಕ್ತ ಆಹಾರ, ಬಿಸಿ ನೀರು ಸೇವನೆಗಿಂತಲು ದೊಡ್ಡ ಔಷಧಿ ಬೇರೆ ಯಾವುದೂ ಇಲ್ಲ. ಜನವರಿ ತಿಂಗಳಿಂದ ಈಚಿನ ಅಂಕಿ ಅಂಶಗಳನ್ನು ಗಮನಿಸಿದರೆ ಕ್ಯಾನ್ಸರ್, ಕಿಡ್ನಿ ವೈಪಲ್ಯ, ಹೃದಯಾಘಾತಗಳಿಂದ ಮೃತಪಟ್ಟರ ಸಂಖ್ಯೆಯೇ ಹೆಚ್ಚಾಗಿದೆಯೇ ವಿನಹ ಕೊರೊನಾ ವೈರಸ್ ಸೋಂಕಿನ ಜ್ವರದಿಂದಲೇ ಮೃತಪಟ್ಟಿರುವವರ ಸಂಖ್ಯೆ ಕಡಿಮೆಯಾಗಿದೆ ಎಂದರು.   

ಪರಿಸರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥರೆಡ್ಡಿ ಮಾತನಾಡಿ, ನುಗ್ಗೆ ಸಸಿಗಳನ್ನು ನೆಡುವ ಬಗ್ಗೆ ಜನರಲ್ಲಿ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಪ್ರತಿಯೊಬ್ಬರ ಮನೆ ಮುಂದೆ ಒಂದು ನುಗ್ಗೆ ಮರ ಬೆಳೆಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಕಾರ್ಯಕ್ರಮ ರೂಪಿಸಲಾಗುತ್ತಿದೆ. ರಸ್ತೆ ಬದಿಗಳಲ್ಲಿ ಸಸಿ ನೆಡುವುದಕ್ಕೆ ಚಾಲನೆ ನೀಡಿ, ಬಡಾವಣೆಯಲ್ಲಿ ವಿವಿಧ ಜಾತಿಯ ಗಿಡಗಳನ್ನು ಹಾಕಿ ಹಸಿರೀಕರಣ ಮಾಡಲು ಕಾರ್ಯೋನ್ಮುಖರಾಗಿದ್ದೇವೆ  ಎಂದರು. 

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಕೆ.ಬಿ.ಮುದ್ದಪ್ಪ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ವಡ್ಡರಹಳ್ಳಿ ರವಿ, ಐಟಿ ಎಂಜಿನಿಯರ್ ಜಿ.ರಾಜಶೇಖರ್,ಪತ್ರಕರ್ತರಾದ ಎನ್.ಎಂ.ನಟರಾಜ್, ಶ್ರೀಕಾಂತ್,ಎಂ.ಎ.ಪ್ರಕಾಶ್ ಬಡಾವಣೆಯ ನಿವಾಸಿಗಳಾದ ಭಾಸ್ಕರ್, ರಾಜು, ಶಂಕರ್, ಹರೀಶ್,ಸುಭದ್ರಾಬಾಯಿ, ವೆಂಕೋಬರಾವ್, ದಾಮೋದರರೆಡ್ಡಿ, ಮಧುಮತಿ, ಅನುಸೂಯ,ಗಿರೀಶ್, ಸುಷ್ಮಾ, ಚಂಪಾ  ಹಿರೇಮಠ, ಸೋಮೇಶ್ವರ ಬಡಾವಣೆಯ ವಾಯು ವಿಹಾರಿಗಳ 26 ಬ್ಯಾಚ್ನ ಗದುಗಯ್ಯ, ಸಿ.ರಾಮಯ್ಯ, ಗಂಗಯ್ಯ, ಶಂಕರಚಾರ್,ಗೋಪಾಲ್, ಆಶಿಶ್ಜೈನ್, ಮಂಜುನಾಥ್ ನಾಗ್ ಇದ್ದರು.

ರಾಜಕೀಯ

ಜೆಡಿಎಸ್‌ ಜಿಲ್ಲಾಧ್ಯಕ್ಷರ ಬದಲಿಗೆ ಚಿಂತನೆ: ಕೃಷ್ಣಾರೆಡ್ಡಿ

ಜೆಡಿಎಸ್‌ ಜಿಲ್ಲಾಧ್ಯಕ್ಷರ ಬದಲಿಗೆ ಚಿಂತನೆ: ಕೃಷ್ಣಾರೆಡ್ಡಿ

ಜೆಡಿಎಸ್ (JDS) ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲಾಧ್ಯಕ್ಷರನ್ನು ಬದಲಿಸುವ ಚಿಂತನೆ ನಡೆದಿದೆ ಎಂದು ಜೆಡಿಎಸ್ ಪ್ರಮುಖರ ಸಮಿತಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ ತಿಳಿಸಿದರು.

[ccc_my_favorite_select_button post_id="117015"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!