ಮನೆಗೊಂದು ನುಗ್ಗೆ ಮರ ಇದ್ದರೆ ಇಡೀ ಕುಟುಂಬದ ಆರೋಗ್ಯಕ್ಕೆ ಸಹಕಾರಿ – ಸಿ.ಎಸ್.ಕರೀಗೌಡ

ದೊಡ್ಡಬಳ್ಳಾಪುರ: ಇಲ್ಲಿನ ಕೈಗಾರಿಕಾ ಪ್ರದೇಶದ ಗಾರ್ಮೆಂಟ್ಸ್ಗಳಲ್ಲಿ ಕೆಲಸ ಮಾಡುವ ಮಹಿಳೆಯರ ಆರೋಗ್ಯ ತಪಾಸಣೆ ನಡೆಸಿದಾಗ ಶೇ25ರಷ್ಟು ಮಹಿಳೆಯರಲ್ಲಿ ರಕ್ತ ಹೀನತೆ, ಕಬ್ಬಣದ ಅಂಶದ ಕೊರತೆ, ಸಕ್ಕರೆ ಕಾಯಿಲೆ  ಇರುವುದು ಕಂಡು ಬಂದಿದೆ. ಈ ಎಲ್ಲಾ ಕೊರತೆಗಳನ್ನು ಹೊಗಲಾಡಿಸುವ ಶಕ್ತಿ ನುಗ್ಗೆ ಸೊಪ್ಪು, ಕಾಯಿಗಳಿಗೆ ಇದೆ ಎಂದು ಕೃಷಿ ಮಾರುಕಟ್ಟೆ ನಿರ್ದೇಶಕ ಸಿ.ಎಸ್.ಕರೀಗೌಡ ಹೇಳಿದರು. 

ಅವರು, ನಗರದ ಬೆಸೆಂಟ್ ಪಾರ್ಕ್ ರಸ್ತೆಯ ಎಂ.ಎ.ಪ್ರಕಾಶ್ ಬಡಾವಣೆಯಲ್ಲಿ ಪರಿಸರ ಸಿರಿ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಮನೆಗೊಂದು ನುಗ್ಗೆ ಮನೆತುಂಬಾ ಆರೋಗ್ಯ ಕಾರ್ಯಕ್ರಮದಡಿ ಬಡಾವಣೆಯ ಮನೆಗಳ ಮುಂದೆ ನುಗ್ಗೆ ಸಸಿಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ನುಗ್ಗೆ ಕಾಯಿ ಹಾಗೂ ಸೊಪ್ಪಿನಲ್ಲಿ ಕಬ್ಬಣದ ಅಂಶ  ಹೇರಳವಾಗಿದೆ. ಉತ್ತಮ ಪೋಷಕಾಂಶ ನೀಡುತ್ತದೆ. ಆದರೆ ಮನೆಗಳ ಮುಂದೆ ನುಗ್ಗೆ ಮರ ಹಾಕುವುದು ತಪ್ಪು ಎನ್ನುವ ಮೂಢನಂಬಿಕೆಯಿಂದ ಹೊರಬರಬೇಕಿದೆ. ಪೌಷ್ಟಿಕಾಂಶ ಆಹಾರ ಎಲ್ಲರಿಗೂ ಬೇಕಾಗಿದ್ದು, ಅದರಲ್ಲೂ ಮಹಿಳೆಯರಿಗೆ ಹೆಚ್ಚಿನ ಅಗತ್ಯವಿದೆ. ನುಗ್ಗೆ ಸೊಪ್ಪಿಂದ ಮಹಿಳೆಯರಿಗೆ ಬರುವ  ಕಾಯಿಲೆಗಳಿಗೆ ರಾಮಬಾಣ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಮನೆಗೊಂದು ನುಗ್ಗೆ ಮರ ಮನೆ ತುಂಬಾ ಆರೋಗ್ಯ ಜನಾಂದೋಲನವಾಗಿ ರೂಪುಗೊಳ್ಳಬೇಕು ಎಂದರು. 

ಮನೆಯಲ್ಲಿ ಮಹಿಳೆಯರು ಆರೋಗ್ಯವಾಗಿದ್ದರೆ ಮಾತ್ರ ಇಡೀ ಕುಟುಂಬ ಆರೋಗ್ಯವಾಗಿರಲು ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ. ಆರೋಗ್ಯವಂತ ಪ್ರಜೆಗಳೆ ದೇಶದ ನಿಜವಾದ ಸಂಪತ್ತು ಎನ್ನುವುದು ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಎಲ್ಲರಿಗೂ ಅರಿವಾಗಿದೆ. ಇತರೆ ಜ್ವರಗಳ ವೈರಸ್ ನಂತೆಯೇ ಕೊರೊನಾ ವೈರಸ್ ಸಹ. ಅನಾವಶ್ಯಕ ಭಯಕ್ಕೆ ಒಳಗಾಗಬಾರದು. ಯಾವುದೇ ವೈರಸ್ ಸೋಂಕಿಗೆ ಒಳಗಾಗದೇ ಇರಲು ಪೋಷಕಾಂಶ ಯುಕ್ತ ಆಹಾರ, ಬಿಸಿ ನೀರು ಸೇವನೆಗಿಂತಲು ದೊಡ್ಡ ಔಷಧಿ ಬೇರೆ ಯಾವುದೂ ಇಲ್ಲ. ಜನವರಿ ತಿಂಗಳಿಂದ ಈಚಿನ ಅಂಕಿ ಅಂಶಗಳನ್ನು ಗಮನಿಸಿದರೆ ಕ್ಯಾನ್ಸರ್, ಕಿಡ್ನಿ ವೈಪಲ್ಯ, ಹೃದಯಾಘಾತಗಳಿಂದ ಮೃತಪಟ್ಟರ ಸಂಖ್ಯೆಯೇ ಹೆಚ್ಚಾಗಿದೆಯೇ ವಿನಹ ಕೊರೊನಾ ವೈರಸ್ ಸೋಂಕಿನ ಜ್ವರದಿಂದಲೇ ಮೃತಪಟ್ಟಿರುವವರ ಸಂಖ್ಯೆ ಕಡಿಮೆಯಾಗಿದೆ ಎಂದರು.   

ಪರಿಸರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥರೆಡ್ಡಿ ಮಾತನಾಡಿ, ನುಗ್ಗೆ ಸಸಿಗಳನ್ನು ನೆಡುವ ಬಗ್ಗೆ ಜನರಲ್ಲಿ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಪ್ರತಿಯೊಬ್ಬರ ಮನೆ ಮುಂದೆ ಒಂದು ನುಗ್ಗೆ ಮರ ಬೆಳೆಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಕಾರ್ಯಕ್ರಮ ರೂಪಿಸಲಾಗುತ್ತಿದೆ. ರಸ್ತೆ ಬದಿಗಳಲ್ಲಿ ಸಸಿ ನೆಡುವುದಕ್ಕೆ ಚಾಲನೆ ನೀಡಿ, ಬಡಾವಣೆಯಲ್ಲಿ ವಿವಿಧ ಜಾತಿಯ ಗಿಡಗಳನ್ನು ಹಾಕಿ ಹಸಿರೀಕರಣ ಮಾಡಲು ಕಾರ್ಯೋನ್ಮುಖರಾಗಿದ್ದೇವೆ  ಎಂದರು. 

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಕೆ.ಬಿ.ಮುದ್ದಪ್ಪ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ವಡ್ಡರಹಳ್ಳಿ ರವಿ, ಐಟಿ ಎಂಜಿನಿಯರ್ ಜಿ.ರಾಜಶೇಖರ್,ಪತ್ರಕರ್ತರಾದ ಎನ್.ಎಂ.ನಟರಾಜ್, ಶ್ರೀಕಾಂತ್,ಎಂ.ಎ.ಪ್ರಕಾಶ್ ಬಡಾವಣೆಯ ನಿವಾಸಿಗಳಾದ ಭಾಸ್ಕರ್, ರಾಜು, ಶಂಕರ್, ಹರೀಶ್,ಸುಭದ್ರಾಬಾಯಿ, ವೆಂಕೋಬರಾವ್, ದಾಮೋದರರೆಡ್ಡಿ, ಮಧುಮತಿ, ಅನುಸೂಯ,ಗಿರೀಶ್, ಸುಷ್ಮಾ, ಚಂಪಾ  ಹಿರೇಮಠ, ಸೋಮೇಶ್ವರ ಬಡಾವಣೆಯ ವಾಯು ವಿಹಾರಿಗಳ 26 ಬ್ಯಾಚ್ನ ಗದುಗಯ್ಯ, ಸಿ.ರಾಮಯ್ಯ, ಗಂಗಯ್ಯ, ಶಂಕರಚಾರ್,ಗೋಪಾಲ್, ಆಶಿಶ್ಜೈನ್, ಮಂಜುನಾಥ್ ನಾಗ್ ಇದ್ದರು.

ರಾಜಕೀಯ

ಸೋನಮ್ ವಾಂಗ್ಚುಕ್ ಬಂಧನ ರದ್ದು

ಸೋನಮ್ ವಾಂಗ್ಚುಕ್ ಬಂಧನ ರದ್ದು

6 ತಿಂಗಳ ನಂತರ ಸೋನಮ್ ವಾಂಗ್ಚುಕ್ (Sonam Wangchuk) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಧನ ರದ್ದುಗೊಳಿಸಿದೆ.

[ccc_my_favorite_select_button post_id="120204"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!