ಮನೆಗೊಂದು ನುಗ್ಗೆ ಮರ ಇದ್ದರೆ ಇಡೀ ಕುಟುಂಬದ ಆರೋಗ್ಯಕ್ಕೆ ಸಹಕಾರಿ – ಸಿ.ಎಸ್.ಕರೀಗೌಡ

ದೊಡ್ಡಬಳ್ಳಾಪುರ: ಇಲ್ಲಿನ ಕೈಗಾರಿಕಾ ಪ್ರದೇಶದ ಗಾರ್ಮೆಂಟ್ಸ್ಗಳಲ್ಲಿ ಕೆಲಸ ಮಾಡುವ ಮಹಿಳೆಯರ ಆರೋಗ್ಯ ತಪಾಸಣೆ ನಡೆಸಿದಾಗ ಶೇ25ರಷ್ಟು ಮಹಿಳೆಯರಲ್ಲಿ ರಕ್ತ ಹೀನತೆ, ಕಬ್ಬಣದ ಅಂಶದ ಕೊರತೆ, ಸಕ್ಕರೆ ಕಾಯಿಲೆ  ಇರುವುದು ಕಂಡು ಬಂದಿದೆ. ಈ ಎಲ್ಲಾ ಕೊರತೆಗಳನ್ನು ಹೊಗಲಾಡಿಸುವ ಶಕ್ತಿ ನುಗ್ಗೆ ಸೊಪ್ಪು, ಕಾಯಿಗಳಿಗೆ ಇದೆ ಎಂದು ಕೃಷಿ ಮಾರುಕಟ್ಟೆ ನಿರ್ದೇಶಕ ಸಿ.ಎಸ್.ಕರೀಗೌಡ ಹೇಳಿದರು. 

ಅವರು, ನಗರದ ಬೆಸೆಂಟ್ ಪಾರ್ಕ್ ರಸ್ತೆಯ ಎಂ.ಎ.ಪ್ರಕಾಶ್ ಬಡಾವಣೆಯಲ್ಲಿ ಪರಿಸರ ಸಿರಿ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಮನೆಗೊಂದು ನುಗ್ಗೆ ಮನೆತುಂಬಾ ಆರೋಗ್ಯ ಕಾರ್ಯಕ್ರಮದಡಿ ಬಡಾವಣೆಯ ಮನೆಗಳ ಮುಂದೆ ನುಗ್ಗೆ ಸಸಿಗಳನ್ನು ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ನುಗ್ಗೆ ಕಾಯಿ ಹಾಗೂ ಸೊಪ್ಪಿನಲ್ಲಿ ಕಬ್ಬಣದ ಅಂಶ  ಹೇರಳವಾಗಿದೆ. ಉತ್ತಮ ಪೋಷಕಾಂಶ ನೀಡುತ್ತದೆ. ಆದರೆ ಮನೆಗಳ ಮುಂದೆ ನುಗ್ಗೆ ಮರ ಹಾಕುವುದು ತಪ್ಪು ಎನ್ನುವ ಮೂಢನಂಬಿಕೆಯಿಂದ ಹೊರಬರಬೇಕಿದೆ. ಪೌಷ್ಟಿಕಾಂಶ ಆಹಾರ ಎಲ್ಲರಿಗೂ ಬೇಕಾಗಿದ್ದು, ಅದರಲ್ಲೂ ಮಹಿಳೆಯರಿಗೆ ಹೆಚ್ಚಿನ ಅಗತ್ಯವಿದೆ. ನುಗ್ಗೆ ಸೊಪ್ಪಿಂದ ಮಹಿಳೆಯರಿಗೆ ಬರುವ  ಕಾಯಿಲೆಗಳಿಗೆ ರಾಮಬಾಣ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಮನೆಗೊಂದು ನುಗ್ಗೆ ಮರ ಮನೆ ತುಂಬಾ ಆರೋಗ್ಯ ಜನಾಂದೋಲನವಾಗಿ ರೂಪುಗೊಳ್ಳಬೇಕು ಎಂದರು. 

ಮನೆಯಲ್ಲಿ ಮಹಿಳೆಯರು ಆರೋಗ್ಯವಾಗಿದ್ದರೆ ಮಾತ್ರ ಇಡೀ ಕುಟುಂಬ ಆರೋಗ್ಯವಾಗಿರಲು ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ. ಆರೋಗ್ಯವಂತ ಪ್ರಜೆಗಳೆ ದೇಶದ ನಿಜವಾದ ಸಂಪತ್ತು ಎನ್ನುವುದು ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಎಲ್ಲರಿಗೂ ಅರಿವಾಗಿದೆ. ಇತರೆ ಜ್ವರಗಳ ವೈರಸ್ ನಂತೆಯೇ ಕೊರೊನಾ ವೈರಸ್ ಸಹ. ಅನಾವಶ್ಯಕ ಭಯಕ್ಕೆ ಒಳಗಾಗಬಾರದು. ಯಾವುದೇ ವೈರಸ್ ಸೋಂಕಿಗೆ ಒಳಗಾಗದೇ ಇರಲು ಪೋಷಕಾಂಶ ಯುಕ್ತ ಆಹಾರ, ಬಿಸಿ ನೀರು ಸೇವನೆಗಿಂತಲು ದೊಡ್ಡ ಔಷಧಿ ಬೇರೆ ಯಾವುದೂ ಇಲ್ಲ. ಜನವರಿ ತಿಂಗಳಿಂದ ಈಚಿನ ಅಂಕಿ ಅಂಶಗಳನ್ನು ಗಮನಿಸಿದರೆ ಕ್ಯಾನ್ಸರ್, ಕಿಡ್ನಿ ವೈಪಲ್ಯ, ಹೃದಯಾಘಾತಗಳಿಂದ ಮೃತಪಟ್ಟರ ಸಂಖ್ಯೆಯೇ ಹೆಚ್ಚಾಗಿದೆಯೇ ವಿನಹ ಕೊರೊನಾ ವೈರಸ್ ಸೋಂಕಿನ ಜ್ವರದಿಂದಲೇ ಮೃತಪಟ್ಟಿರುವವರ ಸಂಖ್ಯೆ ಕಡಿಮೆಯಾಗಿದೆ ಎಂದರು.   

ಪರಿಸರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥರೆಡ್ಡಿ ಮಾತನಾಡಿ, ನುಗ್ಗೆ ಸಸಿಗಳನ್ನು ನೆಡುವ ಬಗ್ಗೆ ಜನರಲ್ಲಿ ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಪ್ರತಿಯೊಬ್ಬರ ಮನೆ ಮುಂದೆ ಒಂದು ನುಗ್ಗೆ ಮರ ಬೆಳೆಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ಕಾರ್ಯಕ್ರಮ ರೂಪಿಸಲಾಗುತ್ತಿದೆ. ರಸ್ತೆ ಬದಿಗಳಲ್ಲಿ ಸಸಿ ನೆಡುವುದಕ್ಕೆ ಚಾಲನೆ ನೀಡಿ, ಬಡಾವಣೆಯಲ್ಲಿ ವಿವಿಧ ಜಾತಿಯ ಗಿಡಗಳನ್ನು ಹಾಕಿ ಹಸಿರೀಕರಣ ಮಾಡಲು ಕಾರ್ಯೋನ್ಮುಖರಾಗಿದ್ದೇವೆ  ಎಂದರು. 

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಕೆ.ಬಿ.ಮುದ್ದಪ್ಪ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ವಡ್ಡರಹಳ್ಳಿ ರವಿ, ಐಟಿ ಎಂಜಿನಿಯರ್ ಜಿ.ರಾಜಶೇಖರ್,ಪತ್ರಕರ್ತರಾದ ಎನ್.ಎಂ.ನಟರಾಜ್, ಶ್ರೀಕಾಂತ್,ಎಂ.ಎ.ಪ್ರಕಾಶ್ ಬಡಾವಣೆಯ ನಿವಾಸಿಗಳಾದ ಭಾಸ್ಕರ್, ರಾಜು, ಶಂಕರ್, ಹರೀಶ್,ಸುಭದ್ರಾಬಾಯಿ, ವೆಂಕೋಬರಾವ್, ದಾಮೋದರರೆಡ್ಡಿ, ಮಧುಮತಿ, ಅನುಸೂಯ,ಗಿರೀಶ್, ಸುಷ್ಮಾ, ಚಂಪಾ  ಹಿರೇಮಠ, ಸೋಮೇಶ್ವರ ಬಡಾವಣೆಯ ವಾಯು ವಿಹಾರಿಗಳ 26 ಬ್ಯಾಚ್ನ ಗದುಗಯ್ಯ, ಸಿ.ರಾಮಯ್ಯ, ಗಂಗಯ್ಯ, ಶಂಕರಚಾರ್,ಗೋಪಾಲ್, ಆಶಿಶ್ಜೈನ್, ಮಂಜುನಾಥ್ ನಾಗ್ ಇದ್ದರು.

ರಾಜಕೀಯ

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ಬೆಳಗಾವಿ: ಬಿಬಿಎಂಪಿ (BBMP) ತ್ಯಾಜವಿಲೇವಾರಿ ಘಟಕದಿಂದ ದೊಡ್ಡಬಳ್ಳಾಪುರ ತಾಲೂಕಿನ ಜನತೆ ನೆಮ್ಮದಿ ಕಳೆದುಕೊಂಡಿರುವ ಬೆನ್ನಲ್ಲೇ, ಗುಂಡ್ಲಹಳ್ಳಿ ಸಮೀಪ 134.10 ಎಕರೆ ಜಮೀನಿನಲ್ಲಿ ಮತ್ತೆ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ (Terraforma Waste Disposal Unit)

[ccc_my_favorite_select_button post_id="117199"]
23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ (H.K. Patil) ಹೇಳಿದರು.

[ccc_my_favorite_select_button post_id="117203"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

"ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="117115"]
ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿ 3 ಕಡೆ ಮಾಂಗಲ್ಯ ಸರ ಕಳವು

ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು

ಕೆಲ ದಿನಗಳಿಂದ ಸದ್ದಡಗಿದ್ದ ಸರ ಕಳ್ಳರ ಹಾವಳಿ ತಾಲೂಕಿನಲ್ಲಿನ ಮತ್ತೆ ಕೇಳಿ ಬಂದಿದ್ದು, 24 ಗಂಟೆ ಅವಧಿಯಲ್ಲಿ ದೊಡ್ಡಬಳ್ಳಾಪುರದ ಎರಡು ಕಡೆ ಮಾಂಗಲ್ಯ ಸರ (Mangalya chain) ಕಳ್ಳತನ (Theft) ನಡೆದಿರುವುದು ವರದಿಯಾಗಿದೆ.

[ccc_my_favorite_select_button post_id="117099"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ನಾಳೆ ‘ದಿ ಡೆವಿಲ್’ ಸಿನಿಮಾ ಬಿಡುಗಡೆ; ಅಭಿಮಾನಿಗಳಿಗೆ ದರ್ಶನ್ ಭಾವನಾತ್ಮಕ ಸಂದೇಶ

ನಾಳೆ ‘ದಿ ಡೆವಿಲ್’ ಸಿನಿಮಾ ಬಿಡುಗಡೆ; ಅಭಿಮಾನಿಗಳಿಗೆ ದರ್ಶನ್ ಭಾವನಾತ್ಮಕ ಸಂದೇಶ

ಅಭಿಮಾನಿಗಳ ದಾಸ, ಚಾಲೆಂಜಿಗ್ ಸ್ಟಾರ್ ದರ್ಶನ್ (Darshan) ಅಭಿನಯದ, ಪ್ರಕಾಶ್ ವೀರ್ ನಿರ್ದೇಶನದ ''ದಿ ಡೆವಿಲ್' (The Devil) ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ.

[ccc_my_favorite_select_button post_id="117206"]
error: Content is protected !!