ಲಾಕ್‌ಡೌನ್ ಮೊದಲ ದಿನ ದೊಡ್ಡಬಳ್ಳಾಪುರಕ್ಕೆ ತುಸು ನೆಮ್ಮದಿ / ಸಾರ್ವಜನಿಕರಿಗೆ ಗೊಂದಲ ಉಂಟುಮಾಡಿದ ಲಾಕ್‌ಡೌನ್..!

ದೊಡ್ಡಬಳ್ಳಾಪುರ: ಒಂದು ವಾರದ
ಲಾಕ್ಡೌನ್
ಮೊದಲ ದಿನವೇ ಕರೊನಾದಿಂದ
ತಾಲೂಕಿಗೆ ತುಸು ನೆಮ್ಮದಿ
ದೊರೆತಿದ್ದು,ಇಂದು ತಾಲೂಕು
ಆಡಳಿತ ಬಿಡುಗಡೆ ಮಾಡಿದ
ಬುಲೆಟಿನ್ ಅಲ್ಲಿ ಯವುದೇ
ಕರೊನಾ ಪ್ರಕರಣಗಳು ದೃಢಪಟ್ಟಿಲ್ಲ.

ಇಲ್ಲಿಯ ವರೆಗೆ ತಾಲೂಕಿನಲ್ಲಿ
89 ಕರೊನಾ ಪ್ರಕರಣಗಳು
ಪತ್ತೆಯಾಗಿದ್ದು,ನಾಲ್ಕು ಮಂದಿ
ಮೃತ ಪಟ್ಟಿದ್ದರೆ,ಆರು
ಮಂದಿ ಗುಣಮುಖರಾಗಿ ಮನೆಗೆ
ಮರಳಿದ್ದಾರೆ.

ಸೋಂಕುಗೆ ಒಳಗಾದ 17
ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್
ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 62ಮಂದಿಯನ್ನು
ದೇವನಹಳ್ಳಿ/ಹಜ್ ಭವನ/ಖಾಸಗಿ ಆಸ್ಪತ್ರೆ/
ಹೊಂ ಹೈಸೋಲೇಷನ್ ಅಲ್ಲಿಟ್ಟು
ಚಿಕಿತ್ಸೆ ನೀಡಲಾಗುತ್ತಿದೆ.

ಸಾರ್ವಜನಿಕರಿಗೆ ಗೊಂದಲ ಉಂಟುಮಾಡಿದ
ಲಾಕ್ಡೌನ್
..?

ಕೊವಿಡ್19 ಪ್ರಕರಣಗಳು
ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ
ಸರ್ಕಾರದ ಆದೇಶದಂತೆ ಜುಲೈ
22 ರವರೆಗೆ ಲಾಕ್ಡೌನ್ ಜಾರಿಗೊಳಿಸಿರುವ
ಹಿನ್ನಲೆಯಲ್ಲಿ ತಾಲೂಕಿನಲ್ಲಿ ಲಾಕ್ಡೌನ್ ಘೋಷಿಸಲಾಗಿದ್ದು,ಮೊದಲ ದಿನ
ನಗರದಲ್ಲಿ ಮಾತ್ರ ಬಹುತೇಕ
ಯಶಸ್ವಿಯಾಗಿದೆ.ಆದರೆ ಇನ್ನೊಂದೆಡೆ,
ಬ್ಯಾಂಕ್ಗಳು,
ಕಚೇರಿಗಳು, ಕೈಗಾರಿಕಾ ಪ್ರದೇಶದ
ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದರಿಂದ ಜನರಿಗೆ ಗೊಂದಲವಾಗಿತ್ತು.

ಬುಧವಾರ ಬೆಳಿಗ್ಗೆ5 ಮಧ್ಯಾಹ್ನ
12ರವರೆಗೆ ಮಾತ್ರ ಅಗತ್ಯ
ವಸ್ತುಗಳನ್ನು ಕೊಳ್ಳಲು ಅವಕಾಶ
ಕಲ್ಪಿಸಲಾಗಿತ್ತು. ಮಧ್ಯಾಹ್ನದ ನಂತರ
ನಗರ ಸ್ಥಬ್ದಗೊಂಡಿತ್ತು. ವೈದ್ಯಕೀಯ,
ದಿನಸಿ ಹಾಗೂ ತುರ್ತು
ಸೇವೆಗಳಿಗೆ ವಿನಾಯಿತಿ ನೀಡಲಾಗಿತ್ತು.
ಮದ್ಯದ ಅಂಗಡಿ, ದೇವಾಲಯ,
ಉದ್ಯಾನವನಗಳು, ಮಸೀದಿ, ಚರ್ಚ್,
ಶಾಪಿಂಗ್ ಮಾಲ್ಗಳು ಮುಚ್ಚಿದ್ದವು.
ತಾಲೂಕಿನ ಪ್ರಸಿದ್ಧ ಘಾಟಿ
ಸುಬ್ರಹ್ಮಣ್ಯ ದೇವಾಲಯ ಸೇರಿದಂತೆ
ಪ್ರಮುಖ ದೇವಾಲಯಗಳು ಲಾಕ್ಡೌನ್ ಹಿನ್ನಲೆಯಲ್ಲಿ
ಮುಚ್ಚಲಾಗಿತ್ತು. ರಾಜ್ಯ ಸಾರಿಗೆ
ಬಸ್ಗಳು,
ಆಟೋ, ಟ್ಯಾಕ್ಸಿ ಮೊದಲಾದ
ವಾಹನಗಳ ಸಂಚಾರ ಸ್ಥಗಿತಗೊಂಡಿದ್ದವು.
ಹೋಟೆಲ್ಗಳಲ್ಲಿ
ಸರಬರಾಜಿಗೆ ಮಾತ್ರ ಅವಕಾಶ
ಕಲ್ಪಿಸಲಾಗಿತ್ತು. ಬ್ಯಾಂಕ್ಗಳು ಹಾಗೂ ಸರ್ಕಾರಿ
ಕಚೇರಿಗಳು ಎಂದಿನಂತೆ ಕಾರ್ ನಿರ್ವಹಿಸಿ,
ಮಧ್ಯಾಹ್ನದವರೆಗೆ ಮಾತ್ರ ಸಾರ್ವಜನಿಕರ
ಭೇಟಿಗೆ ಅವಕಾಶ ನೀಡಲಾಗಿತ್ತು.
ಕಚೇರಿ ಸಮಯದಲ್ಲಿ ಸಾರ್ವಜನಿಕರು
ಪೊಲೀಸರು ಗಸ್ತು ತಿರುಗುವ
ಮೂಲಕ ಅನಗತ್ಯವಾಗಿ ಸಂಚರಿಸುವ
ವಾಹನಗಳನ್ನು ವಶಕ್ಕೆ ಪಡೆದು,
ಎಚ್ಚರಿಕೆ ನೀಡಲಾಗುತ್ತಿದ್ದ ದೃಶ್ಯಗಳು
ಕಂಡುಬಂದವು. ನಗರದ ಹೊರವಲಯಗಳಲ್ಲಿ
ವಾಹನಗಳನ್ನು ತಪಾಸಣೆ ಮಾಡಲಾಗುತ್ತಿತ್ತು.
ಕೈಗಾರಿಕಾ ಪ್ರದೇಶದಲ್ಲಿ ಹಲವಾರು
ಕಾರ್ಖಾನೆಗಳು ಕಾರ್ ನಿರ್ವಹಿಸಿದ್ದರಿಂದ
ಬೆಳಗಿನಿಂದಲೇ ಕಾರ್ಮಿಕರು ಆಟೋಗಳಲ್ಲಿ  ಕಾರ್ಖಾನೆಗೆ
ತೆರಳಿ ಸಂಜೆ ಹಿಂತಿರುಗಿದರು.
ನಗರದಲ್ಲಿ ಲಾಕ್ಡೌನ್ನಿಂದ ನೇಕಾರಿಕೆ
ಇನ್ನೂ ಚೇತರಿಸಿಕೊಂಡಿರದೇ ಇರುವುದರಿಂದ
ಅಲ್ಲೊಂದು ಇಲ್ಲೊಂದು ಮಗ್ಗಗಳು
ಸದ್ದು ಮಾಡುತ್ತಿದ್ದವು.

ಚೆಕ್
ಪೋಸ್ಟ್ಲಾಕ್ಡೌನ್
ಹಿನ್ನೆಲೆಯಲ್ಲಿ ಅನ್ಯ ರಾಜ್ಯದ
ವಾಹನಗಳಿಗೆ ಕಡಿವಾಣ ಹಾಕಲು
ತಾಲೂಕು ಆಡಳಿತ ವತಿಯಿಂದ
ಗುಂಜೂರು ಹಾಗೂ ಆರೂಢಿಯಲ್ಲಿ
ಚೆಕ್ ಪೋಸ್ಟ್ ಸ್ಥಾಪಿಸಿ
ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.ಲಾಕ್ಡೌನ್ ಕಟ್ಟುನಿಟ್ಟಾಗಿ
ಪಾಲನೆಯಾಗುವಂತೆ ನೋಡಿಕೊಳ್ಳಲು ಅಗತ್ಯ
ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಇದಕ್ಕೆ
ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ
ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್
ತಿಳಿಸಿದ್ದಾರೆ.

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!