ಜಿಲ್ಲಾ ಆರೋಗ್ಯ ಇಲಾಖೆಯ ಕರೊನಾ ಮಾಹಿತಿ ಗೊಂದಲ,ಗಣ್ಯರ ಆಕ್ಷೇಪ..!

ಹರಿತಲೇಖನಿ ದೊಡ್ಡಬಳ್ಳಾಪುರ: ದಿನೇ ದಿನೇ ಉಲ್ಬಣಗೊಳ್ಳುತ್ತಿರುವ ಕರೊನಾ ಸೋಂಕಿನ ಮಾಹಿತಿ ನೀಡುವಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಮುಚ್ಚಿಟ್ಟು, ಗೊಂದಲ ಮೂಡಿಸುತ್ತಿದೆ ಎಂದು ತಾಲೂಕಿನ ಗಣ್ಯರು ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 40 ಕರೊನಾ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದರೆ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆಮಾಡಿರುವ ವರದಿಯಲ್ಲಿ ಕೇವಲ ಮೂರು ಪ್ರಕರಣಗಳೆಂದು ನಮೂದಾಗಿರುವುದಕ್ಕೆ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು,ಸರಕಾರಕ್ಕೆ ಮಾಹಿತಿ ನೀಡುವಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಅಸಡ್ಡೆ ತೋರುತ್ತಿದ್ದಾರೆಂದು ಕಿಡಿಕಾರಿದ್ದಾರೆ.

ಡಿಹೆಚ್‌ಒ ವಿರುದ್ದ ಜಿಲ್ಲಾಧಿಕಾರಿಗಳಿಗೆ ಹಾಗೂ ಉಸ್ತುವಾರಿ ಸಚಿವರಿಗೆ ದೂರು: ಕನ್ಯಾಕುಮಾರಿ ಶ್ರೀನಿವಾಸ್

ಈ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಕನ್ಯಾಕುಮಾರಿ ಶ್ರೀನಿವಾಸ್,ಕರೊನಾ ಸೋಂಕಿನ ಕುರಿತು ರಾಜ್ಯ ಸರ್ಕಾರಕ್ಕೆ ಸಮರ್ಪಕ ವರದಿ ನೀಡುವಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು ಬೇಜವಬ್ದಾರಿ ತೋರುತ್ತಿದ್ದಾರೆ.ಸೂಕ್ತ ವರದಿಯನ್ನು ಸರ್ಕಾರಕ್ಕೆ ನೀಡದಿದ್ದರೆ ತಾಲೂಕಿನಲ್ಲಿ ಹೆಚ್ಚುತ್ತಿರುವ ಕರೊನಾ ನಿಯಂತ್ರಣಕ್ಕೆ ಸರಕಾರದ ಗಮನ ಸೆಳೆಯುವುದು ಅಸಾಧ್ಯ.ಈ ಕುರಿತು ಜಿಲ್ಲಾಧಿಕಾರಿಗಳಿಗೆ ಹಾಗೂ ಉಸ್ತುವಾರಿ ಸಚಿವರಿಗೆ ದೂರು ನೀಡಲಾಗುವುದೆಂದರು.

ವಾಸ್ತವ ವರದಿ ಸರ್ಕಾರಕ್ಕೆ ತಲುಪಿಸಿ: ಡಿ.ಸಿ.ಶಶಿಧರ್. 

ತಾಪಂ ಅಧ್ಯಕ್ಷ ಡಿ.ಸಿ.ಶಶಿಧರ್ ಮಾತನಾಡಿ,ಕರೊನಾ ಸೋಂಕು ತಾಲೂಕಿನಲ್ಲಿ ತೀವ್ರ ರೂಪ ಪಡೆಯುತ್ತಿದೆ.ಒಂದೆ ದಿನ ನಲವತ್ತು ಪ್ರಕರಣಗಳು ದೃಢಪಟ್ಟಿರುವುದರಿಂದ ಸಮಸ್ಯೆ ಮತ್ತಷ್ಟು ಆತಂಕವನ್ನು ತಂದೊಡ್ಡಿದೆ,ಆದರೆ ಸರಕಾರಕ್ಕೆ ಸಮರ್ಪಕ ಮಾಹಿತಿ ನೀಡಬೇಕಾದ ಜಿಲ್ಲಾ ಅರೋಗ್ಯ ಇಲಾಖೆ.ತಾಲೂಕು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದರು ತಲುಪಿಸದಿರುವುದು ಅನುಮಾನವನ್ನು ಉಂಟುಮಾಡಿದೆ.ಶಾಸಕ ಟಿ.ವೆಂಕಟರಮಣಯ್ಯರ ಕಾಳಜಿಯಿಂದ ತಾಲೂಕಿನ ಪ್ರತ್ಯೇಕ ಬುಲೆಟಿನ್ ನೀಡಲು ಸೂಚನೆ ನೀಡಿದ್ದರಿಂದ ವಾಸ್ತವ ಮಾಹಿತಿ ಜನತೆಗೆ ದೊರಕುತ್ತಿದೆ.ಆದರೆ,ಜಿಲ್ಲಾ ಆರೋಗ್ಯಾಧಿಕಾರಿಗಳು ಕರೊನಾ ನಿಯಂತ್ರಣಕ್ಕೆ ಸರಕಾರದಿಂದ ದೊರಕುವ ಸೌಲಭ್ಯ,ಸಲಹೆ ಪಡೆಯಲು ತಾಲೂಕಿನಲ್ಲಿ ಕರೊನಾ ಪ್ರಕರಣಗಳ ವಾಸ್ತವ ವರದಿಯನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.

ಸಮರ್ಪಕ ಮಾಹಿತಿ ಸರ್ಕಾರಕ್ಕೆ ತಲುಪದಿರುವ ಕಾರಣವೇನು: ತ.ನಾ.ಪ್ರಭುದೇವ್

ಕರೊನಾ ಸೋಂಕಿನ ವರದಿ ಸರ್ಕಾರಕ್ಕೆ ತಲುಪಿಸುವಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಎಡವಲು ಕಾರಣವೇ..? ವಾಸ್ತವ ಮಾಹಿತಿ ಸರಕಾರಕ್ಕೆ ತಲುಪದೇ ಕಡಿವಾಣ ಎಲ್ಲಿ ಆಗುತ್ತಿದೆ ಎಂಬುದನ್ನು ಜಿಲ್ಲಾಧಿಕಾರಿಗಳು ಕೂಡಲೆ ಗಮನಹರಿಸಬೇಕಿದೆ.ಜನತೆ ಕರೊನಾ ಸೋಂಕಿನ ಆತಂಕದಿಂದ ಬಸವಳಿಯುತ್ತಿದ್ದಾರೆ,ಆದರೆ ಸರ್ಕಾರಕ್ಕೆ ಮಾಹಿತಿ ನೀಡುವಲ್ಲಿ ಮರೆಮಾಚುತ್ತಿರುವುದೇಕೆ ಎಂದು ನಗರಸಭೆ ಮಾಜಿ ಅಧ್ಯಕ್ಷ ತ.ನ.ಪ್ರಭುದೇವ್ ಪ್ರಶ್ನಿಸಿದ್ದಾರೆ.

ಸರ್ಕಾರಕ್ಕೆ ಸುಳ್ಳುವರದಿ ಖಂಡನೀಯ: ಕಣಿವೇಪುರ ಸುನೀಲ್‌ಕುಮಾರ್

ಜಿಲ್ಲಾಡಳಿತ ಸರ್ಕಾರಕ್ಕೆ ಸುಳ್ಳುವರ್ದಿ ನೀಡುತ್ತಿದೆ ಎಂಬ ಆತಂಕ ಜನತೆಯನ್ನು ಕಾಡುತ್ತಿದೆ.ಸೂಕ್ತ ವರದಿ ನೀಡಿ ಕಾರೊನಾ ನಿಯಂತ್ರಣಕ್ಕೆ ಸರ್ಕಾರದ ನೆರವು ಪಡೆಯುವುದನ್ನು ಬಿಟ್ಟು ಈ ರೀತಿ ಮಾಹಿತಿ ಮುಚ್ಚಿಟ್ಟು ಕರೊನಾ ಪ್ರಕರಣದ ವರದಿ ದಿಕ್ಕುತಪ್ಪಿಸುತ್ತಿದೆ ಎಂದು ತಾಪಂ ಸದಸ್ಯ ಕಣಿವೇಪುರ ಸುನೀಲ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಗಂಭೀರ ಪ್ರಕರಣದಲ್ಲಿ ನಿರ್ಲಕ್ಷ್ಯ ಸಲ್ಲದು: ರಾಜಘಟ್ಟರವಿ

ಗಂಭೀರವಾದ ಪ್ರಕರಣಗಳನ್ನು ಸಮರ್ಪಕ ಕಾರ್ಯನಿರ್ವಹಿಸಬೇಕಾದ ಜಿಲ್ಲಾ ಆರೋಗ್ಯ ಇಲಾಖೆಯ ಬೇಜವಬ್ದಾರಿ ನಡೆ ಖಂಡನೀಯ.ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯನಿರ್ವಹಿಸಲು ಸಾಧ್ಯವಾಗದಿದ್ದರೆ ಜನರ ಜೀವದ ಜೊತೆ ಆಟವಾಡುವ ಬದಲು ಮನೆಯಲ್ಲಿರಲಿ,ಈ ಕೂಡಲೆ ವಾಸ್ತವ ವರದಿಯನ್ನು ಸರ್ಕಾರಕ್ಕೆ ತಲುಪಿಸಿ ಸೋಂಕು ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು ಇಲ್ಲವಾದಲ್ಲಿ ಹೋರಾಟಕ್ಕಿಳಿಯಬೇಕಾಗುತ್ತದೆ ಎಂದು ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ ಎಚ್ಚರಿಕೆ  ನೀಡಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ದೊಡ್ಡಬಳ್ಳಾಪುರದಲ್ಲಿ ನಾಳೆ ಸೋಮನಾಥ ಜ್ಯೋತಿರ್ಲಿಂಗ ದರ್ಶನ: 100 ದಂಪತಿಗಳಿಂದ ವಿಶೇಷ ರುದ್ರಾರ್ಚನೆ

ಸಾವಿರ ವರ್ಷಗಳ ಇತಿಹಾಸವಿರುವ ಪವಿತ್ರ ಸೋಮನಾಥ ಜ್ಯೋತಿರ್ಲಿಂಗ (Somnath Jyotirlinga Darshan) ಮಾರ್ಚ್ 14ರಂದು ದೊಡ್ಡಬಳ್ಳಾಪುರಕ್ಕೆ ಆಗಮಿಸುತ್ತಿದ್ದು, ಈ ಜ್ಯೋತಿರ್ಲಿಂಗ ದರ್ಶನಕ್ಕೆ ನಗರದ ಸೋಮೇಶ್ವರ ದೇವಾಲಯದಲ್ಲಿ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ್ಟ್ ಆಫ್

[ccc_my_favorite_select_button post_id="120187"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!