ಕರೊನಾ ಲಾಕ್‌ಡೌನ್ ನಡುವೆ ಪಡಿತರ ವಿತರಣೆ ಆರಂಭ: ಕಾಡಿದ ಸರ್ವರ್ ಹಾಗು ವಿದ್ಯುತ್ ಸಮಸ್ಯೆ

ದೊಡ್ಡಬಳ್ಳಾಪುರ: ತಾಲೂಕು ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜುಲೈ 22ರವರೆಗೆ ಲಾಕ್‌ಡೌನ್ ಘೋಷಿಸಲಾಗಿದೆ.ಈ ನಡುವೆ ತಿಂಗಳ ಪಡಿತರ ವಿತರಣೆ ಆರಂಭವಾಗಿದ್ದು,ಪಡಿತರದಾರರು ಬೆಳಗಿನಿಂದಲೇ ಸಾಲುಗಟ್ಟಿ ನಿಲ್ಲುವಂತಾಗಿದೆ.

ಲಾಕ್‌ಡೌನ್ ಹಿನ್ನಲೆಯಲ್ಲಿ ಮಧ್ಯಾಹ್ನ 12ರವರೆಗೆ ಮಾತ್ರ ಅಗತ್ಯ ವಸ್ತುಗಳನ್ನು ಕೊಳ್ಳಲು ಅವಕಾಶ ಕಲ್ಪಿಸಿರುವುದರಿಂದ ಪಡಿತರ ಧಾನ್ಯವನ್ನು ಸಹ 12ರವರೆಗೆ ಮಾತ್ರ ನೀಡಲು ಸೂಚಿಸಲಾಗಿದೆ. ಹೀಗಾಗಿ ಪಡಿತರ ಪಡೆಯಲು ಬೆಳಿಗ್ಗೆ 9 ಗಂಟೆಯಿಂದಲೇ ಪಡಿತರದಾರರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ.

ಪಡಿತರ ವಿತರಣೆ ವಿವರ:

ಹರಿತಲೇಖನಿಗೆ ಸಿಕ್ಕಿರುವ ಮಾಹಿತಿಯಂತೆ ಈ ತಿಂಗಳಿನಿಂದ ಬಿಪಿಎಲ್ ಪಡಿತರದಾರರಿಗೆ ಯೂನಿಟ್ ಲೆಕ್ಕದಲ್ಲಿ 8 ಕೆ.ಜಿ ಅಕ್ಕಿ, 2 ಕೆ.ಜಿ ರಾಗಿ ಹಾಗೂ ಒಂದು ಪಡಿತರ ಚೀಟಿಗೆ 2 ಕೆ.ಜಿ. ಗೋಧಿ ಉಚಿತವಾಗಿ ನೀಡಲಾಗುತ್ತಿದೆ. ಎಪಿಎಲ್ ಕಾರ್ಡ್‌ದಾರರಿಗೆ ಒಬ್ಬ ಸದಸ್ಯ 5 ಕೆ.ಜಿ. ಅಕ್ಕಿ ಹಾಗೂ ಹೆಚ್ಚಿನವರಿಗೆ 10 ಕೆ.ಜಿ ಅಕ್ಕಿ,ಕೆ.ಜಿಗೆ 15 ರೂ ನಂತೆ ನೀಡಲಾಗುವುದು.ಅಂತ್ಯೋದಯಕ್ಕೆ 20ಕೆ.ಜಿ ಅಕ್ಕಿ ಹಾಗೂ 15 ಕೆ.ಜಿ ರಾಗಿ ವಿತರಿಸಲಾಗುವುದು.ಆಧಾರ್ ಕಾರ್ಡ್ ಅಥವಾ ಪಡಿತರ ಕಾರ್ಡ್ ಇಲ್ಲದವರಿಗೆ ಪಡಿತರ ವಿತರಣೆ ಮಾಡುತ್ತಿಲ್ಲ.ನ್ಯಾಯ ಬೆಲೆ ಅಂಗಡಿಗೆ ಬರುವ ಪ್ರತಿ ಪಡಿತರದಾರರನ್ನು ಅಂತರ ಕಾಪಾಡಿಕೊಳ್ಳುವಂತೆ ವ್ಯವಸ್ಥೆ ಮಾಡಿ, ಪ್ರತಿಯೊಬ್ಬರಿಗೂ ಸ್ಯಾನಿಟೈಸರ್ ಹಾಕಲಾಗುತ್ತಿದೆ.ದಿನಕ್ಕೆ 200 ಪಡಿತರದಾರರಿಗೆ ಟೋಕನ್ ನೀಡಿ,ಮಧ್ಯಾಹ್ನ 12ಗಂಟೆಯವರೆಗೆ ಪಡಿತರ ಧಾನ್ಯ ವಿತರಿಸಲಾಗುತ್ತಿದೆ. ಆದರೆ ಸರ್ವರ್ ಹಾಗೂ ವಿದ್ಯುತ್ ಸಮಸ್ಯೆಗಳಿಂದಾಗಿ ಪಡಿತರ ವಿತರಣೆ ಮಾಡುವುದು ವಿಳಂಬವಾಗುತ್ತಿದೆ ಎಂದು ಕುಚ್ಚಪ್ಪನ ಪೇಟೆಯ ನ್ಯಾಯಬೆಲೆ ಅಂಗಡಿ ಮಾಲೀಕ ಗಂಗಾಪ್ರಸಾದ್ ತಿಳಿಸಿದ್ದಾರೆ.

ತಿಂಗಳಿಡೀ ಎಲ್ಲಾ ನ್ಯಾಯಬೆಲೆ ಅಂಗಡಿಗಳು ತೆರೆದಿರಲಿ:

ಈಗ ಪಡಿತರ ಧಾನ್ಯ ಪಡೆಯಲು  ಪೋರ್ಟಬಿಲಿಟಿ ಇರುವುದರಿಂದ ಪಡಿತರದಾರರು ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರವನ್ನು ಪಡೆಯಬಹುದಾಗಿದೆ. ಆದರೆ ಬಹಳಷ್ಟು ಅಂಗಡಿಗಳು ಕೇವಲ 5 ರಿಂದ 6 ದಿನ ದಿನಸಿ ನೀಡಿ ಬಾಗಿಲು ಮುಚ್ಚುತ್ತವೆ. ಇದರಿಂದ ಬೇರೆ ಅಂಗಡಿಗಳಲ್ಲಿ ಪಡಿತರದಾರರು ಮುಗಿ ಬೀಳುವ ಪರಿಸ್ಥಿತಿ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲಾ ಪಡಿತರ ಅಂಗಡಿಗಳು ತಿಂಗಳು ಪೂರ್ತಿ ಕಾರ್‍ಯ ನಿರ್ವಹಿಸಿ,ನೂಕು ನುಗ್ಗಲು ಮಾಡಿಕೊಳ್ಳದೇ ಎಲ್ಲಾ ಪಡಿತರದಾರರು ಪಡಿತರ ಧಾನ್ಯ ಪಡೆಯುವಂತೆ ಆಹಾರ ಇಲಾಖೆ ವ್ಯವಸ್ಥೆ ಮಾಡಬೇಕಿದೆ ಎಂದು ಪಡಿತರದಾರರಾದ ಶ್ರೀನಿವಾಸ್, ನಾರಾಯಣಪ್ಪ ಒತ್ತಾಯಿಸಿದ್ದಾರೆ.

ರಾಜಕೀಯ

ಬಮೂಲ್ ನಿರ್ದೇಶಕರಾಗಿ ಡಿಕೆ ಸುರೇಶ್‌ ಅವಿರೋಧ ಆಯ್ಕೆ

ಬಮೂಲ್ ನಿರ್ದೇಶಕರಾಗಿ ಡಿಕೆ ಸುರೇಶ್‌ ಅವಿರೋಧ ಆಯ್ಕೆ

ಕನಕಪುರ ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಮಾಜಿ ಸಂಸದ ಡಿಕೆ ಸುರೇಶ್ (DK Suresh) ಅವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="107438"]
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

“ರಾಜ್ಯ ಸರ್ಕಾರ ಕೇವಲ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ‘ಭೂ ಗ್ಯಾರಂಟಿ’ (Land Guarantee) ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="107434"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಯುವಕ ನೋರ್ವನನ್ನು ಬರ್ಬರ ವಾಗಿ ಕೊಲೆ (Murder) ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ.

[ccc_my_favorite_select_button post_id="107389"]
ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು ಸಾವು

ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು

ನಿನ್ನೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಆಂಧ್ರ ಪ್ರದೇಶದಲ್ಲಿ (Andra Pradesh) ನಡೆದ ಕಾರು ಅಪಘಾತದಲ್ಲಿ (Accident) ಸಾವನಪ್ಪಿರುವ ಬೆನ್ನಲ್ಲೇ,

[ccc_my_favorite_select_button post_id="107407"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!